ಘನತೆವೆತ್ತ ಪ್ರಧಾನ ಮಂತ್ರಿ ಡೊನಾಲ್ಡ್ ಟಸ್ಕ್ ಅವರೇ, ಎರಡೂ ದೇಶಗಳ ಪ್ರತಿನಿಧಿಗಳೇ, ಮಾಧ್ಯಮ ಮಿತ್ರರೇ,

ನಮಸ್ಕಾರ,

ಸುಂದರವಾದ ವಾರ್ಸಾ ನಗರದಲ್ಲಿ ಆತ್ಮೀಯ ಸ್ವಾಗತ, ಉತ್ತಮ ಆತಿಥ್ಯ ಮತ್ತು ಸ್ನೇಹಪರ ಮಾತುಗಳಿಗಾಗಿ ಪ್ರಧಾನ ಮಂತ್ರಿ ಟಸ್ಕ್ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ನೀವು ಬಹುಕಾಲದಿಂದ ಭಾರತದ ಉತ್ತಮ ಸ್ನೇಹಿತರು. ಭಾರತ ಮತ್ತು ಪೋಲೆಂಡ್ ನಡುವಿನ ಸ್ನೇಹವನ್ನು ಬಲಪಡಿಸುವಲ್ಲಿ ನೀವು ದೊಡ್ಡ ಕೊಡುಗೆ ನೀಡಿದ್ದೀರಿ.

ಸ್ನೇಹಿತರೇ,

ಭಾರತ ಮತ್ತು ಪೋಲೆಂಡ್ ನಡುವಿನ ಸಂಬಂಧಗಳಲ್ಲಿ ಇಂದಿನ ದಿನವು ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಇಂದು ನಲವತ್ತೈದು ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಪೋಲೆಂಡ್ ಗೆ ಭೇಟಿ ನೀಡಿದ್ದಾರೆ. ನನ್ನ ಮೂರನೇ ಅವಧಿಯ ಆರಂಭದಲ್ಲಿ ನನಗೆ ಈ ಸೌಭಾಗ್ಯ ಸಿಕ್ಕಿದೆ. ಈ ಸಂದರ್ಭದಲ್ಲಿ ಪೋಲೆಂಡ್ ಸರ್ಕಾರಕ್ಕೆ ಮತ್ತು ಇಲ್ಲಿನ ಜನತೆಗೆ ನನ್ನ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಉಕ್ರೇನ್ ಸಂಘರ್ಷದ ಸಮಯದಲ್ಲಿ ಸಿಕ್ಕಿಬಿದ್ದ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವಲ್ಲಿ ನೀವು ತೋರಿದ ಉದಾರತೆಯನ್ನು ನಾವು ಭಾರತೀಯರು ಎಂದಿಗೂ ಮರೆಯಲು ಸಾಧ್ಯವಿಲ್ಲ.

 

