"ಸ್ಥಳೀಯ ಕಲ್ಯಾಣಕ್ಕಾಗಿ ಜಾಗತಿಕ ಸಹಕಾರ ನಮ್ಮ ಕರೆ"
"ಕಾನೂನು ಜಾರಿ ನಮ್ಮ ಬಳಿ ಇಲ್ಲದಿರುವುದನ್ನು ಪಡೆಯಲು, ನಮ್ಮ ಬಳಿ ಇರುವುದನ್ನು ರಕ್ಷಿಸಲು, ನಾವು ರಕ್ಷಿಸಿದ್ದನ್ನು ಹೆಚ್ಚಿಸಲು ಮತ್ತು ಅದನ್ನು ಅತ್ಯಂತ ಅರ್ಹರಿಗೆ ವಿತರಿಸಲು ನೆರವಾಗುತ್ತದೆ"
"ನಮ್ಮ ಪೊಲೀಸ್ ಪಡೆಗಳು ಜನರನ್ನು ರಕ್ಷಿಸುವುದಷ್ಟೇ ಅಲ್ಲದೆ ನಮ್ಮ ಪ್ರಜಾಪ್ರಭುತ್ವಕ್ಕೂ ಸೇವೆ ಸಲ್ಲಿಸುತ್ತವೆ"
"ಬೆದರಿಕೆಗಳು ಜಾಗತಿಕವಾಗಿದ್ದಾಗ, ಸ್ಪಂದನೆ ಕೇವಲ ಸ್ಥಳೀಯವಾಗಿರಲು ಸಾಧ್ಯವಿಲ್ಲ! ಈ ಬೆದರಿಕೆಗಳನ್ನು ಮಣಿಸಲು ಜಗತ್ತು ಒಗ್ಗೂಡಲು ಇದು ಸಕಾಲ"
"ಸುರಕ್ಷಿತ ಸ್ವರ್ಗದಂತಹ ತಾಣಗಳನ್ನು ನಿರ್ಮೂಲನೆ ಮಾಡಲು ಜಾಗತಿಕ ಸಮುದಾಯ ಇನ್ನೂ ವೇಗವಾಗಿ ಕೆಲಸ ಮಾಡುವ ಅಗತ್ಯವಿದೆ"
"ಸಂವಹನ, ಸಹಯೋಗ ಮತ್ತು ಸಹಕಾರವು ಅಪರಾಧ, ಭ್ರಷ್ಟಾಚಾರ ಮತ್ತು ಭಯೋತ್ಪಾದನೆಯನ್ನು ಮಣಿಸಬೇಕು"

ನವದೆಹಲಿಯಲ್ಲಿ ನಡೆದ 90ನೇ ಇಂಟರ್ ಪೋಲ್ ಮಹಾಧಿವೇಶನ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲ ಗಣ್ಯರಿಗೆ ಆತ್ಮೀಯ ಸ್ವಾಗತ ಕೋರಿದರು.

ಭಾರತವು ತನ್ನ ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸುತ್ತಿದೆ, ಇದು ಜನರು ಮತ್ತು ಸಂಸ್ಕೃತಿಗಳ ಆಚರಣೆಯಾಗಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಇಂಟರ್ ಪೋಲ್ ಬರುವ 2023ರಲ್ಲಿ ತನ್ನ ಶತಮಾನೋತ್ಸವ ಆಚರಿಸಲಿದೆ ಎಂದು ಪ್ರಧಾನಮಂತ್ರಿ ಮಾಹಿತಿ ನೀಡಿದರು. ಇದು ಆತ್ಮಾವಲೋಕನದ ಸಮಯವಾಗಿದ್ದು, ಭವಿಷ್ಯವನ್ನು ನಿರ್ಧರಿಸುವ ಸಮಯವೂ ಆಗಿದೆ ಎಂದು ಅವರು ಹೇಳಿದರು. ಸೋಲಿನಿಂದ ಕಲಿಯಲು ಮತ್ತು ಭವಿಷ್ಯದ ಬಗ್ಗೆ ಭರವಸೆಯಿಂದ ನೋಡಲು ಸಂತೋಷಪಡಲು ಮತ್ತು ಪ್ರತಿಬಿಂಬಿಸಲು ಇದು ಉತ್ತಮ ಸಮಯ ಎಂದು ಶ್ರೀ ಮೋದಿ ಹೇಳಿದರು.

