"ಇದು ಭಾರತದ ಸಮಯ"
"ಕಳೆದ 10 ವರ್ಷಗಳಲ್ಲಿ ಭಾರತವು ಹೇಗೆ ರೂಪಾಂತರಗೊಂಡಿದೆ ಎಂಬುದನ್ನು ವಿಶ್ವದ ಪ್ರತಿಯೊಂದು ಅಭಿವೃದ್ಧಿ ತಜ್ಞರ ಗುಂಪು ಚರ್ಚಿಸುತ್ತಿದೆ"
"ಜಗತ್ತು ಇಂದು ಭಾರತವನ್ನು ನಂಬುತ್ತಿದೆ"
"ಸ್ಥಿರತೆ, ಸುಸಂಗತತೆ ಮತ್ತು ನಿರಂತರತೆಯು ನಮ್ಮ ಒಟ್ಟಾರೆ ನೀತಿಯ 'ಮೊದಲ ತತ್ವಗಳಾಗಿವೆ"
“ಭಾರತವು ಕಲ್ಯಾಣ ರಾಜ್ಯವಾಗಿದೆ. ಸರ್ಕಾರವೇ ಪ್ರತಿಯೊಬ್ಬ ಅರ್ಹ ಫಲಾನುಭವಿಯನ್ನು ತಲುಪುವುದನ್ನು ನಾವು ಖಚಿತಪಡಿಸಿದ್ದೇವೆ"
"ಬಂಡವಾಳ ವೆಚ್ಚದ ರೂಪದಲ್ಲಿ ಉತ್ಪಾದನಾ ವೆಚ್ಚ, ಕಲ್ಯಾಣ ಯೋಜನೆಗಳಲ್ಲಿ ಅಭೂತಪೂರ್ವ ಹೂಡಿಕೆ, ಅನಗತ್ಯ ವೆಚ್ಚದ ಮೇಲಿನ ನಿಯಂತ್ರಣ ಮತ್ತು ಆರ್ಥಿಕ ಶಿಸ್ತು - ನಮ್ಮ ಪ್ರತಿ ಬಜೆಟ್‌ನ 4 ಮುಖ್ಯಾಂಶಗಳಾಗಿವೆ"
"ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವುದು ನಮ್ಮ ಸರ್ಕಾರದ ಗುರುತಾಗಿದೆ"
"ನಾವು 20ನೇ ಶತಮಾನದ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಜತೆಗೆ, 21ನೇ ಶತಮಾನದ ಆಕಾಂಕ್ಷೆಗಳನ್ನು ಪೂರೈಸುತ್ತಿದ್ದೇವೆ"
"2014ರ ಹಿಂದಿನ 10 ವರ್ಷಗಳಲ್ಲಿ ದೇಶವು ಅನುಸರಿಸಿದ ನೀತಿಗಳ ಬಗ್ಗೆ ಸಂಸತ್ತಿನ ಈ ಅಧಿವೇಶನದಲ್ಲಿ ಶ್ವೇತಪತ್ರ ಮಂಡಿಸಲಾಗಿದೆ"

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಹೋಟೆಲ್ ತಾಜ್ ಪ್ಯಾಲೇಸ್‌ನಲ್ಲಿಂದು ಇಟಿ ನೌ ಗ್ಲೋಬಲ್ ಬಿಸಿನೆಸ್ ಶೃಂಗಸಭೆ-2024 ಉದ್ದೇಶಿಸಿ ಭಾಷಣ ಮಾಡಿದರು.

ಜಾಗತಿಕ ವ್ಯಾಪಾರ ಶೃಂಗಸಭೆ-2024 ಆಯ್ಕೆ ಮಾಡಿದ 'ಅಡೆತಡೆ, ಅಭಿವೃದ್ಧಿ ಮತ್ತು ವೈವಿಧ್ಯೀಕರಣದ ವಿಷಯದ ಮಹತ್ವ ಕುರಿತು ಪ್ರಧಾನಿ ತಮ್ಮ ಭಾಷಣ ಆರಂಭಿಸಿದರು. "ಅಡಚಣೆ, ಅಭಿವೃದ್ಧಿ ಮತ್ತು ವೈವಿಧ್ಯೀಕರಣದ ವಿಷಯಕ್ಕೆ ಬಂದಾಗ, ಇದು ಭಾರತದ ಸಮಯ ಎಂದು ಎಲ್ಲರೂ ಒಪ್ಪಿಕೊಳ್ಳಬಹುದು". ವಿಶ್ವದಲ್ಲಿ ಭಾರತದ ಬಗ್ಗೆ ನಂಬಿಕೆ ಹೆಚ್ಚುತ್ತಿದೆ. ದಾವೋಸ್‌ನಲ್ಲಿ ಭಾರತದ ಬಗ್ಗೆ ತೋರಿದ ಅಭೂತಪೂರ್ವ ಉತ್ಸಾಹ ಕುರಿತು ಮಾತನಾಡಿದ ಪ್ರಧಾನ ಮಂತ್ರಿ, ಭಾರತವನ್ನು ಅಭೂತಪೂರ್ವ ಆರ್ಥಿಕ ಯಶೋಗಾಥೆ ಎಂದು ಕರೆದಿರುವ ಬಗ್ಗೆ ನಡೆದ ಚರ್ಚೆಗಳನ್ನು ನೆನಪಿಸಿಕೊಂಡರು. ಭಾರತದ ಡಿಜಿಟಲ್ ಮತ್ತು ಭೌತಿಕ ಮೂಲಸೌಕರ್ಯಗಳು ಹೊಸ ಎತ್ತರಕ್ಕೆ ಏರುತ್ತಿವೆ. ಭಾರತವು ವಿಶ್ವದ ಪ್ರತಿಯೊಂದು ವಲಯದಲ್ಲಿ ಪ್ರಾಬಲ್ಯ ಸಾಧಿಸುತ್ತಿದೆ. ಹಿರಿಯ ಅಧಿಕಾರಿಯೊಬ್ಬರು ಭಾರತದ ಸಾಮರ್ಥ್ಯವನ್ನು 'ರೇಜಿಂಗ್ ಬುಲ್'ಗೆ ಹೋಲಿಸಿದ್ದಾರೆ. ಕಳೆದ 10 ವರ್ಷಗಳಲ್ಲಿ ಭಾರತದ ಪರಿವರ್ತನೆಯ ಕುರಿತು ಚರ್ಚಿಸುತ್ತಿರುವ ವಿಶ್ವದ ಅಭಿವೃದ್ಧಿ ಪರಿಣಿತರ ಗುಂಪುಗಳು, ಇಂದು ಭಾರತದ ಕಡೆಗೆ ವಿಶ್ವದ ಬೆಳೆಯುತ್ತಿರುವ ನಂಬಿಕೆಯನ್ನು ತೋರಿಸುತ್ತಿದೆ. "ವಿಶ್ವದಲ್ಲಿ ಭಾರತದ ಸಾಮರ್ಥ್ಯ ಮತ್ತು ಯಶಸ್ಸಿನ ಬಗ್ಗೆ ಇಂತಹ ಸಕಾರಾತ್ಮಕ ಭಾವನೆಯನ್ನು ನಾವು ಹಿಂದೆಂದೂ ನೋಡಿರಲಿಲ್ಲ". ಭಾರತದ ಪಾಲಿಗೆ 'ಇದು ಸಮಯ, ಇದು ಸರಿಯಾದ ಸಮಯ'ವಾಗಿದೆ ಎಂದರು.

