"ಇಂದು ನಾವು ʻಸ್ವಾತಂತ್ರ್ಯದ ಅಮೃತ ಮಹೋತ್ಸವʼ ಆಚರಿಸುತ್ತಿರುವುದರಿಂದ, ಬಾಪು ಅವರ 'ಗ್ರಾಮೀಣ ವಿಕಾಸ'ದ ಕನಸನ್ನು ನಾವು ನನಸು ಮಾಡಬೇಕು"
"ಒಂದೂವರೆ ಲಕ್ಷಕ್ಕೂ ಹೆಚ್ಚು ಪಂಚಾಯತ್ ಪ್ರತಿನಿಧಿಗಳು ಒಟ್ಟಾಗಿ ಚರ್ಚಿಸುವುದೆಂದರೆ, ಭಾರತೀಯ ಪ್ರಜಾಪ್ರಭುತ್ವದ ಶಕ್ತಿಯನ್ನು ಸಂಕೇತಿಸಲು ಇದಕ್ಕಿಂತಲೂ ಬೇರೆ ಉದಾಹರಣೆಯಿಲ್ಲ"

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹ್ಮದಾಬಾದ್‌ನಲ್ಲಿ ʻಗುಜರಾತ್ ಪಂಚಾಯತ್ ಮಹಾಸಮ್ಮೇಳನʼ ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಭಾಗಗಳಿಂದ ಪಂಚಾಯತ್ ರಾಜ್ ಪ್ರತಿನಿಧಿಗಳು ಭಾಗವಹಿಸಿದ್ದರು.

ಗುಜರಾತ್ ಬಾಪು ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮಾತೃಭೂಮಿ ಎಂದು ಪ್ರಧಾನಿ ಹೇಳಿದರು. "ಬಾಪು ಯಾವಾಗಲೂ ಗ್ರಾಮೀಣ ಅಭಿವೃದ್ಧಿ, ಸ್ವಾವಲಂಬಿ ಹಳ್ಳಿಗಳ ಬಗ್ಗೆ ಮಾತನಾಡುತ್ತಿದ್ದರು. ಇಂದು ನಾವು ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವುದರಿಂದ, ಬಾಪು ಅವರ 'ಗ್ರಾಮೀಣ ವಿಕಾಸ'ದ ಕನಸನ್ನು ನಾವು ನನಸು ಮಾಡಬೇಕು,” ಎಂದರು.

ಸಾಂಕ್ರಾಮಿಕದ ಶಿಸ್ತುಬದ್ಧ ಮತ್ತು ಉತ್ತಮ ನಿರ್ವಹಣೆಗಾಗಿ ಗುಜರಾತ್‌ನ ಪಂಚಾಯಿತಿಗಳು ಹಾಗೂ ಹಳ್ಳಿಗಳ ಪಾತ್ರವನ್ನು ಪ್ರಧಾನಿ ಶ್ಲಾಘಿಸಿದರು. ಗುಜರಾತ್‌ನಲ್ಲಿ ಮಹಿಳಾ ಪಂಚಾಯತ್ ಪ್ರತಿನಿಧಿಗಳ ಸಂಖ್ಯೆ ಪುರುಷ ಪ್ರತಿನಿಧಿಗಳಿಗಿಂತ ಹೆಚ್ಚಾಗಿರುವ ವಿಷಯವನ್ನು ಅವರು ಒತ್ತಿ ಹೇಳಿದರು. ಒಂದೂವರೆ ಲಕ್ಷಕ್ಕೂ ಹೆಚ್ಚು ಪಂಚಾಯತ್ ಪ್ರತಿನಿಧಿಗಳು ಒಟ್ಟಾಗಿ ಚರ್ಚಿಸುವುದೆಂದರೆ, ಭಾರತೀಯ ಪ್ರಜಾಪ್ರಭುತ್ವದ ಶಕ್ತಿಯನ್ನು ಸಂಕೇತಿಸುವಂಥ ಉದಾಹರಣೆ ಅದಕ್ಕಿಂಲತೂ ಮತ್ತೊಂದಿಲ್ಲ ಎಂದರು.

