ಗೌರವಾನ್ವಿತ, ಘನತೆವೆತ್ತ ಪ್ರಧಾನ ಮಂತ್ರಿ ಮೆಲೋನಿ ಅವರೇ,

ಎರಡೂ ದೇಶಗಳ ನಿಯೋಗಗಳ ಪ್ರತಿನಿಧಿಗಳೇ,

ಮಾಧ್ಯಮ ಮಿತ್ರರೇ,

ನಮಸ್ಕಾರ!

ಭಾರತಕ್ಕೆ ಮೊದಲ ಭೇಟಿ ನೀಡಿರುವ ಪ್ರಧಾನ ಮಂತ್ರಿ ಮೆಲೋನಿ ಮತ್ತು ಅವರ ನಿಯೋಗಕ್ಕೆ ನಾನು ಆತ್ಮೀಯ ಸ್ವಾಗತವನ್ನು ಕೋರುತ್ತೇನೆ. ಕಳೆದ ವರ್ಷ ಅಲ್ಲಿ ನಡೆದ ಚುನಾವಣೆಯಲ್ಲಿ ಇಟಲಿಯ ನಾಗರಿಕರು ಅವರನ್ನು ಮೊದಲ ಮಹಿಳಾ ಮತ್ತು ಕಿರಿಯ ಪ್ರಧಾನಿಯಾಗಿ ಆಯ್ಕೆ ಮಾಡಿದರು. ಈ ಐತಿಹಾಸಿಕ ಸಾಧನೆಗೆ ಎಲ್ಲಾ ಭಾರತೀಯರ ಪರವಾಗಿ ನಾನು ಅವರನ್ನು ಅಭಿನಂದಿಸುತ್ತೇನೆ ಮತ್ತು ಶುಭ ಹಾರೈಸುತ್ತೇನೆ. ಅವರು ಅಧಿಕಾರ ವಹಿಸಿಕೊಂಡ ಕೆಲವು ದಿನಗಳ ನಂತರ ಬಾಲಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ನಾವು ನಮ್ಮ ಮೊದಲ ಸಭೆಯನ್ನು ನಡೆಸಿದ್ದೆವು. 

ಸ್ನೇಹಿತರೇ,

ಇಂದಿನ ನಮ್ಮ ಚರ್ಚೆಗಳು ಬಹಳ ಉಪಯುಕ್ತ ಮತ್ತು ಅರ್ಥಪೂರ್ಣವಾಗಿವೆ. ಈ ವರ್ಷ ಭಾರತ ಮತ್ತು ಇಟಲಿ ತಮ್ಮ ದ್ವಿಪಕ್ಷೀಯ ಸಂಬಂಧದ 75 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿವೆ. ಈ ಸಂದರ್ಭದಲ್ಲಿ, ನಾವು ಭಾರತ-ಇಟಲಿ ಸಹಭಾಗಿತ್ವಕ್ಕೆ ಕಾರ್ಯತಂತ್ರದ ಸಹಭಾಗಿತ್ವದ ಸ್ಥಾನಮಾನವನ್ನು ನೀಡಲು ನಿರ್ಧರಿಸಿದ್ದೇವೆ. ನಮ್ಮ ಆರ್ಥಿಕ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ನಾವು ಒತ್ತು ನೀಡಿದ್ದೇವೆ. ನಮ್ಮ "ಮೇಕ್ ಇನ್ ಇಂಡಿಯಾ" ಮತ್ತು "ಆತ್ಮನಿರ್ಭರ ಭಾರತ" ಅಭಿಯಾನಗಳು ಭಾರತದಲ್ಲಿ ಉತ್ತಮ ಹೂಡಿಕೆಯ ಅವಕಾಶಗಳನ್ನು ತೆರೆಯುತ್ತಿವೆ. ನವೀಕರಿಸಬಹುದಾದ ಇಂಧನ, ಹಸಿರು ಜಲಜನಕ, ಮಾಹಿತಿ ತಂತ್ರಜ್ಞಾನ, ಸೆಮಿಕಂಡಕ್ಟರ್‌ಗಳು, ಟೆಲಿಕಾಂ, ಬಾಹ್ಯಾಕಾಶ ಮುಂತಾದ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲು ನಾವು ವಿಶೇಷ ಒತ್ತು ನೀಡಿದ್ದೇವೆ. ಇಂದು ನಾವು ಭಾರತ ಮತ್ತು ಇಟಲಿ ನಡುವೆ ʼಸ್ಟಾರ್ಟ್‌ಅಪ್ ಬ್ರಿಡ್ಜ್‌ʼ ಸ್ಥಾಪನೆಯನ್ನು ಘೋಷಿಸುತ್ತಿದ್ದೇವೆ ಮತ್ತು ಈ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ.

