Dedicates National Atomic Timescale and Bhartiya Nirdeshak Dravya to the Nation
Lays Foundation Stone of National Environmental Standards Laboratory
Urges CSIR to interact with students to inspire them become future scientists
Bhartiya Nirdeshak Dravya’s 'Certified Reference Material System' would help in improving the Quality of Indian products
Exhorts Scientific Community to Promote ‘value creation cycle’ of Science, Technology and Industry
Strong Research will Lead to Stronger Brand India: PM

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ನೇ ರಾಷ್ಟ್ರೀಯ ಮಾಪನಶಾಸ್ತ್ರ ಶೃಂಗಸಭೆಯ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು. ಅವರು ಇದೇ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರೀಯ ಪರಮಾಣು ಕಾಲಮಾಪಕ ಮತ್ತು ಭಾರತೀಯ ನಿರ್ದೇಶಕ ದ್ರವ್ಯ ಪ್ರನಳಿಯನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ರಾಷ್ಟ್ರೀಯ  ಪರಿಸರ ಮಾನದಂಡಗಳ ಪ್ರಯೋಗಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಮಾವೇಶವನ್ನು ನವದೆಹಲಿಯಲ್ಲಿರುವ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ – ರಾಷ್ಟ್ರೀಯ ಭೌತಿಕ ಪ್ರಯೋಗಾಲಯ(ಸಿಎಸ್ಐಆರ್–ಎನ್ ಪಿಎಲ್) ಸ್ಥಾಪನೆಯ 75ನೇ ವರ್ಷಾಚರಣೆ ಅಂಗವಾಗಿ ಆಯೋಜಿಸಿತ್ತು. ಈ ಸಮಾವೇಶದ ಘೋಷ ವಾಕ್ಯ “ರಾಷ್ಟ್ರದ ಸಮಗ್ರ ಬೆಳವಣಿಗೆಗೆ ಮಾಪನಶಾಸ್ತ್ರ’’ ಎಂಬುದಾಗಿದೆ. ಕೇಂದ್ರ ಸಚಿವ ಡಾ. ಹರ್ಷವರ್ಧನ್ ಮತ್ತು ಪ್ರಧಾನ ವೈಜ್ಞಾನಿಕ ಸಲಹೆಗಾರರಾದ ಡಾ. ವಿಜಯ್ ರಾಘವನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಈ ಹೊಸ ವರ್ಷದಲ್ಲಿ ಎರಡು ಭಾರತೀಯ ಕೋವಿಡ್ ಲಸಿಕೆಗಳನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿರುವುದಕ್ಕಾಗಿ ಭಾರತೀಯ ವಿಜ್ಞಾನಿಗಳ ಶ್ರಮವನ್ನು ಶ್ಲಾಘಿಸಿದರು. ಅವರು ಭಾರತದ ಕೋವಿಡ್ ಲಸಿಕೆ ಕಾರ್ಯಕ್ರಮ ಇಡೀ ವಿಶ್ವದಲ್ಲೇ ಅತಿ ದೊಡ್ಡದು ಮತ್ತು ಅದು ಈಗಷ್ಟೇ ಆರಂಭವಾಗಲಿದೆ ಎಂದರು. ಸಿಎಸ್ಐಆರ್ ಸೇರಿದಂತೆ ದೇಶದ ಎಲ್ಲ ವೈಜ್ಞಾನಿಕ ಸಂಸ್ಥೆಗಳು ದೇಶ ಎದುರಿಸುತ್ತಿರುವ ಪ್ರತಿಯೊಂದು ಸವಾಲಿಗೂ ಪರಿಹಾರಗಳನ್ನು ಕಂಡುಹಿಡಿಯಲು ಒಟ್ಟಾಗಿ ಶ್ರಮಿಸುತ್ತಿವೆ ಎಂದು ಅವುಗಳ ಕಾರ್ಯವನ್ನು ಶ್ಲಾಘಿಸಿದರು.

ಸಿಎಸ್ಐಆರ್ ವಿದ್ಯಾರ್ಥಿಗಳ ಜೊತೆ ಸಂವಾದಗಳನ್ನು ನಡೆಸಬೇಕು ಮತ್ತು ಸಂಸ್ಥೆಯ ಪ್ರಯತ್ನಗಳ ಕುರಿತು ಅವರಲ್ಲಿ ಜಾಗೃತಿ ಮೂಡಿಸಬೇಕು ಎಂದು ಪ್ರಧಾನಮಂತ್ರಿ ಅವರು ಕರೆ ನೀಡಿದರು. ಆ ವಿದ್ಯಾರ್ಥಿಗಳು ಭವಿಷ್ಯದಲ್ಲಿ ವಿಜ್ಞಾನಿಗಳಾಗಿ ರೂಪುಗೊಳ್ಳಲು ಸ್ಫೂರ್ತಿ ಹಾಗೂ ಉತ್ತೇಜನ ದೊರಕಲಿದೆ ಎಂದು ಹೇಳಿದರು. ದೇಶದ ಅಭಿವೃದ್ಧಿಯ ಮೌಲ್ಯಮಾಪನ ಮತ್ತು ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಸಿಎಸ್ಐಆರ್ ಎನ್ ಪಿಎಲ್ ಸಂಸ್ಥೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಇಂದಿನ ಈ ಸಮಾವೇಶ ಹಿಂದಿನ ಸಾಧನೆಗಳ ಬಗ್ಗೆ ಚರ್ಚಿಸಲು ಮತ್ತು ಭವಿಷ್ಯದ ಸವಾಲುಗಳನ್ನು ಎದುರಿಸಲು ಕೇಂದ್ರ ಮಾಡಿಕೊಳ್ಳಬೇಕಿರುವ ಸಿದ್ಧತೆಗಳಿಗೆ ನೆರವಾಗಲಿದೆ ಎಂದರು. ಅವರು ಸ್ವಾವಲಂಬಿ ಭಾರತ ನಿರ್ಮಾಣಕ್ಕಾಗಿ ಹೊಸ ಮಾನದಂಡಗಳು ಮತ್ತು ಹೊಸ ಬೆಂಚ್ ಮಾರ್ಕ್ ಗೆ ಅನುಗುಣವಾಗಿ ಸಂಸ್ಥೆ ಮುಂದೆ ಬಂದು ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಬೇಕಿದೆ ಎಂದು ಅವರು ಕರೆ ನೀಡಿದರು.   

