ಪ್ರಪ್ರಥಮ ಅಗ್ನಿಪಥ್ ಯೋಜನೆಯ ಪ್ರವರ್ತಕರಾದ ಅಗ್ನಿವೀರರನ್ನು ಪ್ರಧಾನಮಂತ್ರಿ ಅಭಿನಂದಿಸಿದರು
ಈ ಪರಿವರ್ತನಾ ನೀತಿಯು ನಮ್ಮ ಸಶಸ್ತ್ರ ಪಡೆಗಳನ್ನು ಸಶಕ್ತಗೊಳಿಸುವಲ್ಲಿ ಮತ್ತು ಅವರನ್ನು ಭವಿಷ್ಯಕ್ಕೆ ಸಿದ್ಧಗೊಳಿಸುವಲ್ಲಿ ಹೊಸ ಇತಿಹಾಸವನ್ನೇ ಬರೆಯಲಿದೆ ಎಂದು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು
ನಮ್ಮ ಸಶಸ್ತ್ರ ಪಡೆಗಳನ್ನು ಆಧುನೀಕರಿಸುವ ಜೊತೆಗೆ ಅವರನ್ನು ಸ್ವಾವಲಂಬಿಯಾಗಿಸುವ ಪ್ರಯತ್ನಗಳು ನಡೆಯುತ್ತಿವೆ: ಪ್ರಧಾನಮಂತ್ರಿ
ಸಂಪರ್ಕರಹಿತ ಯುದ್ಧದ ಹೊಸ ರಂಗಗಳ ಸವಾಲುಗಳನ್ನು ಚರ್ಚಿಸಿದ ಪ್ರಧಾನಮಂತ್ರಿಯವರು, ತಾಂತ್ರಿಕವಾಗಿ ಮುಂದುವರಿದ ಸೈನಿಕರು ನಮ್ಮ ಸಶಸ್ತ್ರ ಪಡೆಗಳಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಹೇಳಿದರು
ಅಗ್ನಿಪಥ್ ಯೋಜನೆಯು ಮಹಿಳೆಯರನ್ನು ಕೂಡ ಸಬಲೀಕರಣಗೊಳಿಸುವ ಬಗ್ಗೆ ಪ್ರಧಾನ ಮಂತ್ರಿ ಚರ್ಚಿಸಿದರು; ಮೂರೂ ಪಡೆಗಳಲ್ಲಿ ಮಹಿಳಾ ಅಗ್ನಿವೀರರನ್ನು ಕಾಣಲು ಬಯಸುವುದಾಗಿ ಹೇಳಿದರು
ವೈವಿಧ್ಯಮಯ ಭಾಷೆಗಳು ಮತ್ತು ಸಂಸ್ಕೃತಿಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳುವ ಅವಕಾಶವನ್ನು ಬಳಸಿಕೊಳ್ಳುವಂತೆ ಪ್ರಧಾನಮಂತ್ರಿ ಅಗ್ನಿವೀರರಿಗೆ ಕರೆ ನೀಡಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಪ್ರಾಥಮಿಕ ತರಬೇತಿಯನ್ನು ಆರಂಭಿಸಿರುವ ಮೂರು ಸೇವೆಗಳ ಅಗ್ನಿವೀರರ ಮೊದಲ ಬ್ಯಾಚ್ ಉದ್ದೇಶಿಸಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ  ಮಾತನಾಡಿದರು. 

ಪ್ರಪ್ರಥಮ ಅಗ್ನಿಪಥ ಯೋಜನೆಯ ಪ್ರವರ್ತಕರಾಗಿದ್ದಕ್ಕಾಗಿ ಪ್ರಧಾನ ಮಂತ್ರಿಗಳು ಅಗ್ನಿವೀರರನ್ನು ಅಭಿನಂದಿಸಿದರು. ಈ ಪರಿವರ್ತನಾ ನೀತಿಯು ನಮ್ಮ ಸಶಸ್ತ್ರ ಪಡೆಗಳನ್ನು ಸಶಕ್ತಗೊಳಿಸುವಲ್ಲಿ ಮತ್ತು ಅವರನ್ನು ಭವಿಷ್ಯದ ಸವಾಲುಗಳನ್ನು ಎದುರಿಸಲು ಸಿದ್ಧಗೊಳಿಸುವಲ್ಲಿ ಹೊಸ ಇತಿಹಾಸವನ್ನೇ ಬರೆಯಲಿದೆ ಎಂದು ಪ್ರಧಾನಮಂತ್ರಿ ಅವರು ಒತ್ತಿ ಹೇಳಿದರು. ಯುವ ಅಗ್ನಿವೀರರು ಸಶಸ್ತ್ರ ಪಡೆಗಳನ್ನು ಹೆಚ್ಚು ತಾರುಣ್ಯಭರಿತ ಮತ್ತು ಟೆಕ್ ಸೆವಿಯನ್ನಾಗಿ ಮಾಡಲಿದ್ದಾರೆ ಎಂದು ಪ್ರಧಾನಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು.

