ಪ್ರಧಾನಿ ಶ್ರೀ ನರೇಂದ್ರ ಮೋದಿ ಹಾಗೂ ನೇಪಾಳದ ಪ್ರಧಾನಿ ಶ್ರೀ ಕೆ.ಪಿ. ಶರ್ಮಾ ಒಲಿ ಜೋಗಬಾನಿ –ಬಿರಾಟ್‌ನಗರ ಎರಡನೇ ಸಮಗ್ರ ಚೆಕ್ ಪೋಸ್ಟ್ (ಐಸಿಪಿ) ಅನ್ನು ಇಂದು ಜಂಟಿಯಾಗಿ ಉದ್ಘಾಟಿಸಿದರು.

ಜೋಗಬಾನಿ – ಬಿರಾಟ್‌ನಗರ ಉಭಯ ದೇಶಗಳ ನಡುವಿನ ಪ್ರಮುಖ ವ್ಯಾಪಾರ ಕೇಂದ್ರವಾಗಿದೆ. ಈ ಸಮಗ್ರ ಚೆಕ್ ಪೋಸ್ಟ್ ಆಧುನಿಕ ಸೌಲಭ್ಯಗಳನ್ನು ಹೊಂದಿದೆ.

ಭಾರತ-ನೇಪಾಳ ಗಡಿಯುದ್ದಕ್ಕೂ ವ್ಯಾಪಾರ ಮತ್ತು ಜನರ ಸಂಚಾರಕ್ಕೆ ಅನುಕೂಲವಾಗುವಂತೆ ಜೋಗಬಾನಿ – ಬಿರಾಟ್‌ನಗರದಲ್ಲಿ ಎರಡನೇ ಸಮಗ್ರ ಚೆಕ್ ಪೋಸ್ಟ್ ಅನ್ನು ಭಾರತದ ನೆರವಿನೊಂದಿಗೆ ನಿರ್ಮಿಸಲಾಗಿದೆ.

ಇಬ್ಬರೂ ಪ್ರಧಾನ ಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

“ನೇಪಾಳದ ಸರ್ವತೋಮುಖ ಅಭಿವೃದ್ಧಿಯಲ್ಲಿ ಭಾರತವು ವಿಶ್ವಾಸಾರ್ಹ ಪಾಲುದಾರನ ಪಾತ್ರವನ್ನು ವಹಿಸುತ್ತಿದೆ” ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ತಿಳಿಸಿದರು.

‘ನೆರೆಹೊರೆಯವರು ಮೊದಲು’ ಎಂಬುದು ನನ್ನ ಸರ್ಕಾರದ ಮುಖ್ಯ ನೀತಿಯಾಗಿದ್ದು, ಗಡಿಯಾಚೆಗಿನ ಸಂಪರ್ಕವನ್ನು ಸುಧಾರಿಸುವುದು ಇದರ ಪ್ರಮುಖ ಅಂಶವಾಗಿದೆ ಎಂದು ಅವರು ಹೇಳಿದರು.

“ಭಾರತ-ನೇಪಾಳಕ್ಕೆ ಸಂಬಂಧಪಟ್ಟಂತೆ ಉತ್ತಮ ಸಂಪರ್ಕವು ಹೆಚ್ಚು ಮಹತ್ವದ್ದಾಗಿದೆ, ಏಕೆಂದರೆ ನಮ್ಮ ಸಂಬಂಧಗಳು ಕೇವಲ ನೆರೆಹೊರೆಯದ್ದು ಮಾತ್ರವಲ್ಲ, ಬದಲಿಗೆ ನಮ್ಮ ಇತಿಹಾಸ ಮತ್ತು ಭೌಗೋಳಿಕತೆಯು ಸಂಸ್ಕೃತಿ, ಪ್ರಕೃತಿ, ಕುಟುಂಬ, ಭಾಷೆ, ಅಭಿವೃದ್ಧಿ ಇನ್ನೂ ಅನೇಕ ಎಳೆಗಳ ಮೂಲಕ ನಮ್ಮನ್ನು ಸಂಪರ್ಕಿಸಿದೆ ” ಎಂದು ಪ್ರಧಾನಿ ಶ್ರೀ ಮೋದಿ ಹೇಳಿದರು.

