ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಚಾರ್ಯ ಮಹಾಮಂಡಲೇಶ್ವರ ಪೂಜ್ಯ ಸ್ವಾಮಿ ಅವದೇಶಾನಂದ ಗಿರಿ ಜಿ ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚಿಸಿದರು ಮತ್ತು ಎಲ್ಲಾ ಸಂತರ ಆರೋಗ್ಯದ ಕುರಿತು ವಿಚಾರಿಸಿದರು. ಆಡಳಿತಕ್ಕೆ ಸಂಪೂರ್ಣ ಸಹಕಾರ ನೀಡುತ್ತಿರುವ ಸಂತ ಸಮಾಜಕ್ಕೆ ಪ್ರಧಾನಮಂತ್ರಿ ಧನ್ಯವಾದಗಳನ್ನು ಹೇಳಿದರು.
ಈಗಾಗಲೇ ಎರಡು ಶಾಹಿ ಸ್ನಾನಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕುಂಭ ಮೇಳದ ಆಚರಣೆಯನ್ನು ಸಾಂಕೇತಿಕವಾಗಿ ಮುಂದುವರಿಸಲು ಪ್ರಧಾನಮಂತ್ರಿ ಮನವಿ ಮಾಡಿದರು. ಇದರಿಂದಾಗಿ ಸಾಂಕ್ರಾಮಿಕದ ವಿರುದ್ಧದ ಹೋರಾಟ ಮತ್ತಷ್ಟು ಬಲವರ್ಧನೆಯಾಗಲಿದೆ.
आचार्य महामंडलेश्वर पूज्य स्वामी अवधेशानंद गिरि जी से आज फोन पर बात की। सभी संतों के स्वास्थ्य का हाल जाना। सभी संतगण प्रशासन को हर प्रकार का सहयोग कर रहे हैं। मैंने इसके लिए संत जगत का आभार व्यक्त किया।
— Narendra Modi (@narendramodi) April 17, 2021
ಪ್ರಧಾನಮಂತ್ರಿಗಳ ಮನವಿಯನ್ನು ಗೌರವಿಸಿ ಉತ್ತರ ನೀಡಿರುವ ಆಚಾರ್ಯ ಮಹಾಮಂಡಲೇಶ್ವರ ಪೂಜ್ಯ ಸ್ವಾಮಿ ಅವದೇಶಾನಂದ ಗಿರಿ ಜಿ ಅವರು ದೊಡ್ಡ ಸಂಖ್ಯೆಯಲ್ಲಿ ಭಕ್ತಾದಿಗಳು ಸ್ನಾನಕ್ಕೆ ಆಗಮಿಸದಂತೆ ಮನವಿ ಮಾಡಿದ್ದಾರೆ ಹಾಗೂ ಸೂಕ್ತ ಕೋವಿಡ್ ನಡವಳಿಕೆ ಹಾಗೂ ನಿಯಮಗಳನ್ನು ಪಾಲನೆ ಮಾಡುವಂತೆ ಕೋರಿದ್ದಾರೆ.
माननीय प्रधानमंत्री जी के आह्वान का हम सम्मान करते हैं ! स्वयं एवं अन्यों के जीवन की रक्षा महत पुण्य है।मेरा धर्म परायण जनता से आग्रह है कि कोविड की परिस्थितियों को देखते हुए #COVID के नियमों का निर्वहन करें ! @narendramodi @AmitShah @TIRATHSRAWAT #KumbhMela2021 #कुम्भमेला https://t.co/zax1JA60nT
— Swami Avdheshanand (@AvdheshanandG) April 17, 2021
माननीय प्रधानमंत्री जी के आह्वान का हम सम्मान करते हैं ! जीवन की रक्षा महत पुण्य है।मेरा धर्म परायण जनता से आग्रह है कि कोविड की परिस्थितियों को देखते हुए भारी संख्या में स्नान के लिए न आएँ एवं नियमों का निर्वहन करें ! @narendramodi @AmitShah @TIRATHSRAWAT #KumbhMela2021 #कुम्भ https://t.co/dNjPPnDztQ
— Swami Avdheshanand (@AvdheshanandG) April 17, 2021


