ಉತ್ತರಾಖಂಡದ ಪಿತೋರಾಗಢದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಮೃತರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್) ನಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರವನ್ನು ಅವರು ಘೋಷಿಸಿದ್ದಾರೆ.
ಪ್ರಧಾನಮಂತ್ರಿ ಕಾರ್ಯಾಲಯ ಪಿ.ಎಂ.ಒ ಇಂಡಿಯಾ ಹ್ಯಾಂಡಲ್ ನ ಎಕ್ಸ್ ಪೋಸ್ಟ್ ಹೀಗಿದೆ:
"ಉತ್ತರಾಖಂಡದ ಪಿತೋರಾಗಢದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವಹಾನಿಯಿಂದ ದುಃಖವಾಗಿದೆ. ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ.
ಪಿ.ಎಂ.ಎನ್.ಆರ್.ಎಫ್ ನಿಂದ ಮೃತರ ವಾರಸುದಾರರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು: ಪ್ರಧಾನಮಂತ್ರಿ @narendramodi"
Saddened by the loss of lives due to a road accident in Pithoragarh, Uttarakhand. Condolences to those who have lost their loved ones in the mishap. May the injured recover soon.
— PMO India (@PMOIndia) July 15, 2025
An ex-gratia of Rs. 2 lakh from PMNRF would be given to the next of kin of each deceased. The…


