ಪ್ರಜಾಪ್ರಭುತ್ವ ಭಾರತಕ್ಕೆ ಕೇವಲ ಒಂದು ವ್ಯವಸ್ಥೆಯಲ್ಲ, ಭಾರತದಲ್ಲಿ ಪ್ರಜಾಪ್ರಭುತ್ವ ನಮ್ಮ ಸ್ವಭಾವ ಮತ್ತು ಜೀವನದ ಭಾಗವಾಗಿದೆ
ಎಲ್ಲಾ ರಾಜ್ಯಗಳ ಎಲ್ಲರ ಪ್ರಯತ್ನದ ಆಧಾರವಾಗಿದೆ ಭಾರತದ ಒಕ್ಕೂಟ ವ್ಯವಸ್ಥೆ
“ಎಲ್ಲರ ಪ್ರಯತ್ನಕ್ಕೆ” ಕೊರೋನಾ ಸಾಂಕ್ರಾಮಿಕ ವಿರುದ್ಧದ ಹೋರಾಟ ಅತ್ಯುತ್ತಮ ನಿದರ್ಶನವಾಗಿದೆ”
“ವರ್ಷದಲ್ಲಿ 3 ರಿಂದ 4 ದಿನಗಳನ್ನು ಸದನಕ್ಕಾಗಿ ಸಾರ್ವಜನಿಕ ಪ್ರತಿನಿಧಿಗಳು ಮೀಸಲಿಟ್ಟರೆ ಸಮಾಜಕ್ಕೆ ವಿಶೇಷವಾದದ್ದನ್ನು ಕೊಡಬಹುದು, ಸಾಮಾಜಿಕ ಜೀವನ ಕುರಿತು ದೇಶಕ್ಕೆ ಮಾಹಿತಿ ನೀಡಬಹುದು”
ಸದನದಲ್ಲಿ ಆರೋಗ್ಯಕರ ಚೆರ್ಚೆಗಳಿಗೆ ಆರೋಗ್ಯಕರ ದಿನ, ಆರೋಗ್ಯಕರ ಸಮಯ ನಿಗದಿ ಅಗತ್ಯ
ಸಂಸದೀಯ ವ್ಯವಸ್ಥೆಯಲ್ಲಿ ತಾಂತ್ರಿಕತೆಗೆ ಪುಷ್ಠಿ ನೀಡಲು ಹಾಗೂ ದೇಶದ ಎಲ್ಲಾ ಪ್ರಜಾಪ್ರಭುತ್ವ ಘಟಕಗಳನ್ನು ಸಂಪರ್ಕಿಸಲು “ಒಂದು ರಾಷ್ಟ್ರ, ಒಂದು ಶಾಸನ ರಚನಾ ವೇದಿಕೆ” ರೂಪಿಸುವ ಪ್ರಸ್ತಾವನೆ

ಅಖಿಲ ಭಾರತ 82ನೇ ಪೀಠಸೀನಾಧಿಕಾರಿಗಳ ಸಮ್ಮೇಳನವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಉದ್ಘಾಟನಾ ಭಾಷಣ ಮಾಡಿದರು. ಸಮಾರಂಭದಲ್ಲಿ ಲೋಕಸಭಾಧ್ಯಕ್ಷರು, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ, ರಾಜ್ಯಸಭೆ ಉಪ ಸಭಾಪತಿ ಅವರು ಉಪಸ್ಥಿತರಿದ್ದರು.  

ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಭಾರತಕ್ಕೆ ಕೇವಲ ಒಂದು ವ್ಯವಸ್ಥೆಯಲ್ಲ, ಭಾರತದಲ್ಲಿ ಪ್ರಜಾಪ್ರಭುತ್ವ ನಮ್ಮ ಸ್ವಭಾವ ಮತ್ತು ಜೀವನದ ಭಾಗವಾಗಿದೆ. ನಾವು ದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಬೇಕು, ಮುಂಬರುವ ವರ್ಷಗಳಲ್ಲಿ ಅಸಾಧಾರಣ ಗುರಿಗಳನ್ನು ತಲುಪಬೇಕು. ಈ ನಿರ್ಣಗಳನ್ನು ಸಾಕಾರಗೊಳಿಸಲು “ಎಲ್ಲರ ಪ್ರಯತ್ನ” ಅಗತ್ಯವಾಗಿದೆ ಎಂದರು. ಭಾರತದ ಒಕ್ಕೂಟ ವ್ಯವಸ್ಥೆ ಬಗ್ಗೆ ಮಾತನಾಡಿದರು. ಇದಕ್ಕೆ ಎಲ್ಲಾ ರಾಜ್ಯಗಳ ದೊಡ್ಡ ಪ್ರಯತ್ನ ಅಗತ್ಯವಾಗಿದೆ. “ಎಲ್ಲರ ಪ್ರಯತ್ನ” [ಸಬ್ಕಾ ಪ್ರಯಾಸ್]ದ ಮಹತ್ವ ಕುರಿತು ಪ್ರಧಾನಮಂತ್ರಿ ಅವರು ಬೆಳಕು ಚೆಲ್ಲಿದರು. ಈಶಾನ್ಯ ರಾಜ್ಯಗಳಲ್ಲಿ ದಶಕಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುತ್ತಿದೆ ಅಥವಾ ದಶಕಗಳಿಂದ ಬಾಕಿ ಉಳಿದಿದ್ದ ದೊಡ್ಡ ಅಭಿವೃದ್ಧಿ ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ. ಇಂತಹ ಹಲವು ಕಾರ್ಯಕ್ರಮಗಳನ್ನು ಕೆಲ ವರ್ಷಗಳಿಂದ ಅನುಷ್ಠಾನಗೊಳಿಸಲಾಗಿದೆ. ಇದನ್ನು ಎಲ್ಲರ ಪ್ರಯತ್ನದಿಂದ ಸಾಧಿಸಲಾಗಿದೆ. ಕೊರೋನಾ ವಿರುದ್ಧದ ಹೋರಾಟ “ಎಲ್ಲರ ಪ್ರಯತ್ನಕ್ಕೆ” ಅತ್ಯುತ್ತಮ ಉದಾಹಣೆಯಾಗಿದೆ ಎಂದರು.

