The Rule of Law has been a core civilizational value of Indian society since ages: PM Modi
About 1500 archaic laws have been repealed, says PM Modi
No country or society of the world can claim to achieve holistic development or claim to be a just society without Gender Justice: PM Modi

ನವದೆಹಲಿಯಲ್ಲಿ ನಡೆದ ಅಂತರರಾಷ್ಟ್ರೀಯ ನ್ಯಾಯಾಂಗ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಮಾತನಾಡಿದರು. ಸುಪ್ರೀಂ ಕೋರ್ಟ್‌ ಹಾಗೂ ವಿವಿಧ ಹೈಕೋರ್ಟ್‌ಗಳ ನ್ಯಾಯಾಧೀಶರು, ಖ್ಯಾತ ವಕೀಲರು ಮತ್ತು ವಿದೇಶಿ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಿದ್ದರು.

ವಿಶ್ವದ ಎಲ್ಲ ನಾಗರಿಕರಿಗೆ ನಂಬಿಕೆ ಮತ್ತು ಆತ್ಮವಿಶ್ವಾಸವನ್ನು ತುಂಬುವ ನ್ಯಾಯಾಂಗದ ನಡುವೆ ತಾವು ಹಾಜರಿರುವ ಬಗ್ಗೆ ಹೆಮ್ಮೆಪಟ್ಟುಕೊಂಡ ಪ್ರಧಾನಿಯವರು, 21 ನೇ ಶತಮಾನದ 3 ನೇ ದಶಕದ ಆರಂಭದಲ್ಲಿ ನ್ಯಾಯಾಂಗ ಸಮ್ಮೇಳನ ನಡೆಯುತ್ತಿರುವ ಬಗ್ಗೆ ಗಮನಸೆಳೆದರು.

ಇದು ಭಾರತಕ್ಕೆ ಮಾತ್ರವಲ್ಲದೆ ಪ್ರಪಂಚದಲ್ಲೂ ತ್ವರಿತ ಬದಲಾವಣೆಗಳನ್ನು ತರುವ ದಶಕವಾಗಿದೆ ಎಂದು ಪ್ರಧಾನಿ ಹೇಳಿದರು. ಸಾಮಾಜಿಕ, ಆರ್ಥಿಕ ಮತ್ತು ತಾಂತ್ರಿಕ ಕ್ಷೇತ್ರಗಳಲ್ಲಿ ಬದಲಾವಣೆಗಳು ನಡೆಯುತ್ತಿವೆ. ಈ ಬದಲಾವಣೆಗಳು ತರ್ಕ, ಸಮಾನ ನ್ಯಾಯವನ್ನು ಆಧರಿಸಿರಬೇಕು ಎಂದು ಅವರು ಹೇಳಿದರು. ಆದ್ದರಿಂದ ಈ ಸಮ್ಮೇಳನದ ವಿಷಯವಾದ “ನ್ಯಾಯಾಂಗ ಮತ್ತು ಬದಲಾಗುತ್ತಿರುವ ಜಗತ್ತು” ಹೆಚ್ಚು ಸೂಕ್ತವಾಗಿದೆ ಮತ್ತು ಮಹತ್ವದ್ದಾಗಿದೆ ಎಂದು ಅವರು ಹೇಳಿದರು.

“ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 150 ನೇ ಜನ್ಮದಿನಾಚರಣೆಯನ್ನು ದೇಶವು ಆಚರಿಸುತ್ತಿರುವ ಸಂದರ್ಭದಲ್ಲಿಯೇ ಈ ಸಮ್ಮೇಳನವೂ ನಡೆಯುತ್ತಿದೆ” ಎಂದು ಅವರು ಹೇಳಿದರು.

