ಮುನ್ನೆಚ್ಚರಿಕೆ ಹಾಗೂ ನಿಗಾ ಕಾಯ್ದುಕೊಳ್ಳುವಂತೆ ಪ್ರಧಾನಿ ಸಲಹೆ
​​​​​​​ಎಲ್ಲ ಗಂಭೀರ ಉಸಿರಾಟ ಸಮಸ್ಯೆ ಪ್ರಕರಣಗಳ ಪರೀಕ್ಷೆ ಹಾಗೂ ಪ್ರಯೋಗಾಲಯದ ಕಣ್ಗಾವಲು ಹೆಚ್ಚಿಸುವುದು ಮತ್ತು ಜಿನೋಮ್ ಅನುಕ್ರಮಣಿಕೆ ವೃದ್ಧಿಸುವ ಅಗತ್ಯವಿದೆ ಎಂದು ಪ್ರಧಾನಿ ಬಲವಾಗಿ ಪ್ರತಿಪಾದನೆ
ಸಿದ್ಧತೆಗಳನ್ನು ಖಾತ್ರಿಪಡಿಸಲು ಆಸ್ಪತ್ರೆಗಳಲ್ಲಿ ಮತ್ತೆ ಮಾಕ್ ಡ್ರಿಲ್ ಆಯೋಜಿಸಬೇಕು
ಮಾಸ್ಕ್ ಧರಿಸುವಿಕೆ ಮತ್ತು ಕೋವಿಡ್ ಸೂಕ್ತ ನಡವಳಿಕೆ ಕಡ್ಡಾಯ ಪಾಲನೆಗೆ ಪ್ರಧಾನಿ ಸಲಹೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ದೇಶಾದ್ಯಂತ ಸೋಂಕು ಮತ್ತು ಕೋವಿಡ್-19 ಸ್ಥಿತಿಗತಿ, ಆರೋಗ್ಯ ಮೂಲಸೌಕರ್ಯ ಮತ್ತು ಔಷಧಗಳ ಸಾಗಣೆ ಸಿದ್ಧತೆ, ಲಸಿಕಾ ಅಭಿಯಾನದ ಸ್ಥಿತಿಗತಿ, ಹೊಸ ಕೋವಿಡ್-19 ವೈರಾಣು ಕಾಣಿಸಿಕೊಂಡಿರುವುದು ಮತ್ತು ಜ್ವರದ ಲಕ್ಷಣಗಳು ಹರಡುವ ವಿಧಾನ ಹಾಗೂ ಇದರಿಂದ ದೇಶದ ಸಾರ್ವಜನಿಕ ಆರೋಗ್ಯದ ಮೇಲೆ ಆಗುತ್ತಿರುವ ಪರಿಣಾಮಗಳ ಕುರಿತು ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಯಿತು. ಕಳೆದ ಎರಡು ವಾರಗಳಿಂದೀಚೆಗೆ ದೇಶದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ ಮತ್ತು ದೇಶದಲ್ಲಿ ಜ್ವರದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಉನ್ನತ ಮಟ್ಟದ ಸಭೆ ನಡೆಸಲಾಯಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಆರೋಗ್ಯ ಕಾರ್ಯದರ್ಶಿ ಅವರು, ಭಾರತದಲ್ಲಿ ಹೆಚ್ಚುತ್ತಿರುವ ಪ್ರಕರಣಗಳೂ ಸೇರಿದಂತೆ ಜಾಗತಿಕ ಕೋವಿಡ್ ಸ್ಥಿತಿಗತಿ ಒಳಗೊಂಡಂತೆ ಹಲವು ಅಂಶಗಳ ಬಗ್ಗೆ ಸಮಗ್ರ ಪ್ರಾತ್ಯಕ್ಷಿಕೆಯನ್ನು ನೀಡಿದರು. ದಿನಕ್ಕೆ ಸರಾಸರಿ 888 ಪ್ರಕರಣಗಳಂತೆ ಮತ್ತು 2023ರ ಮಾರ್ಚ್ 22ಕ್ಕೆ ಕೊನೆಗೊಂಡ ವಾರದಲ್ಲಿ ವಾರದ ಪಾಸಿಟಿವಿಟಿ ದರ ಶೇ.0.98ರಷ್ಟು ದಾಖಲಾಗಿ, ಹೊಸ ಪ್ರಕರಣಗಳು ಅಲ್ಪ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಬಗ್ಗೆ ಪ್ರಧಾನಿ ಅವರಿಗೆ ವಿವರಿಸಲಾಯಿತು. ಆದರೂ ಸಹ ಇದೇ ವಾರದಲ್ಲಿ ಜಾಗತಿಕವಾಗಿ ದಿನದ ಸರಾಸರಿ ಪ್ರಕರಣಗಳ ಸಂಖ್ಯೆ 1.08 ಲಕ್ಷ ಇದೆ.

