ದಕ್ಷಿಣ ಆಫ್ರಿಕಾದ ಜೋಹಾನ್ಸ್‌ ಬರ್ಗ್‌ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಟಾಲಿಯನ್ ಗಣರಾಜ್ಯದ ಪ್ರಧಾನಮಂತ್ರಿ ಶ್ರೀಮತಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿಯಾದರು. ಈ ವರ್ಷದ ಜೂನ್‌ ನಲ್ಲಿ ಕೆನಡಾದ ಕನನಾಸ್ಕಿಸ್‌ ನಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಈ ಇಬ್ಬರೂ ನಾಯಕರು ಸಂಕ್ಷಿಪ್ತವಾಗಿ ಪರಸ್ಪರ ಸಂವಹನ ನಡೆಸಿದ್ದರು.

ದೆಹಲಿಯಲ್ಲಿ ನಡೆದ ಭಯೋತ್ಪಾದಕ ಘಟನೆಯ ಬಗ್ಗೆ ಪ್ರಧಾನಮಂತ್ರಿ ಶ್ರೀಮತಿ ಮೆಲೋನಿ ಅವರು ಭಾರತದೊಂದಿಗೆ ತಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಿದರು ಮತ್ತು ಭಯೋತ್ಪಾದನೆಯ ಪಿಡುಗನ್ನು ಎದುರಿಸಲು ಒಟ್ಟಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಇಟಲಿಯ ಬಲವಾದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಈ ಸಂದರ್ಭದಲ್ಲಿ, ಇಬ್ಬರೂ ನಾಯಕರು 'ಭಯೋತ್ಪಾದನೆಯ ಹಣಕಾಸು ನಿಗ್ರಹಕ್ಕೆ ಭಾರತ-ಇಟಲಿ ಜಂಟಿ ಉಪಕ್ರಮ'ವನ್ನು ಅಳವಡಿಸಿಕೊಳ್ಳಲು ಒಪ್ಪಿಕೊಂಡರು. ಭಯೋತ್ಪಾದನೆಯನ್ನು ಎದುರಿಸುವಲ್ಲಿ ದ್ವಿಪಕ್ಷೀಯ ಸಹಕಾರ ಮತ್ತು ಹಣಕಾಸು ಕ್ರಿಯಾ ಕಾರ್ಯಪಡೆ (ಎಫ್‌.ಎ.ಟಿ.ಎಫ್) ಮತ್ತು ಜಾಗತಿಕ ಭಯೋತ್ಪಾದನಾ ನಿಗ್ರಹ ವೇದಿಕೆ (ಜಿ.ಸಿ.ಟಿ.ಎಫ್) ಸೇರಿದಂತೆ ಜಾಗತಿಕ ಮತ್ತು ಬಹುಪಕ್ಷೀಯ ವೇದಿಕೆಗಳಲ್ಲಿ ಸಹಯೋಗವನ್ನು ಹೆಚ್ಚಿಸುವ ಗುರಿಯನ್ನು ಈ ಜಂಟಿ ಉಪಕ್ರಮ ಹೊಂದಿದೆ.

 

ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ, ಭದ್ರತೆ, ಬಾಹ್ಯಾಕಾಶ, ವಿಜ್ಞಾನ ಮತ್ತು ತಂತ್ರಜ್ಞಾನ, ಶಿಕ್ಷಣ ಮತ್ತು ಜನರಿಂದ ಜನರ ನಡುವಿನ ಪರಸ್ಪರ ಸಂಬಂಧಗಳಂತಹ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆಯಲ್ಲಿನ ಬೆಳವಣಿಗೆಗಳನ್ನು ಉಭಯ ನಾಯಕರು ಪರಿಶೀಲಿಸಿದರು ಮತ್ತು ಸಕಾರಾತ್ಮಕವಾಗಿ ನಿರ್ಣಯಿಸಿದರು. ಜಂಟಿ ಕಾರ್ಯತಂತ್ರದ ಕ್ರಿಯಾ ಯೋಜನೆ 2025-29ರ ಪ್ರಗತಿಯ ಬಗ್ಗೆ ಇಬ್ಬರೂ ನಾಯಕರು ತೃಪ್ತಿ ವ್ಯಕ್ತಪಡಿಸಿದರು.