ಭಾರತದ ಸಮಯ ಪಾಲಕವಾಗಿರುವ ಸಿಎಸ್ಐಆರ್–ಎನ್ ಪಿಎಲ್ ಸಂಸ್ಥೆಯ ಮೇಲೆ ಭವಿಷ್ಯದ ಭಾರತವನ್ನು ಬದಲಾಯಿಸುವ ಹೊಣೆಗಾರಿಕೆ ಇದೆ ಎಂದು ಪ್ರಧಾನಮಂತ್ರಿ ಹೇಳಿದರು. ದಶಕಗಳಿಂದ ಭಾರತ ಗುಣಮಟ್ಟ ಮತ್ತು ಅಳತೆಗೆ ವಿದೇಶಿ ಮಾನದಂಡಗಳನ್ನು ಅವಲಂಬಿಸಿತ್ತು ಎಂದ ಅವರು, ಇದೀಗ ಭಾರತ ಕ್ಷಿಪ್ರವಾಗಿ ಪ್ರಗತಿ ಕಾಣುತ್ತಿದ್ದು, ನಮ್ಮದೇ ಆದ ಮಾನದಂಡಗಳನ್ನು ರೂಪಿಸಿಕೊಳ್ಳುವ ಮೂಲಕ ಭಾರತದ ಸಾಮರ್ಥ್ಯ ಮತ್ತು ವರ್ಚಸ್ಸನ್ನು ವೃದ್ಧಿಸಿಕೊಂಡಿದೆ ಎಂದರು. ಮಾಪನಶಾಸ್ತ್ರವಾಗಿರುವ ವಿಜ್ಞಾನ ಅಳತೆಯನ್ನು ಒಳಗೊಂಡಿದ್ದು, ಅದು ಯಾವುದೇ ವೈಜ್ಞಾನಿಕ ಸಾಧನೆಗೆ ತಳಹದಿಯನ್ನು ನಿಗದಿಪಡಿಸುತ್ತದೆ ಎಂದರು. ಅಳತೆ ಇಲ್ಲದೆ ಯಾವುದೇ ಸಂಶೋಧನೆಗಳು ಮುಂದುವರಿಸಲಾಗದು. ನಮ್ಮ ಸಾಧನೆಗಳನ್ನೂ ಸಹ ಯಾವುದಾದರೊಂದು ರೀತಿಯಲ್ಲಿ ಅಳತೆ ಮಾಡಲೇ ಬೇಕಾಗುತ್ತದೆ. ವಿಶ್ವದಲ್ಲಿ ನಮ್ಮ ದೇಶದ ಮೇಲಿನ ವಿಶ್ವಾಸಾರ್ಹತೆ ತನ್ನ ಮಾಪನಶಾಸ್ತ್ರದ ವಿಶ್ವಾಸಾರ್ಹತೆಯನ್ನು ಆಧರಿಸಿರುತ್ತದೆ ಎಂದು ಅವರು ಹೇಳಿದರು. ಮಾಪನಶಾಸ್ತ್ರ ಜಗತ್ತಿನಲ್ಲಿ ನಾವು ಎಲ್ಲಿ ನಿಂತಿದ್ದೇವೆ ಎಂಬುದನ್ನು ತೋರಿಸುವ ಕನ್ನಡಿಯಾಗಿದೆ ಮತ್ತು ಸುಧಾರಣೆಗೆ ಅವಕಾಶವನ್ನು ಕಲ್ಪಿಸಿ ಕೊಡಲಿದೆ ಎಂದರು. ಸ್ವಾವಲಂಬಿ ಭಾರತ ಗುರಿ ಸಾಧನೆಗೆ ನಾವು ಗುಣಮಟ್ಟದ ಮತ್ತು ಪ್ರಮಾಣದ ಬಗ್ಗೆ ಎಚ್ಚರವಹಿಸಬೇಕಿದೆ ಎಂದು ಅವರು ನೆನಪು ಮಾಡಿಕೊಟ್ಟರು. ಜಗತ್ತಿನ ಎಲ್ಲೆಡೆ ಭಾರತೀಯ ಉತ್ಪನ್ನಗಳನ್ನು ಕೇವಲ ತುಂಬದೆ, ನಮ್ಮ ಉತ್ಪನ್ನಗಳನ್ನು ಖರೀದಿಸುವ ಪ್ರತಿಯೊಬ್ಬ ಗ್ರಾಹಕರ ಹೃದಯಗಳನ್ನು ಗೆಲ್ಲುವಂತಾಗಬೇಕು ಎಂದರು. ಮೇಡ್ ಇನ್ ಇಂಡಿಯಾ ಉತ್ಪನ್ನಗಳನ್ನು ಖಾತ್ರಿಪಡಿಸುವ ಜೊತೆಗೆ ಅವುಗಳಿಗೆ ಜಾಗತಿಕ ಬೇಡಿಕೆ ಉಂಟಾಗುವಂತೆ ಹಾಗೂ ಜಾಗತಿಕವಾಗಿ ಸ್ವೀಕೃತಿಯಾಗುವಂತೆ ನೋಡಿಕೊಳ್ಳಲು ಹೆಚ್ಚಿನ ಒತ್ತು ನೀಡಬೇಕು ಎಂದು ಬಲವಾಗಿ ಪ್ರತಿಪಾದಿಸಿದರು.