ಸ್ನೇಹಿತರೇ,

ಈ ವರ್ಷ ನಾವು ನಮ್ಮ ರಾಜತಾಂತ್ರಿಕ ಸಂಬಂಧಗಳ 70 ನೇ ವರ್ಷವನ್ನು ಆಚರಿಸುತ್ತಿದ್ದೇವೆ. ಈ ಸಂದರ್ಭದಲ್ಲಿ, ನಮ್ಮ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಯಾಗಿ ಪರಿವರ್ತಿಸಲು ನಾವು ನಿರ್ಧರಿಸಿದ್ದೇವೆ. ಭಾರತ ಮತ್ತು ಪೋಲೆಂಡ್ ನಡುವಿನ ಸಂಬಂಧಗಳು ಪ್ರಜಾಪ್ರಭುತ್ವ ಮತ್ತು ಕಾನೂನಿನ ಆಳ್ವಿಕೆಯಂತಹ ಹಂಚಿಕೆಯ ಮೌಲ್ಯಗಳನ್ನು ಆಧರಿಸಿವೆ. ಇಂದು ನಾವು ನಮ್ಮ ಸಂಬಂಧಗಳಿಗೆ ಹೊಸ ದಿಕ್ಕನ್ನು ನೀಡಲು ಹಲವಾರು ಉಪಕ್ರಮಗಳನ್ನು ಗುರುತಿಸಿದ್ದೇವೆ. ಎರಡು ಪ್ರಜಾಪ್ರಭುತ್ವ ರಾಷ್ಟ್ರಗಳಾಗಿ, ನಮ್ಮ ಸಂಸತ್ತಿನ ನಡುವಿನ ವಿನಿಮಯವನ್ನು ಪ್ರೋತ್ಸಾಹಿಸಬೇಕು. ಆರ್ಥಿಕ ಸಹಕಾರವನ್ನು ವಿಸ್ತರಿಸಲು ಖಾಸಗಿ ವಲಯವನ್ನು ತೊಡಗಿಸಿಕೊಳ್ಳಲು ಪ್ರಯತ್ನಗಳನ್ನು ಮಾಡಲಾಗುವುದು. ಪೋಲೆಂಡ್ ಆಹಾರ ಸಂಸ್ಕರಣೆಯಲ್ಲಿ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಒಂದಾಗಿದೆ. ಭಾರತದಲ್ಲಿ ನಿರ್ಮಿಸಲಾಗುತ್ತಿರುವ ಮೆಗಾ ಫುಡ್ ಪಾರ್ಕ್‌ ಗಳಿಗೆ ಪೋಲಿಷ್ ಕಂಪನಿಗಳು ಸೇರಬೇಕೆಂದು ನಾವು ಬಯಸುತ್ತೇವೆ. ಭಾರತದಲ್ಲಿ ತ್ವರಿತ ನಗರೀಕರಣವು ನೀರಿನ ಸಂಸ್ಕರಣೆ, ಘನತ್ಯಾಜ್ಯ ನಿರ್ವಹಣೆ, ನಗರ ಮೂಲಸೌಕರ್ಯಗಳಂತಹ ಕ್ಷೇತ್ರಗಳಲ್ಲಿ ನಮ್ಮ ಸಹಕಾರಕ್ಕಾಗಿ ಹೊಸ ಅವಕಾಶಗಳನ್ನು ತೆರೆಯುತ್ತಿದೆ.

ಶುದ್ಧ ಕಲ್ಲಿದ್ದಲು ತಂತ್ರಜ್ಞಾನ, ಹಸಿರು ಹೈಡ್ರೋಜನ್, ನವೀಕರಿಸಬಹುದಾದ ಇಂಧನ, ಕೃತಕ ಬುದ್ಧಿಮತ್ತೆ ನಮ್ಮ ಸಾಮಾನ್ಯ ಆದ್ಯತೆಗಳಾಗಿವೆ.

ಮೇಕ್ ಇನ್ ಇಂಡಿಯಾ ಮತ್ತು ಮೇಕ್ ಫಾರ್ ದಿ ವರ್ಲ್ಡ್ ಸೇರಲು ಪೋಲಿಷ್ ಕಂಪನಿಗಳನ್ನು ನಾವು ಆಹ್ವಾನಿಸುತ್ತೇವೆ. ಭಾರತವು ಫಿನ್ ಟೆಕ್, ಫಾರ್ಮಾ, ಬಾಹ್ಯಾಕಾಶ ಮುಂತಾದ ಕ್ಷೇತ್ರಗಳಲ್ಲಿ ಹಲವಾರು ಸಾಧನೆಗಳನ್ನು ಮಾಡಿದೆ. ಈ ಕ್ಷೇತ್ರಗಳಲ್ಲಿ ನಮ್ಮ ಅನುಭವವನ್ನು ಪೋಲೆಂಡ್‌ ನೊಂದಿಗೆ ಹಂಚಿಕೊಳ್ಳಲು ನಾವು ಸಂತೋಷಪಡುತ್ತೇವೆ. ರಕ್ಷಣಾ ಕ್ಷೇತ್ರದಲ್ಲಿ ನಿಕಟ ಸಹಕಾರವು ನಮ್ಮ ಗಾಢವಾದ ಪರಸ್ಪರ ನಂಬಿಕೆಯ ಸಂಕೇತವಾಗಿದೆ.