 

ಯಾವುದೇ ದೇಶದ ಅಭಿವೃದ್ಧಿ ಪಯಣದಲ್ಲಿ ಎಲ್ಲಾ ಸಂದರ್ಭಗಳು ಅದರ ಪರವಾಗಿ ಇರುವಾಗ ಒಂದು ಸುಸಮಯ ಬರುತ್ತದೆ. ಈ ಸಮಯದಲ್ಲಿ ದೇಶವು ಶತಮಾನಗಳ ತನಕ ಬಲಿಷ್ಠವಾಗುತ್ತಾ ಸಾಗುತ್ತದೆ. “ನಾನು ಇಂದು ಭಾರತದಲ್ಲಿ ಅದೇ ಸಮಯವನ್ನು ನೋಡುತ್ತಿದ್ದೇನೆ. ಈ ಅವಧಿಯು ಅಭೂತಪೂರ್ವವಾಗಿದೆ. ಒಂದು ರೀತಿಯಲ್ಲಿ, ರಾಷ್ಟ್ರದ ಪುಣ್ಯ ಚಕ್ರವು ಪ್ರಾರಂಭವಾಗಿದೆ”. ನಿರಂತರವಾಗಿ ಹೆಚ್ಚುತ್ತಿರುವ ಆರ್ಥಿಕ ಬೆಳವಣಿಗೆಯ ದರ ಮತ್ತು ಇಳಿಮುಖವಾಗುತ್ತಿರುವ ವಿತ್ತೀಯ ಕೊರತೆ, ರಫ್ತು ಏರಿಕೆ ಮತ್ತು ಚಾಲ್ತಿ ಖಾತೆ ಕೊರತೆಯು ಕಡಿಮೆಯಾಗಿದೆ. ಉತ್ಪಾದನಾ ವಲಯದ ಹೂಡಿಕೆ ದಾಖಲೆಯ ಏರಿಕೆಗೆ ಸಾಕ್ಷಿಯಾಗಿದೆ, ಹಣದುಬ್ಬರ ನಿಯಂತ್ರಣದಲ್ಲಿದೆ. ಏರುತ್ತಿರುವ ಅವಕಾಶಗಳು ಮತ್ತು ಆದಾಯ, ಇಳಿಮುಖವಾಗುತ್ತಿರುವ ಬಡತನ, ಬೆಳೆಯುತ್ತಿರುವ ಬಳಕೆ ಮತ್ತು ಕಾರ್ಪೊರೇಟ್ ಲಾಭದಾಯಕತೆ ಮತ್ತು ಬ್ಯಾಂಕ್ ಎನ್‌ಪಿಎಯಲ್ಲಿ ದಾಖಲೆಯ ಇಳಿಕೆ. ಉತ್ಪಾದನೆ ಮತ್ತು ಉತ್ಪಾದಕತೆ ಎರಡೂ ಹೆಚ್ಚುತ್ತಿದೆ ಎಂದು ಪ್ರಧಾನಿ ಹೇಳಿದರು.

ಆರ್ಥಿಕ ತಜ್ಞರು ಮತ್ತು ಪತ್ರಕರ್ತರು ಈ ವರ್ಷದ ಮಧ್ಯಂತರ ಬಜೆಟ್ ಅನ್ನು 'ಜನಪ್ರಿಯ ಬಜೆಟ್ ಅಲ್ಲ' ಎಂದು ಕರೆದಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ, ಅವರ ವಿಮರ್ಶೆಗಳಿಗೆ ಧನ್ಯವಾದ ಅರ್ಪಿಸಿದರು, ಆದರೆ ಬಜೆಟ್‌ನ 'ಮೊದಲ ತತ್ವ'ಗಳತ್ತ ಗಮನ ಸೆಳೆದರು. ಸ್ಥಿರತೆ, ಸುಸಂಗತತೆ ಮತ್ತು ನಿರಂತರತೆ"ಯು ಒಟ್ಟಾರೆ ನೀತಿಯ " ಮೊದಲ ತತ್ವಗಳಾಗಿವೆ - ಈ ಬಜೆಟ್ ಈ ತತ್ವಗಳ ವಿಸ್ತರಣೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

 

