ರಾಜಸ್ಥಾನದ ನಾಗೌರ್ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪರಿಹಾರ ವಿತರಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅನುಮೋದನೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಮಂತ್ರಿಗಳ ಕಾರ್ಯಾಲಯ, "ರಾಜಸ್ಥಾನದ ನಗೌರ್ನಲ್ಲಿ ಸಂಭವಿಸಿದ ಅಪಘಾತದಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ʻಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿʼಯಿಂದ (ಪಿಎಂಎನ್ಆರ್ಎಫ್) ತಲಾ 2 ಲಕ್ಷ ರೂ.ಗಳ ಪರಿಹಾರ ನೀಡಲು ಪ್ರಧಾನಿ ಅನುಮೋದನೆ ನೀಡಿದ್ದಾರೆ. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು," ಎಂದು ತಿಳಿಸಿದೆ.
The Prime Minister has approved an ex-gratia of Rs. 2 lakh each from PMNRF for the next of kin of those who lost their lives due to the accident at Nagaur, Rajasthan. The injured would be given Rs. 50,000.
— PMO India (@PMOIndia) August 31, 2021