ಈ ಕ್ಷೇತ್ರದಲ್ಲಿ ಪರಸ್ಪರ ಸಹಕಾರ ಮತ್ತಷ್ಟು ಬಲಗೊಳ್ಳಲಿದೆ. ನಾವೀನ್ಯತೆ ಮತ್ತು ಪ್ರತಿಭೆ ಎರಡೂ ದೇಶಗಳ ಯುವ ಶಕ್ತಿಯ ಲಕ್ಷಣಗಳಾಗಿವೆ. ನುರಿತ ಉದ್ಯೋಗಿಗಳ ಕಲ್ಯಾಣ ಮತ್ತು ಚಲನಶೀಲತೆಯನ್ನು ಉತ್ತೇಜಿಸಲು ಉಭಯ ದೇಶಗಳ ನಡುವೆ ಸಾಮಾಜಿಕ ಭದ್ರತಾ ಒಪ್ಪಂದವನ್ನು ಒಪ್ಪಿಕೊಳ್ಳಲಾಗಿದೆ.

 

ಸ್ನೇಹಿತರೇ,

ಭಾರತ ಮತ್ತು ಪೋಲೆಂಡ್ ಕೂಡ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಿಕಟ ಸಮನ್ವಯದಿಂದ ಮುನ್ನಡೆಯುತ್ತಿವೆ. ಜಾಗತಿಕ ಸವಾಲುಗಳನ್ನು ಎದುರಿಸಲು, ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ಸಂಸ್ಥೆಗಳಲ್ಲಿ ಸುಧಾರಣೆಯು ಇಂದಿನ ಅಗತ್ಯವಾಗಿದೆ ಎಂದು ನಾವಿಬ್ಬರೂ ಒಪ್ಪಿಕೊಳ್ಳುತ್ತೇವೆ. ಭಯೋತ್ಪಾದನೆ ನಮಗೆ ದೊಡ್ಡ ಸವಾಲಾಗಿದೆ.

ಮಾನವೀಯತೆಯಲ್ಲಿ ನಂಬಿಕೆ ಇಟ್ಟಿರುವ ಭಾರತ ಮತ್ತು ಪೋಲೆಂಡ್‌ ನಂತಹ ದೇಶಗಳ ನಡುವೆ ಇಂತಹ ಹೆಚ್ಚಿನ ಸಹಕಾರದ ಅಗತ್ಯವಿದೆ. ಅಂತೆಯೇ, ಹವಾಮಾನ ಬದಲಾವಣೆಯು ನಮಗೆ ಹಂಚಿಕೆಯ ಆದ್ಯತೆಯ ವಿಷಯವಾಗಿದೆ. ಹಸಿರು ಭವಿಷ್ಯಕ್ಕಾಗಿ ಕೆಲಸ ಮಾಡಲು ನಾವು ನಮ್ಮ ಶಕ್ತಿಯನ್ನು ಒಟ್ಟುಗೂಡಿಸುತ್ತೇವೆ. ಜನವರಿ 2025 ರಲ್ಲಿ ಪೋಲೆಂಡ್ ಯುರೋಪಿಯನ್ ಒಕ್ಕೂಟದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲಿದೆ. ನಿಮ್ಮ ಬೆಂಬಲವು ಭಾರತ ಮತ್ತು ಯುರೋಪಿಯನ್ ಒಕ್ಕೂಟದ ನಡುವಿನ ಸಂಬಂಧವನ್ನು ಬಲಪಡಿಸುತ್ತದೆ ಎಂದು ನನಗೆ ವಿಶ್ವಾಸವಿದೆ.