ಭಾರತೀಯ ಸಂಸ್ಕೃತಿಯೊಂದಿಗೆ ಇಂಟರ್ ಪೋಲ್ ಸಿದ್ಧಾಂತದ ಸಂಬಂಧವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಇಂಟರ್ ಪೋಲ್ ನ ಧ್ಯೇಯವಾಕ್ಯವಾದ 'ಸುರಕ್ಷಿತ ಜಗತ್ತಿನೊಂದಿಗೆ ಪೊಲೀಸರನ್ನು ಸಂಪರ್ಕಿಸುವುದು' ಮತ್ತು ವೇದಗಳಲ್ಲಿರುವ "ಆನೋ ಭದ್ರಾ ಕೃತವೋ ಯಂತು ವಿಶ್ವತಾಃ" ಅಂದರೆ ಉದಾತ್ತ ಚಿಂತನೆಗಳು ಎಲ್ಲ ದಿಕ್ಕುಗಳಿಂದ ಬರಲಿ ಎಂಬುದರ ಸಾಮ್ಯತೆಯನ್ನು ಉಲ್ಲೇಖಿಸಿ, ಇದು ಜಗತ್ತನ್ನು ಉತ್ತಮ ತಾಣವನ್ನಾಗಿ ಮಾಡಲು ಸಾರ್ವತ್ರಿಕ ಸಹಕಾರದ ಕರೆಯಾಗಿದೆ ಎಂದು ಅವರು ವಿವರಿಸಿದರು. ಭಾರತದ ವಿಶಿಷ್ಟ ಜಾಗತಿಕ ದೃಷ್ಟಿಕೋನದ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಮಂತ್ರಿಯವರು, ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗಳಿಗೆ ಧೈರ್ಯಶಾಲಿ ಪುರುಷರು ಮತ್ತು ಮಹಿಳೆಯರನ್ನು ಕಳುಹಿಸುವಲ್ಲಿ ಭಾರತವು ಪ್ರಮುಖ ಕೊಡುಗೆದಾರ ರಾಷ್ಟ್ರಗಳಲ್ಲಿ ಒಂದಾಗಿದೆ ಎಂದು ಪ್ರತಿಪಾದಿಸಿದರು. "ಭಾರತ ಸ್ವಾತಂತ್ರ್ಯವನ್ನು ಪಡೆಯುವ ಮೊದಲೇ ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡಲು ನಾವು ತ್ಯಾಗ ಮಾಡಿದ್ದೇವೆ" ಎಂದು ಶ್ರೀ ಮೋದಿ ಹೇಳಿದರು. ಸಾವಿರಾರು ಭಾರತೀಯರು ವಿಶ್ವಯುದ್ಧಗಳಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಎಂದು ಅವರು ಹೇಳಿದರು. ಕೋವಿಡ್ ಲಸಿಕೆಗಳು ಮತ್ತು ಹವಾಮಾನ ಗುರಿಗಳ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ಭಾರತವು ಯಾವುದೇ ರೀತಿಯ ಬಿಕ್ಕಟ್ಟಿನ ಸಂದರ್ಭದಲ್ಲಿ ಮುಂದಾಳತ್ವ ವಹಿಸಲು ಇಚ್ಛಾಶಕ್ತಿಯನ್ನು ತೋರಿಸಿದೆ ಎಂದು ತಿಳಿಸಿದರು. "ರಾಷ್ಟ್ರಗಳು ಮತ್ತು ಸಮಾಜಗಳು ಆಂತರಿಕವಾಗಿ ನೋಡುತ್ತಿದ್ದ ಸಮಯದಲ್ಲಿ, ಭಾರತವು ಹೆಚ್ಚಿನ ಅಂತಾರಾಷ್ಟ್ರೀಯ ಸಹಕಾರಕ್ಕೆ ಕರೆ ನೀಡಿತು. ಸ್ಥಳೀಯ ಕಲ್ಯಾಣಕ್ಕಾಗಿ ಜಾಗತಿಕ ಸಹಕಾರವು ನಮ್ಮ ಕರೆಯಾಗಿದೆ", ಎಂದು ಶ್ರೀ ಮೋದಿ ಹೇಳಿದರು.

ಪ್ರಪಂಚದಾದ್ಯಂತದ ಪೊಲೀಸ್ ಪಡೆಗಳು ಕೇವಲ ಜನರನ್ನು ಮಾತ್ರ ರಕ್ಷಿಸುತ್ತಿಲ್ಲ, ಜೊತೆಗೆ ಸಾಮಾಜ ಕಲ್ಯಾಣವನ್ನು ಹೆಚ್ಚಿಸುತ್ತಿವೆ ಎಂದು ಪ್ರಧಾನಮಂತ್ರಿ ಹೇಳಿದರು. "ಅವರು ಯಾವುದೇ ಬಿಕ್ಕಟ್ಟಿಗೆ ಸಮಾಜದ ಪ್ರತಿಕ್ರಿಯೆಯಲ್ಲಿ ಮುಂಚೂಣಿಯಲ್ಲಿರುತ್ತಾರೆ" ಎಂದು ಶ್ರೀ ಮೋದಿ ಹೇಳಿದರು. ಕೋವಿಡ್ ಬಿಕ್ಕಟ್ಟಿನ ಉದಾಹರಣೆಯನ್ನು ನೀಡಿದ ಪ್ರಧಾನಮಂತ್ರಿಯವರು, ಜನರಿಗೆ ಸಹಾಯ ಮಾಡಲು ಪೊಲೀಸ್ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟಿದ್ದರು ಎಂದು ಗಮನಸೆಳೆದರು. "ಅವರಲ್ಲಿ ಅನೇಕರು ಜನರ ಸೇವೆ ಮಾಡುತ್ತಲೇ ಬಲಿದಾನ ಸಹ ಮಾಡಿದರು" ಎಂದು ಅವರು ಹೇಳಿದರು.

