ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ನವೆಂಬರ್ 15ರಂದು ಇಂಡೋನೇಷ್ಯಾದ ಬಾಲಿಯಲ್ಲಿ 800ಕ್ಕೂ ಹೆಚ್ಚು ಭಾರತೀಯ ವಲಸಿಗರು ಮತ್ತು `ಫ್ರೆಂಡ್ಸ್ ಆಫ್ ಇಂಡಿಯಾ’ ಸದಸ್ಯರನ್ನುದ್ದೇಶಿಸಿ ಮಾತನಾಡಿದರು. ಜೊತೆಗೆ ಅವರೊಂದಿಗೆ ಸಂವಾದ ನಡೆಸಿದರು. ಇಂಡೋನೇಷ್ಯಾದ ಮೂಲೆಮೂಲೆಗಳಿಂದ ಭಾರಿ ಸಂಖ್ಯೆಯ ಮತ್ತು ವೈವಿಧ್ಯಮಯ ಜನಸಮೂಹವು ಕಾರ್ಯಕ್ರಮದಲ್ಲಿ ಭಾಗಿಯಾಯಿತು. 
 
ಪ್ರಧಾನಮಂತ್ರಿಯವರು ತಮ್ಮ ಭಾಷಣದಲ್ಲಿ ಭಾರತ ಮತ್ತು ಇಂಡೋನೇಷ್ಯಾ ನಡುವಿನ ನಿಕಟ ಸಾಂಸ್ಕೃತಿಕ ಮತ್ತು ನಾಗರೀಕ ಸಂಬಂಧಗಳ ಬಗ್ಗೆ ಬೆಳಕು ಚೆಲ್ಲಿದರು. ಉಭಯ ದೇಶಗಳ ನಡುವಿನ ನಿರಂತರ ಸಾಂಸ್ಕೃತಿಕ ಮತ್ತು ವಾಣಿಜ್ಯ ಸಂಪರ್ಕವನ್ನು ಒತ್ತಿ ಹೇಳಲು "ಬಾಲಿ ಜಾತ್ರಾ" ಎಂಬ ಹಳೆಯ ಸಂಪ್ರದಾಯವನ್ನು ಅವರು ಉಲ್ಲೇಖಿಸಿದರು. ವಿವಿಧ ಕ್ಷೇತ್ರಗಳಲ್ಲಿ ಭಾರತ ಮತ್ತು ಇಂಡೋನೇಷ್ಯಾ ನಡುವಿನ ಸಾಮ್ಯತೆಗಳನ್ನು ಅವರು ವಿಶೇಷವಾಗಿ ಪ್ರಸ್ತಾಪಿಸಿದರು. 
 
ಕಠಿಣ ಪರಿಶ್ರಮ ಮತ್ತು ತಮ್ಮ ದತ್ತು ತಾಯ್ನಾಡಿಗಾಗಿ ಸಮರ್ಪಣೆಯ ಮೂಲಕ ವಿದೇಶಗಳಲ್ಲಿ ಭಾರತದ ಘನತೆಯನ್ನು ಹೆಚ್ಚಿಸಿದ್ದಕ್ಕಾಗಿ ಸಮುದಾಯದ ಸದಸ್ಯರನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದರು. ಭಾರತ-ಇಂಡೋನೇಷ್ಯಾ ಬಾಂಧವ್ಯದ ಧನಾತ್ಮಕ ಹಾದಿ ಮತ್ತು ಅದರ ಬಲವರ್ಧನೆಯಲ್ಲಿ ಭಾರತೀಯ ಸಮುದಾಯದ ಸದಸ್ಯರು ವಹಿಸಿದ ನಿರ್ಣಾಯಕ ಪಾತ್ರದ ಬಗ್ಗೆಯೂ ಅವರು ಮಾತನಾಡಿದರು. 
 
ಡಿಜಿಟಲ್ ತಂತ್ರಜ್ಞಾನ, ಹಣಕಾಸು, ಆರೋಗ್ಯ, ದೂರಸಂಪರ್ಕ ಮತ್ತು ಬಾಹ್ಯಾಕಾಶದಂತಹ ವಿವಿಧ ಕ್ಷೇತ್ರಗಳಲ್ಲಿ ಭಾರತದ ಬೆಳವಣಿಗೆಯ ಯಶೋಗಾಥೆ, ದೇಶದ ಸಾಧನೆಗಳು ಮತ್ತು ಪ್ರಚಂಡ ದಾಪುಗಾಲುಗಳನ್ನು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಅಭಿವೃದ್ಧಿಗಾಗಿ ಭಾರತದ ಮಾರ್ಗಸೂಚಿಯು ವಿಶ್ವದ ರಾಜಕೀಯ ಮತ್ತು ಆರ್ಥಿಕ ಆಕಾಂಕ್ಷೆಗಳನ್ನು ಒಳಗೊಂಡಿದೆ. ಸ್ವಾವಲಂಬಿ ಭಾರತದ ದೃಷ್ಟಿಕೋನವು ಜಾಗತಿಕ ಒಳಿತಿನ ಮನೋಭಾವವನ್ನು ಸಾಕಾರಗೊಳಿಸುತ್ತದೆ ಎಂದು ಅವರು ಹೇಳಿದರು. 

2023ರ ಜನವರಿ 8ರಿಂದ 10ರವರೆಗೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯಲಿರುವ ಮುಂದಿನ ʻಪ್ರವಾಸಿ ಭಾರತೀಯ ದಿವಸ್ ಸಮಾವೇಶʼ ಮತ್ತು ನಂತರ ಗುಜರಾತ್‌ನಲ್ಲಿ ನಡೆಯಲಿರುವ ಗಾಳಿಪಟ ಉತ್ಸವದಲ್ಲಿ ಭಾಗವಹಿಸುವಂತೆ ಪ್ರಧಾನಮಂತ್ರಿಯವರು ಸಮುದಾಯದ ಸದಸ್ಯರು ಮತ್ತು ʻಫ್ರೆಂಡ್ಸ್‌ ಆಫ್‌ ಇಂಡಿಯಾʼ ಸದಸ್ಯರನ್ನು ಆಹ್ವಾನಿಸಿದರು. 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India Exports 4 Lakh Tonne Of Corn In Q4FY25: USDA

Media Coverage

India Exports 4 Lakh Tonne Of Corn In Q4FY25: USDA
NM on the go

Nm on the go

Always be the first to hear from the PM. Get the App Now!
...
Prime Minister shares a Sanskrit Subhashitam, highlights the divine and benevolent grace of Goddess Kushmanda
March 22, 2026

Prime Minister Shri Narendra Modi shared a Sanskrit subhashitam today, highlighting the divine and benevolent grace of Goddess Kushmanda .

The Prime Minister wrote on X:

"अदम्य साहस और आध्यात्मिक शक्ति की प्रतीक मां कूष्मांडा का चरण-वंदन! उनकी दिव्य ऊर्जा से हर हृदय में नवचेतना जागृत हो।

सुरासम्पूर्णकलशं रुधिराप्लुतमेव च।
दधाना हस्तपद्माभ्यां कूष्माण्डा शुभदाऽस्तु मे॥"