ಕಳೆದ 2022ರ ಡಿಸೆಂಬರ್ 22ರಂದು ನಡೆದ ಕೋವಿಡ್-19 ಪರಿಶೀಲನಾ ಸಭೆಯಲ್ಲಿ ಪ್ರಧಾನಮಂತ್ರಿಗಳು ನೀಡಿದ್ದ ನಿರ್ದೇಶನದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. 20 ಪ್ರಮುಖ ಕೋವಿಡ್ ಔಷಧಗಳು, 12 ಇತರ ಔಷಧಗಳು, 8 ಬಫರ್ ಔಷಧಗಳು ಮತ್ತು 1 ಜ್ವರದ ಔಷಧಗಳ ಬೆಲೆ ಹಾಗೂ ಲಭ್ಯತೆ ಬಗ್ಗೆ ನಿಗಾ ಇರಿಸಿರುವುದಾಗಿ ಪ್ರಧಾನಿ ಅವರಿಗೆ ತಿಳಿಸಲಾಯಿತು. 2022ರ ಡಿಸೆಂಬರ್ 22ರಂದು 22 ಸಾವಿರ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್  ನಡೆಸಲಾಯಿತು ಮತ್ತು ಅನಂತರ ಆಸ್ಪತ್ರೆಗಳಲ್ಲಿ ಹಲವು ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ.  

ದೇಶದಲ್ಲಿನ ಜ್ವರದ ಸ್ಥಿತಿಗತಿ ವಿಶೇಷವಾಗಿ ಕಳೆದ ಕೆಲವು ತಿಂಗಳಿನಿಂದೀಚೆಗೆ ಗಮನಿಸಿರುವಂತೆ ಎಚ್1ಎನ್1 ಮತ್ತು ಎಚ್3ಎನ್2 ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಬಗ್ಗೆ ಪ್ರಧಾನಿ ಅವರಿಗೆ ಮಾಹಿತಿ ನೀಡಲಾಯಿತು. ಪ್ರಧಾನಮಂತ್ರಿಗಳು ನಿಯೋಜಿತ ಐಎನ್ಎಸ್ಎಸಿಒಜಿ ಜಿನೋಮ್ ಸ್ವೀಕ್ವೆನ್ಸಿಂಗ್ ಲ್ಯಾಬೊರೇಟರಿಗಳಲ್ಲಿ ಎಲ್ಲ ಪಾಸಿಟಿವ್ ಪ್ರಕರಣಗಳನ್ನು ಜಿನೋಮ್ ಸ್ವೀಕ್ವೆನ್ಸಿಂಗ್  ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇದು ಹೊಸ ರೂಪಾಂತರಿಗಳು ಯಾವುದಾದರು ಇದ್ದರೆ ಅವುಗಳನ್ನು ಪತ್ತೆಹಚ್ಚಲು ಮತ್ತು ಸಕಾಲಕ್ಕೆ ಸ್ಪಂದಿಸಲು ನೆರವಾಗಲಿದೆ.  