ಅಗ್ನಿವೀರರ ಸಾಮರ್ಥ್ಯವನ್ನು ಶ್ಲಾಘಿಸಿದ ಅವರು, ಬಾನೆತ್ತರದಲ್ಲಿ ಹಾರುವ ರಾಷ್ಟ್ರಧ್ವಜ ಸಶಸ್ತ್ರ ಪಡೆಗಳ ಶೌರ್ಯವನ್ನು ಪ್ರತಿಬಿಂಬಿಸುವ ಪ್ರತೀಕದಂತಿದೆ    ಎಂದು ಹೇಳಿದರು. ಈ ಅವಕಾಶದ ಮೂಲಕ ಅವರು ಪಡೆಯುವ ಅನುಭವವು ಅವರ ಜೀವನದಲ್ಲಿ ಹೆಮ್ಮೆಯ ಸ್ರೋತವಾಗಲಿದೆ ಎಂದು ಹೇಳಿದರು.

ನವ ಭಾರತವು ನವ ಚೈತನ್ಯದಿಂದ ತುಂಬಿದೆ ಮತ್ತು ನಮ್ಮ ಸಶಸ್ತ್ರ ಪಡೆಗಳನ್ನು ಆಧುನೀಕರಿಸುವ ಜೊತೆಗೆ ಅವರನ್ನು ಸ್ವಾವಲಂಬಿಯಾಗಿ ಮಾಡುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪ್ರಧಾನಮಂತ್ರಿ ಹೇಳಿದರು. 21ನೇ ಶತಮಾನದಲ್ಲಿ ಯುದ್ಧ ಮಾಡುವ ರೀತಿ ಬದಲಾಗುತ್ತಿದೆ ಎಂದರು. ಸಂಪರ್ಕರಹಿತ ಯುದ್ಧದ ಹೊಸ ರಂಗಗಳು ಮತ್ತು ಸೈಬರ್ ಯುದ್ಧದ ಸವಾಲುಗಳನ್ನು ಚರ್ಚಿಸಿದ ಅವರು, ನಮ್ಮ ಸಶಸ್ತ್ರ ಪಡೆಗಳಲ್ಲಿ ತಾಂತ್ರಿಕವಾಗಿ ಮುಂದುವರಿದ ಸೈನಿಕರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಹೇಳಿದರು. ವಿಶೇಷವಾಗಿ ಪ್ರಸ್ತುತ ಯುವ ಪೀಳಿಗೆಯು  ಈ ಸಾಮರ್ಥ್ಯವನ್ನು ಹೊಂದಿದೆ ಎಂದು ಅವರು ಹೇಳಿದರು. ಆದ್ದರಿಂದ ಮುಂಬರುವ ದಿನಗಳಲ್ಲಿ ನಮ್ಮ ಸಶಸ್ತ್ರ ಪಡೆಗಳಲ್ಲಿ ಅಗ್ನಿವೀರರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದರು.

ಈ ಯೋಜನೆಯು ಮಹಿಳೆಯರನ್ನು ಮತ್ತಷ್ಟು ಸಬಲೀಕರಣಗೊಳಿಸುವುದು ಕುರಿತು ಪ್ರಧಾನಮಂತ್ರಿ ಮಾತನಾಡಿದರು. ಮಹಿಳಾ ಅಗ್ನಿವೀರರು ನೌಕಾ ಪಡೆಯ  ಹೆಮ್ಮೆಯನ್ನು ಹೆಚ್ಚಿಸುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ ಅವರು, ಮೂರೂ ಪಡೆಗಳಲ್ಲಿ ಮಹಿಳಾ ಅಗ್ನಿವೀರರನ್ನು ಕಾಣಲು ಬಯಸುತ್ತೇನೆ ಎಂದು ಹೇಳಿದರು. ಸಿಯಾಚಿನ್ ‌ನಲ್ಲಿ ಮಹಿಳಾ ಸೈನಿಕರು ಮತ್ತು ಆಧುನಿಕ ಯುದ್ಧ ವಿಮಾನಗಳ ಹಾರಾಟ ಮಾಡುವ ಮಹಿಳೆಯರ ಉದಾಹರಣೆಗಳನ್ನು ಉಲ್ಲೇಖಿಸಿ, ವಿವಿಧ ರಂಗಗಳಲ್ಲಿ ಮಹಿಳೆಯರು ಹೇಗೆ ಸಶಸ್ತ್ರ ಪಡೆಗಳನ್ನು ಮುನ್ನಡೆಸುತ್ತಿದ್ದಾರೆ ಎಂಬುದನ್ನು ಪ್ರಧಾನಮಂತ್ರಿ ಸ್ಮರಿಸಿದರು.