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಬಗ್ಗೆ ಹಿಂತಿರುಗಿ ನೋಡಿದಾಗ, ಆರೋಗ್ಯ ಮತ್ತು ಆರ್ಥಿಕತೆಯ ಅವಳಿ ಸವಾಲುಗಳನ್ನು ನಿಭಾಯಿಸುವ ಬಗ್ಗೆ ಯಾರಿಗೂ ಸುಳಿವು ಇಲ್ಲದ ವಿಶ್ವದಾದ್ಯಂತದ ಸರ್ಕಾರಗಳಿಗೆ ಇಡೀ ಅವಧಿಯು ಹೇಗೆ ದೊಡ್ಡ ಪರೀಕ್ಷೆಯಾಗಿ ಹೊರಹೊಮ್ಮಿತು ಎಂಬುದನ್ನು ಪ್ರಧಾನಿ ನೆನಪಿಸಿಕೊಂಡರು. ಈ ಅವಧಿಯಲ್ಲಿ ಭಾರತವು ಜನರ ಜೀವ ಉಳಿಸಲು ಆದ್ಯತೆ ನೀಡಿತು. "ಜೀವನವಿದ್ದರೆ ಎಲ್ಲವೂ ಇದೆ", ಜೀವ ಉಳಿಸುವ ಸಂಪನ್ಮೂಲಗಳನ್ನು ಸಂಗ್ರಹಿಸುವ ಮತ್ತು ಅಪಾಯಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಸರ್ಕಾರದ ಪ್ರಯತ್ನಗಳು ಯಸ್ವಿಯಾಗಿ ನಡೆದವು. ಬಡವರಿಗೆ ಉಚಿತ ಪಡಿತರ ನೀಡಲು ಸರ್ಕಾರ ನಿರ್ಧರಿಸಿದೆ, ಭಾರತದಲ್ಲಿ ತಯಾರಿಸಿದ ಲಸಿಕೆಗಳ ಮೇಲೆ ಗಮನ ಕೇಂದ್ರೀಕರಿಸಿ, ತ್ವರಿತ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿದೆ.  "ಸರ್ಕಾರವು ಆರೋಗ್ಯ ಮತ್ತು ಜೀವನೋಪಾಯದ ಬೇಡಿಕೆಗಳನ್ನು ಪರಿಹರಿಸಿದೆ", ಮಹಿಳೆಯರ ಖಾತೆಗಳಿಗೆ ನೇರ ನಗದು ವರ್ಗಾವಣೆ, ಬೀದಿ ವ್ಯಾಪಾರಿಗಳು ಮತ್ತು ಸಣ್ಣ ಉದ್ಯಮಿಗಳಿಗೆ ಹಣಕಾಸಿನ ನೆರವು ಮತ್ತು ಕೃಷಿ ಸಂಬಂಧಿತ ಸಮಸ್ಯೆಗಳನ್ನು ನಿಭಾಯಿಸುವ ಕ್ರಮಗಳನ್ನು ಪ್ರಧಾನಿ ಪ್ರಸ್ತಾಪಿಸಿದರು. ದುರಂತವನ್ನು ಅವಕಾಶವನ್ನಾಗಿ ಪರಿವರ್ತಿಸುವ ಸಂಕಲ್ಪವನ್ನು ಸರ್ಕಾರ ತೆಗೆದುಕೊಂಡಿದೆ.  ಬೇಡಿಕೆಯನ್ನು ಹೆಚ್ಚಿಸಲು ಮತ್ತು ದೊಡ್ಡ ಉದ್ಯಮಗಳಿಗೆ ಸಹಾಯ ಮಾಡಲು ಹೆಚ್ಚಿನ ಹಣವನ್ನು ಮುದ್ರಿಸಲು ಆ ಸಮಯದಲ್ಲಿ ತಜ್ಞರ ಅಭಿಪ್ರಾಯವನ್ನು ಪಡೆಯಲಾಯಿತು.  ಆದರೆ ವಿಶ್ವದ ಅನೇಕ ಸರ್ಕಾರಗಳು ಅಳವಡಿಸಿಕೊಂಡ ಕಾರ್ಯವಿಧಾನವು ಹಣದುಬ್ಬರ ಮಟ್ಟ ಏರಿಕೆಗೆ ಕಾರಣವಾಯಿತು. "ನಮ್ಮ ಮೇಲೂ ಒತ್ತಡ ಹೇರಲು ಹಲವು ಪ್ರಯತ್ನಗಳು ನಡೆದವು. "ಆದರೆ ನಾವು ನೆಲದ ವಾಸ್ತವತೆಯನ್ನು ತಿಳಿದಿದ್ದೇವೆ ಮತ್ತು ಅದನ್ನು ಅರ್ಥ ಮಾಡಿಕೊಂಡಿದ್ದೇವೆ. ನಮ್ಮ ಅನುಭವ ಮತ್ತು ನಮ್ಮ ಆತ್ಮಸಾಕ್ಷಿಯ ಆಧಾರದ ಮೇಲೆ ನಾವು ಮುಂದೆ ಸಾಗಿದೆವು. ಒಂದು ಕಾಲದಲ್ಲಿ ಪ್ರಶ್ನಿಸಲಾಗುತ್ತಿದ್ದ ಆದರೆ ಸರಿ ಎಂದು ಸಾಬೀತುಪಡಿಸಿದ ಭಾರತದ ನೀತಿಗಳು ಇಂದು ಆರ್ಥಿಕತೆಯ ಬಲವಾದ ಸ್ಥಾನಕ್ಕೆ ತಂದು ನಿಲ್ಲಿಸಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.
 
“ಭಾರತವು ಕಲ್ಯಾಣ ರಾಷ್ಟ್ರವಾಗಿದೆ. ಸಾಮಾನ್ಯ ನಾಗರಿಕರ ಜೀವನ ಸುಲಭಗೊಳಿಸುವುದು ಮತ್ತು ಜೀವನದ ಗುಣಮಟ್ಟ ಸುಧಾರಿಸುವುದು ಸರ್ಕಾರದ ಆದ್ಯತೆಯಾಗಿದೆ. ಒಂದೆಡೆ ಹೊಸ ಯೋಜನೆಗಳನ್ನು ರೂಪಿಸಿದರೆ, ಮತ್ತೊಂದೆಡೆ ಸರ್ಕಾರ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳನ್ನು ಕೊಂಡೊಯ್ಯುತ್ತಿದೆ. "ನಾವು ಪ್ರಸ್ತುತ ಮಾತ್ರವಲ್ಲದೆ ದೇಶದ ಭವಿಷ್ಯಕ್ಕೂ ಹೂಡಿಕೆ ಮಾಡಿದ್ದೇವೆ". ಪ್ರತಿ ಬಜೆಟ್‌ನಲ್ಲಿ 4 ಪ್ರಮುಖ ಅಂಶಗಳನ್ನು ಎತ್ತಿ ತೋರಿಸಲಾಗಿದೆ. ಬಂಡವಾಳ ವೆಚ್ಚದ ರೂಪದಲ್ಲಿ ದಾಖಲೆಯ ಉತ್ಪಾದನಾ ವೆಚ್ಚ, ಕಲ್ಯಾಣ ಯೋಜನೆಗಳಲ್ಲಿ ಅಭೂತಪೂರ್ವ ಹೂಡಿಕೆ, ಅನಗತ್ಯ ವೆಚ್ಚಗಳ ಮೇಲಿನ ನಿಯಂತ್ರಣ ಮತ್ತು ಆರ್ಥಿಕ ಶಿಸ್ತು ಕಾಪಾಡಲಾಗಿದೆ. ಸಮತೋಲನ ಕಾಯ್ದುಕೊಳ್ಳಲಾಗಿದೆ. ಈ ಎಲ್ಲಾ 4 ವಿಷಯಗಳಲ್ಲಿ ನಿಗದಿತ ಗುರಿಗಳನ್ನು ಸಾಧಿಸಲಾಗಿದೆ. ಅಪೇಕ್ಷಿತ ಗುರಿಗಳನ್ನು ಸಾಧಿಸುವಲ್ಲಿ ‘ಉಳಿಸಿದ ಹಣ ಗಳಿಸಿದ ಹಣ’ ಎಂಬ ಮಂತ್ರಕ್ಕೆ ಮನ್ನಣೆ ನೀಡಲಾಗಿದೆ. ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುತ್ತಿದೆ. ವಿಳಂಬದಿಂದಾಗಿ ಹೆಚ್ಚುತ್ತಿರುವ ಯೋಜನಾ ವೆಚ್ಚ ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಅದಕ್ಕಾಗಿ 2008ರಲ್ಲಿ ಪ್ರಾರಂಭವಾದ ಸಮರ್ಪಿತ ಪೂರ್ವ ಸರಕು ಸಾಗಣೆ ಕಾರಿಡಾರ್ ಯೋಜನೆಯ ಉದಾಹರಣೆ ನೀಡಿದರು. ಕಳೆದ ವರ್ಷ ಪೂರ್ಣಗೊಂಡ ನಂತರ ಯೋಜನೆಯ ವೆಚ್ಚವು 16,500 ಕೋಟಿಗಳಿಂದ 50,000 ಕೋಟಿ ರೂ.ಗಳಿಗೆ ಏರಿದೆ. 1998ರಲ್ಲಿ ಪ್ರಾರಂಭಿಸಲಾದ ಅಸ್ಸಾಂನ ಬೋಗಿಬೀಲ್ ಸೇತುವೆ ನಿರ್ಮಾಣ ಯೋಜನೆಯ ವೆಚ್ಚ 2018ರಲ್ಲಿ ಪೂರ್ಣಗೊಂಡ ನಂತರ 1,100 ಕೋಟಿಗಳಿಂದ 5,000 ಕೋಟಿಗಳಿಗೆ ಏರಿತು.