ಸ್ನೇಹಿತರೇ,

ಉಭಯ ದೇಶಗಳು ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿರುವ ಮತ್ತೊಂದು ಕ್ಷೇತ್ರವಿದೆ, ಅದು ರಕ್ಷಣಾ ಸಹಕಾರವಾಗಿದೆ. ಭಾರತದಲ್ಲಿ ರಕ್ಷಣಾ ಉತ್ಪಾದನಾ ವಲಯದಲ್ಲಿ ಸಹ-ಉತ್ಪಾದನೆ ಮತ್ತು ಸಹ-ಅಭಿವೃದ್ಧಿಗೆ ಅವಕಾಶಗಳನ್ನು ಸೃಷ್ಟಿಸಲಾಗುತ್ತಿದೆ, ಇದು ಎರಡೂ ದೇಶಗಳಿಗೆ ಪ್ರಯೋಜನಕಾರಿಯಾಗಿದೆ. ಎರಡೂ ದೇಶಗಳ ಸಶಸ್ತ್ರ ಪಡೆಗಳ ನಡುವೆ ನಿಯಮಿತ ಜಂಟಿ ಅಭ್ಯಾಸ ಮತ್ತು ತರಬೇತಿ ಕೋರ್ಸ್‌ಗಳನ್ನು ಆಯೋಜಿಸಲು ನಾವು ನಿರ್ಧರಿಸಿದ್ದೇವೆ. ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದದ ವಿರುದ್ಧದ ಹೋರಾಟದಲ್ಲಿ ಭಾರತ ಮತ್ತು ಇಟಲಿ ಪರಸ್ಪರ ಸಹಕರಿಸುತ್ತಿವೆ. ಈ ಸಹಕಾರವನ್ನು ಇನ್ನಷ್ಟು ಬಲಪಡಿಸುವುದು ಹೇಗೆ ಎಂಬುದರ ಕುರಿತು ನಾವು ಸವಿವರವಾಗಿ ಚರ್ಚಿಸಿದ್ದೇವೆ.

ಸ್ನೇಹಿತರೇ,

ಭಾರತ ಮತ್ತು ಇಟಲಿ ನಡುವೆ ಶತಮಾನಗಳಷ್ಟು ಹಳೆಯ ಸಾಂಸ್ಕೃತಿಕ ಮತ್ತು ಜನರ-ಜನರ ನಡುವಿನ ಸಂಬಂಧಗಳಿವೆ. ಸದ್ಯದ ಅಗತ್ಯಕ್ಕೆ ತಕ್ಕಂತೆ ಈ ಸಂಬಂಧಗಳಿಗೆ ಹೊಸ ರೂಪ ಮತ್ತು ಹೊಸ ಶಕ್ತಿ ನೀಡುವ ಕುರಿತು ಚರ್ಚೆ ನಡೆಸಿದೆವು. ವಲಸೆ ಮತ್ತು ಸಂಚಾರ ಪಾಲುದಾರಿಕೆ ಒಪ್ಪಂದದ ಕುರಿತು ಉಭಯ ದೇಶಗಳ ನಡುವೆ ನಡೆಯುತ್ತಿರುವ ಮಾತುಕತೆಗಳು ವಿಶೇಷ ಪ್ರಾಮುಖ್ಯತೆಯನ್ನು ಹೊಂದಿವೆ. ಈ ಒಪ್ಪಂದದ ತ್ವರಿತ ತೀರ್ಮಾನವು ನಮ್ಮ ಜನರ-ಜನರ ನಡುವಿನ ಸಂಬಂಧವನ್ನು ಇನ್ನಷ್ಟು ಬಲಪಡಿಸುತ್ತದೆ. ಉಭಯ ದೇಶಗಳ ಉನ್ನತ ಶಿಕ್ಷಣ ಸಂಸ್ಥೆಗಳ ನಡುವೆ ಸಹಕಾರವನ್ನು ಉತ್ತೇಜಿಸುವ ಅಗತ್ಯವನ್ನು ನಾವು ಒತ್ತಿ ಹೇಳಿದ್ದೇವೆ. ಭಾರತ ಮತ್ತು ಇಟಲಿ ನಡುವಿನ ಸಂಬಂಧದ 75 ನೇ ವಾರ್ಷಿಕೋತ್ಸವವನ್ನು ಆಚರಿಸಲು, ನಾವು ಕ್ರಿಯಾ ಯೋಜನೆಯನ್ನು ರೂಪಿಸಲು ನಿರ್ಧರಿಸಿದ್ದೇವೆ. ಇದರ ಸಹಾಯದಿಂದ ನಾವು ಜಾಗತಿಕ ವೇದಿಕೆಯಲ್ಲಿ ಎರಡೂ ದೇಶಗಳ ವೈವಿಧ್ಯತೆ, ಇತಿಹಾಸ, ವಿಜ್ಞಾನ ಮತ್ತು ತಂತ್ರಜ್ಞಾನ, ನಾವೀನ್ಯತೆ, ಕ್ರೀಡೆ ಮತ್ತು ಸಾಧನೆಗಳನ್ನು ಪ್ರದರ್ಶಿಸಲು ಸಾಧ್ಯವಾಗುತ್ತದೆ.