ಸ್ನೇಹಿತರೇ,

ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷಗಳು ನಮಗೆಲ್ಲರಿಗೂ ತೀವ್ರ ಕಳವಳಕಾರಿ ವಿಷಯವಾಗಿದೆ. ಯುದ್ಧಭೂಮಿಯಲ್ಲಿ ಯಾವ ಸಮಸ್ಯೆಯೂ ಬಗೆಹರಿಯುವುದಿಲ್ಲ ಎಂಬುದು ಭಾರತದ ದೃಢವಾದ ನಂಬಿಕೆಯಾಗಿದೆ. ಯಾವುದೇ ಬಿಕ್ಕಟ್ಟಿನಲ್ಲಿ, ಅಮಾಯಕರ ಪ್ರಾಣಹಾನಿ ಇಡೀ ಮಾನವಕುಲಕ್ಕೆ ದೊಡ್ಡ ಸವಾಲಾಗಿದೆ. ಶಾಂತಿ ಮತ್ತು ಸ್ಥಿರತೆಯ ಮರುಸ್ಥಾಪನೆಗಾಗಿ ನಾವು ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಬೆಂಬಲಿಸುತ್ತೇವೆ. ಇದಕ್ಕಾಗಿ ಭಾರತವು ತನ್ನ ಮಿತ್ರರಾಷ್ಟ್ರಗಳೊಂದಿಗೆ ಎಲ್ಲ ರೀತಿಯ ಬೆಂಬಲವನ್ನು ನೀಡಲು ಸಿದ್ಧವಾಗಿದೆ.

ಸ್ನೇಹಿತರೇ,

ಪೋಲೆಂಡ್ ದೇಶವು ಇಂಡಾಲಜಿ ಮತ್ತು ಸಂಸ್ಕೃತದ ಅತ್ಯಂತ ಹಳೆಯ ಮತ್ತು ಶ್ರೀಮಂತ ಸಂಪ್ರದಾಯವನ್ನು ಹೊಂದಿದೆ. ಭಾರತೀಯ ನಾಗರಿಕತೆ ಮತ್ತು ಭಾಷೆಗಳಲ್ಲಿ ನಮ್ಮ ಆಳವಾದ ಆಸಕ್ತಿಯಿಂದ ನಮ್ಮ ಸಂಬಂಧಗಳಿಗೆ ಬಲವಾದ ಅಡಿಪಾಯವನ್ನು ಹಾಕಲಾಗಿದೆ. ನಮ್ಮ ಜನರ ನಡುವಿನ ಗಾಢ ಬಾಂಧವ್ಯದ ನೇರ ಮತ್ತು ಜೀವಂತ ಉದಾಹರಣೆಯನ್ನು ನಿನ್ನೆ ನಾನು ನೋಡಿದೆ. ಭಾರತದ "ದೋಬ್ರೆ ಮಹಾರಾಜ" ಮತ್ತು ಕೊಲ್ಲಾಪುರದ ಮಹಾರಾಜರ ನೆನಪಿಗಾಗಿ ನಿರ್ಮಿಸಲಾದ ಸ್ಮಾರಕಗಳಿಗೆ ಗೌರವ ಸಲ್ಲಿಸುವ ಸೌಭಾಗ್ಯ ನನಗೆ ದೊರೆಯಿತು. ಇಂದಿಗೂ ಪೋಲೆಂಡ್‌ ನ ಜನರು ಅವರ ಪರೋಪಕಾರ ಮತ್ತು ಔದಾರ್ಯವನ್ನು ಗೌರವಿಸುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ. ಅವರ ಸ್ಮರಣೆಯನ್ನು ಅಮರಗೊಳಿಸಲು, ನಾವು ಭಾರತ ಮತ್ತು ಪೋಲೆಂಡ್ ನಡುವೆ ಜಾಮ್ ಸಾಹೇಬ್ ನವನಗರ ಯುವ ವಿನಿಮಯ ಕಾರ್ಯಕ್ರಮವನ್ನು ಪ್ರಾರಂಭಿಸಲಿದ್ದೇವೆ. ಪ್ರತಿ ವರ್ಷ ಪೋಲೆಂಡ್‌ ನಿಂದ 20 ಯುವಕರನ್ನು ಭಾರತ ಪ್ರವಾಸಕ್ಕೆ ಕರೆದೊಯ್ಯಲಾಗುತ್ತದೆ.

