"ಜಮ್ಮು ಮತ್ತು ಕಾಶ್ಮೀರದ ಜನರು ಯೋಗದ ಬಗ್ಗೆ ಇಂದು ತೋರಿದ ಉತ್ಸಾಹ ಮತ್ತು ಬದ್ಧತೆ ಚಿರಸ್ಥಾಯಿಯಾಗಲಿದೆ"
"ಯೋಗವು ಸ್ವಾಭಾವಿಕವಾಗಿ ಬರಬೇಕು ಮತ್ತು ಜೀವನದ ಸಹಜ ಭಾಗವಾಗಬೇಕು"
"ಧ್ಯಾನವು ಸ್ವಯಂ ಸುಧಾರಣೆಗೆ ಉತ್ತಮ ಸಾಧನವಾಗಿದೆ"
"ಯೋಗವು ಸಮಾಜಕ್ಕೆ ಎಷ್ಟು ಮುಖ್ಯವೋ ಪ್ರತಿಯೊಬ್ಬ ವ್ಯಕ್ತಿಗೂ ಅಷ್ಟೇ ಮುಖ್ಯ"

ಅಂತಾರಾಷ್ಟ್ರೀಯ ಯೋಗ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀನಗರದ  ದಾಲ್ ಸರೋವರದಲ್ಲಿ ಆಯೋಜಿಸದ್ದ ಕಾರ್ಯಕ್ರಮದಲ್ಲಿ  ನಾಗರಿಕರನ್ನು ಉದ್ದೇಶಿಸಿ ಮಾತನಾಡಿದರು. 
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಜಮ್ಮು ಮತ್ತು ಕಾಶ್ಮೀರದ ಜನರು ಯೋಗದ ಬಗ್ಗೆ ತೋರಿದ ಉತ್ಸಾಹ ಮತ್ತು ಬದ್ಧತೆಯ ಜನರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿ ಉಳಿಯಲಿದೆ ಎಂದು ಹೇಳಿದರು. ಮಳೆಯ ಮತ್ತು ತಾಪಮಾನದಲ್ಲಿನ ಕುಸಿತದಿಂದ ಉಂಟಾದ ಪ್ರತಿಕೂಲ ಹವಾಮಾನದ ಪರಿಣಾಮವಾಗಿ  ಅಂತರ್‌ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ತಡವಾಗಿದ್ದರೂ ಅದು ಜನರ ಉತ್ಸಾಹವನ್ನು ಕುಗ್ಗಿಸುವಲ್ಲಿ ವಿಫಲವಾಗಿದೆ ಎಂದು ಅವರು ಒತ್ತಿ ಹೇಳಿದರು. 

 

ಯೋಗ ಜೀವನದ ಸಹಜ ಪ್ರಕ್ರಿಯೆಯನ್ನಾಗಿಸಿಕೊಳ್ಳುವ ಮಹತ್ವವನ್ನು ವಿವರಿಸಿದ ಶ್ರೀ ಮೋದಿ ಅವರು ಯೋಗವು ಸರಳ ರೂಪದಲ್ಲಿ ದೈನಂದಿನ ಜೀವನ ಭಾಗವಾದಾಗ ನಾವು ಅದರ ಹೆಚ್ಚಿನ ಪ್ರಯೋಜನ ಪಡೆಯಬಹುದು ಎಂದು ಅವರು ಹೇಳಿದರು. ಯೋಗಾಸನದ ಒಂದು ಭಾಗವಾಗಿರುವ ಧ್ಯಾನವು ಅದರ ಆಧ್ಯಾತ್ಮಿಕ ಸೂಚ್ಯಾರ್ಥಗಳ ಕಾರಣದಿಂದಾಗಿ ಸಾಮಾನ್ಯ ಜನರಿಗೆ ಕಠಿಣದಾಯಕವೆನಿಸಬಹುದು. ಆದರೆ ಧ್ಯಾನ  ಏಕಾಗ್ರತೆ ಮತ್ತು ವಸ್ತು ಅಥವಾ ವಿಷಯದ ಮೇಲೆ ಗಮನ ಕೇಂದ್ರೀಕರಿಸುವ ಪ್ರಕ್ರಿಯೆ ಎಂದು ಸುಲಭವಾಗಿ ಇದನ್ನು ಅರ್ಥೈಸಿಕೊಳ್ಳಬಹುದು. 