ಸ್ನೇಹಿತರೇ,

ಕೋವಿಡ್ ಸಾಂಕ್ರಾಮಿಕ ಮತ್ತು ಉಕ್ರೇನ್ ಸಂಘರ್ಷದಿಂದ ಉಂಟಾದ ಆಹಾರ, ಇಂಧನ ಮತ್ತು ರಸಗೊಬ್ಬರಗಳ ಬಿಕ್ಕಟ್ಟಿನಿಂದ ಎಲ್ಲಾ ದೇಶಗಳು ಪರಿಣಾಮ ಎದುರಿಸಿವೆ. ಇವು ವಿಶೇಷವಾಗಿ ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲೆ ಋಣಾತ್ಮಕ ಪರಿಣಾಮವನ್ನು ಬೀರಿವೆ. ನಾವು ಈ ಬಗ್ಗೆ ನಮ್ಮ ಪರಸ್ಪರ ಕಳವಳವನ್ನು ವ್ಯಕ್ತಪಡಿಸಿದ್ದೇವೆ ಮತ್ತು ಈ ಸಮಸ್ಯೆಗಳನ್ನು ಪರಿಹರಿಸಲು ಜಂಟಿ ಪ್ರಯತ್ನಗಳಿಗೆ ಒತ್ತು ನೀಡಿದ್ದೇವೆ. ಭಾರತದ ಜಿ-20 ಅಧ್ಯಕ್ಷತೆಯ ಅವಧಿಯಲ್ಲೂ ನಾವು ಈ ವಿಷಯಕ್ಕೆ ಆದ್ಯತೆ ನೀಡುತ್ತಿದ್ದೇವೆ. ಉಕ್ರೇನ್ ಸಂಘರ್ಷದ ಆರಂಭದಿಂದಲೂ, ಈ ವಿವಾದವನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಮಾತ್ರ ಪರಿಹರಿಸಬಹುದು ಮತ್ತು ಯಾವುದೇ ಶಾಂತಿ ಪ್ರಕ್ರಿಯೆಗೆ ಕೊಡುಗೆ ನೀಡಲು ಭಾರತವು ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಭಾರತ ಸ್ಪಷ್ಟಪಡಿಸಿದೆ. ಇಂಡೋ-ಪೆಸಿಫಿಕ್‌ ಪ್ರದೇಶದಲ್ಲಿ ಇಟಲಿಯ ಸಕ್ರಿಯ ಭಾಗವಹಿಸುವಿಕೆಯನ್ನು ನಾವು ಸ್ವಾಗತಿಸುತ್ತೇವೆ. ಇಂಡೋ-ಪೆಸಿಫಿಕ್ ಮಹಾಸಾಗರ ಉಪಕ್ರಮಕ್ಕೆ ಇಟಲಿ ಸೇರಲು ನಿರ್ಧರಿಸಿರುವುದು ಸಂತಸದ ವಿಷಯವಾಗಿದೆ. ಇಂಡೋ-ಪೆಸಿಫಿಕ್‌ನಲ್ಲಿ ನಮ್ಮ ಸಹಕಾರವನ್ನು ಹೆಚ್ಚಿಸಲು ಸದೃಢ ಥೀಮ್‌ಗಳನ್ನು ಗುರುತಿಸಲು ಇದು ನಮಗೆ ಅನುವು ಮಾಡಿಕೊಡುತ್ತದೆ. ಜಾಗತಿಕ ವಾಸ್ತವಗಳನ್ನು ಉತ್ತಮ ರೀತಿಯಲ್ಲಿ ಪ್ರತಿಬಿಂಬಿಸಲು ಬಹುಪಕ್ಷೀಯ ಸಂಸ್ಥೆಗಳಲ್ಲಿ ಸುಧಾರಣೆಗಳು ಅಗತ್ಯವಾಗಿದೆ. ನಾವು ಈ ವಿಷಯವನ್ನೂ ಚರ್ಚಿಸಿದ್ದೇವೆ.

