ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಟಲಿಯ ಉಪ ಪ್ರಧಾನಮಂತ್ರಿ ಮತ್ತು ವಿದೇಶಾಂಗ ವ್ಯವಹಾರ ಮತ್ತು ಅಂತಾರಾಷ್ಟ್ರೀಯ ಸಹಕಾರ ಸಚಿವರಾದ ಶ್ರೀ ಆಂಟೋನಿಯೊ ತಜಾನಿ ಅವರನ್ನು ಭೇಟಿ ಮಾಡಿದರು.

ಉಭಯ ನಾಯಕರ ಸಭೆಯ ಸಂದರ್ಭದಲ್ಲಿ, ಇಟಲಿ-ಭಾರತ ಜಂಟಿ ಕಾರ್ಯತಂತ್ರದ ಕ್ರಿಯಾ ಯೋಜನೆ 2025-2029ರ ಅನುಷ್ಠಾನಕ್ಕೆ ಎರಡೂ ಕಡೆಯವರು ತೆಗೆದುಕೊಂಡಿರುವ ಪೂರ್ವಭಾವಿ ಕ್ರಮಗಳಿಗೆ ಪ್ರಧಾನಮಂತ್ರಿಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಚರ್ಚೆಗಳು ವ್ಯಾಪಾರ, ಹೂಡಿಕೆ, ಸಂಶೋಧನೆ, ನಾವೀನ್ಯತೆ, ರಕ್ಷಣೆ, ಬಾಹ್ಯಾಕಾಶ, ಸಂಪರ್ಕ, ಭಯೋತ್ಪಾದನೆ ನಿಗ್ರಹ, ಶಿಕ್ಷಣ ಮತ್ತು ಜನರಿಂದ ಜನರ ನಡುವಿನ ಸಂಬಂಧಗಳು ಸೇರಿದಂತೆ ವ್ಯಾಪಕ ಶ್ರೇಣಿಯ ಆದ್ಯತೆಯ ಕ್ಷೇತ್ರಗಳನ್ನು ಒಳಗೊಂಡಿವೆ.

ಎಕ್ಸ್‌ ತಾಣದ ಸಂದೇಶದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ:

"ಇಟಲಿಯ ಉಪ ಪ್ರಧಾನಮಂತ್ರಿ ಮತ್ತು ವಿದೇಶಾಂಗ ವ್ಯವಹಾರ ಮತ್ತು ಅಂತಾರಾಷ್ಟ್ರೀಯ ಸಹಕಾರ ಸಚಿವರಾದ ಶ್ರೀ ಆಂಟೋನಿಯೊ ತಜಾನಿ ಅವರನ್ನು ಇಂದು ಭೇಟಿಯಾಗಲು ಸಂತೋಷವಾಯಿತು. ವ್ಯಾಪಾರ, ಹೂಡಿಕೆ, ಸಂಶೋಧನೆ, ನಾವೀನ್ಯತೆ, ರಕ್ಷಣೆ, ಬಾಹ್ಯಾಕಾಶ, ಸಂಪರ್ಕ, ಭಯೋತ್ಪಾದನೆ ನಿಗ್ರಹ, ಶಿಕ್ಷಣ ಮತ್ತು ಜನರಿಂದ ಜನರ ನಡುವಿನ ಸಂಬಂಧಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ಇಟಲಿ-ಭಾರತ ಜಂಟಿ ಕಾರ್ಯತಂತ್ರದ ಕ್ರಿಯಾ ಯೋಜನೆ 2025-2029 ಅನುಷ್ಠಾನಕ್ಕೆ ಎರಡೂ ಕಡೆಯವರು ತೆಗೆದುಕೊಂಡಿರುವ ಪೂರ್ವಭಾವಿ ಕ್ರಮಗಳಿಗೆ ಉಭಯ ನಾಯಕರೂ ಮೆಚ್ಚುಗೆ ವ್ಯಕ್ತಪಡಿಸಿದೆವು.

ಭಾರತ-ಇಟಲಿ ಸ್ನೇಹವು ಬಲಗೊಳ್ಳುತ್ತಲೇ ಇದೆ, ಇದು ನಮ್ಮ ಜನರಿಗೆ ಮತ್ತು ಜಾಗತಿಕ ಸಮುದಾಯಕ್ಕೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ.

@GiorgiaMeloni

@Antonio_Tajani ”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Cabinet approves ₹1,570 crore ship repair facility at Vadinar, Gujarat

Media Coverage

Cabinet approves ₹1,570 crore ship repair facility at Vadinar, Gujarat
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 6 ಮೇ 2026
May 06, 2026

New India, New Pride: When Self-Reliance Meets Results — A Tribute to PM Modi