ಭಾರತದ ಭೌಗೋಳಿಕ ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಭಾರತದ ಗಾತ್ರ ಮತ್ತು ವಿಶಾಲತೆಯ ಬಗ್ಗೆ ಮಾತನಾಡಿದರು. "ಭಾರತೀಯ ಪೊಲೀಸ್" "ಒಕ್ಕೂಟ ಮತ್ತು ರಾಜ್ಯ ಮಟ್ಟದಲ್ಲಿ, 900 ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಸುಮಾರು ಹತ್ತು ಸಾವಿರ ರಾಜ್ಯ ಕಾನೂನುಗಳನ್ನು ಜಾರಿಗೆ ತರಲು ಸಹಕರಿಸಿದೆ" ಎಂದು ಅವರು ಹೇಳಿದರು,  "ನಮ್ಮ ಪೊಲೀಸ್ ಪಡೆಗಳು ಸಂವಿಧಾನವು ಭರವಸೆ ನೀಡಿದ ಜನರ ವೈವಿಧ್ಯತೆ ಮತ್ತು ಹಕ್ಕುಗಳನ್ನು ಗೌರವಿಸುತ್ತಾ ಕೆಲಸ ಮಾಡುತ್ತವೆ. ಅವರು ಜನರನ್ನು ರಕ್ಷಿಸುವುದು ಮಾತ್ರವಲ್ಲದೆ ನಮ್ಮ ಪ್ರಜಾಪ್ರಭುತ್ವಕ್ಕೂ ಸೇವೆ ಸಲ್ಲಿಸುತ್ತಾರೆ" ಎಂದು ಅವರು ಹೇಳಿದರು. ಇಂಟರ್ ಪೋಲ್ ನ ಸಾಧನೆಗಳ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ಇಂಟರ್ ಪೋಲ್ ಕಳೆದ 99 ವರ್ಷಗಳಿಂದ ಜಾಗತಿಕವಾಗಿ 195 ದೇಶಗಳಲ್ಲಿನ ಪೊಲೀಸ್ ಸಂಸ್ಥೆಗಳನ್ನು ಸಂಪರ್ಕಿಸಿದೆ ಮತ್ತು ಈ ಮಹೋನ್ನತ ಸಂದರ್ಭದ ನೆನಪಿಗಾಗಿ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಭಾರತ ಸರ್ಕಾರ ಬಿಡುಗಡೆ ಮಾಡುತ್ತಿದೆ ಎಂದು ಹೇಳಿದರು.

ಜಗತ್ತು ಎದುರಿಸುತ್ತಿರುವ ಭಯೋತ್ಪಾದನೆ, ಭ್ರಷ್ಟಾಚಾರ, ಮಾದಕ ದ್ರವ್ಯ ಕಳ್ಳಸಾಗಣೆ, ಕಳ್ಳಬೇಟೆ ಮತ್ತು ಸಂಘಟಿತ ಅಪರಾಧದಂತಹ ಅನೇಕ ಹೊರಹೊಮ್ಮುತ್ತಿರುವ ಹಾನಿಕಾರಕ ಜಾಗತೀಕರಣದ ಬೆದರಿಕೆಗಳ ಬಗ್ಗೆ ಪ್ರಧಾನಮಂತ್ರಿಯವರು ನೆನಪಿಸಿದರು. "ಈ ಅಪಾಯಗಳ ಬದಲಾವಣೆಯ ವೇಗವು ಮೊದಲಿಗಿಂತ ವೇಗವಾಗಿದೆ. ಬೆದರಿಕೆಗಳು ಜಾಗತಿಕವಾಗಿದ್ದಾಗ, ಸ್ಪಂದನೆಯು ಕೇವಲ ಸ್ಥಳೀಯವಾಗಿರಲು ಸಾಧ್ಯವಿಲ್ಲ! ಈ ಬೆದರಿಕೆಗಳನ್ನು ಮಣಿಸಲು ಜಗತ್ತು ಒಗ್ಗೂಡಲು ಇದು ಸಕಾಲ" ಎಂದು ಅವರು ಹೇಳಿದರು.

