ಉಕ್ರೇನ್ ಯುದ್ಧ ಸಂಗರ್ಷ ಮತ್ತು ಆಪರೇಷನ್ ಗಂಗಾ ಕುರಿತು ಕಳೆದ ಕೆಲವು ದಿನಗಳಿಂದ ಸಂಸತ್ತಿನಲ್ಲಿ ನಡೆದ ಆರೋಗ್ಯಕರ ಚರ್ಚೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ತಮ್ಮ ಮುಕ್ತ ಅಭಿಪ್ರಾಯ ಮತ್ತು ಅಭಿವ್ಯಕ್ತಿಯಿಂದ ಸದನದ ಚರ್ಚೆಯನ್ನು ಶ್ರೀಮಂತಗೊಳಿಸಿದ ಎಲ್ಲಾ ಸಂಸದರಿಗೆ ಅವರು ಕೃತಜ್ಞತೆಗಳನ್ನು ತಿಳಿಸಿದರು. ಪ್ರತಿಕೂಲ ಸಂದರ್ಭಗಳಲ್ಲಿ ನಮ್ಮ ದೇಶವಾಸಿಗಳು ಮತ್ತು ನಾಗರಿಕರ ಸುರಕ್ಷತೆ ಮತ್ತು ಯೋಗಕ್ಷೇಮದ ಬಗ್ಗೆ ಕಾಳಜಿ ವಹಿಸುವುದು ನಮ್ಮ ಸಾಮೂಹಿಕ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು;

"ಕಳೆದ ಕೆಲವು ದಿನಗಳಿಂದ ಸಂಸತ್ತಿನ ಉಭಯ ಸದನಗಳು  ಉಕ್ರೇನ್‌ ಯುದ್ಧ ಪರಿಸ್ಥಿತಿ ಮತ್ತು ಆಪರೇಷನ್ ಗಂಗಾ ಮೂಲಕ ನಮ್ಮ ನಾಗರಿಕರನ್ನು ಮರಳಿ ಕರೆತರುವ ಭಾರತದ ನಿರಂತರ ಪ್ರಯತ್ನಗಳ ಕುರಿತು ಆರೋಗ್ಯಕರ ಚರ್ಚೆಗೆ ಸಾಕ್ಷಿಯಾಗಿವೆ. ಈ ಚರ್ಚೆಯನ್ನು ತಮ್ಮ ಅಭಿಪ್ರಾಯಗಳೊಂದಿಗೆ ಪುಷ್ಟೀಕರಿಸಿದ ಎಲ್ಲಾ ಸಂಸದ ಸಹೋದ್ಯೋಗಿಗಳಿಗೆ ನಾನು ಕೃತಜ್ಞನಾಗಿದ್ದೇನೆ" ಎಂದಿದ್ದಾರೆ.

"ವಿದೇಶಾಂಗ ನೀತಿಯ ವಿಷಯಗಳಿಗೆ ಬಂದಾಗ ಉಭಯಪಕ್ಷೀಯತೆ ಹೇಗೆ ಇದೆ ಎಂಬುದನ್ನು ಶ್ರೀಮಂತ ಮಟ್ಟದ ಚರ್ಚೆಗಳು ಮತ್ತು ರಚನಾತ್ಮಕ ಸಮಾಲೋಚನೆಗಳೇ ವಿವರಿಸಿವೆ. ಅಂತಹ ದ್ವಿಪಕ್ಷೀಯತೆಯು ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಉತ್ತಮ ಬೆಳವಣಿಗೆಯಾಗಿದೆ" ಎಂದಿದ್ದಾರೆ.

"ನಮ್ಮ ನಾಗರಿಕರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಅಪಾರ ಕಾಳಜಿ ವಹಿಸುವುದು ನಮ್ಮ ಸಾಮೂಹಿಕ ಕರ್ತವ್ಯವಾಗಿದೆ. ಪ್ರತಿಕೂಲ ಪರಿಸ್ಥಿತಿಗಳಲ್ಲಿ ನಮ್ಮ ಜನರು ಯಾವುದೇ ತೊಂದರೆಗಳನ್ನು ಎದುರಿಸುವುದಿಲ್ಲ ಎಂಬುದನ್ನು ಖಚಿತಪಡಿಸಲು ಭಾರತ ಸರ್ಕಾರವು ಎಂದಿಗೂ ಬಿಡುವುದಿಲ್ಲ ಎಂಬುದನ್ನು ಆಪರೇಷನ್ ಗಂಗಾ ಮತ್ತೆ ಸಾಬೀತು ಮಾಡಿದೆ" ಎಂದು ಪ್ರಧಾನಿ ತಿಳಿಸಿದ್ದಾರೆ.

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
IIT Delhi tops India in QS Rankings 2027; 52 Indian institutions feature

Media Coverage

IIT Delhi tops India in QS Rankings 2027; 52 Indian institutions feature
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 18 ಜೂನ್ 2026
June 18, 2026

PM Modi’s Leadership Delivers: Electronic Interlocking, Semiconductor Push & Tariff-Free UK Access