ಎಐ ಈ ಶತಮಾನದಲ್ಲಿ ಮಾನವೀಯತೆಗಾಗಿ ಕೋಡ್ ಬರೆಯುತ್ತಿದೆ: ಪ್ರಧಾನಮಂತ್ರಿ
ನಮ್ಮ ಹಂಚಿಕೆಯ ಮೌಲ್ಯಗಳನ್ನು ಎತ್ತಿಹಿಡಿಯಲು, ಅಪಾಯಗಳನ್ನು ಪರಿಹರಿಸಲು ಮತ್ತು ನಂಬಿಕೆಯನ್ನು ಹೆಚ್ಚಿಸಲು ಆಡಳಿತ ಮತ್ತು ಮಾನದಂಡಗಳನ್ನು ಸ್ಥಾಪಿಸಲು ಸಾಮೂಹಿಕ ಜಾಗತಿಕ ಪ್ರಯತ್ನಗಳ ಅಗತ್ಯವಿದೆ: ಪ್ರಧಾನಮಂತ್ರಿ
ಆರೋಗ್ಯ, ಶಿಕ್ಷಣ, ಕೃಷಿ ಮತ್ತು ಇನ್ನೂ ಹೆಚ್ಚಿನ ಕ್ಷೇತ್ರಗಳನ್ನು ಸುಧಾರಿಸುವ ಮೂಲಕ ಲಕ್ಷಾಂತರ ಜನರ ಜೀವನವನ್ನು ಪರಿವರ್ತಿಸಲು ಎಐ ಸಹಾಯ ಮಾಡುತ್ತದೆ: ಪ್ರಧಾನಮಂತ್ರಿ
ಎಐ-ಚಾಲಿತ ಭವಿಷ್ಯಕ್ಕಾಗಿ ನಮ್ಮ ಜನರ ಕೌಶಲ್ಯ ಮತ್ತು ಮರುಕೌಶಲ್ಯದಲ್ಲಿ ನಾವು ಹೂಡಿಕೆ ಮಾಡಬೇಕಾಗಿದೆ: ಪ್ರಧಾನಮಂತ್ರಿ
ನಾವು ಸಾರ್ವಜನಿಕ ಒಳಿತಿಗಾಗಿ ಎಐ ಅಪ್ಲಿಕೇಶನ್‌ಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ: ಪ್ರಧಾನಮಂತ್ರಿ
ಎಐ ಭವಿಷ್ಯವು ಉತ್ತಮವಾಗಿದೆ ಮತ್ತು ಎಲ್ಲರಿಗಾಗಿ ಇದೆ ಎಂದು ಖಚಿತಪಡಿಸಿಕೊಳ್ಳಲು ಭಾರತವು ತನ್ನ ಅನುಭವ ಮತ್ತು ಪರಿಣತಿಯನ್ನು ಹಂಚಿಕೊಳ್ಳಲು ಸಿದ್ಧವಾಗಿದೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ಯಾರಿಸ್‌ ನಲ್ಲಿ ಫ್ರಾನ್ಸ್ ಅಧ್ಯಕ್ಷ ಘನತೆವೆತ್ತ ಶ್ರೀ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಕೃತಕ ಬುದ್ಧಿಮತ್ತೆ ಕ್ರಿಯಾ ಶೃಂಗಸಭೆಯ (ಎಐ ಆಕ್ಷನ್‌ ಸಮ್ಮಿಟ್)‌ ಸಹ-ಅಧ್ಯಕ್ಷತೆ ವಹಿಸಿದರು. ಒಂದು ವಾರ ಕಾಲದ ಶೃಂಗಸಭೆಯು ಫೆಬ್ರವರಿ 6-7 ರಂದು ವಿಜ್ಞಾನ ದಿನಗಳಾಗಿ ಪ್ರಾರಂಭವಾಯಿತು, ನಂತರ ಫೆಬ್ರವರಿ 8-9 ರಂದು ಸಾಂಸ್ಕೃತಿಕ ವಾರಾಂತ್ಯ ನಡೆಯಿತು, ಜಾಗತಿಕ ನಾಯಕರು, ನೀತಿ ನಿರೂಪಕರು ಮತ್ತು ಉದ್ಯಮ ತಜ್ಞರು ಭಾಗವಹಿಸಿದ ಉನ್ನತ ಮಟ್ಟದ ಅಧಿವೇಶನದೊಂದಿಗೆ ಶೃಂಗಸಭೆ ಮುಕ್ತಾಯವಾಯಿತು.

