ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ವಾರಾಣಸಿಯಲ್ಲಿ ಬಾಬಾ ವಿಶ್ವನಾಥ ಧಾಮ್ ಉದ್ಘಾಟನೆಯ ನಂತರ ತಮ್ಮ ಕಾರ್ಯಕ್ರಮಗಳನ್ನು ಮುಂದುವರಿಸಿದರು. ವಿಶೇಷ ಪೂಜೆ ನೆರವೇರಿಸಿದ ಅವರು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದರು. ನಂತರ ಸೋಮವಾರ ಸಂಜೆ ಪ್ರಧಾನಮಂತ್ರಿಯವರು ಗಂಗಾ ಆರತಿಯಲ್ಲಿ ಭಾಗವಹಿಸಿದರು.

ಗಂಗಾ ಆರತಿ ಕುರಿತು ಬಣ್ಣಿಸಿರುವ ಪ್ರಧಾನಮಂತ್ರಿಯವರು ಕಾಶಿಯ ಆರತಿಯು ಸದಾ ಹೃದಯದಲ್ಲಿ ಹೊಸ ಚೈತನ್ಯವನ್ನು ತುಂಬುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. “काशी की गंगा आरती हमेशा अंतर्मन को नई ऊर्जा से भर देती है। आज काशी का बड़ा सपना पूरा होने के बाद दशाश्वमेध घाट पर गंगा आरती में शामिल हुआ और मां गंगा को उनकी कृपा के लिए नमन किया। नमामि गंगे तव पाद पंकजम्।” ಎಂದು ಹೇಳಿದ್ದಾರೆ.

ನಂತರ ಪ್ರಧಾನಮಂತ್ರಿಯವರು ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳೊಂದಿಗೆ ವಿಸ್ತೃತ ಸಭೆ ನಡೆಸಿದರು.

"ಭಾರತದ ಬಿಜೆಪಿ @BJP4India ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳೊಂದಿಗೆ ಕಾಶಿಯಲ್ಲಿ ವಿಸ್ತೃತ ಸಭೆ ಈಗಷ್ಟೇ ಮುಕ್ತಾಯಗೊಂಡಿತು" ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಕಾಶಿಯ ಪ್ರಮುಖ ಅಭಿವೃದ್ಧಿ ಕಾರ್ಯಗಳನ್ನು ಪ್ರಧಾನಮಂತ್ರಿಯವರು ಪರಿಶೀಲಿಸಿದರು. ಈ ಕುರಿತು ಅವರು ಟ್ವೀಟ್ ಮಾಡಿರುವ ಅವರು, "ಕಾಶಿಯ ಪ್ರಮುಖ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಲಾಯಿತು. ಈ ಪವಿತ್ರ ನಗರಕ್ಕೆ ಅತ್ಯುತ್ತಮ ಮೂಲಸೌಕರ್ಯಗಳನ್ನು ಸೃಷ್ಟಿಸುವುದು ನಮ್ಮ ಪ್ರಯತ್ನವಾಗಿದೆ,” ಎಂದಿದ್ದಾರೆ.

 

ಪ್ರಧಾನಮಂತ್ರಿಯವರು ರೈಲ್ವೆ ನಿಲ್ದಾಣಕ್ಕೂ ಭೇಟಿ ನೀಡಿದರು. ಈ ಕುರಿತು ಟ್ವೀಟ್‌ ಮಾಡಿರುವ ಅವರು, "ಮುಂದಿನ ನಿಲುಗಡೆ... ಬನಾರಸ್ ನಿಲ್ದಾಣ. ನಾವು ರೈಲು ಸಂಪರ್ಕವನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಸ್ವಚ್ಛ, ಆಧುನಿಕ ಮತ್ತು ಪ್ರಯಾಣಿಕರ ಸ್ನೇಹಿ ರೈಲ್ವೆ ನಿಲ್ದಾಣಗಳನ್ನು ಖಾತರಿಪಡಿಸಲು ಕೆಲಸ ಮಾಡುತ್ತಿದ್ದೇವೆ,” ಎಂದಿದ್ದಾರೆ.

ಸಾರ್ವಜನಿಕರಿಗೆ ಅನಾನುಕೂಲತೆಯನ್ನು ಸಾಧ್ಯವಾದಷದ್ಟೂ ಕನಿಷ್ಠವಾಗಿರಿಸುವ ದೃಷ್ಟಿಯಿಂದ ಕೆಲಸ ಮಾಡುವುದು ಪ್ರಧಾನ ಮಂತ್ರಿಯವರ ಅಭ್ಯಾಸವಾಗಿದೆ. ಅದರಂತೆಯೇ ಅವರು ತಡರಾತ್ರಿಯಲ್ಲಿ ಅಭಿವೃದ್ಧಿ ಯೋಜನೆಗಳ ಪರಿಶೀಲನೆ ನಡೆಸಿದರು. ಸ್ವತಃ ಸ್ಥಳೀಯ ಸಂಸದರೂ ಆಗಿರುವ ಪ್ರಧಾನ ಮಂತ್ರಿಯವರು ತಮ್ಮ ಬಗ್ಗೆ ಅಪಾರ ಪ್ರೀತಿ ತೋರಿದ ಸ್ಥಳೀಯ ಜನರೊಂದಿಗೆ ಬೆರೆತರು.

ಸಾರ್ವಜನಿಕರಿಗೆ ಅನಾನುಕೂಲತೆಯನ್ನು ಸಾಧ್ಯವಾದಷದ್ಟೂ ಕನಿಷ್ಠವಾಗಿರಿಸುವ ದೃಷ್ಟಿಯಿಂದ ಕೆಲಸ ಮಾಡುವುದು ಪ್ರಧಾನ ಮಂತ್ರಿಯವರ ಅಭ್ಯಾಸವಾಗಿದೆ. ಅದರಂತೆಯೇ ಅವರು ತಡರಾತ್ರಿಯಲ್ಲಿ ಅಭಿವೃದ್ಧಿ ಯೋಜನೆಗಳ ಪರಿಶೀಲನೆ ನಡೆಸಿದರು. ಸ್ವತಃ ಸ್ಥಳೀಯ ಸಂಸದರೂ ಆಗಿರುವ ಪ್ರಧಾನ ಮಂತ್ರಿಯವರು ತಮ್ಮ ಬಗ್ಗೆ ಅಪಾರ ಪ್ರೀತಿ ತೋರಿದ ಸ್ಥಳೀಯ ಜನರೊಂದಿಗೆ ಬೆರೆತರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Cabinet approves ₹1,570 crore ship repair facility at Vadinar, Gujarat

Media Coverage

Cabinet approves ₹1,570 crore ship repair facility at Vadinar, Gujarat
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 6 ಮೇ 2026
May 06, 2026

New India, New Pride: When Self-Reliance Meets Results — A Tribute to PM Modi