ಸ್ನೇಹಿತರೇ,

ನಾನು ಮತ್ತೊಮ್ಮೆ ಪ್ರಧಾನ ಮಂತ್ರಿ ಟಸ್ಕ್ ಮತ್ತು ಅವರ ಸ್ನೇಹಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಮತ್ತು, ನಮ್ಮ ಸಂಬಂಧಗಳನ್ನು ಹೊಸ ಮಟ್ಟಕ್ಕೆ ಕೊಂಡೊಯ್ಯುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇನೆ.

ತುಂಬಾ ಧನ್ಯವಾದಗಳು.

 

 

 

 

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Khichdi To Moringa Paratha: 7 Traditional Foods PM Modi Loves

Media Coverage

Khichdi To Moringa Paratha: 7 Traditional Foods PM Modi Loves
NM on the go

Nm on the go

Always be the first to hear from the PM. Get the App Now!
...
ಆಗಸ್ಟ್ 27ರಂದು 'ಖೇಲೋ ಇಂಡಿಯಾ' ಸಂವಾದದಲ್ಲಿ ಯುವಜನರನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಮಂತ್ರಿ
August 26, 2026
'ಖೇಲೋ ಇಂಡಿಯಾ' ಸಂವಾದವು ಕ್ರೀಡೆ, ಯುವ ನಾಯಕತ್ವ, ನಾಗರಿಕ ಜವಾಬ್ದಾರಿ, ಸ್ವಯಂಸೇವೆ, ಫಿಟ್‌ನೆಸ್‌ ಮತ್ತು ರಾಷ್ಟ್ರ ನಿರ್ಮಾಣವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಲಿದೆ
'ಖೇಲೋ ಇಂಡಿಯಾ' ಸಂವಾದದ ಅಡಿಯಲ್ಲಿ ನಡೆಯುವ 'ಯುವ ಸಂವಾದ'ವು ಐದು ಪ್ರಮುಖ ವಿಷಯಗಳ ಮೇಲೆ ಕೇಂದ್ರೀಕರಿಸಲಿದೆ: ಕ್ರೀಡೆ, ಒಲಿಂಪಿಕ್ ಆಕಾಂಕ್ಷೆಗಳು, ಯುವ ನಾಯಕತ್ವ, 'ವಿಕಸಿತ ಭಾರತ' ಮತ್ತು 'ನಶಾ ಮುಕ್ತ ಯುವ' ಅಭಿಯಾನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 27ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಖೇಲೋ ಇಂಡಿಯಾ' ಸಂವಾದವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ಯುವಕರಿಗೆ ಭಾರತದ ಕ್ರೀಡಾ ಪ್ರಯಾಣದಲ್ಲಿ ತೊಡಗಿಸಿಕೊಳ್ಳಲು, ಅವರ ಆಕಾಂಕ್ಷೆಗಳನ್ನು ಹಂಚಿಕೊಳ್ಳಲು ಮತ್ತು ಬಲವಾದ ಯುವಕರ ನೇತೃತ್ವದ 'ವಿಕಸಿತ ಭಾರತ'ಕ್ಕಾಗಿ ತಮ್ಮ ವಿಚಾರಗಳನ್ನು ನೀಡಲು ಸಹಾಯ ಮಾಡುವುದು ಕಾರ್ಯಕ್ರಮದ ಉದ್ದೇಶವಾಗಿದೆ.