ಸಣ್ಣ-ಪುಟ್ಟವಾದರೂ ಅತ್ಯಂತ ಮೂಲಭೂತ ಉಪಕ್ರಮಗಳೊಂದಿಗೆ ತಮ್ಮ ವ್ಯಾಪ್ತಿಯಲ್ಲಿ ಗ್ರಾಮ ಅಭಿವೃದ್ಧಿಯನ್ನು ಹೇಗೆ ಖಾತರಿಪಡಿಸಿಕೊಳ್ಳಬಹುದು ಎಂಬುದರ ಬಗ್ಗೆ ಪಂಚಾಯತ್ ಸದಸ್ಯರಿಗೆ ಪ್ರಧಾನಿ ಮಾರ್ಗದರ್ಶನ ನೀಡಿದರು. ಶಾಲೆಯ ಜನ್ಮದಿನ ಅಥವಾ ಸಂಸ್ಥಾಪನಾ ದಿನವನ್ನು ಆಚರಿಸುವಂತೆ ಅವರು ಸಲಹೆ ನೀಡಿದರು. ಅದರ ಮೂಲಕ, ಆ ಶಾಲೆಯ ಆವರಣ ಮತ್ತು ತರಗತಿಗಳನ್ನು ಸ್ವಚ್ಛಗೊಳಿಸಲು ಹಾಗೂ ಆ ಶಾಲೆಗಾಗಿ ಉತ್ತಮ ಚಟುವಟಿಕೆಗಳನ್ನು ಕೈಗೊಳ್ಳಲು ಸಲಹೆ ನೀಡಿದರು. ಆಗಸ್ಟ್ 23ರವರೆಗೆ ದೇಶವು `ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಆಚರಿಸುತ್ತಿದೆ ಎಂದು ಹೇಳಿದ ಅವರು, ಈ ಅವಧಿಯಲ್ಲಿ ಗ್ರಾಮದಲ್ಲಿ 75 ʻಪ್ರಭಾತ್‌ಪೇರಿʼ (ಬೆಳಗಿನ ಮೆರವಣಿಗೆಗಳು) ನಡೆಸಲು ಸಲಹೆ ನೀಡಿದರು.

ಮಾತು ಮುಂದುವರಿಸಿದ ಪ್ರಧಾನಿ ಅವರು, ಈ ಅವಧಿಯಲ್ಲಿ 75 ಕಾರ್ಯಕ್ರಮಗಳನ್ನು ನಡೆಸುವಂತೆ ಹಾಗೂ ಕಾರ್ಯಕ್ರಮಗಳಲ್ಲಿ ಇಡೀ ಹಳ್ಳಿಯ ಜನರು ಒಗ್ಗೂಡಿ ಗ್ರಾಮದ ಸಮಗ್ರ ಅಭಿವೃದ್ಧಿಯ ಬಗ್ಗೆ ಯೋಚಿಸುವಂತೆ ಸಲಹೆ ನೀಡಿದರು. ಇದೇ ವೇಳೆ ಮತ್ತೊಂದು ಸಲಹೆಯಿತ್ತ ಪ್ರಧಾನಿ ಅವರು, 75 ವರ್ಷಗಳ ಭಾರತೀಯ ಸ್ವಾತಂತ್ರ್ಯದ ಸ್ಮರಣಾರ್ಥ 75 ಮರಗಳನ್ನು ನೆಡುವ ಮೂಲಕ ಸಣ್ಣ ಅರಣ್ಯವನ್ನು ಗ್ರಾಮಗಳು ಸೃಷ್ಟಿಸುವಂತೆ ಸೂಚಿಸಿದರು. ಪ್ರತಿ ಗ್ರಾಮದಲ್ಲಿ ಕನಿಷ್ಠ 75 ರೈತರು ನೈಸರ್ಗಿಕ ಕೃಷಿ ವಿಧಾನವನ್ನು ಅಳವಡಿಸಿಕೊಳ್ಳಬೇಕು. ಭೂಮಿ ತಾಯಿಗೆ ರಾಸಾಯನಿಕ ಗೊಬ್ಬರಗಳ ವಿಷದಿಂದ ಮುಕ್ತಿ ನೀಡಬೇಕು ಎಂದು ಹೇಳಿದರು. ಮಳೆ ನೀರನ್ನು ಸಂರಕ್ಷಿಸಲು 75ಕೃಷಿ ಕೊಳಗಳನ್ನು ಮಾಡಬೇಕು, ಇದರಿಂದ ಅಂತರ್ಜಲದ ಮಟ್ಟ ಹೆಚ್ಚಾಗುತ್ತದೆ ಜೊತೆಗೆ ಇದು ಬೇಸಿಗೆ ದಿನಗಳಲ್ಲಿ ಸಹಾಯಕವಾಗುತ್ತದೆ ಎಂದು ಪ್ರಧಾನಿ ಹೇಳಿದರು.