 

ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ಮೂಲಕ ಮತ್ತು ತಂತ್ರಜ್ಞಾನ ಬಳಸಿಕೊಂಡು ದೇಶದ ಹಣವನ್ನು ಉಳಿಸಲಾಗುತ್ತಿದೆ. ಕೇವಲ ಕಾಗದದ ಮೇಲೆ ಮಾತ್ರ ಅಸ್ತಿತ್ವದಲ್ಲಿದ್ದ 10 ಕೋಟಿ ನಕಲಿ ಫಲಾನುಭವಿಗಳನ್ನು ತೆಗೆದುಹಾಕಲಾಗಿದೆ. ನೇರ ನಗದು ವರ್ಗಾವಣೆಯೊಂದಿಗೆ ಹಣದ ಸೋರಿಕೆ ತಡೆಗಟ್ಟಲಾಗಿದೆ. ತಪ್ಪು ಕೈಗಳಿಗೆ ಹಣ ಹೋಗುವುದನ್ನು ತಪ್ಪಿಸಿದ್ದರಿಂದ 3.25 ಲಕ್ಷ ಕೋಟಿ ರೂ. ಉಳಿತಾಯವಾಗಿದೆ. ಸರ್ಕಾರಿ ಸರಕುಗಳನ್ನು ಖರೀದಿಸಲು ಜಿಇಎಂ ಪೋರ್ಟಲ್ ಮೂಲಕ 65,000 ಕೋಟಿ ರೂಪಾಯಿ ಉಳಿತಾಯ ಮತ್ತು ತೈಲ ಸಂಗ್ರಹಣೆಯ ವೈವಿಧ್ಯೀಕರಣದಿಂದ 25,000 ಕೋಟಿ ರೂಪಾಯಿ ಉಳಿಸಲಾಗಿದೆ. "ಕಳೆದ ವರ್ಷದಲ್ಲಿ, ನಾವು ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಮಾಡುವ ಮೂಲಕ 24,000 ಕೋಟಿ ರೂಪಾಯಿಗಳನ್ನು ಉಳಿಸಿದ್ದೇವೆ".  ಸರ್ಕಾರಿ ಕಟ್ಟಡಗಳಲ್ಲಿ ಬಿದ್ದಿರುವ ಕಚೇರಿಯ ಕಸ ಮತ್ತು ಅನುಪಯುಕ್ತ ವಸ್ತುಗಳ ಮಾರಾಟ ಮೂಲಕ ಸರ್ಕಾರ 1,100 ಕೋಟಿ ರೂಪಾಯಿ ಗಳಿಸಿದ ಸ್ವಚ್ಛತಾ ಅಭಿಯಾನವನ್ನು ಅವರು ಪ್ರಸ್ತಾಪಿಸಿದರು.

ನಾಗರಿಕರು ಹಣ ಉಳಿಸುವ ರೀತಿಯಲ್ಲಿ ಸರ್ಕಾರದ ಯೋಜನೆಗಳನ್ನು ರೂಪಿಸಲಾಗಿದೆ. ಬಡವರಿಗೆ ಶುದ್ಧ ಕುಡಿಯುವ ನೀರು ಖಾತ್ರಿಪಡಿಸುವ ಜಲ ಜೀವನ್ ಮಿಷನ್ ಆರಂಭಿಸಲಾಗಿದೆ. ಇದರಿಂದಾಗಿ ನೀರಿನಿಂದ ಹರಡುವ ರೋಗಗಳ ಮೂಲಕ ಉಂಟಾಗುವ ಕಾಯಿಲೆಗಳ ಮೇಲಿನ ವೆಚ್ಚವನ್ನು ಕಡಿಮೆ ಮಾಡಲಾಗಿದೆ. ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳಲ್ಲಿ 80% ಅಗ್ಗದ ಔಷಧಿಗಳ ಮೂಲಕ 30,000 ಕೋಟಿ ರೂಪಾಯಿ ಉಳಿಸಲಾಗಿದೆ. ಆಯುಷ್ಮಾನ್ ಭಾರತ್ ದೇಶದ ಬಡವರನ್ನು 1 ಲಕ್ಷ ಕೋಟಿ ರೂಪಾಯಿಗಳಿಂದ ಉಳಿಸಿದೆ ಎಂದರು.

 

ಈಗಿನ ಪೀಳಿಗೆಗೆ ಮಾತ್ರವಲ್ಲದೆ ಮುಂದಿನ ಹಲವು ಪೀಳಿಗೆಗಳಿಗೂ ನಮ್ಮ ಸರ್ಕಾರ ಜವಾಬ್ದಾರಿಯಾಗಿದೆ. ಹೀಗಾಗಿ, ನೀತಿಗಳು ಮತ್ತು ನಿರ್ಧಾರಗಳಲ್ಲಿ ಹಣಕಾಸು ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ವಿದ್ಯುತ್ತಿನ ಉದಾಹರಣೆ ನೀಡಿದ ಪ್ರಧಾನಿ, 1 ಕೋಟಿ ಮನೆಗಳಿಗೆ ರೂಫ್‌ಟಾಪ್ ಸೋಲಾರ್ ಯೋಜನೆ ರೂಪಿಸಲಾಗಿದೆ.  ಜನರು ವಿದ್ಯುತ್ ಉತ್ಪಾದಿಸುವ ಮೂಲಕ ತಮ್ಮ ವಿದ್ಯುತ್ ಬಿಲ್ ಅನ್ನು ಶೂನ್ಯಕ್ಕೆ ಇಳಿಸಬಹುದು. ಜತೆಗೆ, ಹೆಚ್ಚುವರಿ ವಿದ್ಯುತ್ ಮಾರಾಟ ಮಾಡುವ ಮೂಲಕ ಹಣ ಸಂಪಾದಿಸಬಹುದು. ಉಜಾಲಾ ಯೋಜನೆಯಡಿ ಒದಗಿಸಲಾದ ಎಲ್‌ಇಡಿ ಬಲ್ಬ್‌ಗಳು 20,000 ಕೋಟಿಗಳಷ್ಟು ವಿದ್ಯುತ್ ಬಿಲ್‌ಗಳನ್ನು ಉಳಿಸಲು ಸಹಾಯ ಮಾಡಿತು ಎಂದು ಅವರು ಹೇಳಿದರು.