ವಿವಿಧ ಪ್ರದೇಶಗಳಲ್ಲಿ ನೇಮಕಗೊಳ್ಳುವುದರಿಂದ ಅವರಿಗೆ ವೈವಿಧ್ಯಮಯ ಅನುಭವಗಳನ್ನು ಪಡೆಯುವ ಅವಕಾಶ ದೊರೆಯುತ್ತದೆ ಮತ್ತು ಅವರು ವಿವಿಧ ಭಾಷೆಗಳನ್ನು ಕಲಿಯಲು ಪ್ರಯತ್ನಿಸಬೇಕು ಮತ್ತು ವಿಭಿನ್ನ ಸಂಸ್ಕೃತಿಗಳು ಮತ್ತು ಜೀವನ ವಿಧಾನಗಳ ಬಗ್ಗೆಯೂ ಕಲಿಯಬೇಕು ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಸಾಂಘಿಕ ಕೆಲಸ ಮತ್ತು ನಾಯಕತ್ವದ ಕೌಶಲ್ಯವನ್ನು ಗೌರವಿಸುವುದು ಅವರ ವ್ಯಕ್ತಿತ್ವಕ್ಕೆ ಹೊಸ ಆಯಾಮವನ್ನು ನೀಡುತ್ತದೆ ಎಂದರು. ತಮ್ಮ ಆಯ್ಕೆಯ ಕ್ಷೇತ್ರಗಳಲ್ಲಿ ತಮ್ಮ ಕೌಶಲ್ಯಾಭಿವೃದ್ಧಿಗಾಗಿ ಏಕಕಾಲದಲ್ಲಿ ಕೆಲಸ ಮಾಡುವಾಗ ಹೊಸ ವಿಷಯಗಳನ್ನು ಕಲಿಯುವ ಬಗ್ಗೆ ಕುತೂಹಲದಿಂದ ಇರಬೇಕೆಂದು ಅವರು ಅಗ್ನಿವೀರರನ್ನು ಉತ್ತೇಜಿಸಿದರು.

ಯುವಕರು ಮತ್ತು ಅಗ್ನಿವೀರರ ಸಾಮರ್ಥ್ಯವನ್ನು ಶ್ಲಾಘಿಸಿದ ಪ್ರಧಾನಮಂತ್ರಿ ಅವರು 21ನೇ ಶತಮಾನದಲ್ಲಿ ರಾಷ್ಟ್ರಕ್ಕೆ ನಾಯಕತ್ವವನ್ನು ನೀಡಲಿರುವವರಾಗಿದ್ದಾರೆ ಎಂದು ಹೇಳುವ ಮೂಲಕ ತಮ್ಮ ಮಾತು ಮುಗಿಸಿದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's power demand to grow up to 5% YoY in FY27 on sustained economic momentum: Fitch Ratings

Media Coverage

India's power demand to grow up to 5% YoY in FY27 on sustained economic momentum: Fitch Ratings
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam, emphasising on the harmony of strength and capability
May 13, 2026
Prime Minister recalls the 1998 Nuclear tests as a defining moment in our nation’s resolve

The Prime Minister, Shri Narendra Modi today recalled the historic Nuclear tests conducted by India in Pokhran in May 1998, describing them as a defining moment in our nation's resolve. “After the May 11 tests, the entire world brought pressure to bear on India, but we demonstrated that no power can bend India”, Shri Modi remarked.

The Prime Minister shared a Sanskrit verse-

“एवं परस्परापेक्षा शक्तिशक्तिमतोः स्थिता ।

न शिवेन विना शक्तिर्न शक्त्या विना शिवः।।”

The Prime Minister wrote on X;

“1998 में इसी दिन भारत ने जो परमाणु परीक्षण किए थे, उनसे दुनिया को पता चला कि हमारे देश की इच्छाशक्ति कितनी अटल है! 11 मई के टेस्ट के बाद पूरी दुनिया का दबाव भारत पर था, लेकिन हमने दिखाया कि कोई भी ताकत भारत को झुका नहीं सकती।

एवं परस्परापेक्षा शक्तिशक्तिमतोः स्थिता ।

न शिवेन विना शक्तिर्न शक्त्या विना शिवः।।”