ಗೌರವಾನ್ವಿತರೇ,

ಇಂದು ಸಂಜೆ ನೀವು ರೈಸಿನಾ ಸಂವಾದದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತೀರಿ. ಅಲ್ಲಿ ನಿಮ್ಮ ಭಾಷಣವನ್ನು ಕೇಳಲು ನಾವೆಲ್ಲರೂ ಎದುರು ನೋಡುತ್ತಿದ್ದೇವೆ. ನಿಮ್ಮ ಭಾರತ ಭೇಟಿಗಾಗಿ ಮತ್ತು ನಮ್ಮ ಉಪಯುಕ್ತ ಚರ್ಚೆಗಳಿಗಾಗಿ ನಿಮಗೆ ಮತ್ತು ನಿಮ್ಮ ನಿಯೋಗಕ್ಕೆ ತುಂಬಾ ಧನ್ಯವಾದಗಳು.
 
ಸೂಚನೆ - ಇದು ಪ್ರಧಾನಿಯವರ ಭಾಷಣದ ಅಂದಾಜು ಅನುವಾದವಾಗಿದೆ. ಮೂಲ ಭಾಷಣವನ್ನು ಹಿಂದಿಯಲ್ಲಿ ಮಾಡಲಾಗಿದೆ.

 

 

 

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s AI moment: Sarvam turns unicorn at $1.5 billion valuation

Media Coverage

India’s AI moment: Sarvam turns unicorn at $1.5 billion valuation
NM on the go

Nm on the go

Always be the first to hear from the PM. Get the App Now!
...
Today, the world does not suffer from a shortage of resources; it suffers from a shortage of trust: PM Modi at G7 Summit in Evian, France
June 16, 2026

राष्ट्रपति मैक्रों,
Your Excellencies,

नमस्कार!

G-7 समिट में हमारे गर्मजोशी भरे स्वागत के लिए मैं राष्ट्रपति मैक्रों का हार्दिक आभार व्यक्त करता हूँ।

Friends,

आज का विश्व पहले से कहीं अधिक inter-connected और inter-dependent है। किसी भी देश की ऊर्जा सुरक्षा, खाद्य सुरक्षा, स्वास्थ्य सुरक्षा, साइबर सुरक्षा और आर्थिक समृद्धि केवल उसकी सीमाओं के भीतर तय नहीं होती। Mobility, data, capital, technology, ये सभी हमें आपस में जोड़ते हैं।

ऐसे समय में Partnerships का महत्व स्वाभाविक रूप से बढ़ जाता है। लेकिन साझेदारियाँ तभी सफल होती हैं जब उनके केंद्र में विश्वास हो। आज सबसे महत्वपूर्ण Strategic Asset कोई mineral, technology या market नहीं, बल्कि आपसी विश्वास है।

विश्वास कि टेक्नॉलजी और supply chains को हथियार के रूप में नहीं, global good के लिए इस्तेमाल किया जाएगा। विश्वास कि विकास के अवसर कुछ देशों तक सीमित नहीं रहेंगे। विश्वास कि वैश्विक संस्थान सभी देशों की आकांक्षाओं को पूरा करने में सक्षम होंगे।

Friends,

पिछली सदी में मानवता को दो विश्व युद्धों से गुज़रना पड़ा। अनेक बलिदानों के बाद विश्व समुदाय ने शांति, स्थिरता और समृद्धि की ओर बढ़ने के लिए व्यवस्थाएं विकसित की। इन व्यवस्थाओं का आधार भी trust ही था।

किन्तु अनेक दशकों से, अनेक पीढ़ियों के योगदान से बनाए गए विश्वास को आज चोट पहुँच रही है। कोविड ने हमें आईना दिखाया कि trust और solidarity के दावे कितने खोखले थे।

Today the world does not suffer from a shortage of resources; it suffers from a shortage of trust. And the future of our partnerships depends on building this trust.

