ಭಯೋತ್ಪಾದನೆ ವಿರುದ್ಧ ಭಾರತದ ನಿಲುವನ್ನು ಎತ್ತಿಹಿಡಿದಿದ್ದಕ್ಕಾಗಿ ನಿಯೋಗಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ವಿವಿಧ ದೇಶಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ವಿವಿಧ ನಿಯೋಗಗಳ ಸದಸ್ಯರನ್ನು ಭೇಟಿ ಮಾಡಿದರು. ಈ ಪ್ರತಿನಿಧಿಗಳು ಶಾಂತಿಗಾಗಿ ಭಾರತದ ಬದ್ಧತೆಯನ್ನು ಮತ್ತು ಭಯೋತ್ಪಾದನೆಯ ಪಿಡುಗನ್ನು ನಿರ್ಮೂಲನೆ ಮಾಡುವ ಅಗತ್ಯವನ್ನು ವಿವರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. ಜಾಗತಿಕ ವೇದಿಕೆಗಳಲ್ಲಿ ಭಾರತದ ಧ್ವನಿಯನ್ನು ಮುನ್ನಡೆಸುವಲ್ಲಿ ನಿಯೋಗಗಳ ಸಮರ್ಪಣೆಯನ್ನು ಶ್ರೀ ನರೇಂದ್ರ ಮೋದಿ ಶ್ಲಾಘಿಸಿದರು.

 

ಈ ಸಂಬಂಧ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ನಲ್ಲಿ, ಅವರು ಹೀಗೆ ಬರೆದಿದ್ದಾರೆ:

‘‘ವಿವಿಧ ದೇಶಗಳಲ್ಲಿಭಾರತವನ್ನು ಪ್ರತಿನಿಧಿಸಿದ ವಿವಿಧ ನಿಯೋಗಗಳ ಸದಸ್ಯರನ್ನು ಭೇಟಿಯಾದೆ ಮತ್ತು ನಿಯೋಗಗಳು ಶಾಂತಿಗೆ ಭಾರತದ ಬದ್ಧತೆ ಮತ್ತು ಭಯೋತ್ಪಾದನೆಯ ಪಿಡುಗನ್ನು ನಿರ್ಮೂಲನೆ ಮಾಡುವ ಅಗತ್ಯವನ್ನು ವಿವರಿಸಿವೆ. ಅವರು ಭಾರತದ ಧ್ವನಿಯನ್ನು ಮಂಡಿಸಿದ ರೀತಿ ಬಗ್ಗೆ ನಮಗೆಲ್ಲರಿಗೂ ಹೆಮ್ಮೆ ಇದೆ,’’ ಎಂದಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Science and the power of jan bhagidari can lead to a TB-free India

Media Coverage

Science and the power of jan bhagidari can lead to a TB-free India
NM on the go

Nm on the go

Always be the first to hear from the PM. Get the App Now!
...
Governor of Nagaland meets Prime Minister
March 24, 2026