ಕಳೆದ 7 ದಶಕಗಳಿಂದ ದೇಶದಲ್ಲಿ ಬಡತನ ನಿರ್ಮೂಲನೆಗಾಗಿ ಘೋಷಣೆಗಳು ಮೊಳಗುತ್ತಿದ್ದರೂ, ಅವು ಪರಿಣಾಮ ಬೀರಲು ವಿಫಲವಾಗಿವೆ. ಹವಾನಿಯಂತ್ರಿತ ಕೊಠಡಿಗಳಿಂದ ಸಲಹೆಗಳನ್ನು ನೀಡುವವರು ಮಿಲಿಯನೇರ್ ಆಗಿದ್ದಾರೆ. ಆದರೆ ಬಡವರು ಬಡವರಾಗಿ ಉಳಿದಿದ್ದಾರೆ. 2014ರ ನಂತರ, ಸರ್ವತೋಮುಖ ಕೆಲಸಗಳು ಪ್ರಾರಂಭವಾದ ಪರಿಣಾಮವಾಗಿ ಕಳೆದ 10 ವರ್ಷಗಳಲ್ಲಿ 25 ಕೋಟಿ ಜನರು ಬಡತನದಿಂದ ಹೊರಬರಲು ಪ್ರಾರಂಭಿಸಿದ್ದಾರೆ. ಇದಕ್ಕೆ ನಮ್ಮ ಸರ್ಕಾರದ ನೀತಿಗಳೇ ಕಾರಣ. “ನಾನು ಬಡತನದಿಂದ ಇಲ್ಲಿಗೆ ಬಂದಿದ್ದೇನೆ. ಆದ್ದರಿಂದ ಬಡತನದ ವಿರುದ್ಧ ಹೇಗೆ ಹೋರಾಡಬೇಕೆಂದು ನನಗೆ ತಿಳಿದಿದೆ. ಈ ದಿಕ್ಕಿನಲ್ಲಿ ಮುನ್ನಡೆಯುವ ಮೂಲಕ ನಾವು ದೇಶದ ಬಡತನವನ್ನು ಕಡಿಮೆ ಮಾಡುತ್ತೇವೆ, ನಮ್ಮ ದೇಶವನ್ನು ಅಭಿವೃದ್ಧಿಗೊಳಿಸುತ್ತೇವೆ.” ಎಂದು ಶ್ರೀ ಮೋದಿ ಅವರು ತಿಳಿಸಿದರು.
 
"ಭಾರತದ ಆಡಳಿತ ಮಾದರಿಯು ಏಕಕಾಲದಲ್ಲಿ 2 ದಿಕ್ಕುಗಳಲ್ಲಿ ಮುನ್ನಡೆಯುತ್ತಿದೆ". ಒಂದೆಡೆ 20ನೇ ಶತಮಾನದ ಸವಾಲುಗಳನ್ನು ಎದುರಿಸುತ್ತಿದ್ದರೆ, ಮತ್ತೊಂದೆಡೆ 21ನೇ ಶತಮಾನದ ಆಶಯಗಳನ್ನು ಈಡೇರಿಸಲು ಸರಕಾರ ಶ್ರಮಿಸುತ್ತಿದೆ. ಅಭಿವೃದ್ಧಿ ನಿಯತಾಂಕಗಳ ಹೋಲಿಕೆಗಳನ್ನು ಚಿತ್ರಿಸಿದ ಪ್ರಧಾನಿ, 11 ಕೋಟಿ ಶೌಚಾಲಯಗಳನ್ನು ನಿರ್ಮಿಸುವುದು ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಸಾಧ್ಯತೆಗಳನ್ನು ಸೃಷ್ಟಿಸುವುದು, ಬಡವರಿಗೆ 4 ಕೋಟಿ ಮನೆಗಳನ್ನು ಒದಗಿಸುವುದು, 10,000ಕ್ಕೂ ಹೆಚ್ಚು ಅಟಲ್ ಟಿಂಕರಿಂಗ್ ಲ್ಯಾಬ್‌ಗಳನ್ನು ಅಭಿವೃದ್ಧಿಪಡಿಸುವುದು, 300ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವುದು. ಸರಕು ಸಾಗಣೆ ಕಾರಿಡಾರ್ ಮತ್ತು ರಕ್ಷಣಾ ಕಾರಿಡಾರ್, ವಂದೇ ಭಾರತ್ ರೈಲುಗಳನ್ನು ಓಡಿಸುವ ಜೊತೆಗೆ ದೆಹಲಿ ಸೇರಿದಂತೆ ಹಲವು ನಗರಗಳಲ್ಲಿ ಸುಮಾರು 10,000 ಎಲೆಕ್ಟ್ರಿಕ್ ಬಸ್ ಗಳು. ಕೋಟ್ಯಂತರ ಭಾರತೀಯರನ್ನು ಬ್ಯಾಂಕಿಂಗ್ ಕ್ಷೇತ್ರದೊಂದಿಗೆ ಸಂಪರ್ಕಿಸುವ ಮತ್ತು ಡಿಜಿಟಲ್ ಇಂಡಿಯಾ ಮತ್ತು ಹಣಕಾಸು ತಂತ್ರಜ್ಞಾನಗಳ ಮೂಲಕ ಬಹುಸೌಲಭ್ಯಗಳನ್ನು ಸೃಷ್ಟಿಸಲಾಗುತ್ತಿದೆ ಎಂದರು.