“ಎಲ್ಲಾ ಸ್ನೇಹಪರ ರಾಷ್ಟ್ರಗಳೊಂದಿಗೆ ಉತ್ತಮ ಸಾರಿಗೆ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ವ್ಯಾಪಾರ, ಸಂಸ್ಕೃತಿ, ಶಿಕ್ಷಣ ಇತ್ಯಾದಿಗಳಲ್ಲಿ ಸಂಬಂಧವನ್ನು ಇನ್ನಷ್ಟು ವೃದ್ಧಿಸಲು ನನ್ನ ಸರ್ಕಾರ ಬದ್ಧವಾಗಿದೆ” ಎಂದು ಪ್ರಧಾನಿ ಹೇಳಿದರು.

ನೇಪಾಳದ ರಸ್ತೆ, ರೈಲು ಮತ್ತು ಪ್ರಸರಣ ಮಾರ್ಗ ಯೋಜನೆಗಳ ಬಗ್ಗೆ ಭಾರತ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಧಾನಿ ಹೇಳಿದರು.

ನೇಪಾಳದಲ್ಲಿ ಭೂಕಂಪ ನಂತರ ಭಾರತ ಸರ್ಕಾರದ ನೆರವಿನ ವಸತಿ ಪುನರ್ನಿರ್ಮಾಣ ಯೋಜನೆಗಳ ಗಮನಾರ್ಹ ಪ್ರಗತಿಗೆ ಇಬ್ಬರೂ ಪ್ರಧಾನ ಮಂತ್ರಿಗಳು ಸಾಕ್ಷಿಯಾದರು.

ನೇಪಾಳದಲ್ಲಿ 2015 ರಲ್ಲಿ ಸಂಭವಿಸಿದ ಭೂಕಂಪವನ್ನು ಉಲ್ಲೇಖಿಸಿದ ಪ್ರಧಾನಿ ಶ್ರೀ ಮೋದಿಯವರು, “ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳಲ್ಲಿ ಭಾರತವು ಮೊದಲು ಪ್ರತಿಕ್ರಿಯಿಸಿದ ರಾಷ್ಟ್ರವಾಗಿದೆ. ಮತ್ತು ಈಗ ನೇಪಾಳದ ಪುನರ್ನಿರ್ಮಾಣದಲ್ಲಿ ನಮ್ಮ ಸ್ನೇಹಿತರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ” ಎಂದು ಹೇಳಿದರು.

ಗೂರ್ಖಾ ಮತ್ತು ನುವಾಕೋಟ್ ಜಿಲ್ಲೆಗಳಲ್ಲಿ 50,000 ಮನೆಗಳನ್ನು ನಿರ್ಮಿಸುವ ಭಾರತ ಸರ್ಕಾರದ ವಾಗ್ದಾನದಂತೆ ಈಗಾಗಲೇ 45,000 ಮನೆಗಳು ಪೂರ್ಣಗೊಂಡಿವೆ.

ನೇಪಾಳದ ಪ್ರಧಾನ ಮಂತ್ರಿ ಶ್ರೀ ಕೆ.ಪಿ.ಶರ್ಮಾ ಒಲಿ ಅವರು ಭಾರತದ ನೆರವಿಗೆ ಧನ್ಯವಾದಗಳನ್ನು ತಿಳಿಸಿದರು.

 

 

 

 

 

 

 

 

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'We'll provide AI skill training to 1 crore youth': PM Modi's big announcement on Independence Day 2026

Media Coverage

'We'll provide AI skill training to 1 crore youth': PM Modi's big announcement on Independence Day 2026
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಆಗಸ್ಟ್ 2026
August 15, 2026

Azadi Ka Amrit Mahotsav Continues: PM Modi’s Independence Day Vision Unites Growth, Youth Power & National Pride