ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು ನಾಗರಿಕ ಪೌರತ್ವ ಕಾಯ್ದೆ ಬಗ್ಗೆ ಸವಿಸ್ತಾರವಾಗಿ ವಿವರ ನೀಡಿದರು. ಈ ಕಾಯ್ದೆಯಿಂದ ಭಾರತದ ಯಾವುದೇ ಪ್ರಜೆಗೂ ತೊಂದರೆ ಆಗುವುದಿಲ್ಲ ಎಂದು ಸದನಕ್ಕೆ ಭರವಸೆ ನೀಡಿದರು.

ತಮ್ಮ ಭಾಷಣದಲ್ಲಿ ಪ್ರಧಾನಮಂತ್ರಿಯವರು ಹಿಂದಿನ ಸರ್ಕಾರಗಳ ಚಿಂತನಾ ಪ್ರಕ್ರಿಯೆಗಳು ಕೂಡ ಇದೇ ರೀತಿಯಲ್ಲಿದ್ದವು ಎಂದು ಉಲ್ಲೇಖಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರನ್ನು ಉಲ್ಲೇಖಿಸಿ, ಅವರು ಕೂಡ ನೆರೆ ರಾಷ್ಟ್ರಗಳಿಂದ ಬಂದಿರುವ ಅಲ್ಪಸಂಖ್ಯಾತ ನಿರಾಶ್ರಿತರಿಗೆ ಭಾರತ ಸುರಕ್ಷತೆಯನ್ನು ಖಾತ್ರಿಪಡಿಸಲು ಅಗತ್ಯಬಿದ್ದರೆ ಕಾನೂನು ತಿದ್ದುಪಡಿ ಮಾಡುವುದರ ಪರವಾಗಿದ್ದರು ಎಂದರು.

ಕೆಲವು ರಾಜಕೀಯ ಪಕ್ಷಗಳು ಭಾರತದಲ್ಲಿ ವಿಭಜನೆ ಮಾಡುವ ಪಾಕಿಸ್ತಾನದ ಕಾರ್ಯಕ್ರಮವನ್ನು ಮುಂದುವರಿಸಿಕೊಂಡು ಬರುತ್ತಿದ್ದಾರೆ ಎಂದ ಪ್ರಧಾನಮಂತ್ರಿಯವರು, ಭಾರತದ ಯಾವುದೇ ಪ್ರಜೆಗೆ ಸಿಎಎಯಿಂದ ಪ್ರತೀಕೂಲ ಪರಿಣಾಮ ಆಗುವುದಿಲ್ಲ ಎಂದು ಲೋಕಸಭೆಗೆ ಭರವಸೆ ನೀಡಿದರು.

“ಸಿಎಎ ಅನುಷ್ಠಾನದಿಂದ ಭಾರತದ ಯಾವುದೇ ಪ್ರಜೆಗೆ, ಅವರ ನಂಬಿಕೆ/ಧರ್ಮದ ಮೇಲೆ ಯಾವುದೇ ರೀತಿಯ ಪ್ರತೀಕೂಲ ಪರಿಣಾಮ ಆಗುವುದಿಲ್ಲ ಎಂದು ನಾನು ಸ್ಪಷ್ಟಪಡಿಸುತ್ತೇನೆ”, ಎಂದು ಅವರು ತಿಳಿಸಿದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's forex reserves hit all-time high of $729.33 billion after $12.42 billion jump

Media Coverage

India's forex reserves hit all-time high of $729.33 billion after $12.42 billion jump
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 28 ಆಗಸ್ಟ್ 2026
August 28, 2026

India’s Growth Story, Grounded: Inclusion, Exports, and Infrastructure Under One Vision of PM Modi