ಪ್ರಧಾನಮಂತ್ರಿ ಅವರು ಇಂದು ಭಾರತೀಯ ನಿರ್ದೇಶಕ ದ್ರವ್ಯವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಇದು ಭಾರೀ ಲೋಹಗಳು, ರಾಸಾಯನಿಕ ಫಾರ್ಮ ಮತ್ತು ಜವಳಿಯಲ್ಲಿ ನಿರ್ದಿಷ್ಟ ‘ಪ್ರಮಾಣೀಕೃತ ಉಲ್ಲೇಖ ವಸ್ತು ವ್ಯವಸ್ಥೆ’ ಮೂಲಕ ಗುಣಮಟ್ಟದ ಉತ್ಪನ್ನಗಳನ್ನು ಸಿದ್ಧಪಡಿಸಲು ಉದ್ಯಮಗಳಿಗೆ ನೆರವಾಗಲಿದೆ. ಇದೀಗ ಉದ್ಯಮ ನಿಯಂತ್ರಣ ಕೇಂದ್ರಿತ ಮನೋಭಾವದಿಂದ ಗ್ರಾಹಕಸ್ನೇಹಿ ಮನೋಭಾವದತ್ತ ಸಾಗುತ್ತಿದೆ ಎಂದು ಅವರು ಹೇಳಿದರು. ಈ ಹೊಸ ಮಾನದಂಡಗಳೊಂದಿಗೆ ದೇಶಾದ್ಯಂತ ಜಿಲ್ಲೆಗಳಲ್ಲಿನ ಸ್ಥಳೀಯ ಉತ್ಪನ್ನಗಳಿಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರಕಿಸಿಕೊಡುವಂತಾಗಲು ಅಭಿಯಾನವನ್ನು ಕೈಗೊಳ್ಳಲಾಗಿದೆ. ಇದು ವಿಶೇಷವಾಗಿ ನಮ್ಮ ಎಂಎಸ್ಎಂಇ ವಲಯಕ್ಕೆ ಅನುಕೂಲವಾಗಲಿದೆ ಎಂದು ಅವರು ಹೇಳಿದರು.

ಅಂತಾರಾಷ್ಟ್ರೀಯ ಮಾನದಂಡಗಳನ್ನು ಪಾಲಿಸುವುದರಿಂದ ಹೆಚ್ಚಿನ ವಿದೇಶಿ ಉತ್ಪಾದನಾ ಕಂಪನಿಗಳು ಭಾರತಕ್ಕೆ ಬಂದು ಇಲ್ಲಿನ ಸ್ಥಳೀಯ ಪೂರೈಕೆ ಸರಣಿಯನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. ಅಲ್ಲದೆ ಆಮದು ಮತ್ತು ರಫ್ತು ಎರಡರಲ್ಲೂ ಹೊಸ ಮಾನದಂಡಗಳ ಗುಣಮಟ್ಟವನ್ನು ಖಾತ್ರಿಪಡಿಸಬೇಕಿದೆ ಎಂದು ಹೇಳಿದರು. ಭಾರತದ ಸಾಮಾನ್ಯ ಗ್ರಾಹಕರಿಗೆ ಗುಣಮಟ್ಟದ ವಸ್ತುಗಳನ್ನು ಒದಗಿಸಬೇಕು ಮತ್ತು ರಫ್ತುದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಬೇಕು ಎಂದು ಹೇಳಿದರು.  

ಐತಿಹಾಸಿಕವಾಗಿ ಯಾವುದೇ ರಾಷ್ಟ್ರ ಪ್ರಗತಿ ಸಾಧಿಸಿದರೂ ಅದು ವಿಜ್ಞಾನದ ಉತ್ತೇಜನಕ್ಕೆ ಎಷ್ಟು ಪ್ರಯತ್ನಗಳನ್ನು ನಡೆಸಿದೆ ಎಂಬುದನ್ನು ನೇರವಾಗಿ ಅವಲಂಬಿಸಿರುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. ವಿಜ್ಞಾನ, ತಂತ್ರಜ್ಞಾನ, ಉದ್ಯಮ ಮತ್ತು ಕೈಗಾರಿಕೆಗಳಲ್ಲಿ ‘ಮೌಲ್ಯ ಸೃಷ್ಟಿ ಚಕ್ರವನ್ನು’ ಸೃಷ್ಟಿಸಬೇಕಾಗಿದೆ ಎಂದು ಹೇಳಿದರು. ಆ ಕುರಿತು ಮತ್ತಷ್ಟು ವಿವರಣೆ ನೀಡಿದ ಪ್ರಧಾನಮಂತ್ರಿ, ವೈಜ್ಞಾನಿಕ ಆವಿಷ್ಕಾರಗಳಿಂದ ತಂತ್ರಜ್ಞಾನ ಸೃಷ್ಟಿಯಾಗುತ್ತದೆ ಮತ್ತು ತಂತ್ರಜ್ಞಾನದಿಂದ ಕೈಗಾರಿಕಾ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು. ಉದ್ಯಮ ಹೊಸ ಸಂಶೋಧನೆಗಾಗಿ ವಿಜ್ಞಾನದಲ್ಲಿ ಮತ್ತಷ್ಟು ಹಣವನ್ನು ಹೂಡಿಕೆ ಮಾಡುತ್ತದೆ. ಈ ಚಕ್ರ ಸದಾ ನಮ್ಮನ್ನು ಹೊಸ ಸಾಧ್ಯತೆಗಳ ನಿಟ್ಟಿನಲ್ಲಿ ಕೊಂಡೊಯ್ಯುತ್ತದೆ. ಈ ಮೌಲ್ಯ ಸರಣಿಯಲ್ಲಿ ಸಿಎಸ್ಐಆರ್–ಎನ್ ಪಿಎಲ್ ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.  

ವಿಜ್ಞಾನದ ಈ ಮೌಲ್ಯ ಸೃಷ್ಟಿ ಪ್ರಕ್ರಿಯೆ ಇಂದಿನ ಜಗತ್ತಿನಲ್ಲಿ ಸಾಮೂಹಿಕ ಸೃಷ್ಟಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಮತ್ತು ಆತ್ಮನಿರ್ಭರ ಭಾರತ ಗುರಿ ಸಾಧನೆ ನಿಟ್ಟಿನಲ್ಲಿ ದೇಶ ಮುನ್ನಡೆಯಲು ಸಹಕಾರಿಯಾಗುತ್ತದೆ. ಇದರಲ್ಲಿ ಸಿಎಸ್ಐಆರ್ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ.

