ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಶ್ರೀ ಮೋಹನ್ ಲಾಲ್ ಅವರನ್ನು ಅಭಿನಂದಿಸಿದ್ದಾರೆ. ಶ್ರೀ ಮೋಹನ್ ಲಾಲ್ ಅವರು ಶ್ರೇಷ್ಠತೆ ಮತ್ತು ಬಹುಮುಖ ಪ್ರತಿಭೆಯನ್ನು ಪ್ರತಿನಿಧಿಸಿದ್ದಾರೆ ಎಂದು ಶ್ರೀ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ. "ದಶಕಗಳ ಕಾಲದ ಶ್ರೀಮಂತ ಕಾರ್ಯವೈಖರಿಯೊಂದಿಗೆ, ಅವರು ಮಲಯಾಳಂ ಸಿನಿಮಾ, ರಂಗಭೂಮಿಯ ಮುಂಚೂಣಿ ಬೆಳಕಾಗಿದ್ದಾರೆ ಹಾಗೂ ಕೇರಳದ ಸಂಸ್ಕೃತಿಯ ಬಗ್ಗೆ ಅಪಾರ ಒಲವು ಹೊಂದಿದ್ದಾರೆ. ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಚಲನಚಿತ್ರಗಳಲ್ಲಿಯೂ ಅವರು ಅದ್ಭುತ ಪ್ರದರ್ಶನ ನೀಡಿದ್ದಾರೆ. ವಿವಿಧ ಮಾಧ್ಯಮಗಳಲ್ಲಿ ಅವರ ಸಿನಿಮಾ ಮತ್ತು ರಂಗಭೂಮಿ ಪ್ರತಿಭೆ ನಿಜಕ್ಕೂ ಪ್ರೇರಣಾದಾಯಕವಾಗಿದೆ" ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

 

ಶ್ರೀ ಮೋದಿ ಅವರ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

 

"ಶ್ರೀ ಮೋಹನ್ ಲಾಲ್ ಅವರು ಶ್ರೇಷ್ಠತೆ ಮತ್ತು ಬಹುಮುಖ ಪ್ರತಿಭೆಯ ಸಾಕಾರಮೂರ್ತಿಯಾಗಿದ್ದಾರೆ. ದಶಕಗಳ ಕಾಲದ ಸಮೃದ್ಧ ಕಾರ್ಯವೈಖರಿಯೊಂದಿಗೆ, ಅವರು ಮಲಯಾಳಂ ಸಿನಿಮಾ, ರಂಗಭೂಮಿಯ ಪ್ರಮುಖ ಜ್ಯೋತಿಯಾಗಿ ನಿಂತಿದ್ದಾರೆ ಮತ್ತು ಕೇರಳದ ಸಂಸ್ಕೃತಿಯ ಬಗ್ಗೆ ಅಪಾರ ಒಲವು ಹೊಂದಿದ್ದಾರೆ. ಅವರು ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಚಲನಚಿತ್ರಗಳಲ್ಲಿಯೂ ಅಮೋಘ ಪ್ರದರ್ಶನ ನೀಡಿದ್ದಾರೆ. ವಿವಿಧ ಮಾಧ್ಯಮಗಳಲ್ಲಿನ ಅವರ ಸಿನಿಮಾ ಮತ್ತು ರಂಗಭೂಮಿ ಪ್ರತಿಭೆ ನಿಜಕ್ಕೂ ಪ್ರೇರಣಾದಾಯಕವಾಗಿದೆ.

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಅವರಿಗೆ ಅಭಿನಂದನೆಗಳು. ಅವರ ಸಾಧನೆಗಳು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತಲಿರಲಿ."

@Mohanlal

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Indian Railways takes up 764 km of new lines to boost connectivity in Bihar’s Seemanchal region

Media Coverage

Indian Railways takes up 764 km of new lines to boost connectivity in Bihar’s Seemanchal region
NM on the go

Nm on the go

Always be the first to hear from the PM. Get the App Now!
...
ನಿಸ್ವಾರ್ಥ ಸೇವೆಯ ಮನೋಭಾವಕ್ಕೆ ಒತ್ತು ನೀಡುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡಿರುವ ಪ್ರಧಾನಮಂತ್ರಿ
August 07, 2026

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿಸ್ವಾರ್ಥ ಸೇವೆಯ ಸದ್ಗುಣ ಮತ್ತು ಪ್ರತಿಯಾಗಿ ಏನನ್ನೂ ನಿರೀಕ್ಷಿಸದೆ ಇತರರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಉದಾತ್ತ ಆದರ್ಶವನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತಂ ಪುಸ್ತಕವನ್ನು ಹಂಚಿಕೊಂಡಿದ್ದಾರೆ:

"किं चन्द्रमाः प्रत्युपकारलिप्सया करोति गोभिः कुमुदावबोधनम्।

स्वभाव एवोन्नतचेतसां सतां परोपकारव्यसनं हि जीवितम्॥"

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

किं चन्द्रमाः प्रत्युपकारलिप्सया करोति गोभिः कुमुदावबोधनम्।

स्वभाव एवोन्नतचेतसां सतां परोपकारव्यसनं हि जीवितम्॥