ಕಾಲು ಬಾಯಿ ರೋಗದಿಂದ ಜಾನುವಾರುಗಳನ್ನು ರಕ್ಷಿಸುವ ನಿಟ್ಟಿನಲ್ಲಿ, ಒಂದೇ ಒಂದು ಜಾನುವಾರಿಗೂ ಲಸಿಕೆ ತಪ್ಪದಂತೆ ಕಾಯ್ದುಕೊಳ್ಳಲು ಅವರು ಸಲಹೆ ನೀಡಿದರು. ಪಂಚಾಯತಿಯ  ಮನೆ ಮತ್ತು ಬೀದಿಗಳಲ್ಲಿ ವಿದ್ಯುತ್ ಉಳಿಸಲು ʻಎಲ್‌ಇಡಿʼ ದೀಪಗಳನ್ನು ಅಳವಡಿಸಿಕೊಳ್ಳುವಂತೆ ಪ್ರಧಾನಿ ಮನವಿ ಮಾಡಿದರು. ಅಲ್ಲದೆ, ಗ್ರಾಮದಲ್ಲಿ ನಿವೃತ್ತ ಸರಕಾರಿ ನೌಕರರನ್ನು ಗ್ರಾಮದ ಅಭ್ಯುದಯಕ್ಕಾಗಿ ಸಜ್ಜುಗೊಳಿಸಬೇಕು, ಗ್ರಾಮದ ಜನ್ಮದಿನವನ್ನು ಆಚರಿಸಬೇಕು, ಇದರಲ್ಲಿ ಊರಿನ ಜನರೆಲ್ಲಾ ಸೇರಿ ಜನರ ಕಲ್ಯಾಣದ ಬಗ್ಗೆ ಚರ್ಚಿಸಬೇಕು ಎಂದು ಅವರು ಹೇಳಿದರು. ಪ್ರತಿಯೊಬ್ಬ ಸದಸ್ಯರೂ ಕನಿಷ್ಠ 15 ನಿಮಿಷವಾದರೂ ಸ್ಥಳೀಯ ಶಾಲೆಗೆ ಭೇಟಿ ನೀಡಬೇಕು, ಇದರಿಂದ ಗ್ರಾಮದ ಶಾಲೆ ಕಟ್ಟುನಿಟ್ಟಿನ ನಿಗಾದಲ್ಲಿರುತ್ತದೆ. ಇದರಿಂದ ಅಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಸ್ವಚ್ಛತೆಯನ್ನು ಕಾಯ್ದುಕೊಳ್ಳಲು ನೆರವಾಗುತ್ತದೆ ಎಂದು ಪಂಚಾಯಿತಿ ಸದಸ್ಯರಿಗೆ ಸಲಹೆ ನೀಡಿದರು.  ಸರಕಾರದ ಪಾಲಿಗೆ ವಾಸ್ತವವಾಗಿ ʻಹೆದ್ದಾರಿʼಗಳಾಗಿರುವ ʻಸಾಮಾನ್ಯ ಸೇವಾ ಕೇಂದ್ರಗಳʼ (ಸಿಎಸ್‌ಸಿ) ಗರಿಷ್ಠ ಪ್ರಯೋಜನವನ್ನು ಪಡೆದುಕೊಳ್ಳಲು ಜನರನ್ನು ಜಾಗೃತಗೊಳಿಸಬೇಕು ಎಂದು ಅವರು ಪಂಚಾಯಿತಿ ಸದಸ್ಯರಿಗೆ ಮನವಿ ಮಾಡಿದರು. ಇದರಿಂದ ರೈಲ್ವೆ ಬುಕಿಂಗ್ ಇತ್ಯಾದಿಗಳಿಗಾಗಿ ದೊಡ್ಡ ನಗರಗಳಿಗೆ ಭೇಟಿ ನೀಡುವುದನ್ನು ತಪ್ಪಿಸಲು ಜನರಿಗೆ ನೆರವಾಗುತ್ತದೆ ಎಂದರು. ಅಂತಿಮವಾಗಿ ಪ್ರಧಾನಮಂತ್ರಿಯವರು ಯಾವುದೇ ಮಗು ಶಾಲೆ ತೊರೆಯದಂತೆ ಮತ್ತು ಅರ್ಹತೆ ಹೊಂದಿರುವ ಯಾವುದೇ ಮಗು ಶಾಲೆಯಲ್ಲಿ ಅಥವಾ ಅಂಗಮನವಾಡಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕೆಂದು ಪಂಚಾಯತ್ ಸದಸ್ಯರಿಗೆ  ಸಲಹೆ ನೀಡಿದರು. ಈ ನಿಟ್ಟಿನಲ್ಲಿ ಪಂಚಾಯತ್ ಸದಸ್ಯರು ವಚನ ನೀಡಬೇಕೆಂದು ಪ್ರಧಾನಿ ಕೋರಿದರು. ಭಾರಿ ಕರತಾಡನದೊಂದಿಗೆ ಸದಸ್ಯರು ತಮ್ಮ ಬದ್ಧತೆಯನ್ನು ದೃಢೀಕರಿಸಿದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi inaugurates Micron’s ₹22,516-crore ATMP facility in Gujarat; calls chips ‘Regulator of 21st century’

Media Coverage

PM Modi inaugurates Micron’s ₹22,516-crore ATMP facility in Gujarat; calls chips ‘Regulator of 21st century’
NM on the go

Nm on the go

Always be the first to hear from the PM. Get the App Now!
...
PM Modi offers prayers at Arulmigu Subramaniyaswamy Temple, Thirupparankundram in Madurai
March 01, 2026

The Prime Minister, Shri Narendra Modi, visited and offered prayers at the Arulmigu Subramaniyaswamy Temple in Thirupparankundram, Madurai today.

During his visit to the sacred temple, the Prime Minister sought blessings for the peace, prosperity, and well-being of all citizens. The Prime Minister expressed his hope that Lord Murugan would continue to guide us with strength, courage, and wisdom.

The Prime Minister shared his sentiments with the invocation, "Vetrivel Muruganukku Arogara!"

The Prime Minister Shared on X:

"Vetrivel Muruganukku Arogara!

Prayed at the Arulmigu Subramaniyaswamy Temple, Thirupparankundram, Madurai.

Sought blessings for peace, prosperity and the well-being of all. May Lord Murugan always guide us with strength, courage and wisdom."