ಬಹುರಾಷ್ಟ್ರೀಯ ಭಯೋತ್ಪಾದನೆಯ ದುಷ್ಪರಿಣಾಮಗಳ ಮೇಲೆ ಬೆಳಕು ಚೆಲ್ಲಿದ ಪ್ರಧಾನಮಂತ್ರಿಯವರು, ಜಗತ್ತು ಅದನ್ನು ಗುರುತಿಸುವ ಮೊದಲೇ ಭಾರತವು ಹಲವಾರು ದಶಕಗಳಿಂದ ಅದರ ವಿರುದ್ಧ ಹೋರಾಡುತ್ತಿದೆ ಎಂದು ಹೇಳಿದರು. "ಸುರಕ್ಷತೆ ಮತ್ತು ಭದ್ರತೆಯ ಬೆಲೆ ನಮಗೆ ತಿಳಿದಿತ್ತು. ನಮ್ಮ ಸಾವಿರಾರು ಜನರು ಈ ಹೋರಾಟದಲ್ಲಿ ಪ್ರಾಣ ತ್ಯಾಗವನ್ನು ಮಾಡಿದರು", ಎಂದು ಶ್ರೀ ಮೋದಿ ಹೇಳಿದರು. ಭಯೋತ್ಪಾದನೆ ವಿರುದ್ಧ ಕೇವಲ ಭೌತಿಕ ನೆಲೆಗಟ್ಟಿನಲ್ಲಿ ಮಾತ್ರ ಹೋರಾಟ ಮಾಡಿದರೆ ಸಾಲದು, ಜೊತೆಗೆ ಆನ್ ಲೈನ್ ಮೂಲಭೂತವಾದ ಮತ್ತು ಸೈಬರ್ ಮೂಲಕ ಬೆದರಿಕೆಗಳು ವೇಗವಾಗಿ ಹಬ್ಬುತ್ತಿವೆ ಎಂದು ಪ್ರಧಾನಮಂತ್ರಿ ವಿವರಿಸಿದರು. ಕೇವಲ ಒಂದು ಗುಂಡಿಯನ್ನು ಒತ್ತುವ ಮೂಲಕ ದಾಳಿಯನ್ನು ಮಾಡಬಹುದು ಅಥವಾ ಕಾಲಬುಡಕ್ಕೆ ತರಬಹುದು ಎಂದು ಪ್ರಧಾನಮಂತ್ರಿ ವಿವರಿಸಿದರು. ಅಂತಾರಾಷ್ಟ್ರೀಯ ಕಾರ್ಯತಂತ್ರಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಅಗತ್ಯವನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿಯವರು, "ಪ್ರತಿಯೊಂದು ರಾಷ್ಟ್ರವೂ ಅವುಗಳ ವಿರುದ್ಧ ವ್ಯೂಹಾತ್ಮಕವಾಗಿ ಕೆಲಸ ಮಾಡುತ್ತಿದೆ. ಆದರೆ ನಮ್ಮ ಗಡಿಯೊಳಗೆ ನಾವು ಏನು ಮಾಡುತ್ತೇವೆಯೋ ಅದು ಇನ್ನು ಮುಂದೆ ಸಾಕಾಗುವುದಿಲ್ಲ." ಮುಂಚಿತವಾಗಿ ಪತ್ತೆಹಚ್ಚಿ, ಎಚ್ಚರಿಕೆ ನೀಡುವ ವ್ಯವಸ್ಥೆಗಳನ್ನು ಸ್ಥಾಪಿಸುವುದು, ಸಾರಿಗೆ ಸೇವೆಗಳನ್ನು ರಕ್ಷಿಸುವುದು, ಸಂವಹನ ಮೂಲಸೌಕರ್ಯಕ್ಕೆ ಭದ್ರತೆ, ನಿರ್ಣಾಯಕ ಮೂಲಸೌಕರ್ಯಕ್ಕೆ ಭದ್ರತೆ, ತಾಂತ್ರಿಕ ಮತ್ತು ತಂತ್ರಜ್ಞಾನದ ನೆರವು, ಗುಪ್ತಚರ ಮಾಹಿತಿ ವಿನಿಮಯ ಮತ್ತು ಇತರ ಹಲವಾರು ವಿಷಯಗಳನ್ನು ಹೊಸ ಹಂತಕ್ಕೆ ಕೊಂಡೊಯ್ಯಬೇಕು ಎಂದು ಅವರು ಸಲಹೆ ನೀಡಿದರು.

ಪ್ರಧಾನಮಂತ್ರಿಯವರು ಭ್ರಷ್ಟಾಚಾರದ ಅಪಾಯಗಳ ಬಗ್ಗೆ ವಿವರಿಸಿದರು. ಭ್ರಷ್ಟಾಚಾರ ಮತ್ತು ಆರ್ಥಿಕ ಅಪರಾಧಗಳು ಅನೇಕ ದೇಶಗಳ ನಾಗರಿಕರ ಕಲ್ಯಾಣಕ್ಕೆ ಹಾನಿಯುಂಟು ಮಾಡಿವೆ ಎಂದು ಅವರು ಹೇಳಿದರು. "ಭ್ರಷ್ಟರು" ಎಂದು ಹೇಳಿ ಮಾತು ಮುಂದುವರಿಸಿದ ಅವರು, "ಅಪರಾಧದಿಂದ ಬರುವ ಆದಾಯವನ್ನು ಪ್ರಪಂಚದ ವಿವಿಧ ಭಾಗಗಳಲ್ಲಿ ನಿಲ್ಲಿಸಲು ಒಂದು ಮಾರ್ಗವನ್ನು ಕಂಡುಕೊಳ್ಳಬೇಕು. ಈ ಹಣವು ದೇಶದ ನಾಗರಿಕರಿಗೆ ಸೇರಿದ್ದು, ಅವರಿಂದಲೇ ಅದನ್ನು ತೆಗೆದುಕೊಳ್ಳಲಾಗಿದೆ" ಎಂದು ಹೇಳಿದರು. ಆಗಾಗ್ಗೆ, ಇದನ್ನು ವಿಶ್ವದ ಕೆಲವು ಬಡ ಜನರಿಂದ ತೆಗೆದುಕೊಳ್ಳಲಾಗಿದೆ. ಇದಲ್ಲದೆ, ಹಣವನ್ನು ಅನೇಕ ಹಾನಿಗಳಿಗೆ ಬಳಕೆ ಮಾಡಲಾಗುತ್ತದೆ ಎಂದರು.