 

ನಮ್ಮ ಸರ್ಕಾರವು ಹಿಂದಿನ ಸರ್ಕಾರಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಮತ್ತು ಹೆಚ್ಚಿನ ವೇಗದಲ್ಲಿ ಕೆಲಸ ಮಾಡಲು ನಿರ್ಧರಿಸಿದೆ. ಕಳೆದ 10 ವರ್ಷಗಳಿಂದ 2014ರ ವರೆಗಿನ ಕೆಲಸಗಳ ಹೋಲಿಕೆಗಳ ಮೇಲೆ ಬೆಳಕು ಚೆಲ್ಲಿದ ಅವರು, ರೈಲ್ವೆ ಮಾರ್ಗಗಳ ವಿದ್ಯುದೀಕರಣವನ್ನು ಸುಮಾರು 20,000 ಕಿ.ಮೀ.ಗಳಿಂದ 40,000 ಕಿ.ಮೀ.ಗಿಂತ ಹೆಚ್ಚಿನ ಮಟ್ಟಕ್ಕೆ ಏರಿಸಲಾಗಿದೆ. ಚತುಷ್ಪಥ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣವು 18,000 ಕಿ.ಮೀ.ನಿಂದ ಸುಮಾರು 30,000 ಕಿ.ಮೀ.ಗೆ ಏರಿಕೆ ಆಗಿದೆ.  ಮೆಟ್ರೋ ರೈಲು ಜಾಲವನ್ನು 250 ಕಿಲೋಮೀಟರ್‌ ನಿಂದ 650 ಕಿಮೀಗಿಂತ ಹೆಚ್ಚಿನ ಮಟ್ಟಕ್ಕೆ  ವಿಸ್ತರಿಸಲಾಗಿದೆ. 2019ರಿಂದ ಜಲ ಜೀವನ್ ಮಿಷನ್ ಅಡಿ, 2014ರ ವರೆಗೆ ಏಳು ದಶಕಗಳ ಅವಧಿಯಲ್ಲಿ ಭಾರತದಲ್ಲಿ 3.5 ಕೋಟಿ ನಲ್ಲಿ ನೀರು ಸಂಪರ್ಕ ನೀಡಲಾಗಿತ್ತು. ಆದರೀಗ ಕಳೆದ 5 ವರ್ಷಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ 10 ಕೋಟಿ ಮನೆಗಳು ನಳ ನೀರು ಸಂಪರ್ಕ ಪಡೆದಿವೆ ಎಂದು ಪ್ರಧಾನಿ ಮಾಹಿತಿ ನೀಡಿದರು.

 

2014ರ ಹಿಂದಿನ 10 ವರ್ಷಗಳಲ್ಲಿ ಅನುಸರಿಸಿದ ನೀತಿಗಳು ದೇಶವನ್ನು ಬಡತನದ ಹಾದಿಗೆ ಕೊಂಡೊಯ್ಯುತ್ತಿತ್ತು. ಈ ಬಗ್ಗೆ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಶ್ವೇತಪತ್ರ ಮಂಡಿಸಲಾಗಿದೆ. ಹೂಡಿಕೆದಾರರ ವಿಶ್ವಾಸ ಕಳೆದುಕೊಳ್ಳುವ ದೊಡ್ಡ ಅಪಾಯಕ್ಕೆ ಕಾರಣವಾಗುವ ಹಗರಣಗಳು ಮತ್ತು ನಿಷ್ಕ್ಟಿಯ ನೀತಿಗಳಿಂದಾಗಿ ವಿಶ್ವಾದ್ಯಂತ ಹೂಡಿಕೆದಾರರಲ್ಲಿ ದೊಡ್ಡ ನಿರಾಶೆ ಉಂಟಾಗಿತ್ತು. ಈಗ ಭಾರತದ ಆರ್ಥಿಕತೆಯು ಸದೃಢ ಸ್ಥಿತಿಯಲ್ಲಿದ್ದು, ಸರ್ಕಾರವು ಸಂಪೂರ್ಣ ಸತ್ಯವನ್ನು ಶ್ವೇತಪತ್ರದ ರೂಪದಲ್ಲಿ ದೇಶದ ಮುಂದೆ ಮಂಡಿಸಿದೆ ಎಂದರು.

"ಭಾರತವು ಪ್ರಗತಿಯ ಹೊಸ ಎತ್ತರಕ್ಕೆ ಏರುತ್ತಿದೆ". ದೇಶವು ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯ ಹಾದಿಯಲ್ಲಿದೆ. ಪ್ರಸ್ತುತ ಸರ್ಕಾರದ 3ನೇ ಅವಧಿಯು ಬೃಹತ್ ನಿರ್ಧಾರಗಳಿಗೆ ಸಾಕ್ಷಿಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಭಾರತದ ಅಭಿವೃದ್ಧಿಗೆ ಹೊಸ ಪ್ರಚೋದನೆ ಮತ್ತು ಉತ್ತೇಜನ ನೀಡುವ ಮೂಲಕ ಬಡತನ ತೊಡೆದುಹಾಕಲು ಹೊಸ ಯೋಜನೆಗಳಿಗೆ ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ. 15 ಲಕ್ಷಕ್ಕೂ ಹೆಚ್ಚು ಜನರ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. “ನವ ಭಾರತವು ಅತಿ ವೇಗದಲ್ಲಿ ಕೆಲಸ ಮಾಡುತ್ತದೆ. ಇದು ಮೋದಿಯವರ ಗ್ಯಾರಂಟಿ ಎಂದು ಅವರು ತಮ್ಮ ಭಾಷಣ ಮುಕ್ತಾಯಗೊಳಿಸಿದರು.

 

 

 

 

 

 

 

 

 

 

 

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Why The SHANTI Bill Makes Modi Government’s Nuclear Energy Push Truly Futuristic

Media Coverage

Why The SHANTI Bill Makes Modi Government’s Nuclear Energy Push Truly Futuristic
NM on the go

Nm on the go

Always be the first to hear from the PM. Get the App Now!
...
‘Restoring Balance’ is a global urgency: PM Modi highlights global health challenges at WHO Global Summit on Traditional Medicine
December 19, 2025
It is India’s privilege and a matter of pride that the WHO Global Centre for Traditional Medicine has been established in Jamnagar: PM
Yoga has guided humanity across the world towards a life of health, balance, and harmony: PM
Through India’s initiative and the support of over 175 nations, the UN proclaimed 21 June as International Yoga Day; over the years, yoga has spread worldwide, touching lives across the globe: PM
The inauguration of the WHO South-East Asia Regional Office in Delhi marks another milestone. This global hub will advance research, strengthen regulation & foster capacity building: PM
Ayurveda teaches that balance is the very essence of health, only when the body sustains this equilibrium can one be considered truly healthy: PM
Restoring balance is no longer just a global cause-it is a global urgency, demanding accelerated action and resolute commitment: PM
The growing ease of resources and facilities without physical exertion is giving rise to unexpected challenges for human health: PM
Traditional healthcare must look beyond immediate needs, it is our collective responsibility to prepare for the future as well: PM

WHO के डायरेक्टर जनरल हमारे तुलसी भाई, डॉक्टर टेड्रोस़, केंद्रीय स्वास्थ्य में मेरे साथी मंत्री जे.पी. नड्डा जी, आयुष राज्य मंत्री प्रतापराव जाधव जी, इस आयोजन से जुड़े अन्य देशों के सभी मंत्रीगण, विभिन्न देशों के राजदूत, सभी सम्मानित प्रतिनिधि, Traditional Medicine क्षेत्र में काम करने वाले सभी महानुभाव, देवियों और सज्जनों !