ಸಿಎಸ್ಐಆರ್–ಎನ್ ಪಿಎಲ್ ನ ರಾಷ್ಟ್ರೀಯ ಅಣು ಸಮಯ ಮಾಪಕವನ್ನು ಇಂದು ಮನುಕುಲಕ್ಕೆ ಅರ್ಪಣೆ ಮಾಡಿದ ಪ್ರಧಾನಮಂತ್ರಿ ಆ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಭಾರತ ಸಮಯವನ್ನು ನ್ಯಾನೊ ಸೆಕೆಂಡ್ ಗಳ ಪ್ರಮಾಣದಲ್ಲಿ ಅಳೆಯುವಲ್ಲಿ ಸ್ವಾವಲಂಬನೆ ಸಾಧಿಸಿದೆ ಎಂದು ಅವರು ಹೇಳಿದರು. 2.8 ನ್ಯಾನೊ ಸೆಕೆಂಡ್ ಗಳಲ್ಲಿ ಖಚಿತ ಮಟ್ಟವನ್ನು ಸಾಧಿಸುವುದು ಭಾರೀ ಸಾಮರ್ಥ್ಯದ್ದಾಗಿದೆ. ಇದೀಗ ಭಾರತೀಯ ನಿರ್ದಿಷ್ಟ ಸಮಯ, ಅಂತಾರಾಷ್ಟ್ರೀಯ ನಿರ್ದಿಷ್ಟ ಸಮಯಕ್ಕೆ ಹೊಂದಾಣಿಕೆಯಾಗುತ್ತಿದ್ದು, ಅದರ ಖಚಿತತೆ 3 ನ್ಯಾನೊ ಸೆಕೆಂಡಿಗೂ ಕಡಿಮೆ ಇದೆ. ಇದರಿಂದ ಸ್ಪರ್ಧಾತ್ಮಕ ತಂತ್ರಜ್ಞಾನ, ಆಧುನಿಕ  ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಬ್ಯಾಂಕಿಂಗ್, ರೈಲ್ವೆ, ರಕ್ಷಣಾ, ಆರೋಗ್ಯ, ದೂರಸಂಪರ್ಕ, ಹವಾಮಾನ ಮುನ್ನೆಚ್ಚರಿಕೆ, ವಿಪತ್ತುಗಳ ನಿರ್ವಹಣೆ ಮತ್ತು ಇತರೆ ವಲಯ ಸೇರಿದಂತೆ ಇಸ್ರೋದಂತಹ ಸಂಸ್ಥೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಮತ್ತು ಈ ಸಾಧನೆಯಿಂದ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ಹೇಳಿದರು.