ಸುರಕ್ಷಿತ ಸ್ವರ್ಗದಂತಹ ತಾಣಗಳನ್ನು ನಿರ್ಮೂಲನೆ ಮಾಡಲು ಜಾಗತಿಕ ಸಮುದಾಯವು ಇನ್ನೂ ವೇಗವಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಪ್ರಧಾನಮಂತ್ರಿ ಪ್ರತಿಪಾದಿಸಿದರು. "ಭ್ರಷ್ಟರು, ಭಯೋತ್ಪಾದಕರು, ಮಾದಕ ದ್ರವ್ಯ ಮಾರಾಟಗಾರರು, ಕಳ್ಳಬೇಟೆ ತಂಡಗಳು ಅಥವಾ ಸಂಘಟಿತ ಅಪರಾಧಗಳಿಗೆ ಯಾವುದೇ ಸುರಕ್ಷಿತ ತಾಣಗಳು ಇರಲು ಸಾಧ್ಯವಿಲ್ಲ. ಒಂದೇ ಸ್ಥಳದಲ್ಲಿ ಜನರ ವಿರುದ್ಧದ ಇಂತಹ ಅಪರಾಧಗಳು ಪ್ರತಿಯೊಬ್ಬರ ವಿರುದ್ಧದ ಅಪರಾಧಗಳಾಗಿವೆ, ಮಾನವೀಯತೆಯ ವಿರುದ್ಧದ ಅಪರಾಧಗಳಾಗಿವೆ", ಎಂದು ಅವರು ಹೇಳಿದರು. "ಸಹಕಾರವನ್ನು ಹೆಚ್ಚಿಸಲು ಪೊಲೀಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಕಾರ್ಯವಿಧಾನಗಳು ಮತ್ತು ಶಿಷ್ಟಾಚಾರಗಳನ್ನು ರೂಪಿಸುವ ಅಗತ್ಯವಿದೆ" ಎಂದು ಪ್ರಧಾನಮಂತ್ರಿ ಹೇಳಿದರು. ದೇಶಭ್ರಷ್ಟ ಅಪರಾಧಿಗಳಿಗೆ ರೆಡ್ ಕಾರ್ನರ್ ನೋಟಿಸ್ ಗಳನ್ನು ತ್ವರಿತಗೊಳಿಸುವ ಮೂಲಕ ಇಂಟರ್ ಪೋಲ್ ಸಹಾಯ ಮಾಡುತ್ತದೆ. "ಸುರಕ್ಷಿತ ಮತ್ತು ಸುಭದ್ರ ಜಗತ್ತು ನಮ್ಮ ಹಂಚಿಕೆಯ ಜವಾಬ್ದಾರಿಯಾಗಿದೆ. ಶಿಷ್ಟ ಶಕ್ತಿಗಳು ಸಹಕರಿಸಿದಾಗ, ದುಷ್ಟ ಅಪರಾಧಿಕ ಶಕ್ತಿಗಳು ಕಾರ್ಯನಿರ್ವಹಿಸಲು ಸಾಧ್ಯವಿಲ್ಲ." ಎಂದರು

ಭಾರತವನ್ನು ಸುರಕ್ಷಿತವಾಗಿಡಲು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ವೀರರಿಗೆ ಗೌರವ ಸಲ್ಲಿಸಲು ನವದೆಹಲಿಯಲ್ಲಿರುವ ರಾಷ್ಟ್ರೀಯ ಪೊಲೀಸ್ ಸ್ಮಾರಕ ಮತ್ತು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡುವುದನ್ನು ಪರಿಗಣಿಸುವಂತೆ ಪ್ರಧಾನಮಂತ್ರಿಯವರು ಎಲ್ಲಾ ಗಣ್ಯರಿಗೆ ಮನವಿ ಮಾಡಿದರು. 90ನೇ ಇಂಟರ್ ಪೋಲ್ ಮಹಾಧಿವೇಶನವು ಅಪರಾಧ, ಭ್ರಷ್ಟಾಚಾರ ಮತ್ತು ಭಯೋತ್ಪಾದನೆಯನ್ನು ಹತ್ತಿಕ್ಕಲು ಪರಿಣಾಮಕಾರಿ ಮತ್ತು ಯಶಸ್ವಿ ವೇದಿಕೆಯಾಗಿದೆ ಎಂದು ಸಾಬೀತುಪಡಿಸುತ್ತದೆ ಎಂಬ ಭರವಸೆಯನ್ನು ಪ್ರಧಾನಮಂತ್ರಿಯವರು ವ್ಯಕ್ತಪಡಿಸಿದರು. "ಸಂವಹನ, ಸಹಯೋಗ ಮತ್ತು ಸಹಕಾರವು ಅಪರಾಧ, ಭ್ರಷ್ಟಾಚಾರ ಮತ್ತು ಭಯೋತ್ಪಾದನೆಯನ್ನು ಮಣಿಸಬೇಕು" ಎಂದು ಪ್ರಧಾನಮಂತ್ರಿ ಅವರು ತಮ್ಮ ಭಾಷಣ ಮುಗಿಸಿದರು.