2026ರ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ 'ಮೇರಾ ಯುವ ಭಾರತ್' (ಮೈ ಭಾರತ್‌) ಆಯೋಜಿಸಿರುವ ಈ ಕಾರ್ಯಕ್ರಮವು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ ಪ್ರತಿಯೊಂದು ಜಿಲ್ಲೆಯ ಎರಡು ಕಾಲೇಜುಗಳಲ್ಲಿ ಯುವಕರ ಭಾಗವಹಿಸುವಿಕೆಯೊಂದಿಗೆ ದೇಶಾದ್ಯಂತ ನಡೆಯಲಿದೆ. ಯುವಕರ ಆಕಾಂಕ್ಷೆಗಳನ್ನು ರಾಷ್ಟ್ರೀಯ ಅಭಿವೃದ್ಧಿ ಕಾರ್ಯಸೂಚಿಯ ಕೇಂದ್ರಭಾಗದಲ್ಲಿ ಇರಿಸಿಕೊಂಡು ಸದೃಢ, ಶಿಸ್ತುಬದ್ಧ ಮತ್ತು ಕ್ರೀಡಾ ರಾಷ್ಟ್ರವನ್ನು ನಿರ್ಮಿಸುವ ಪ್ರಧಾನಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ.

ರಾಷ್ಟ್ರವ್ಯಾಪಿ ನಡೆಯುವ 'ಖೇಲೋ ಇಂಡಿಯಾ ಸಂವಾದ'ವು ಕ್ರೀಡೆ, ಯುವ ನಾಯಕತ್ವ, ನಾಗರಿಕ ಜವಾಬ್ದಾರಿ, ಸ್ವಯಂ ಸೇವೆ, ಫಿಟ್ನೆಸ್ ಮತ್ತು ರಾಷ್ಟ್ರ ನಿರ್ಮಾಣವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಲಿದೆ. ಭಾರತದ ಯುವ ಮತ್ತು ಕ್ರೀಡಾ ಪರಿಸರ ವ್ಯವಸ್ಥೆಯ ಕುರಿತಾದ ನಿರಂತರ ಸಂವಾದದಲ್ಲಿ ಯುವಕರ ಆಲೋಚನೆಗಳು ಮತ್ತು ದೃಷ್ಟಿಕೋನಗಳಿಗೆ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಜೊತೆಗೆ, ದೇಶದ ಕ್ರೀಡಾ ಮಹತ್ವಾಕಾಂಕ್ಷೆಗಳೊಂದಿಗೆ ಯುವಕರು ತೊಡಗಿಸಿಕೊಳ್ಳಲು ಇದು ನೇರ ಮಾರ್ಗವನ್ನು ಒದಗಿಸುತ್ತದೆ.

ರಾಷ್ಟ್ರೀಯ ಕಾರ್ಯಕ್ರಮದ ನಂತರ ಯುವ ಭಾಗಿದಾರರು, 'ಮೈ ಭಾರತ್' ಸ್ವಯಂಸೇವಕರು, ಸ್ಥಳೀಯ ಕ್ರೀಡಾಪಟುಗಳು ಮತ್ತು ಜನಪ್ರತಿನಿಧಿಗಳನ್ನು ಒಳಗೊಂಡ ಸ್ಥಳೀಯ ಸಂವಾದಗಳು ನಡೆಯಲಿವೆ. ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಯುವಕರು ಮತ್ತು ಪ್ರಮುಖ ಭಾರತೀಯ ಅಥ್ಲೀಟ್‌ಗಳು ಹಾಗೂ ಪದಕ ವಿಜೇತರ ನಡುವಿನ ನೇರ ಸಂವಾದವು ಈ ಉಪಕ್ರಮದ ಪ್ರಮುಖ ಲಕ್ಷಣವಾಗಿದೆ. 'ಯುವ ಸಂವಾದ'ವು ಈ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದು, ಇದರಲ್ಲಿ ಯುವ ಭಾಗಿದಾರರನ್ನು ತಮ್ಮ ಸ್ವಂತ ಆಲೋಚನೆಗಳು, ದೃಷ್ಟಿಕೋನಗಳು ಮತ್ತು ಆಕಾಂಕ್ಷೆಗಳನ್ನು ವ್ಯಕ್ತಪಡಿಸಲು ಆಹ್ವಾನಿಸಲಾಗುತ್ತದೆ. ಈ ಸಂವಾದವನ್ನು ಐದು ವಿಷಯಗಳ ಸುತ್ತ ರಚಿಸಲಾಗಿದೆ:

  • ಉತ್ತಮ ಸೌಲಭ್ಯಗಳು, ತರಬೇತಿ, ಕ್ರೀಡಾ ವಿಜ್ಞಾನ ಮತ್ತು ಎಲ್ಲರನ್ನೂ ಒಳಗೊಂ ಭಾಗವಹಿಸುವಿಕೆಯ ಮೂಲಕ ಭಾರತದ ಕ್ರೀಡಾ ಪರಿಸರ ವ್ಯವಸ್ಥೆಯನ್ನು ಸುಧಾರಿಸುವುದು;
  • ವೈಜ್ಞಾನಿಕ ಪ್ರತಿಭಾ ಶೋಧನೆ, ಪಾರದರ್ಶಕ ಆಯ್ಕೆ ಮತ್ತು ದೀರ್ಘಕಾಲೀನ ಕ್ರೀಡಾಪಟು ಅಭಿವೃದ್ಧಿಯ ಮೂಲಕ 2036ರ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಗೆ ಪ್ರತಿಭೆಗಳನ್ನು ಪೋಷಿಸುವುದು;
  • ಆಡಳಿತ ವೇದಿಕೆಗಳು ಮತ್ತು 'ಮೈ ಭಾರತ್' ನೇತೃತ್ವದ ಸ್ವಯಂಸೇವಕ ಸೇವೆಯ ಮೂಲಕ ಯುವ ನಾಯಕರನ್ನು ಸೃಷ್ಟಿಸುವುದು;
  • ನಾಗರಿಕ ಪ್ರಜ್ಞೆ, ಭವಿಷ್ಯಕ್ಕೆ ಸಿದ್ಧವಾದ ಕೌಶಲ್ಯಗಳು ಮತ್ತು ರಚನಾತ್ಮಕ ಸ್ವಯಂಸೇವಕ ಸೇವೆಯನ್ನು ಬೆಳೆಸುವ ಮೂಲಕ ವಿಕಸಿತ ಭಾರತಕ್ಕಾಗಿ ಯುವಕರನ್ನು ಸಬಲೀಕರಣಗೊಳಿಸುವುದು;
  • ಮಾದಕ ವ್ಯಸನದ ವಿರುದ್ಧ ಹೋರಾಡಲು ಕ್ರೀಡೆ ಮತ್ತು ಸಮಾನಮನಸ್ಕ ಜಾಲಗಳನ್ನು ಬಳಸಿಕೊಳ್ಳುವ 'ನಶಾ ಮುಕ್ತ ಯುವ ಆಂದೋಲ'ನವನ್ನು ಉತ್ತೇಜಿಸುವುದು. ಇದು 2026ರ ಆಗಸ್ಟ್ 2ರಂದು ಪ್ರಾರಂಭಿಸಲಾದ ಪ್ರಧಾನಮಂತ್ರಿಯವರ 100 ವಾರಗಳ ರಾಷ್ಟ್ರವ್ಯಾಪಿ ಅಭಿಯಾನದ ಅಡಿಯಲ್ಲಿ ಸಾಪ್ತಾಹಿಕ 'ಜನ ಭಾಗೀದಾರಿ' ಚಟುವಟಿಕೆಗಳಿಂದ ಬೆಂಬಲಿತವಾಗಿದೆ.