ನಮ್ಮ ಶಾಸಕಾಂಗದಲ್ಲಿನ ಸದನಗಳ ಸಂಪ್ರದಾಯಗಳು ಮತ್ತು ವ್ಯವಸ್ಥೆಗಳು ಅಂತರ್ಗತವಾಗಿ ಭಾರತೀಯವಾಗಿರಬೇಕು ಎಂದು ಪ್ರಧಾನಮಂತ್ರಿ ಅವರು ಒತ್ತಾಯಿಸಿದರು. ನಮ್ಮ ಸರ್ಕಾರದ ನೀತಿ ಮತ್ತು ಕಾನೂನುಗಳು “ಏಕ್ ಭಾರತ್ ಶ‍್ರೇಷ್ಠ ಭಾರತ್ “ ಭಾವನೆಗಳನ್ನು ಬಲಗೊಳಿಸುತ್ತದೆ. “ಎಲ್ಲಕ್ಕಿಂತ ಮುಖ್ಯವಾಗಿ ಸದನದಲ್ಲಿ ನಮ್ಮ ಸ್ವಂತ ನಡಾವಳಿಕೆ ಭಾರತೀಯ ಮೌಲ್ಯಗಳಿಗೆ ಅನುಗುಣವಾಗಿ ಇರಬೇಕು. ಇದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.  

ನಮ್ಮದು ಸಂಪೂರ್ಣವಾಗಿ ವೈವಿದ್ಯಮಯ ದೇಶ. “ಸಹಸ್ರಾರು ವರ್ಷಗಳ ಅಭಿವೃದ್ಧಿಯಲ್ಲಿ ನಾವು ವೈವಿದ್ಯತೆಯ ಮನಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದೇವೆ. ಭವ್ಯವಾದ ಏಕತೆ, ಮುರಿಯದ ಮತ್ತು ದೈವಿಕ ವ್ಯವಸ್ಥೆಯನ್ನು ಇದು ಪ್ರತಿನಿಧಿಸುತ್ತದೆ. ಈ ಅಖಂಡ ಏಕತೆಯ ಹರಿವು ನಮ್ಮ ವೈವಿದ್ಯತೆಯನ್ನು ಗೌರವಿಸುತ್ತದೆ ಮತ್ತು ಇದನ್ನು ಸಂರಕ್ಷಿಸುತ್ತದೆ ಎಂದು ಅವರು ಹೇಳಿದರು.   

“ವರ್ಷದಲ್ಲಿ 3 ರಿಂದ 4 ದಿನಗಳನ್ನು ಸದನಕ್ಕಾಗಿ ಸಾರ್ವಜನಿಕ ಪ್ರತಿನಿಧಿಗಳು ಮೀಸಲಿಟ್ಟರೆ ಸಮಾಜಕ್ಕೆ ವಿಶೇಷವಾದದ್ದನ್ನು ಕೊಡಬಹುದು, ಸಾಮಾಜಿಕ ಜೀವನ ಕುರಿತು ದೇಶಕ್ಕೆ ಮಾಹಿತಿ ನೀಡಬಹುದು” ಇದರಿಂದ ಇತರೆ ಸಾರ್ವಜನಿಕ ಪ್ರತಿನಿಧಿಗಳು, ಸಮಾಜದ ಇತರೆ ಜನ ಇದರಿಂದ ಹೆಚ್ಚು ಕಲಿಯಬಹುದು ಎಂದು ಪ್ರಧಾನಮಂತ್ರಿ ಅವರು ಹೇಳಿದರು.