ಮಹಾತ್ಮಗಾಂಧೀಜಿಯವರು ವಕೀಲರಾಗಿ ಪ್ರಕರಣವೊಂದನ್ನು ಪಡೆಯಲು ಆಯೋಗಕ್ಕೆ ಕಮೀಷನ್ ನೀಡಲು ನಿರಾಕರಿಸಿದ್ದನ್ನು ಅವರು ನೆನಪು ಮಾಡಿಕೊಂಡರು. ಮಹಾತ್ಮರ ಪ್ರಾಮಾಣಿಕತೆ ಮತ್ತು ಸೇವೆಯಲ್ಲಿನ ನಂಬಿಕೆಗೆ ಅವರು ಬೆಳೆದ ಪರಿಸರ ಹಾಗೂ ಭಾರತೀಯ ಸಂಪ್ರದಾಯಗಳು ಮತ್ತು ಸಂಸ್ಕೃತಿಯ ಅಧ್ಯಯನ ಕಾರಣ ಎಂದು ಹೇಳಿದರು.

ಭಾರತದ ತತ್ವಶಾಸ್ತ್ರವು “ಕಾನೂನು ದೊರೆಗಳ ದೊರೆ, ಕಾನೂನೇ ಸರ್ವೋಚ್ಚ” ಎಂಬ ಮಾದರಿಯನ್ನು ಆಧರಿಸಿದ್ದು ಎಂದು ಪ್ರಧಾನಿ ಹೇಳಿದರು.

ಈ ತತ್ವದ ನಂಬಿಕೆಯಿಂದಾಗಿಯೇ 130 ಕೋಟಿ ಭಾರತೀಯರು ಇತ್ತೀಚಿನ ನ್ಯಾಯಾಂಗದ ತೀರ್ಪುಗಳನ್ನು ಶಾಂತಿಯುತವಾಗಿ ಸ್ವೀಕರಿಸುವಂತೆ ಮಾಡಿತು ಎಂದರು.

 

ಭಾರತದ ತತ್ವಶಾಸ್ತ್ರವು “ಕಾನೂನು ದೊರೆಗಳ ದೊರೆ, ಕಾನೂನೇ ಸರ್ವೋಚ್ಚ” ಎಂಬ ಮಾದರಿಯನ್ನು ಆಧರಿಸಿದ್ದು ಎಂದು ಪ್ರಧಾನಿ ಹೇಳಿದರು.

ಈ ತತ್ವದ ನಂಬಿಕೆಯಿಂದಾಗಿಯೇ 130 ಕೋಟಿ ಭಾರತೀಯರು ಇತ್ತೀಚಿನ ನ್ಯಾಯಾಂಗದ ತೀರ್ಪುಗಳನ್ನು ಶಾಂತಿಯುತವಾಗಿ ಸ್ವೀಕರಿಸುವಂತೆ ಮಾಡಿತು ಎಂದರು.

“ಸಂವಿಧಾನವು ಕೇವಲ ವಕೀಲರ ದಾಖಲೆಯಲ್ಲ, ಅದೊಂದು ಜೀವನದ ವಾಹಕ ಮತ್ತು ಅದರ ಚೈತನ್ಯವು ಯಾವಾಗಲೂ ಕಾಲಾತೀತವಾದುದು” ಎಂಬ ಡಾ. ಬಿ.ಆರ್.ಅಂಬೇಡ್ಕರ್ ಅವರ ಹೇಳಿಕೆಯನ್ನು ಪ್ರಧಾನಿ ಉಲ್ಲೇಖಿಸಿದರು. ಈ ಭಾವನೆಯನ್ನು ನಮ್ಮ ದೇಶದ ನ್ಯಾಯಾಲಯಗಳು ಮುಂದುವರಿಸಿಕೊಂಡು ಬರುತ್ತಿವೆ. ನಮ್ಮ ಶಾಸಕಾಂಗ ಮತ್ತು ಕಾರ್ಯಾಂಗಗಳು ಇವುಗಳನ್ನು ಜೀವಂತವಾಗಿರಿಸಿವೆ ಎಂದರು.