ಕೈಗಾರಿಕೆಗಳು 4.0ಅಲ್ಲಿ ಭಾರತದ ಪಾತ್ರದ ಬಲವರ್ಧನೆಯಲ್ಲಿ ಸಮಯ ಮಾಪಕದ ಪಾತ್ರವನ್ನು ಪ್ರತಿಪಾದಿಸಿದ ಪ್ರಧಾನಮಂತ್ರಿ ಅವರು, ಭಾರತ ಪರಿಸರ ಕ್ಷೇತ್ರದಲ್ಲಿ ಮುಂಚೂಣಿ ಸ್ಥಾನದತ್ತ ಸಾಗಿದೆ ಎಂದರು. ಆದರೆ ವಾಯು ಮಟ್ಟ ಮತ್ತು ಮಾಲಿನ್ಯ ಮಟ್ಟ ಅಳೆಯುವ ಉಪಕರಣ ಮತ್ತು ತಂತ್ರಜ್ಞಾನದಲ್ಲಿ ಭಾರತ ಇತರೆಯವರ ಮೇಲೆ ಅವಲಂಬಿಸಿದೆ. ಇದೀಗ ಈ ವಲಯದಲ್ಲಿ ಭಾರತ ಸ್ವಾವಲಂಬನೆ ಸಾಧಿಸಿರುವುದರಿಂದ ಮಾಲಿನ್ಯ ನಿಯಂತ್ರಣಕ್ಕೆ ಅತ್ಯಂತ ಪರಿಣಾಮಕಾರಿ ಹಾಗೂ ಕಡಿಮೆ ವೆಚ್ಚದ ಸಾಧನಗಳನ್ನು ಉತ್ಪಾದಿಸಲು ನೆರವಾಗಲಿದೆ ಎಂದರು. ಇದರಿಂದ ವಾಯು ಗುಣಮಟ್ಟ ಮತ್ತು ಮಾಲಿನ್ಯ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಜಾಗತಿಕ ತಾಂತ್ರಿಕ ಮಾರುಕಟ್ಟೆಯಲ್ಲಿ ಭಾರತದ ಪಾಲು ವೃದ್ಧಿಯಾಗಲಿದೆ. ನಮ್ಮ ವಿಜ್ಞಾನಿಗಳ ನಿರಂತರ ಪ್ರಯತ್ನಗಳ ಫಲವಾಗಿ ಇದನ್ನು ಸಾಧಿಸಲಾಗಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಪ್ರಧಾನಮಂತ್ರಿ ಅವರು ಹಲವು ಜ್ಞಾನಾಧಾರಿತ ವಲಯಗಳಲ್ಲಿ ಸಂಶೋಧನೆಗಳ ಪಾತ್ರಗಳ ಕುರಿತು ಸುದೀರ್ಘವಾಗಿ ವಿವರಿಸಿದರು. ಅವರು ಯಾವುದೇ ಸಮಾಜ ಪ್ರಗತಿಯಾಗಬೇಕಾದರೆ ಸಂಶೋಧನೆ ಸ್ವಾಭಾವಿಕ ಹವ್ಯಾಸವಾಗುವ ಜೊತೆಗೆ ಅದು ನೈಸರ್ಗಿಕ ಪ್ರಕ್ರಿಯೆಯೂ ಆಗಿರಬೇಕು ಎಂದರು. ಸಂಶೋಧನೆಗಳ ಪರಿಣಾಮ ವಾಣಿಜ್ಯ ಅಥವಾ ಸಾಮಾಜಿಕದ್ದಾಗಿರಬಹುದು ಮತ್ತು ಸಂಶೋಧನೆ ನಮ್ಮ ಜ್ಞಾನ ಮತ್ತು ಅರ್ಥೈಸಿಕೊಳ್ಳುವ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳಲು ಸಹಾಯಕವಾಗುತ್ತದೆ. ಭವಿಷ್ಯದ ದಿಕ್ಸೂಚಿಗಳನ್ನು ಸದಾ ನಾವು ನಿರೀಕ್ಷಿಸಲಾಗದು. ಆದರೆ ಸಂಶೋಧನೆಗಳ ಅಂತಿಮ ಗುರಿಯನ್ನು ನಿರ್ಧರಿಸಿಕೊಳ್ಳಬೇಕಾಗುತ್ತದೆ. ಒಂದೇ ಒಂದು ಖಚಿತ ಅಂಶವೆಂದರೆ ಸಂಶೋಧನೆಗಳು ಜ್ಞಾನದ ಹೊಸ ಪಾಠಗಳನ್ನು ಕಲಿಸಲಿದ್ದು, ಅವು ಎಂದಿಗೂ ವ್ಯರ್ಥವಾಗುವುದಿಲ್ಲ. ಪ್ರಧಾನಮಂತ್ರಿ ಅವರು ವಂಶವಾಹಿಯ ಪಿತಾಮಹ ಮಂಡೇಲ್ ಮತ್ತು ನಿಕೊಲೋಸ್ ತೆಲ್ಸಾ ಅವರ ಉದಾಹರಣೆಗಳನ್ನು ನೀಡುತ್ತಾ ಅವರ ಕಾರ್ಯದ ಸಾಮರ್ಥ್ಯವನ್ನು ತುಂಬಾ ತಡವಾಗಿ ಗುರುತಿಸಲಾಯಿತು ಎಂದರು. ಹಲವು ಬಾರಿ ಸಂಶೋಧನೆಗಳು ತಕ್ಷಣದ ಗುರಿಗಳನ್ನು ಈಡೇರಿಸುವುದಿಲ್ಲ. ಆದರೆ ಅದೇ ಸಂಶೋಧನೆ ಮತ್ತೊಂದು ವಲಯದಲ್ಲಿ ಮಹತ್ವದ ದಿಕ್ಕು ಬದಲಿಸಬಹುದು. ಪ್ರಧಾನಮಂತ್ರಿ ಅವರು, ಜಗದೀಶ್ ಚಂದ್ರ ಬೋಸ್ ಅವರ ಉದಾಹರಣೆಯನ್ನು ನೀಡುತ್ತಾ ಈ ಅಂಶವನ್ನು ವಿಸ್ತೃತವಾಗಿ ವಿವರಿಸಿದರು. ಅವರ ಮೈಕ್ರೋವೇವ್ಸ್ ಸಿದ್ಧಾಂತ ವಾಣಿಜ್ಯ ರೂಪದಲ್ಲಿ ಮುಂದುವರಿಸಿಕೊಂಡು ಹೋಗಲಿಲ್ಲ. ಆದರೆ ಇಂದು ಇಡೀ ರೇಡಿಯೋ ಸಂವಹನ ವ್ಯವಸ್ಥೆ ಅದನ್ನು ಆಧರಿಸಿದ ಎಂದು ಹೇಳಿದರು. ಪ್ರಧಾನಮಂತ್ರಿ ಅವರು, ಜಾಗತಿಕ ಮಹಾಯುದ್ಧದ ವೇಳೆ ಹಲವು ವಲಯಗಳಲ್ಲಿ ಕ್ರಾಂತಿ ಉಂಟುಮಾಡಿದ ಸಂಶೋಧನೆಗಳ ಉದಾಹರಣೆ ನೀಡಿದರು. ಉದಾಹರಣೆಗೆ ಡ್ರೋಣ್ ಗಳನ್ನು ಯುದ್ಧಕ್ಕಾಗಿ ಸೃಷ್ಟಿಸಲಾಯಿತು. ಆದರೆ ಇಂದು ನಾವು ಅವುಗಳನ್ನು ಫೋಟೋ ಶೂಟ್ ಗಳಿಗಾಗಿ ಬಳಕೆ ಮಾಡುತ್ತಿದ್ದೇವೆ. ಹಾಗಾಗಿಯೇ ನಮ್ಮ ವಿಜ್ಞಾನಿಗಳು, ವಿಶೇಷವಾಗಿ ಯುವ ವಿಜ್ಞಾನಿಗಳು, ಸಂಶೋಧನಾ ಸಾಧ್ಯತೆಗಳ ಅನ್ವೇಷಣೆಗೆ ಹೆಚ್ಚಿನ ಒತ್ತು ನೀಡಬೇಕು. ಕ್ಷೇತ್ರದ ಹೊರಗೆ ಸಂಶೋಧನೆಗಳ ಸಾಧ್ಯತೆಯನ್ನು ಬಳಕೆ ಮಾಡುವುದು ಸದಾ ಅವರ ಮುಂದಿರಬೇಕು.

ಪ್ರಧಾನಮಂತ್ರಿ ಅವರು, ಸಣ್ಣ ಸಂಶೋಧನೆಗಳು ಹೇಗೆ ಜಗತ್ತಿನ ಆಯಾಮವನ್ನು ಬದಲಿಸಿವೆ ಎಂದು ವಿವರಿಸುತ್ತಾ ವಿದ್ಯುಚ್ಛಕ್ತಿಯ ಉದಾಹರಣೆಯನ್ನು ನೀಡಿದರು. ಇಂದು ಎಲ್ಲವೂ ವಿದ್ಯುತ್ ನಿಂದ ಓಡುತ್ತಿದೆ. ಅದು ಸಾರಿಗೆ, ಸಂವಹನ, ಉದ್ಯಮ ಅಥವಾ ಪ್ರತಿ ದಿನದ ಜೀವನ. ಎಲ್ಲವೂ ಅದನ್ನು ಅವಲಂಬಿಸಿದೆ. ಅಂತೆಯೇ ಸೆಮಿ ಕಂಡೆಕ್ಟರ್ ನಂತಹ ಸಂಶೋಧನೆಗಳು ನಮ್ಮ ಜೀವನವನ್ನು ಡಿಜಿಟಲ್ ಕ್ರಾಂತಿಯ ಮೂಲಕ ಶ್ರೀಮಂತಗೊಳಿಸಿವೆ. ಅಂತಹ ಹಲವು ಸಾಧ್ಯತೆಗಳು ನಮ್ಮ ಯುವ ಸಂಶೋಧಕರ ಮುಂದಿದ್ದು, ಅವರು ತಮ್ಮ ಸಂಶೋಧನೆ ಮತ್ತು ಆವಿಷ್ಕಾರಗಳ ಮೂಲಕ ಸಂಪೂರ್ಣ ವಿಭಿನ್ನ ಭವಿಷ್ಯಕ್ಕೆ ದಾರಿ ಮಾಡಿಕೊಡಬೇಕಿದೆ ಎಂದು ಪ್ರಧಾನಮಂತ್ರಿ ಹೇಳಿದರು.

