ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಶ್ರೀ ಗುರು ಗೋಬಿಂದ್ ಸಿಂಗ್ ಅವರ ಪ್ರಕಾಶ್ ಪೂರಭ್ ಶುಭ ಸಂದರ್ಭದಲ್ಲಿ ಸಾಹಿಬ್ ಜಾದಾ ಜೋರಾವರ್ ಸಿಂಗ್ ಮತ್ತು ಸಾಹಿಬ್ ಜಾದಾ ಫತೇಹ್ ಸಿಂಗ್  ಅವರು ಹುತಾತ್ಮರಾದ ದಿನದ ಸ್ಮರಣಾರ್ಥ ಈ ವರ್ಷದಿಂದ ಡಿಸೆಂಬರ್ 26ನ್ನು 'ವೀರ್ ಬಾಲ್ ದಿವಸ್' (ವೀರ ಬಾಲಕರ ದಿನ) ಎಂದು ಆಚರಿಸಲಾಗುತ್ತದೆ ಎಂದು ಘೋಷಿಸಿದರು. ಸರಣಿ ಟ್ವೀಟ್‌ ಗಳಲ್ಲಿ, ಪ್ರಧಾನಮಂತ್ರಿಯವರು;
" ಶ್ರೀ ಗುರು ಗೋಬಿಂದ್ ಸಿಂಗ್ ಅವರ ಪ್ರಕಾಶ ಪೂರಬ್ ನ ಪವಿತ್ರ ದಿನವಾದ ಇಂದು, ಈ ವರ್ಷದಿಂದ ಮೊದಲ್ಗೊಂಡು ಡಿಸೆಂಬರ್ 26ರಂದು   ‘ವೀರ ಬಾಲ್ ದಿವಸ್’ ಎಂದು ಆಚರಿಸಲಾಗುವುದು ಎಂದು ತಿಳಿಸಲು ಹೆಮ್ಮೆಪಡುತ್ತೇನೆ.

ಇದು ಸಾಹೀಬ್ ಜಾದೇಗಳ ಶೌರ್ಯಕ್ಕೆ  ಮತ್ತು ಅವರ ನ್ಯಾಯ ಶೋಧನೆಗೆ ಸೂಕ್ತ ಗೌರವವಾಗಿದೆ ಎಂದರು. 

 ‘ವೀರ ಬಾಲ್ ದಿವಸ್’ ಅನ್ನು ಸಾಹಿಬ್ ಜಾದಾ ಜೋರಾವರ್ ಸಿಂಗ್  ಮತ್ತು ಸಾಹಿಬ್ ಜಾದಾ ಫತೇಹ್ ಸಿಂಗ್ ಅವರನ್ನು ಗೋಡೆಯಲ್ಲಿ ಜೀವಂತವಾಗಿ ಸಮಾಧಿ ಮಾಡಿದ ಕಾರಣದಿಂದ ಹುತಾತ್ಮರಾದ ದಿನವಾಗಿದೆ. ಈ ಇಬ್ಬರು ಶ್ರೇಷ್ಠರು ಧರ್ಮದ ಉದಾತ್ತ ತತ್ವಗಳಿಂದ ವಿಮುಖರಾಗುವ ಬದಲು ಸಾವಿಗೆ ಶರಣಾದರು.

ಮಾತಾ ಗುರುಜಿ, ಶ್ರೀ ಗುರು ಗೋಬಿಂದ್ ಸಿಂಗ್ ಮತ್ತು 4 ಸಾಹಿಬ್ ಜಾದೆಗಳ ಶೌರ್ಯ ಮತ್ತು ಆದರ್ಶಗಳು ಲಕ್ಷಾಂತರ ಜನರಿಗೆ ಚೈತನ್ಯ ನೀಡುತ್ತವೆ. ಅವರು ಎಂದೂ ಅನ್ಯಾಯಕ್ಕೆ ತಲೆಬಾಗಲಿಲ್ಲ. ಅವರು ಸಮಗ್ರ ಮತ್ತು ಸಾಮರಸ್ಯದ ಜಗತ್ತನ್ನು ಕಲ್ಪಿಸಿಕೊಂಡಿದ್ದರು. ಅವರ ಬಗ್ಗೆ ಹೆಚ್ಚಿನ ಜನರು ತಿಳಿದುಕೊಳ್ಳುವುದು ಇಂದಿನ ಅಗತ್ಯವಾಗಿದೆ.." ಎಂದು ತಿಳಿಸಿದ್ದಾರೆ.

 

 

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Thought I Was Dreaming': Boatman Gouranga Biswas Recounts His 40-Minute Hooghly Ride With PM Modi

Media Coverage

'Thought I Was Dreaming': Boatman Gouranga Biswas Recounts His 40-Minute Hooghly Ride With PM Modi
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಎಪ್ರಿಲ್ 2026
April 24, 2026

Made in India, Built for 2047: PM Modi’s Reforms Turning Rural Hope into National Strength