“ಎಲ್ಲಾ ಸವಾಲುಗಳ ನಡುವೆ ಪರಸ್ಪರರ ಮಿತಿಗಳನ್ನು ಅರ್ಥಮಾಡಿಕೊಳ್ಳಬೇಕು. ನಮ್ಮ ಸಂವಿಧಾನದ ಮೂರು ಸ್ತಂಭಗಳು ಅನೇಕ ಬಾರಿ ದೇಶಕ್ಕೆ ಸರಿಯಾದ ಮಾರ್ಗವನ್ನೇ ಕಂಡುಕೊಂಡಿವೆ. ಕಳೆದ ಐದು ವರ್ಷಗಳಲ್ಲಿ ಭಾರತದ ವಿವಿಧ ಸಂಸ್ಥೆಗಳು ಈ ಸಂಪ್ರದಾಯವನ್ನು ಬಲಪಡಿಸಿವೆ ”ಎಂದು ಅವರು ಹೇಳಿದರು.

ದೇಶದಲ್ಲಿ ಪ್ರಸ್ತುತವಲ್ಲದ ಸುಮಾರು 1500 ಕಾನೂನುಗಳನ್ನು ತ್ವರಿತಗತಿಯಲ್ಲಿ ರದ್ದುಪಡಿಸಲಾಗಿದೆ ಮತ್ತು ಸಮಾಜವನ್ನು ಬಲಪಡಿಸುವ ಅನೇಕ ಹೊಸ ಕಾನೂನುಗಳನ್ನು ಅದೇ ಗತಿಯಲ್ಲಿ ಜಾರಿಗೆ ತರಲಾಗಿದೆ ಎಂದು ಪ್ರಧಾನಿ ಹೇಳಿದರು.

ಈ ಸಮ್ಮೇಳನದಲ್ಲಿ ‘ಜೆಂಡರ್ ಜಸ್ಟ್ ವರ್ಲ್ಡ್’ ವಿಷಯವನ್ನು ಪರಿಚಯಿಸಿದ ಬಗ್ಗೆ ಪ್ರಧಾನಿಯವರು ಸಂತಸ ವ್ಯಕ್ತಪಡಿಸಿದರು. “ವಿಶ್ವದ ಯಾವುದೇ ದೇಶ, ಯಾವುದೇ ಸಮಾಜ ಲಿಂಗ ಸಮಾನತೆಯಿಲ್ಲದೇ ಪರಿಪೂರ್ಣ ಅಭಿವೃದ್ಧಿಯನ್ನು ಸಾಧಿಸಲು ಅಥವಾ ನ್ಯಾಯವನ್ನು ಪಡೆಯಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು. ಮಿಲಿಟರಿ ಸೇವೆಯಲ್ಲಿ ಮಹಿಳೆಯರ ನೇಮಕಾತಿ, ಫೈಟರ್ ಪೈಲಟ್‌ಗಳ ಆಯ್ಕೆ ಪ್ರಕ್ರಿಯೆಯಲ್ಲಿನ ಬದಲಾವಣೆಗಳು ಮತ್ತು ಗಣಿಗಳಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಸ್ವಾತಂತ್ರ್ಯದಂತಹ ಲಿಂಗ ಸಮಾನತೆಯನ್ನು ತರಲು ಸರ್ಕಾರ ಮಾಡಿದ ಬದಲಾವಣೆಗಳನ್ನು ಪ್ರಧಾನಿಯವರು ಪಟ್ಟಿ ಮಾಡಿದರು. ದೇಶದ ದುಡಿಯುವ ಮಹಿಳೆಯರಿಗೆ 26 ವಾರಗಳ ಪಾವತಿ ರಜೆ ನೀಡುವ ವಿಶ್ವದ ಕೆಲವೇ ದೇಶಗಳಲ್ಲಿ ಇಂದು ಭಾರತವೂ ಒಂದಾಗಿದೆ ಎಂದು ಅವರು ಹೇಳಿದರು.