ಭವಿಷ್ಯಕ್ಕೆ ಸಿದ್ಧವಾದ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಪ್ರಯತ್ನಗಳನ್ನು ಪ್ರಧಾನಮಂತ್ರಿ ವಿವರಿಸಿದರು. ಜಾಗತಿಕ ಆವಿಷ್ಕಾರಿ ಶ್ರೇಯಾಂಕದಲ್ಲಿ ಭಾರತ ಅಗ್ರ 50ರ ಗುಂಪಿಗೆ ಸೇರ್ಪಡೆಯಾಗಿದೆ ಮತ್ತು ವಿಜ್ಞಾನ ಹಾಗೂ ಇಂಜಿನಿಯರಿಂಗ್ ಪ್ರಕಟಣೆಗಳಲ್ಲಿ ಭಾರತ ಮೂರನೇ ಸ್ಥಾನ ತಲುಪಿದೆ. ಅದು ನಾವು ಮೂಲ ಸಂಶೋಧನೆಗೆ ಎಷ್ಟು ಒತ್ತು ನೀಡುತ್ತಿದ್ದೇವೆ ಎಂಬುದನ್ನು ತೋರುತ್ತದೆ. ಕೈಗಾರಿಕೆಗಳು ಮತ್ತು ಸಂಸ್ಥೆಗಳ ನಡುವಿನ ಸಹಭಾಗಿತ್ವ ಬಲವರ್ಧನೆಗೊಳಿಸಲಾಗುತ್ತಿದೆ. ಜಗತ್ತಿನ ಬಹುತೇಕ ಎಲ್ಲ ದೊಡ್ಡ ಕಂಪನಿಗಳು ಭಾರತದಲ್ಲಿ ತಮ್ಮ ಸಂಶೋಧನಾ ಸೌಕರ್ಯಗಳನ್ನು ಸ್ಥಾಪಿಸುತ್ತಿವೆ. ಇತ್ತೀಚಿನ ವರ್ಷಗಳಲ್ಲಿ ಅಂತಹ ಸೌಕರ್ಯಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ.

ಭಾರತೀಯ ಯುವ ಜನಾಂಗಕ್ಕೆ ಸಂಶೋಧನೆ ಮತ್ತು ಆವಿಷ್ಕಾರಗಳ ಸಾಧ್ಯತೆಗಳು ಸೀಮಾತೀತವಾಗಿವೆ ಎಂದು ಪ್ರಧಾನಮಂತ್ರಿ ಹೇಳಿದರು. ಆದ್ದರಿಂದ ಅನುಶೋಧನೆಗಳ ಜೊತೆಗೆ ಆವಿಷ್ಕಾರಗಳಿಗೂ ಸಾಂಸ್ಥಿಕ ರೂಪ ನೀಡುವುದು ಅಷ್ಟೇ ಸಮಾನವಾಗಿ ಆಗಬೇಕಿದೆ. ನಮ್ಮ ಯುವಕರು ನಮ್ಮ ಬೌದ್ಧಿಕ ಸಂಪತ್ತನ್ನು ಹೇಗೆ ರಕ್ಷಿಸಿ ಕೊಳ್ಳಬೇಕು ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ನಾವು ಹೆಚ್ಚಿನ ಸಂಖ್ಯೆಯಲ್ಲಿ ಪೇಟೆಂಟ್ ಗಳನ್ನು ಪಡೆದು, ಅವುಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂಬುದನ್ನು ನೆನಪಿಸಿ ಕೊಳ್ಳಬೇಕು. ನಮ್ಮ ಸಂಶೋಧನೆ ಎಷ್ಟು ಬಲಿಷ್ಠ ಮತ್ತು ಮುಂಚೂಣಿಯಲ್ಲಿರುತ್ತದೋ ಅದೇ ರೀತಿ ನಾವು ಹಲವು ವಲಯಗಳಲ್ಲಿ ಪ್ರಬಲವಾಗಿ ಗುರುತಿಸಿಕೊಳ್ಳಲು ಸಾಧ್ಯವಿದೆ. ಇದರಿಂದಾಗಿ ಬಲಿಷ್ಠ ಇಂಡಿಯಾ ಬ್ರ್ಯಾಂಡ್ ನಿರ್ಮಾಣಕ್ಕೆ ಮುಂದಡಿ ಇಟ್ಟಂತಾಗುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.

ವಿಜ್ಞಾನಿಗಳನ್ನು ಕರ್ಮಯೋಗಿಗಳು ಎಂದು ಬಣ್ಣಿಸಿದ ಪ್ರಧಾನಮಂತ್ರಿ ಅವರು, ಅವರು ಪ್ರಯೋಗಾಲಯಗಳಲ್ಲಿ ಸಂತರ ರೀತಿ ಪ್ರಯತ್ನಗಳನ್ನು ನಡೆಸುತ್ತಿರುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ 130 ಕೋಟಿ ಭಾರತೀಯರ ಭರವಸೆ ಮತ್ತು ಆಶೋತ್ತರಗಳು ಅವರ ಮೇಲಿವೆ ಎಂದು ಹೇಳಿದರು.

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India trained 85,000 engineers in 4 years under Semicon 2.0: Vaishnaw

Media Coverage

India trained 85,000 engineers in 4 years under Semicon 2.0: Vaishnaw
NM on the go

Nm on the go

Always be the first to hear from the PM. Get the App Now!
...
This year’s Union Budget reinforces our commitment to sustaining and strengthening economic growth: PM Modi
March 03, 2026
This year’s Union Budget reinforces our commitment to sustaining and strengthening economic growth: PM
Our direction is clear, our resolve is clear,Build more, produce more, connect more, export more: PM
The world is looking for reliable and resilient manufacturing partners, and today India has the opportunity to firmly fulfill this role: PM
India has signed Free Trade Agreements with many countries, a very large door of opportunities has opened for us, and in such a situation, it is our responsibility to never compromise on quality: PM
The Carbon Capture, Utilisation and Storage Mission is an important initiative, integrating sustainability in core business strategy will be essential: PM
The industries that invest in clean technology in time will be able to build better access to new markets in the coming years: PM
A major transformation is happening in the world economy today, as markets now look not only at cost but also at sustainability: PM

नमस्कार !