अमेरिका के राष्ट्रपति रोनल्ड रेगन ने कहा था: Trust but Verify. यह आज के समय में भी प्रासंगिक है। भावी पीढ़ियों के प्रति हमारा दायित्व है कि हम नए युग के अनुरूप trusted rules based order का निर्माण करें।

Friends,

भारत ने सदैव विश्व को एक परिवार के रूप में देखा है। हमारे सभी प्रयास “सर्वजन हिताय, सर्वजन सुखाय” यानि, welfare and happiness for all के मूल सिद्धांत पर आधारित रहे हैं।

भारत का अनुभव दिखाता है कि विकास सबसे अधिक प्रभावी तब होता है जब वह लोगों की आकांक्षाओं से जुड़ा हो। यही सिद्धांत हमारी अंतरराष्ट्रीय साझेदारियों का भी आधार है। इसी सोच के साथ भारत ने International Solar Alliance, Coalition for Disaster Resilient Infrastructure, ग्लोबल बायोफ्यूल्स एलायंस, Mission LiFE, और “एक पेड़ माँ के नाम” जैसी वैश्विक पहलों को आगे बढ़ाया है।

संकट के समय भारत ने First Responder के रूप में सभी देशों की सहायता करना अपना दायित्व समझा है। कोविड महामारी के दौरान भारत ने डेढ़ सौ से अधिक देशों को दवाइयाँ और vaccines उपलब्ध कराईं।

श्रीलंका में cyclone हो, अफगानिस्तान में भूकंप हो, मोज़ाम्बिक में floods हों, या क्यूबा और जमैका में hurricane, भारत ने सदैव "Humanity First" के सिद्धांत पर कार्य किया है। हमारी विकास साझेदारियाँ भी इसी भावना को प्रतिबिंबित करती हैं। हमारे प्रयास पार्टनर देशों में capacity building और कौशल विकास पर केन्द्रित रहे हैं।

भारत का मानना है: The true test of partnership is not what we build for others, but what we enable others to build for themselves.

Friends,

आज ग्लोबल साउथ की विश्व समुदाय से बहुत उम्मीदें हैं। किन्तु उनकी अपेक्षा सहारे की नहीं, साथ की है। वे वैश्विक विकास के लाभार्थी नहीं, उसके भागीदार बनना चाहते हैं।

हमें donor–recipient की सोच से आगे बढ़कर, equal पार्टनर्स के रूप में काम करना होगा। उनके पास-पास नहीं, साथ-साथ चलना होगा। साझेदारी को dependency के बजाय, dignity से जोड़ना होगा। इन प्रयासों से हम भावी पीढ़ियों के सतत विकास की मजबूत नींव रख सकेंगे।

Friends,

अंतरराष्ट्रीय साझेदारियाँ और वैश्विक एकजुटता तभी सार्थक बन सकती हैं, जब हम साझा चुनौतियों का मिलकर समाधान करें। भारत का दृढ विश्वास है कि विश्व के विभिन्न हिस्सों में चल रहे तनावों और युद्धों का स्थायी समाधान dialogue, diplomacy और अंतरराष्ट्रीय सहयोग के मार्ग से ही संभव है।

हम west asia में शांति प्रयासों में हुई प्रगति का स्वागत करते हैं। इस संघर्ष से west asia में हमारे मित्र देशों को जान-माल का नुकसान झेलना पड़ा है। होर्मुज़ स्ट्रेट में maritime ट्रेड में आई बाधा के कारण पूरे विश्व की अर्थव्यवस्था को नुकसान पहुंचा। भारत के कई civilians को जान गंवानी पड़ी। Global maritime ट्रेड के माध्यम से सभी देशों को आपस में जोड़ने वाले नाविकों की सुरक्षा हमारा दायित्व है। हमें यह सुनिश्चित करना होगा कि समुद्री मार्ग सुरक्षित रहें, और Seafarers बिना भय के अपना कार्य कर सकें।

Friends,

भारत इन विषयों पर सभी पार्टनर्स के साथ मिलकर काम करने के लिए पूरी तरह से तैयार है।

बहुत-बहुत धन्यवाद।