ಇದಕ್ಕೂ ಮುನ್ನ ಸ್ಥಳಕ್ಕೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ಇಂಟರ್ ಪೋಲ್ ಅಧ್ಯಕ್ಷರು ಕಾರ್ಯಕಾರಿ ಸಮಿತಿಗೆ ಪರಿಚಯಿಸಿದರು. ನಂತರ ಪ್ರಧಾನಮಂತ್ರಿಯವರು ಗುಂಪು ಛಾಯಾಚಿತ್ರಕ್ಕೆ ತೆಗೆಸಿಕೊಂಡರು ಮತ್ತು ಇಂಟರ್ ಪೋಲ್ ಶತಮಾನೋತ್ಸವ ವೇದಿಕೆ ವೀಕ್ಷಿಸಿದರು. ಇದರ ನಂತರ ಪ್ರಧಾನಮಂತ್ರಿಯವರು ಟೇಪು ಕತ್ತರಿಸುವ ಮೂಲಕ ಮತ್ತು ರಾಷ್ಟ್ರೀಯ ಪೊಲೀಸ್ ಪಾರಂಪರಿಕ ಪ್ರದರ್ಶನವನ್ನು ಉದ್ಘಾಟಿಸಿದರು ಮತ್ತು ಅಲ್ಲಿ ಒಂದು ಸುತ್ತು  ಹಾಕಿ ವೀಕ್ಷಿಸಿದರು. 

ವೇದಿಕೆಗೆ ಆಗಮಿಸಿದ ಪ್ರಧಾನಮಂತ್ರಿಯವರು ದ್ವಾರದಲ್ಲೇ ಐಟಿಬಿಪಿ ತುಕಡಿಯ ಪಥಸಂಚಲನಕ್ಕೆ ಸಾಕ್ಷಿಯಾದರು. ಇದರ ನಂತರ ಭಾರತದ ರಾಷ್ಟ್ರಗೀತೆ ಮತ್ತು ಇಂಟರ್ ಪೋಲ್ ಗೀತೆ ಮೊಳಗಿತು. ಪ್ರಧಾನಮಂತ್ರಿಯವರಿಗೆ ಇಂಟರ್ ಪೋಲ್ ನ ಅಧ್ಯಕ್ಷರು ಕುಬ್ಜ ಗಿಡವನ್ನು ಉಡುಗೊರೆಯಾಗಿ ನೀಡಿದರು. ತದನಂತರ, ಪ್ರಧಾನಮಂತ್ರಿಯವರು 90ನೇ ಇಂಟರ್ ಪೋಲ್ ಮಹಾಸಭೆಯ ಅಂಗವಾಗಿ ಸ್ಮರಣಾರ್ಥ ಅಂಚೆ ಚೀಟಿ ಮತ್ತು 100 ರೂ.ಗಳ ನಾಣ್ಯವನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ, ಇಂಟರ್ ಪೋಲ್ ಅಧ್ಯಕ್ಷ ಶ್ರೀ ಅಹ್ಮದ್ ನಾಸಿರ್ ಅಲ್ ರೈಸ್, ಇಂಟರ್ ಪೋಲ್ ಪ್ರಧಾನ ಕಾರ್ಯದರ್ಶಿ ಶ್ರೀ ಜುರ್ಗೆನ್ ಸ್ಟಾಕ್ ಮತ್ತು ಸಿಬಿಐ ನಿರ್ದೇಶಕ ಶ್ರೀ ಸುಬೋಧ್ ಕುಮಾರ್ ಜೈಸ್ವಾಲ್ ಉಪಸ್ಥಿತರಿದ್ದರು.

ಹಿನ್ನೆಲೆ
ಇಂಟರ್ ಪೋಲ್ ನ 90ನೇ ಮಹಾಧಿವೇಶನವು ಅಕ್ಟೋಬರ್ 18 ರಿಂದ 21 ರವರೆಗೆ ನಡೆಯುತ್ತಿದೆ. ಸಚಿವರು, ದೇಶಗಳ ಪೊಲೀಸ್ ಮುಖ್ಯಸ್ಥರು, ರಾಷ್ಟ್ರೀಯ ಕೇಂದ್ರೀಯ ಬ್ಯೂರೋಗಳ ಮುಖ್ಯಸ್ಥರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ 195 ಇಂಟರ್ಪೋಲ್ ಸದಸ್ಯ ರಾಷ್ಟ್ರಗಳ ನಿಯೋಗ ಸಭೆಯಲ್ಲಿ ಭಾಗವಹಿಸುತ್ತಿವೆ. ಮಹಾಧಿವೇಶನವು ಇಂಟರ್ ಪೋಲ್ ನ ಅತ್ಯುನ್ನತ ಆಡಳಿತ ಮಂಡಳಿಯಾಗಿದ್ದು, ಅದರ ಕಾರ್ಯನಿರ್ವಹಣೆಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ವರ್ಷಕ್ಕೊಮ್ಮೆ ಸಭೆ ಸೇರುತ್ತದೆ.