गत् सप्ताह, बजट वेबिनार सीरीज के पहले वेबिनार का आयोजन हुआ, और मुझे ऐसा बताया गया कि वो बहुत सफल रहा, और बजट प्रावधानों के Implementation को लेकर हर किसी ने काफी उत्तम सुझाव दिए, सबकी सक्रिय भागीदारी का मैं स्वागत करता हूं और आज इस सीरीज के दूसरे वेबिनार का आयोजन हो रहा है। और मुझे बताया गया कि आज हजारों की तादाद में, ढेर सारे विषयों पर अनगिनत लोग अपने सुझाव देने वाले हैं। विषय के जो एक्सपर्ट्स हैं, वे भी हमसे जुड़ने वाले हैं। इतनी बड़ी तादाद में बजट पर चर्चा, ये अपने आप में एक बहुत सफल प्रयोग है। आप सब समय निकाल करके इस वेबिनार में जुड़े। मैं आप सभी का अभिनंदन करता हूं, आपका स्वागत करता हूं। इस वेबिनार की थीम देश की Economic Growth को निरंतर मजबूती देने से जुड़ी हुई है। आज जब भारत अपनी मजबूत economy से पूरे विश्व की उम्मीद बना हुआ है, आज जब ग्लोबल सप्लाई चैन re-shape हो रही है, तब अर्थव्यवस्था की तेज प्रगति विकसित भारत का भी बहुत बड़ा आधार है। हमारी दिशा स्पष्ट है, हमारा संकल्प स्पष्ट है, Build more, produce more, connect more और अब जरूरत है Export more, और निश्चित तौर पर इसमें आज आपके बीच जो मंथन होगा, इस मंथन से जो सुझाव निकलेंगे, उनकी बड़ी भूमिका होगी।

साथियों,

आप सब जानते हैं, मैन्युफैक्चरिंग, लॉजिस्टिक्स, हमारे MSME's, लघु उद्योग, कुटीर उद्योग, इतना ही नहीं, हमारे छोटे-बड़े शहर, ये अर्थव्यवस्था के पिलर्स के तौर पर दिखने में तो अलग-अलग लगते हैं, लेकिन वे सभी interconnected हैं। जैसे, मजबूत मैन्युफैक्चरिंग नए अवसर तैयार करती है, और इससे निर्यात में बढ़ोतरी होती है। Competitive MSMEs से flexibility और इनोवेशन को बढ़ावा मिलता है। बेहतर लॉजिस्टिक्स से लागत कम होती है। Well-planned शहर investment और talent दोनों को अपनी ओर खींचते हैं। इन सभी पिलर्स को इस साल के बजट ने बहुत मजबूती दी है।

लेकिन साथियों,

कोई भी दिशा अपने आप परिणाम नहीं बन जाती, जमीन पर बदलाव तब आता है, जब industry, financial institutions, राज्य सरकारें, मिलकर उसे वास्तविकता बनाते हैं। मेरी अपेक्षा है, इस वेबिनार में आप सभी अपने मंथन में कुछ विषयों को जरूर प्राथमिकता दें, जैसे मैन्युफैक्चरिंग और प्रॉडक्शन, ये कैसे बढ़े, Cost structure को कैसे कंपटीटिव बनाया जा सकता है, निवेश का प्रवाह कैसे तेज हो, और विकास कैसे देश के कोने-कोने तक पहुंचे। इस दिशा में आपके सुझाव बहुत अहम साबित होंगे।

साथियों,

मैन्युफैक्चरिंग के क्षेत्र में आज देश कोर इंडस्ट्रियल क्षमताओं को मजबूत कर रहा है। और इस मार्ग में जो चुनौतियां हैं, उन्हें भी दूर किया जा रहा है। Dedicated Rare Earth Corridors, कंटेनर मैन्युफैक्चरिंग, ऐसे सेक्टर्स पर फोकस करके हम अपने ट्रेड इकोसिस्टम को मजबूत करने का प्रयास कर रहे हैं। बजट में बायोफार्मा शक्ति मिशन की घोषणा भी की गई है। इस मिशन का उद्देश्य है, भारत को biologics और next-generation थेरेपीज के क्षेत्र में ग्लोबल हब बनाना। हम Advanced Biopharma Research और मैन्युफैक्चरिंग में लीडरशिप की ओर बढ़ना चाहते हैं।

साथियों,

आज दुनिया विश्वसनीय और resilient manufacturing partners की तलाश में है। भारत के पास यह अवसर है कि वह इस भूमिका को मजबूती से निभाए। इसके लिए आप सभी स्टेकहोल्डर्स को बहुत आत्मविश्वास के साथ निवेश करना होगा, नई टेक्नोलॉजी अपनानी होगी और रिसर्च में जो कंजूसी करते हैं ना, वो जमाना चला गया, अब हमें रिसर्च में बड़ा इनवेस्टमेंट करना होगा, और ग्लोबल स्टैंडर्ड के अनुरूप क्वालिटी भी सुनिश्चित करनी होगी, और मैं बार-बार कहता हूं कि अब हमें आगे बढ़ने के जब अवसर आए हैं, तो हमारा एक ही मंत्र होना चाहिए, क्वालिटी-क्वालिटी-क्वालिटी।