 

ಫೆಬ್ರುವರಿ 10 ರಂದು ಎಲಿಸೀ ಅರಮನೆಯಲ್ಲಿ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಆಯೋಜಿಸಿದ ಭೋಜನಕೂಟದೊಂದಿಗೆ ಉನ್ನತ ಮಟ್ಟದ ಅಧಿವೇಶನವು ಪ್ರಾರಂಭವಾಯಿತು, ಇದರಲ್ಲಿ ರಾಷ್ಟ್ರ ಮತ್ತು ಸರ್ಕಾರಗಳ ಮುಖ್ಯಸ್ಥರು, ಅಂತರರಾಷ್ಟ್ರೀಯ ಸಂಸ್ಥೆಗಳ ನಾಯಕರು, ಪ್ರಮುಖ ಎಐ ಕಂಪನಿಗಳ ಸಿಇಒಗಳು ಮತ್ತು ಇತರ ಪ್ರತಿಷ್ಠಿತರು ಒಂದೆಡೆ ಸೇರಿದರು.

 

ಇಂದು ನಡೆದ ಪೂರ್ಣಾಧಿವೇಶನದಲ್ಲಿ, ಅಧ್ಯಕ್ಷ ಮ್ಯಾಕ್ರನ್ ಅವರು ಶೃಂಗಸಭೆಯ ಸಹ-ಅಧ್ಯಕ್ಷರಾಗಿ ಆರಂಭಿಕ ಭಾಷಣ ಮಾಡಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದರು. ಜಗತ್ತು ಎಐ ಯುಗದ ಆರಂಭದಲ್ಲಿದೆ, ಈ ತಂತ್ರಜ್ಞಾನವು ಮಾನವೀಯತೆಗೆ ಕೋಡ್ ಅನ್ನು ತ್ವರಿತವಾಗಿ ಬರೆಯುತ್ತಿದೆ ಮತ್ತು ನಮ್ಮ ರಾಜಕೀಯ, ಆರ್ಥಿಕತೆ, ಭದ್ರತೆ ಮತ್ತು ಸಮಾಜವನ್ನು ಮರುರೂಪಿಸುತ್ತಿದೆ ಎಂದು ಪ್ರಧಾನಿ ತಮ್ಮ ಭಾಷಣದಲ್ಲಿ ಹೇಳಿದರು. ಪ್ರಭಾವದ ದೃಷ್ಟಿಯಿಂದ ಎಐ ಮಾನವನ ಇತಿಹಾಸದಲ್ಲಿನ ಇತರ ತಾಂತ್ರಿಕ ಮೈಲಿಗಲ್ಲುಗಳಿಗಿಂತ ತುಂಬಾ ಭಿನ್ನವಾಗಿದೆ ಎಂದು ಒತ್ತಿಹೇಳಿದ ಅವರು, ಹಂಚಿಕೆಯ ಮೌಲ್ಯಗಳನ್ನು ಎತ್ತಿಹಿಡಿಯುವ, ಅಪಾಯಗಳನ್ನು ಪರಿಹರಿಸುವ ಮತ್ತು ನಂಬಿಕೆಯನ್ನು ಹೆಚ್ಚಿಸುವ ಆಡಳಿತ ಮತ್ತು ಮಾನದಂಡಗಳನ್ನು ಸ್ಥಾಪಿಸಲು ಸಾಮೂಹಿಕ ಜಾಗತಿಕ ಪ್ರಯತ್ನಗಳಿಗಾಗಿ ಕರೆ ನೀಡಿದರು. ಆಡಳಿತವು ಅಪಾಯಗಳನ್ನು ನಿರ್ವಹಿಸುವುದಷ್ಟೇ ಅಲ್ಲ, ನಾವೀನ್ಯತೆಯನ್ನು ಉತ್ತೇಜಿಸುವುದು ಮತ್ತು ಜಾಗತಿಕ ಒಳಿತಿಗಾಗಿ ಅದನ್ನು ನಿಯೋಜಿಸುವುದಾಗಿದೆ ಎಂದು ಅವರು ಹೇಳಿದರು. ಈ ನಿಟ್ಟಿನಲ್ಲಿ, ಎಲ್ಲರಿಗೂ ವಿಶೇಷವಾಗಿ ಗ್ಲೋಬಲ್ ಸೌತ್‌ (ಆರ್ಥಿಕವಾಗಿ ಹಿಂದುಳಿದ ರಾಷ್ಟ್ರಗಳು) ಗೆ ಎಐ ಪ್ರವೇಶವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಪ್ರತಿಪಾದಿಸಿದರು. ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಯನ್ನು ಸಾಕಾರಗೊಳಿಸಲು ತಂತ್ರಜ್ಞಾನ ಮತ್ತು ಅದರ ಜನ-ಕೇಂದ್ರಿತ ಅಪ್ಲಿಕೇಶನ್‌ಗಳನ್ನು ಪ್ರಜಾಪ್ರಭುತ್ವಗೊಳಿಸಬೇಕೆಂದು ಅವರು ಕರೆ ನೀಡಿದರು. ಅಂತರರಾಷ್ಟ್ರೀಯ ಸೌರ ಒಕ್ಕೂಟದಂತಹ ಉಪಕ್ರಮಗಳ ಮೂಲಕ ಭಾರತ-ಫ್ರಾನ್ಸ್ ಸುಸ್ಥಿರತೆಯ ಪಾಲುದಾರಿಕೆಯ ಯಶಸ್ಸಿನ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ, ಸ್ಮಾರ್ಟ್ ಮತ್ತು ಜವಾಬ್ದಾರಿಯುತ ಭವಿಷ್ಯಕ್ಕಾಗಿ ನಾವೀನ್ಯತೆ ಪಾಲುದಾರಿಕೆಯನ್ನು ರೂಪಿಸಲು ಉಭಯ ದೇಶಗಳು ಕೈಜೋಡಿಸುತ್ತಿರುವುದು ಸಹಜವಾಗಿದೆ ಎಂದು ಹೇಳಿದರು.