ಸುಮಾರು 25 ವರ್ಷಗಳ ನಂತರ ಇಂಟರ್ ಪೋಲ್ ಮಹಾಸಭೆಯು ಭಾರತದಲ್ಲಿ ನಡೆಯುತ್ತಿದೆ - ಇದು ಕೊನೆಯ ಬಾರಿಗೆ 1997 ರಲ್ಲಿ ನಡೆದಿತ್ತು. ಭಾರತದ ಸ್ವಾತಂತ್ರ್ಯದ 75 ನೇ ವರ್ಷದ ಆಚರಣೆಯೊಂದಿಗೆ 2022ರಲ್ಲಿ ನವದೆಹಲಿಯಲ್ಲಿ ಇಂಟರ್ ಪೋಲ್ ನ ಮಹಾಸಭೆಯನ್ನು ಆಯೋಜಿಸುವ ಭಾರತದ ಪ್ರಸ್ತಾಪವನ್ನು ಸಾಮಾನ್ಯ ಸಭೆಯು ಪ್ರಚಂಡ ಬಹುಮತದೊಂದಿಗೆ ಅಂಗೀಕರಿಸಿತು. ಈ ಕಾರ್ಯಕ್ರಮವು ಭಾರತದ ಕಾನೂನು ಮತ್ತು ಸುವ್ಯವಸ್ಥೆಯ ಪಾಲನೆಯಲ್ಲಿನ ಅತ್ಯುತ್ತಮ ರೂಢಿಗಳನ್ನು ಇಡೀ ವಿಶ್ವಕ್ಕೆ ಪ್ರದರ್ಶಿಸುವ ಅವಕಾಶವನ್ನು ಒದಗಿಸುತ್ತದೆ

 

 

 

 

 

 

 

 

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Exclusive: Just two friends in a car, says Putin on viral carpool with PM Modi

Media Coverage

Exclusive: Just two friends in a car, says Putin on viral carpool with PM Modi
NM on the go

Nm on the go

Always be the first to hear from the PM. Get the App Now!
...
India–Russia friendship has remained steadfast like the Pole Star: PM Modi during the joint press meet with Russian President Putin
December 05, 2025

Your Excellency, My Friend, राष्ट्रपति पुतिन,
दोनों देशों के delegates,
मीडिया के साथियों,
नमस्कार!
"दोबरी देन"!

आज भारत और रूस के तेईसवें शिखर सम्मेलन में राष्ट्रपति पुतिन का स्वागत करते हुए मुझे बहुत खुशी हो रही है। उनकी यात्रा ऐसे समय हो रही है जब हमारे द्विपक्षीय संबंध कई ऐतिहासिक milestones के दौर से गुजर रहे हैं। ठीक 25 वर्ष पहले राष्ट्रपति पुतिन ने हमारी Strategic Partnership की नींव रखी थी। 15 वर्ष पहले 2010 में हमारी साझेदारी को "Special and Privileged Strategic Partnership” का दर्जा मिला।

पिछले ढाई दशक से उन्होंने अपने नेतृत्व और दूरदृष्टि से इन संबंधों को निरंतर सींचा है। हर परिस्थिति में उनके नेतृत्व ने आपसी संबंधों को नई ऊंचाई दी है। भारत के प्रति इस गहरी मित्रता और अटूट प्रतिबद्धता के लिए मैं राष्ट्रपति पुतिन का, मेरे मित्र का, हृदय से आभार व्यक्त करता हूँ।

Friends,

पिछले आठ दशकों में विश्व में अनेक उतार चढ़ाव आए हैं। मानवता को अनेक चुनौतियों और संकटों से गुज़रना पड़ा है। और इन सबके बीच भी भारत–रूस मित्रता एक ध्रुव तारे की तरह बनी रही है।परस्पर सम्मान और गहरे विश्वास पर टिके ये संबंध समय की हर कसौटी पर हमेशा खरे उतरे हैं। आज हमने इस नींव को और मजबूत करने के लिए सहयोग के सभी पहलुओं पर चर्चा की। आर्थिक सहयोग को नई ऊँचाइयों पर ले जाना हमारी साझा प्राथमिकता है। इसे साकार करने के लिए आज हमने 2030 तक के लिए एक Economic Cooperation प्रोग्राम पर सहमति बनाई है। इससे हमारा व्यापार और निवेश diversified, balanced, और sustainable बनेगा, और सहयोग के क्षेत्रों में नए आयाम भी जुड़ेंगे।

आज राष्ट्रपति पुतिन और मुझे India–Russia Business Forum में शामिल होने का अवसर मिलेगा। मुझे पूरा विश्वास है कि ये मंच हमारे business संबंधों को नई ताकत देगा। इससे export, co-production और co-innovation के नए दरवाजे भी खुलेंगे।