साथियों,

भारत ने बहुत सारे देशों के साथ फ्री ट्रेड एग्रीमेंट किए हैं। हमारे लिए अवसरों का, यानि अवसरों का बहुत बड़ा द्वार खुला है। ऐसे में हमारी ज़िम्मेदारी है कि हम क्वालिटी पर कभी भी समझौता ना करें, अगर किसी एक चीज पर सबसे ज्यादा ताकत, बुद्धि, शक्ति, समझ लगानी है, तो हमें क्वालिटी पर बहुत ज्यादा जोर देना चाहिए। हमारे प्रोडक्ट्स की क्वालिटी ग्लोबल स्टैंडर्ड, इतना ही नहीं, उससे भी बेहतर हो। और इसके लिए हमें दूसरे देशों की जरूरतों को, वहां के लोगों की अपेक्षाओं को भी, उसका अध्ययन करना पड़ेगा, रिसर्च करनी पड़ेगी, उसे समझना होगा। हमें दूसरे देशों के लोगों की पसंद और उनके कंफर्ट को स्टडी करना, ये सबसे बड़ी आवश्यकता है, और रिसर्च करनी चाहिए। मान लीजिए कोई छोटा पुर्जा मांगता है, और वो बहुत बड़ा जहाज बना रहा है, लेकिन हम पुर्जे में चलो भेज दो, क्या है? तो कौन लेगा आपका पुर्जा? भले आपके लिए वह छोटा पुर्जा है, लेकिन उसकी एक बहुत बड़ी जो मैन्युफैक्चरिंग की यूनिट है, उसमें बहुत बड़ा महत्व रखता है। और इसलिए आज दुनिया में हमारे लिए क्वालिटी ही इस कंपिटिटिव वर्ल्ड के अंदर सुनहरा अवसर बना देती है। हमें उनके हिसाब से यूजर फ्रेंडली प्रोडक्ट बनाने होंगे। तभी हम उन अवसरों का लाभ उठा पाएंगे, और जो फ्री ट्रेड एग्रीमेंट तैयार हो चुका है, अब ये विकास का महामार्ग आपके लिए तैयार है। मैं उम्मीद करता हूं कि इस वेबिनार में इस विषय पर फोकस करते हुए भी आप सब जरूर चर्चा करेंगे।

 

साथियों,

हमने MSME classification में जो Reforms किए, उसका व्यापक प्रभाव दिख रहा है। इससे enterprises का ये डर खत्म हुआ है कि वो अपना विस्तार करेंगे, तो उन्हें सरकार की ओर से मिलने वाले फायदे बंद हो जाएंगे। क्रेडिट तक MSME's की आसान पहुंच बनाने, टेक्नोलॉजी अपग्रेडेशन को बढ़ावा देने और कपैसिटी बिल्डिंग की दिशा में लगातार प्रयास हुए हैं।

लेकिन साथियों,

इन प्रयासों का असर तभी दिखाई देगा, जब MSMEs ज्यादा से ज्यादा कंपटीशन में उतरेंगे, और विजयी होने का लक्ष्य लेकर उतरेंगे। अब समय है कि MSMEs अपनी प्रोडक्टिविटी और बढ़ाएं, क्वालिटी स्टैंडर्ड्स को ऊंचा करें, डिजिटल प्रोसेस और मजबूत वैल्यू चैन से जुड़ें। इस दिशा में, इस वेबिनार में आपके सुझाव बहुत अहम होंगे।

साथियों,

इंफ्रास्ट्रक्चर और लॉजिस्टिक्स हमारी growth strategy के कोर पिलर्स हैं। इस वर्ष के बजट में रिकॉर्ड कैपिटल एक्सपेंडिचर का प्रस्ताव है। High-capacity transport systems का निर्माण, रेलवे, हाइवे, पोर्ट, एयरपोर्ट, वाटरवे के बीच बेहतर तालमेल, अलग-अलग फ्रेट कॉरिडोर और मल्टी-मोडल कनेक्टिविटी का विस्तार, ये सभी कदम खर्च कम करने और efficiency improve करने के लिए आवश्यक है। इसलिए, नए वाटरवेज, शिप रिपेयर फैसिलिटी और Regional Centres of Excellence हमारे लॉजिस्टिक इकोसिस्टम को मजबूत करेंगे। सात नए हाई-स्पीड रेल कॉरिडोर विकास के ग्रोथ कनेक्टर बनने वाले हैं। लेकिन आप भी जानते हैं, इस इंफ्रास्ट्रक्चर का वास्तविक लाभ तभी मिलेगा, जब उद्योग और निवेशक अपनी रणनीतियों को इस विजन के अनुरूप में ढालेंगे। ये रणनीतियां क्या होगी, इस पर भी आपको विस्तार से चर्चा करनी चाहिए, और मुझे पूरा विश्वास है कि आप जरूर इन बातों पर ध्यान देंगे।

 

साथियों,

भारत की विकास यात्रा में अर्बनाइजेशन, शहरीकरण का भी बहुत अहम रोल है। भारत की future growth इस बात पर निर्भर करेगी कि हम अपने शहरों को कितना effectively plan और manage करते हैं। हमारे Tier-II और Tier-III शहर, नए growth anchors कैसे बनें, इसके लिए भी इस बजट वेबिनार में आपके सुझाव बहुत अहम होंगे।

साथियों,

आज दुनिया की अर्थव्यवस्था में एक बड़ा परिवर्तन चल रहा है। बाजार अब केवल लागत नहीं देखते हैं, वे sustainability भी देखते हैं। इस दिशा में Carbon Capture, Utilisation and Storage Mission एक महत्वपूर्ण पहल है। अब sustainability उसको आपको core business strategy का हिस्सा बनाना ही होगा। जो उद्योग समय रहते क्लीन टेक्नोलॉजी में निवेश करेंगे, वे आने वाले वर्षों में नए-नए बाजारों तक बेहतर पहुंच बना पाएंगे। इस साल बजट ने नई दिशा दी है। मेरा आग्रह है कि उद्योग, निवेशक और विभिन्न संस्थान मिलकर इस पर आगे बढ़ें।

साथियों,

विकसित भारत का लक्ष्य collective ownership से ही हासिल किया जा सकता है। ये बजट वेबिनार भी सिर्फ discussion का प्लेटफॉर्म ना बने, सिर्फ अपने ज्ञान को हम बटोरते रहे, ऐसा नहीं होना चाहिए, बल्कि इसमें collective ownership दिखे, ये बहुत जरूरी है। बजट ने framework दिया है, अब आपको मिलकर momentum पैदा करना है। आपको हमारे प्रयासों में सहभागी बनना है। आपका हर सुझाव, हर अनुभव जमीन पर बेहतरीन नतीजें लाने की क्षमता रखता है। आपके सुझाव देश की प्रगति में माइलस्टोन बनें, इसी विश्वास के साथ आपका बहुत-बहुत धन्यवाद।

नमस्कार !