 

ಮುಕ್ತ ಮತ್ತು ಪ್ರವೇಶಿಸಬಹುದಾದ ತಂತ್ರಜ್ಞಾನದ ಆಧಾರದ ಮೇಲೆ ತನ್ನ 140 ಕೋಟಿ ನಾಗರಿಕರಿಗೆ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ನಿರ್ಮಿಸುವಲ್ಲಿ ಭಾರತದ ಯಶಸ್ಸನ್ನು ಪ್ರಧಾನಮಂತ್ರಿಯವರು ಎತ್ತಿ ತೋರಿಸಿದರು. ಭಾರತದ ಎಐ ಮಿಷನ್ ಕುರಿತು ಮಾತನಾಡಿದ ಪ್ರಧಾನಮಂತ್ರಿಯವರು, ಭಾರತವು ಅದರ ವೈವಿಧ್ಯತೆಯನ್ನು ಪರಿಗಣಿಸಿ ಎಐ ಗಾಗಿ ತನ್ನದೇ ಆದ ಲಾರ್ಜ್‌ ಲಾಂಗ್ವೇಜ್‌ ಮಾಡೆಲ್‌ ರಚಿಸುತ್ತಿದೆ ಎಂದು ಹೇಳಿದರು. ಎಐ ನ ಪ್ರಯೋಜನಗಳು ಎಲ್ಲರಿಗೂ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಭಾರತವು ತನ್ನ ಅನುಭವಗಳನ್ನು ಹಂಚಿಕೊಳ್ಳಲು ಸಿದ್ಧವಾಗಿದೆ ಎಂದು ಅವರು ಒತ್ತಿ ಹೇಳಿದರು. ಮುಂದಿನ ಎಐ ಶೃಂಗಸಭೆಯನ್ನು ಭಾರತ ಆಯೋಜಿಸಲಿದೆ ಎಂದು ಪ್ರಧಾನಿ ಘೋಷಿಸಿದರು. ಪ್ರಧಾನಿಯವರ ಸಂಪೂರ್ಣ ಭಾಷಣವನ್ನು ಇಲ್ಲಿ ನೋಡಬಹುದು [Opening Address ; Concluding Address].