दोनों पक्ष यूरेशियन इकॉनॉमिक यूनियन के साथ FTA के शीघ्र समापन के लिए प्रयास कर रहे हैं। कृषि और Fertilisers के क्षेत्र में हमारा करीबी सहयोग,food सिक्युरिटी और किसान कल्याण के लिए महत्वपूर्ण है। मुझे खुशी है कि इसे आगे बढ़ाते हुए अब दोनों पक्ष साथ मिलकर यूरिया उत्पादन के प्रयास कर रहे हैं।

Friends,

दोनों देशों के बीच connectivity बढ़ाना हमारी मुख्य प्राथमिकता है। हम INSTC, Northern Sea Route, चेन्नई - व्लादिवोस्टोक Corridors पर नई ऊर्जा के साथ आगे बढ़ेंगे। मुजे खुशी है कि अब हम भारत के seafarersकी polar waters में ट्रेनिंग के लिए सहयोग करेंगे। यह आर्कटिक में हमारे सहयोग को नई ताकत तो देगा ही, साथ ही इससे भारत के युवाओं के लिए रोजगार के नए अवसर बनेंगे।

उसी प्रकार से Shipbuilding में हमारा गहरा सहयोग Make in India को सशक्त बनाने का सामर्थ्य रखता है। यह हमारेwin-win सहयोग का एक और उत्तम उदाहरण है, जिससे jobs, skills और regional connectivity – सभी को बल मिलेगा।

ऊर्जा सुरक्षा भारत–रूस साझेदारी का मजबूत और महत्वपूर्ण स्तंभ रहा है। Civil Nuclear Energy के क्षेत्र में हमारा दशकों पुराना सहयोग, Clean Energy की हमारी साझा प्राथमिकताओं को सार्थक बनाने में महत्वपूर्ण रहा है। हम इस win-win सहयोग को जारी रखेंगे।

Critical Minerals में हमारा सहयोग पूरे विश्व में secure और diversified supply chains सुनिश्चित करने के लिए महत्वपूर्ण है। इससे clean energy, high-tech manufacturing और new age industries में हमारी साझेदारी को ठोस समर्थन मिलेगा।

Friends,

भारत और रूस के संबंधों में हमारे सांस्कृतिक सहयोग और people-to-people ties का विशेष महत्व रहा है। दशकों से दोनों देशों के लोगों में एक-दूसरे के प्रति स्नेह, सम्मान, और आत्मीयताका भाव रहा है। इन संबंधों को और मजबूत करने के लिए हमने कई नए कदम उठाए हैं।

हाल ही में रूस में भारत के दो नए Consulates खोले गए हैं। इससे दोनों देशों के नागरिकों के बीच संपर्क और सुगम होगा, और आपसी नज़दीकियाँ बढ़ेंगी। इस वर्ष अक्टूबर में लाखों श्रद्धालुओं को "काल्मिकिया” में International Buddhist Forum मे भगवान बुद्ध के पवित्र अवशेषों का आशीर्वाद मिला।

मुझे खुशी है कि शीघ्र ही हम रूसी नागरिकों के लिए निशुल्क 30 day e-tourist visa और 30-day Group Tourist Visa की शुरुआत करने जा रहे हैं।

Manpower Mobility हमारे लोगों को जोड़ने के साथ-साथ दोनों देशों के लिए नई ताकत और नए अवसर create करेगी। मुझे खुशी है इसे बढ़ावा देने के लिए आज दो समझौतेकिए गए हैं। हम मिलकर vocational education, skilling और training पर भी काम करेंगे। हम दोनों देशों के students, scholars और खिलाड़ियों का आदान-प्रदान भी बढ़ाएंगे।

Friends,

आज हमने क्षेत्रीय और वैश्विक मुद्दों पर भी चर्चा की। यूक्रेन के संबंध में भारत ने शुरुआत से शांति का पक्ष रखा है। हम इस विषय के शांतिपूर्ण और स्थाई समाधान के लिए किए जा रहे सभी प्रयासों का स्वागत करते हैं। भारत सदैव अपना योगदान देने के लिए तैयार रहा है और आगे भी रहेगा।

आतंकवाद के विरुद्ध लड़ाई में भारत और रूस ने लंबे समय से कंधे से कंधा मिलाकर सहयोग किया है। पहलगाम में हुआ आतंकी हमला हो या क्रोकस City Hall पर किया गया कायरतापूर्ण आघात — इन सभी घटनाओं की जड़ एक ही है। भारत का अटल विश्वास है कि आतंकवाद मानवता के मूल्यों पर सीधा प्रहार है और इसके विरुद्ध वैश्विक एकता ही हमारी सबसे बड़ी ताक़त है।

भारत और रूस के बीच UN, G20, BRICS, SCO तथा अन्य मंचों पर करीबी सहयोग रहा है। करीबी तालमेल के साथ आगे बढ़ते हुए, हम इन सभी मंचों पर अपना संवाद और सहयोग जारी रखेंगे।

Excellency,

मुझे पूरा विश्वास है कि आने वाले समय में हमारी मित्रता हमें global challenges का सामना करने की शक्ति देगी — और यही भरोसा हमारे साझा भविष्य को और समृद्ध करेगा।

मैं एक बार फिर आपको और आपके पूरे delegation को भारत यात्रा के लिए बहुत बहुत धन्यवाद देता हूँ।