आज दूसरी WHO Global Summit on Traditional Medicine का समापन दिन है। पिछले तीन दिनों में यहां पारंपरिक चिकित्सा के क्षेत्र से जुड़े दुनिया भर के एक्सपर्ट्स ने गंभीर और सार्थक चर्चा की है। मुझे खुशी है कि भारत इसके लिए एक मजबूत प्लेटफार्म का काम कर रहा है। और इसमें WHO की भी सक्रिय भूमिका रही है। मैं इस सफल आयोजन के लिए WHO का, भारत सरकार के आयुष मंत्रालय का और यहां उपस्थित सभी प्रतिभागियों का हृदय से आभार व्यक्त करता हूं।

साथियों,

ये हमारा सौभाग्य है और भारत के लिए गौरव की बात है कि WHO Global Centre for Traditional Medicine भारत के जामनगर में स्थापित हुआ है। 2022 में Traditional Medicine की पहली समिट में विश्व ने बड़े भरोसे के साथ हमें ये दायित्व सौंपा था। हम सभी के लिए खुशी की बात है कि इस ग्लोबल सेंटर का यश और प्रभाव locally से लेकर के globally expand कर रहा है। इस समिट की सफलता इसका सबसे बड़ा उदाहरण है। इस समिट में Traditional knowledge और modern practices का कॉन्फ्लूएंस हो रहा है। यहां कई नए initiatives भी शुरू हुए हैं, जो medical science और holistic health के future को transform कर सकते हैं। समिट में विभिन्न देशों के स्वास्थ्य मंत्रियों और प्रतिनिधियों के बीच विस्तार से संवाद भी हुआ है। इस संवाद ने ज्वाइंट रिसर्च को बढ़ावा देने, नियमों को सरल बनाने और ट्रेनिंग और नॉलेज शेयरिंग के लिए नए रास्ते खोले हैं। ये सहयोग आगे चलकर Traditional Medicine को अधिक सुरक्षित, अधिक भरोसेमंद बनाने में महत्वपूर्ण भूमिका निभाएगा।

साथियों,

इस समिट में कई अहम विषयों पर सहमति बनना हमारी मजबूत साझेदारी का प्रतिबिंब है। रिसर्च को मजबूत करना, Traditional Medicine के क्षेत्र में डिजिटल टेक्नोलॉजी का उपयोग बढ़ाना, ऐसे रेगुलेटरी फ्रेमवर्क तैयार करना जिन पर पूरी दुनिया भरोसा कर सके। ऐसे मुद्दे Traditional Medicine को बहुत सशक्त करेंगे। यहां आयोजित Expo में डिजिटल हेल्थ टेक्नोलॉजी, AI आधारित टूल्स, रिसर्च इनोवेशन, और आधुनिक वेलनेस इंफ्रास्ट्रक्चर, इन सबके जरिए हमें ट्रेडिशन और टेक्नोलॉजी का एक नया collaboration भी देखने को मिला है। जब ये साथ आती हैं, तो ग्लोबल हेल्थ को अधिक प्रभावी बनाने की क्षमता और बढ़ जाती है। इसलिए, इस समिट की सफलता ग्लोबल दृष्टि से बहुत ही अहम है।

साथियों,

पारंपरिक चिकित्सा प्रणाली का एक अहम हिस्सा योग भी है। योग ने पूरी दुनिया को स्वास्थ्य, संतुलन और सामंजस्य का रास्ता दिखाया है। भारत के प्रयासों और 175 से ज्यादा देशों के सहयोग से संयुक्त राष्ट्र द्वारा 21 जून को योग दिवस घोषित किया गया था। बीते वर्षों में हमने योग को दुनिया के कोने-कोने तक पहुंचते देखा है। मैं योग के प्रचार और विकास में महत्वपूर्ण योगदान देने वाले हर व्यक्ति की सराहना करता हूं। आज ऐसे कुछ चुनींदा महानुभावों को पीएम पुरस्कार दिया गया है। प्रतिष्ठित जूरी सदस्यों ने एक गहन चयन प्रक्रिया के माध्यम से इन पुरस्कार विजेताओं का चयन किया है। ये सभी विजेता योग के प्रति समर्पण, अनुशासन और आजीवन प्रतिबद्धता के प्रतीक हैं। उनका जीवन हर किसी के लिए प्रेरणा है। मैं सभी सम्मानित विजेताओं को हार्दिक बधाई देता हूं, अपनी शुभकामनाएं देता हूं।

साथियों,

मुझे ये जानकर भी अच्छा लगा कि इस समिट के आउटकम को स्थायी रूप देने के लिए एक महत्वपूर्ण कदम उठाया गया हैं। Traditional Medicine Global Library के रूप में एक ऐसा ग्लोबल प्लेटफॉर्म शुरू किया गया है, जो ट्रेडिशनल मेडिसिन से जुड़े वैज्ञानिक डेटा और पॉलिसी डॉक्यूमेंट्स को एक जगह सुरक्षित करेगा। इससे उपयोगी जानकारी हर देश तक समान रूप से पहुंचने का रास्ता आसान होगा। इस Library की घोषणा भारत की G20 Presidency के दौरान पहली WHO Global Summit में की गई थी। आज ये संकल्प साकार हो गया है।

साथियों,

यहां अलग-अलग देशों के स्वास्थ्य मंत्रियों ने ग्लोबल पार्टनरशिप का एक बेहतरीन उदाहरण प्रस्तुत किया है। एक साझेदार के रूप में आपने Standards, safety, investment जैसे मुद्दों पर चर्चा की है। इस संवाद से जो Delhi Declaration इसका रास्ता बना है, वो आने वाले वर्षों के लिए एक साझा रोडमैप की तरह काम करेगा। मैं इस joint effort के लिए विभिन्न देशों के माननीय मंत्रियों की सराहना करता हूं, उनके सहयोग के लिए मैं आभार जताता हूं।

साथियों,

आज दिल्ली में WHO के South-East Asia Regional Office का उद्घाटन भी किया गया है। ये भारत की तरफ से एक विनम्र उपहार है। ये एक ऐसा ग्लोबल हब है, जहां से रिसर्च, रेगुलेशन और कैपेसिटी बिल्डिंग को बढ़ावा मिलेगा।

साथियों,

भारत दुनिया भर में partnerships of healing पर भी जोर दे रहा है। मैं आपके साथ दो महत्वपूर्ण सहयोग साझा करना चाहता हूं। पहला, हम बिमस्टेक देशों, यानी दक्षिण और दक्षिण-पूर्व एशिया में हमारे पड़ोसी देशों के लिए एक Centre of Excellence स्थापित कर रहे हैं। दूसरा, हमने जापान के साथ एक collaboration शुरू किया है। ये विज्ञान, पारंपरिक पद्धितियों और स्वास्थ्य को एक साथ जोड़ने का प्रयास है।