ಅಭಿವೃದ್ಧಿ ಮತ್ತು ಪರಿಸರದ ನಡುವೆ ಸಮತೋಲನ ಕಾಯ್ದುಕೊಂಡಿರುವುದಕ್ಕಾಗಿ ಮತ್ತು ಆ ಕುರಿತು ನಿರಂತರವಾಗಿ ಮಾರ್ಗದರ್ಶನ ನೀಡುತ್ತಿರುವುದಕ್ಕಾಗಿ ಪ್ರಧಾನಿಯವರು ನ್ಯಾಯಾಂಗಕ್ಕೆ ಧನ್ಯವಾದ ಸಲ್ಲಿಸಿದರು. ಮೂಲಸೌಕರ್ಯಗಳ ನಿರ್ಮಾಣದ ಜೊತೆಯಲ್ಲಿಯೇ ಪರಿಸರವನ್ನೂ ಸಹ ಸಂರಕ್ಷಿಸಬಹುದು ಎಂಬುದನ್ನು ಭಾರತ ತೋರಿಸಿದೆ ಎಂದು ಅವರು ಹೇಳಿದರು.

ತ್ವರಿತವಾಗಿ ನ್ಯಾಯ ಒದಗಿಸಲು ತಂತ್ರಜ್ಞಾನದ ಅಗತ್ಯವನ್ನು ಒತ್ತಿಹೇಳಿದ ಪ್ರಧಾನಿಯವರು, ದೇಶದ ಪ್ರತಿಯೊಂದು ನ್ಯಾಯಾಲಯವನ್ನು ಇ-ಕೋರ್ಟ್ ಇಂಟಿಗ್ರೇಟೆಡ್ ಮಿಷನ್ ಮೋಡ್ ಯೋಜನೆಗೆ ಸಂಪರ್ಕಿಸುವ ಪ್ರಯತ್ನವನ್ನು ಸರ್ಕಾರ ಮಾಡಿದೆ ಎಂದು ಹೇಳಿದರು. “ರಾಷ್ಟ್ರೀಯ ನ್ಯಾಯಾಂಗ ದತ್ತಾಂಶ ಜಾಲ ಸ್ಥಾಪನೆಯು ನ್ಯಾಯಾಲಯದ ಕಾರ್ಯವಿಧಾನಗಳನ್ನು ಸರಳಗೊಳಿಸುತ್ತದೆ” ಎಂದು ಅವರು ಹೇಳಿದರು. ಕೃತಕ ಬುದ್ಧಿಮತ್ತೆ ಮತ್ತು ಮಾನವನ ಆತ್ಮಸಾಕ್ಷಿಯ ಸಂಯೋಜನೆಯು ಭಾರತದಲ್ಲಿನ ನ್ಯಾಯಾಂಗ ಪ್ರಕ್ರಿಯೆಗಳಿಗೆ ಮತ್ತಷ್ಟು ಉತ್ತೇಜನವನ್ನು ನೀಡುತ್ತದೆ ಎಂದು ಪ್ರಧಾನಿ ಹೇಳಿದರು.

 

 

 

 

 

 

 

 

 

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Pyaaz Khaate Hai, Dimaag Nahi': PM Modi's Jhalmuri Video Breaks The Internet With 100M+ Views

Media Coverage

Pyaaz Khaate Hai, Dimaag Nahi': PM Modi's Jhalmuri Video Breaks The Internet With 100M+ Views
NM on the go

Nm on the go

Always be the first to hear from the PM. Get the App Now!
...
Prime Minister pays homage to Adi Shankaracharya
April 21, 2026

The Prime Minister, Shri Narendra Modi, paid tributes to one of India’s greatest spiritual luminaries, Adi Shankaracharya, on his Jayanti today. Shri Modi remarked that his profound teachings, thoughts and philosophy of Advaita Vedanta continue to guide innumerable people globally. And his efforts to revitalise spiritual thought and establish spiritual centres across the nation remain a lasting inspiration."May his wisdom continue to illuminate our path and strengthen our commitment to truth, compassion and collective well-being", Shri Modi added.

The Prime Minister posted on X:

"On the sacred occasion of Adi Shankaracharya Jayanti, paying homage to one of India’s greatest spiritual luminaries. His profound teachings, thoughts and philosophy of Advaita Vedanta continue to guide innumerable people globally. He emphasised harmony, discipline and the oneness of all existence. His efforts to revitalise spiritual thought and establish spiritual centres across the nation remain a lasting inspiration. May his wisdom continue to illuminate our path and strengthen our commitment to truth, compassion and collective well-being."