ನಾಯಕರ ಹೇಳಿಕೆಯನ್ನು ಅಂಗೀಕರಿಸುವುದರೊಂದಿಗೆ ಶೃಂಗಸಭೆಯು ಮುಕ್ತಾಯವಾಯಿತು. ಶೃಂಗಸಭೆಯು ವಿಮರ್ಶಾತ್ಮಕ ವಿಷಯಗಳ ಮೇಲೆ ಚರ್ಚೆಗಳನ್ನು ಒಳಗೊಂಡಿತ್ತು, ಒಳಗೊಳ್ಳುವಿಕೆಯನ್ನು ಖಚಿತಪಡಿಸಿಕೊಳ್ಳಲು ಎಐ ಮೂಲಸೌಕರ್ಯಕ್ಕೆ ಹೆಚ್ಚಿನ ಪ್ರವೇಶ, ಸಾರ್ವಜನಿಕ ಹಿತಾಸಕ್ತಿಗಾಗಿ ಎಐ, ಎಐ ನ ಜವಾಬ್ದಾರಿಯುತ ಬಳಕೆ, ಎಐ ಅನ್ನು ಹೆಚ್ಚು ವೈವಿಧ್ಯಮಯ ಮತ್ತು ಸುಸ್ಥಿರವಾಗಿಸುವುದು ಮತ್ತು ಎಐ ನ ಸುರಕ್ಷಿತ ಮತ್ತು ವಿಶ್ವಾಸಾರ್ಹ ಆಡಳಿತವನ್ನು ಖಾತ್ರಿಪಡಿಸುವುದು ಅವುಗಳಲ್ಲಿ ಸೇರಿದ್ದವು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Pyaaz Khaate Hai, Dimaag Nahi': PM Modi's Jhalmuri Video Breaks The Internet With 100M+ Views

Media Coverage

Pyaaz Khaate Hai, Dimaag Nahi': PM Modi's Jhalmuri Video Breaks The Internet With 100M+ Views
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam emphasising that Service to the nation is the foundation of a Developed India
April 21, 2026

The Prime Minister, Shri Narendra Modi, shared a Sanskrit Subhashitam emphasising that the Service to the nation is the foundation of a ‘Developed India.’ Shri Modi remarked that on the proud occasion of Civil Services Day, let us reaffirm our commitment to building an empowered, prosperous, and compassionate India by bringing the person standing at the last mile into the mainstream of development.

The Prime Minister shared a Sanskrit Subhashitam-

"शीलं परहितासक्तिः अनुत्सेकः क्षमा धृतिः।

अलोभश्चेति विद्यायाः परिपाकोञ्चलं फलम्॥"

The Subhashitam conveys, that modesty, benevolence, humility, forgiveness, patience and non- greed, all these are the bright fruits of the perfection of knowledge.

The Prime Minister posted on X:

"राष्ट्रसेवा ही ‘विकसित भारत’ की नींव है। सिविल सेवा दिवस के गौरवशाली अवसर पर आइए, अंतिम पंक्ति में खड़े व्यक्ति को विकास की मुख्यधारा से जोड़कर सशक्त, समृद्ध एवं संवेदनशील भारतवर्ष के निर्माण का संकल्प दोहराएं। 

शीलं परहितासक्तिः अनुत्सेकः क्षमा धृतिः। 

अलोभश्चेति विद्यायाः परिपाकोञ्चलं फलम्॥"