साथियों,

इस बार इस समिट की थीम है- ‘Restoring Balance: The Science and Practice of Health and Well-being’, Restoring Balance, ये holistic health का फाउंडेशनल थॉट रहा है। आप सब एक्स्पर्ट्स अच्छी तरह जानते हैं, आयुर्वेद में बैलेन्स, अर्थात् संतुलन को स्वास्थ्य का पर्याय कहा गया है। जिसके शरीर में ये बैलेन्स बना रहता है, वही स्वस्थ है, वही हेल्दी है। आजकल हम देख रहे हैं, डायबिटीज़, हार्ट अटैक, डिप्रेशन से लेकर कैंसर तक अधिकांश बीमारियों के background में lifestyle और imbalances एक प्रमुख कारण नजर आ रहा है। Work-life imbalance, Diet imbalance, Sleep imbalance, Gut Microbiome Imbalance, Calorie imbalance, Emotional Imbalance, आज कितने ही global health challenges, इन्हीं imbalances से पैदा हो रहे हैं। स्टडीज़ भी यही प्रूव कर रही हैं, डेटा भी यही बता रहा है कि आप सब हेल्थ एक्स्पर्ट्स कहीं बेहतर इन बातों को समझते हैं। लेकिन, मैं इस बात पर जरूर ज़ोर दूँगा कि ‘Restoring Balance, आज ये केवल एक ग्लोबल कॉज़ ही नहीं है, बल्कि, ये एक ग्लोबल अर्जेंसी भी है। इसे एड्रैस करने के लिए हमें और तेज गति से कदम उठाने होंगे।

साथियों,

21वीं सदी के इस कालखंड में जीवन के संतुलन को बनाए रखने की चुनौती और भी बड़ी होने वाली है। टेक्नोलॉजी के नए युग की दस्तक AI और Robotics के रूप में ह्यूमन हिस्ट्री का सबसे बड़ा बदलाव आने वाले वर्षों में जिंदगी जीने के हमारे तरीके, अभूतपूर्व तरीके से बदलने वाले हैं। इसलिए हमें ये भी ध्यान रखना होगा, जीवनशैली में अचानक से आ रहे इतने बड़े बदलाव शारीरिक श्रम के बिना संसाधनों और सुविधाओं की सहूलियत, इससे human bodies के लिए अप्रत्याशित चुनौतियां पैदा होने जा रही हैं। इसलिए, traditional healthcare में हमें केवल वर्तमान की जरूरतों पर ही फोकस नहीं करना है। हमारी साझा responsibility आने वाले future को लेकर के भी है।

साथियों,

जब पारंपरिक चिकित्सा की बात होती है, तो एक सवाल स्वाभाविक रूप से सामने आता है। ये सवाल सुरक्षा और प्रमाण से जुड़ा है। भारत आज इस दिशा में भी लगातार काम कर रहा है। यहां इस समिट में आप सभी ने अश्वगंधा का उदाहरण देखा है। सदियों से इसका उपयोग हमारी पारंपरिक चिकित्सा प्रणालियों में होता रहा है। COVID-19 के दौरान इसकी ग्लोबल डिमांड तेजी से बढ़ी और कई देशों में इसका उपयोग होने लगा। भारत अपनी रिसर्च और evidence-based validation के माध्यम से अश्वगंधा को प्रमाणिक रूप से आगे बढ़ा रहा है। इस समिट के दौरान भी अश्वगंधा पर एक विशेष ग्लोबल डिस्कशन का आयोजन किया गया। इसमें international experts ने इसकी सुरक्षा, गुणवत्ता और उपयोग पर गहराई से चर्चा की। भारत ऐसी time-tested herbs को global public health का हिस्सा बनाने के लिए पूरी तरह कमिटेड होकर काम कर रहा है।

साथियों,

ट्रेडिशनल मेडिसिन को लेकर एक धारणा थी कि इसकी भूमिका केवल वेलनेस या जीवन-शैली तक सीमित है। लेकिन आज ये धारणा तेजी से बदल रही है। क्रिटिकल सिचुएशन में भी ट्रेडिशनल मेडिसिन प्रभावी भूमिका निभा सकती है। इसी सोच के साथ भारत इस क्षेत्र में आगे बढ़ रहा है। मुझे ये बताते हुए खुशी हो रही है कि आयुष मंत्रालय और WHO-Traditional Medicine Center ने नई पहल की है। दोनों ने, भारत में integrative cancer care को मजबूत करने के लिए एक joint effort किया है। इसके तहत पारंपरिक चिकित्सा प्रणालियों को आधुनिक कैंसर उपचार के साथ जोड़ने का प्रयास होगा। इस पहल से evidence-based guidelines तैयार करने में भी मदद मिलेगी। भारत में कई अहम संस्थान स्वास्थ्य से जुड़े ऐसे ही गंभीर विषयों पर क्लिनिकल स्टडीज़ कर रहे हैं। इनमें अनीमिया, आर्थराइटिस और डायबिटीज़ जैसे विषय भी शामिल हैं। भारत में कई सारे स्टार्ट-अप्स भी इस क्षेत्र में आगे आए हैं। प्राचीन परंपरा के साथ युवाशक्ति जुड़ रही है। इन सभी प्रयासों से ट्रेडिशनल मेडिसिन एक नई ऊंचाई की तरफ बढ़ती दिख रही है।

साथियों,

आज पारंपरिक चिकित्सा एक निर्णायक मोड़ पर खड़ी है। दुनिया की बड़ी आबादी लंबे समय से इसका सहयोग लेती आई है। लेकिन फिर भी पारंपरिक चिकित्सा को वो स्थान नहीं मिल पाया था, जितना उसमें सामर्थ्य है। इसलिए, हमें विज्ञान के माध्यम से भरोसा जीतना होगा। हमें इसकी पहुंच को और व्यापक बनाना होगा। ये जिम्मेदारी किसी एक देश की नहीं है, ये हम सबका साझा दायित्व है। पिछले तीन दिनों में इस समिट में जो सहभागिता, जो संवाद और जो प्रतिबद्धता देखने को मिली है, उससे ये विश्वास गहरा हुआ है कि दुनिया इस दिशा में एक साथ आगे बढ़ने के लिए तैयार है। आइए, हम संकल्प लें कि पारंपरिक चिकित्सा को विश्वास, सम्मान और जिम्मेदारी के साथ मिलकर के आगे बढ़ाएंगे। एक बार फिर आप सभी को इस समिट की मैं बहुत-बहुत बधाई देता हूं। बहुत-बहुत धन्यवाद।