ಗುಣಮಟ್ಟದ ಚರ್ಚೆಗಳಿಗೆ ಪ್ರತ್ಯೇಕ ಸಮಯ ನಿಗದಿ ಮಾಡಬಹುದೇ ಎಂದು ಪ್ರಸ್ತಾಪಿಸಿದ ಪ್ರಧಾನಮಂತ್ರಿ ಅವರು, ಇಂತಹ ಚರ್ಚೆಗಳಲ್ಲಿ ಘನತೆ ಮತ್ತು ಗಾಂಭೀರ್ಯತೆಯ ಸಂಪ್ರದಾಯಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕಾಗುತ್ತದೆ ಎಂದು ಅವರು ಹೇಳಿದರು. ಯಾರು ಯಾರ ಮೇಲೂ ರಾಜಕೀಯ ನಿಂದನೆ ಮಾಡುವುದು ಸರಿಯಲ್ಲ.  ಸದನದಲ್ಲಿ ಆರೋಗ್ಯಕರ ಸಮಯ ಮತ್ತು ಆರೋಗ್ಯಕರ ದಿನವಾಗಿ ಇಂತಹ ಚರ್ಚೆಗಳು ರೂಪುಗೊಳ್ಳಬೇಕು ಎಂದರು.

“ಒಂದು ರಾಷ್ಟ್ರ, ಒಂದು ಶಾಸಕಾಂಗ ವೇದಿಕೆ” ಕುರಿತ ಕಲ್ಪನೆ ನೀಡಿದ ಪ್ರಧಾನಮಂತ್ರಿ ಅವರು, “ಇಂತಹ ಪೋರ್ಟಲ್ ಸಂಸದೀಯ ವ್ಯವಸ್ಥೆಗೆ ತಾಂತ್ರಿಕ ಪುಷ್ಠಿಯನ್ನಷ್ಟೇ ನೀಡುವುದಿಲ್ಲ. ಜತೆಗೆ ದೇಶದ ಎಲ್ಲಾ ಪ್ರಜಾತಂತ್ರ ವ್ಯವಸ್ಥೆಯ ಘಟಕಗಳನ್ನು ಸಂಪರ್ಕಿಸುವ ಕೆಲಸ ಮಾಡುತ್ತದೆ” ಎಂದು ಹೇಳಿದರು.

ಮುಂದಿನ 25 ವರ್ಷ ಭಾರತಕ್ಕೆ ಅತ್ಯಂತ ಮುಖ್ಯವಾಗಿದೆ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿ ಅವರು, ಇದಕ್ಕಾಗಿ ಸಂಸದೀಯ ಪಟುಗಳು ಕರ್ತವ್ಯ, ಕರ್ತವ್ಯ, ಕರ್ತವ್ಯ ಎಂಬ ಒಂದೇ ಮಂತ್ರವನ್ನು ಅರಿತುಕೊಳ್ಳಬೇಕು ಎಂದು ಒತ್ತಾಯಿಸಿದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Three Chemical parks to be set up under BHAVYA-Rasayan scheme

Media Coverage

Three Chemical parks to be set up under BHAVYA-Rasayan scheme
NM on the go

Nm on the go

Always be the first to hear from the PM. Get the App Now!
...
Prime Minister greets everyone on the occasion of Ashadhi Ekadashi
July 25, 2026

Prime Minister Shri Narendra Modi today conveyed his greetings on the sacred occasion of Ashadhi Ekadashi. He noted that this auspicious day is about the eternal message of devotion and compassion.

Shri Modi prayed that Bhagwan Vitthal’s blessings bring joy, harmony and prosperity, and guide everyone towards a better society. The Prime Minister also wished that He may strengthen our resolve to serve and work tirelessly for the welfare and dignity of every person.

In a series of posts on X, the Prime Minister shared: 

"Greetings on the sacred occasion of Ashadhi Ekadashi. This auspicious day is about the eternal message of devotion and compassion. May Bhagwan Vitthal’s blessings bring joy, harmony and prosperity and guide us towards a better society. May He strengthen our resolve to serve and work tirelessly for the welfare and dignity of every person."

"आषाढी एकादशीच्या पवित्र पर्वानिमित्त हार्दिक शुभेच्छा. हा मंगलमय दिवस भक्ती, करुणा आणि सामाजिक सलोख्याचा चिरंतन संदेश देणारा आहे. भगवान विठ्ठलाचे आशीर्वाद आपल्या सर्वांच्या आयुष्यात आनंद, सलोखा आणि समृद्धी घेऊन येवो, हीच कामना. समाजातील प्रत्येक व्यक्तीच्या कल्याणासाठी आणि सन्मानासाठी अविरत कार्य करण्याचा आपला संकल्प अधिक दृढ होवो, हीच विठ्ठल चरणी प्रार्थना."