ಈ ಏಕಾಗ್ರತೆ ಮತ್ತು ಗಮನ ಕೇಂದ್ರೀಕೃತೆಯನ್ನು ಸತತ ಅಭ್ಯಾಸ ಮತ್ತು ಹಲವು ಟೆಕ್ನಿಕ್ ಗಳಿಂದ ಬೆಳೆಸಿಕೊಳ್ಳಬಹುದು ಎಂದು ಹೇಳಿದರು. ಮನಸ್ಸಿನ ಧ್ಯಾನಸ್ಥ ಸ್ಥಿತಿಯು  ಕನಿಷ್ಠ ಆಯಾಸದೊಂದಿಗೆ ಉತ್ತಮ ಫಲಿತಾಂಶಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಜೊತೆಗೆ ಚಿತ್ತ ಚಾಂಚಲ್ಯವನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಧ್ಯಾನವು ಅಂತಿಮವಾಗಿ ಒಂದು ಆಧ್ಯಾತ್ಮಿಕ ಪ್ರಯಾಣ. ಆದರೆ ಅದರ ಹೊರತಾಗಿಯೂ ಇದು ವ್ಯಕ್ತಿಗಳ ಸ್ವಯಂ-ಸುಧಾರಣೆ ಮತ್ತು ತರಬೇತಿಗೆ ಒಂದು ಉತ್ತಮ ಸಾಧನವಾಗಿದೆ ಎಂದು ಅವರು ಹೇಳಿದರು. 

 

"ಯೋಗವು ಸಮಾಜಕ್ಕೆ ಎಷ್ಟು ಮುಖ್ಯವೋ ಪ್ರತಿಯೊಬ್ಬ ವ್ಯಕ್ತಿಯ ಸ್ವಯಂ ಉನ್ನತಿಗೂ ಇದು ಅಷ್ಟೇ ಮುಖ್ಯ," ಎಂದು ಪ್ರಧಾನಿ ಮಂತ್ರಿಗಳುಈ ಒತ್ತಿ ಹೇಳಿದರು. ಯೋಗದಿಂದ ಸಮಾಜಕ್ಕೆ ಲಾಭವಾದಾಗ ಆ ಲಾಭ ಇಡೀ ಮನುಕುಲಕ್ಕೆ ತಲುಪುತ್ತದೆ ಎಂದರು. ಈಜಿಪ್ಟ್‌ನಲ್ಲಿ ಯೋಗದ ಕುರಿತು ಛಾಯಾಗ್ರಹಣ ಅಥವಾ ಯೋಗದ ಮಾಡುವ ಕುರಿತು ಆಯೋಜಿಸಲಾದ ಸ್ಪರ್ಧೆಯನ್ನು ತಾವು ವೀಕ್ಷಿಸಿದ್ದನ್ನು ನೆನಪಿಸಿಕೊಂಡ ಪ್ರಧಾನ ಮಂತ್ರಿಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದವರ ಪ್ರಯತ್ನಗಳನ್ನು ಶ್ಲಾಘಿಸಿದರು. "ಯೋಗ ಮತ್ತು ಪ್ರವಾಸೋದ್ಯಮವು ಜಮ್ಮು ಮತ್ತು ಕಾಶ್ಮೀರದಲ್ಲಿ ಉದ್ಯೋಗ ಸೃಷ್ಟಿಯ ಪ್ರಮುಖ ಮೂಲವಾಗಬಹುದು" ಎಂದು ಪ್ರಧಾನಮಂತ್ರಿ ಹೇಳಿದರು. 

ಭಾಷಣದ  ಅಂತ್ಯದಲ್ಲಿ ಪ್ರಧಾನ ಮಂತ್ರಿಯವರು, ಕಠಿಣ ಹವಾಮಾನ ಪರಿಸ್ಥಿತಿಯಿದ್ದರೂ ಭಾರೀ ಸಂಖ್ಯೆಯಲ್ಲಿ ಆಗಮಿಸಿ  2024 ರ ಅಂತರರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮಕ್ಕೆ ಬೆಂಬಲ ಸೂಚಿಸಿದ ಜಮ್ಮು ಮತ್ತು ಕಾಶ್ಮೀರದ ಜನರ ಬದ್ಧತೆಯನ್ನು ಶ್ಲಾಘಿಸಿದರು. 

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Ayushman Bharat Crosses 90 Cr ABHA Accounts: How Modi govt is building the world’s largest digital health ecosystem

Media Coverage

Ayushman Bharat Crosses 90 Cr ABHA Accounts: How Modi govt is building the world’s largest digital health ecosystem
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam highlighting the qualities of an ideal teacher
June 01, 2026

The Prime Minister, Shri Narendra Modi, said that some people are highly skilled at performing a task themselves, while others are particularly adept at imparting that knowledge or skill to others. He noted that a person who possesses both these qualities-self-mastery and the ability to teach others-deserves to be regarded among the finest of teachers.

The Prime Minister shared a Sanskrit Subhashitam-

“श्लिष्टा क्रिया कस्यचिदात्मसंस्था सङ्क्रान्तिरन्यस्य विशेषयुक्ता।

यस्योभयं साधु स शिक्षकाणां धुरि प्रतिष्ठापयितव्य एव।। ”

The Subhashitam conveys that while some excel in practice and others in teaching, the one who combines both mastery of a subject and the ability to effectively impart it to others is worthy of being placed in the foremost rank of teachers.

The Prime Minister wrote on X;

“श्लिष्टा क्रिया कस्यचिदात्मसंस्था सङ्क्रान्तिरन्यस्य विशेषयुक्ता।

यस्योभयं साधु स शिक्षकाणां धुरि प्रतिष्ठापयितव्य एव।।”