ಈ ವರ್ಷ ನವದೆಹಲಿ ಮತ್ತು ಬ್ರೆಸಿಯಾದಲ್ಲಿ ನಡೆದ ಎರಡು ವ್ಯಾಪಾರ ವೇದಿಕೆಗಳ ನಿರ್ಣಯಗಳನ್ನು ಉಭಯ ನಾಯಕರು ಸ್ವಾಗತಿಸಿದರು, ಇದರಲ್ಲಿ ಆಯಾ ದೇಶಗಳ ಕೈಗಾರಿಕೆಗಳ ಬಲವಾದ ಭಾಗವಹಿಸುವಿಕೆ ಕಾಣುತ್ತಿತ್ತು. ಎರಡೂ ಆರ್ಥಿಕತೆಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ಮತ್ತು ಸ್ಥಿತಿಸ್ಥಾಪಕ ಪೂರೈಕೆ ಸರಪಳಿಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿರುವ ವ್ಯಾಪಾರ, ತಂತ್ರಜ್ಞಾನ, ನಾವೀನ್ಯತೆ ಮತ್ತು ಹೂಡಿಕೆ ಪಾಲುದಾರಿಕೆಗಳನ್ನು ಹೆಚ್ಚಿಸಲು ನಡೆಯುತ್ತಿರುವ ಪ್ರಯತ್ನಗಳನ್ನು ಉಭಯ ನಾಯಕರು ಈ ಸಂದರ್ಭದಲ್ಲಿ ಗಮನಿಸಿದರು.

ಇಟಾಲಿಯನ್ ಬಾಹ್ಯಾಕಾಶ ನಿಯೋಗವು ಇತ್ತೀಚೆಗೆ ಭಾರತಕ್ಕೆ ನೀಡಿದ ಭೇಟಿಯನ್ನು ಉಭಯ ನಾಯಕರು ಶ್ಲಾಘಿಸಿದರು, ಇದು ಸರ್ಕಾರ ಮತ್ತು ಖಾಸಗಿ ವಲಯದ ಮಟ್ಟದಲ್ಲಿ ಈ ಕ್ಷೇತ್ರದಲ್ಲಿ ಸಹಯೋಗವನ್ನು ಪರಿಣಾಮಕಾರಿಯಾಗಿ ಹೆಚ್ಚಿಸುತ್ತದೆ.

ಪರಸ್ಪರ ಪ್ರಯೋಜನಕಾರಿ ಭಾರತ-ಯುರೋಪಿಯನ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದದ ತೀರ್ಮಾನಕ್ಕೆ ಮತ್ತು 2026ರಲ್ಲಿ ಭಾರತ ಆಯೋಜಿಸಲಿರುವ ಕೃತಕ ಬುದ್ಧಿಮತ್ತೆಯ ಪರಿಣಾಮಗಳು (ಎ.ಐ. ಇಂಪ್ಯಾಕ್ಟ್) ಶೃಂಗಸಭೆಯ ಯಶಸ್ಸಿಗೆ ಇಟಲಿಯ ಬಲವಾದ ಬೆಂಬಲವನ್ನು ಪ್ರಧಾನಮಂತ್ರಿ ಶ್ರೀಮತಿ ಮೆಲೋನಿ ಅವರು ಪುನರುಚ್ಚರಿಸಿದರು.

ಈ ಭೇಟಿಯು ಎರಡೂ ದೇಶಗಳ ನಡುವಿನ ನಿಯಮಿತ ಉನ್ನತ ಮಟ್ಟದ ವಿನಿಮಯದ ಸಂಪ್ರದಾಯವನ್ನು ಪುನರುಚ್ಚರಿಸಿತು. ಪ್ರಜಾಪ್ರಭುತ್ವ, ಕಾನೂನಿನ ನಿಯಮ ಮತ್ತು ಸುಸ್ಥಿರ ಅಭಿವೃದ್ಧಿಯ ಹಂಚಿಕೆಯ ಮೌಲ್ಯಗಳನ್ನು ಎತ್ತಿಹಿಡಿಯಲು ಬಹುಪಕ್ಷೀಯ ಮತ್ತು ಜಾಗತಿಕ ವೇದಿಕೆಗಳಲ್ಲಿ ತಮ್ಮ ಸಂವಾದವನ್ನು ಮುಂದುವರಿಸಲು ಮತ್ತು ಒಟ್ಟಾಗಿ ಕೆಲಸ ಮಾಡಲು ಇಬ್ಬರೂ ನಾಯಕರು ಒಪ್ಪಿಕೊಂಡಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Centre bats for SVAMITVA to boost rural economy, property ownership

Media Coverage

Centre bats for SVAMITVA to boost rural economy, property ownership
NM on the go

Nm on the go

Always be the first to hear from the PM. Get the App Now!
...
Governor of Haryana meets the Prime Minister
May 02, 2026

Governor of Haryana, Prof. Ashim Kumar Ghosh, met Prime Minister Shri Narendra Modi today.

The Prime Minister posted on X:

"Governor of Haryana, Prof. Ashim Kumar Ghosh met Prime Minister @narendramodi."