ಆಸ್ಪತ್ರೆ ಆವರಣಗಳಲ್ಲಿ ರೋಗಿಗಳು, ಆರೋಗ್ಯ ವೃತ್ತಿಪರರು ಮತ್ತು ಆರೋಗ್ಯ ಕಾರ್ಯಕರ್ತರು ಎಲ್ಲರೂ ಮಾಸ್ಕ್ ಗಳನ್ನು ಧರಿಸುವುದೂ ಸೇರಿದಂತೆ ಕೋವಿಡ್ ಸೂಕ್ತ ನಡವಳಿಕೆಯನ್ನು ಪಾಲನೆ ಮಾಡಬೇಕು ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಹಿರಿಯ ನಾಗರಿಕರು ಮತ್ತು ಅನಾರೋಗ್ಯದಿಂದ ಬಳಲುತ್ತಿರುವವರು ಜನದಟ್ಟಣೆ ಪ್ರದೇಶಗಳಿಗೆ ಭೇಟಿ ನೀಡಿದಾಗ ಮಾಸ್ಕ್ ಧರಿಸುವುದು ಒಳ್ಳೆಯದು ಎಂದು ಪ್ರಧಾನಿ ಬಲವಾಗಿ ಪ್ರತಿಪಾದಿಸಿದರು.

ಐ ಆರ್ ಐ/ಎಸ್ಎಆರ್ ಐ(ಸಾರಿ) ಪ್ರಕರಣಗಳ ಪರಿಣಾಮಕಾರಿ ಮೇಲ್ವಿಚಾರಣೆ ಮತ್ತು ಸಾರ್ಸ್-ಸಿಒವಿ-2 ಮತ್ತು ಅಡೆನೊ ವೈರಾಣು, ಸೋಂಕು ಜ್ವರದ ಪರೀಕ್ಷೆಗಳನ್ನು ನಡೆಸಬೇಕು ಎಂದು ಅವರು ನಿರ್ದೇಶನ ನೀಡಿದರು. ಅಲ್ಲದೆ ಪ್ರಧಾನಿ ಅವರು, ಜ್ವರ ಮತ್ತು ಕೋವಿಡ್-19ಕ್ಕೆ ಅಗತ್ಯ ಔಷಧಗಳ ಸಾಗಣೆ ಮತ್ತು ಲಭ್ಯತೆಯನ್ನು ಖಾತರಿಪಡಿಸಲು ಒತ್ತು ನೀಡಬೇಕು ಹಾಗೂ ಸಾಕಷ್ಟು ಹಾಸಿಗೆಗಳೂ ಮತ್ತು ಮಾನವ ಸಂಪನ್ಮೂಲ ಲಭ್ಯತೆಯನ್ನು ಖಾತರಿಪಡಿಸಬೇಕು ಎಂದರು.

ಕೋವಿಡ್-19 ಸಾಂಕ್ರಾಮಿಕ ಇನ್ನೂ ಕೊನೆಗೊಂಡಿಲ್ಲ ಮತ್ತು ನಿರಂತರವಾಗಿ ದೇಶಾದ್ಯಂತ ಸ್ಥಿತಿಗತಿ ಮೇಲೆ ನಿಗಾ ಇಡುವ ಅಗತ್ಯವಿದೆ ಎಂದು ಅವರು ಪ್ರಮುಖವಾಗಿ ಪ್ರಸ್ತಾಪಿಸಿದರು. 5 ವಿಧದ ಕಾರ್ಯತಂತ್ರ – ಟೆಸ್ಟ್- ಟ್ರ್ಯಾಕ್ – ಟ್ರೀಟ್ – ವ್ಯಾಕ್ಸಿನೇಶನ್ ಮತ್ತು ಕೋವಿಡ್ ಸೂಕ್ತ ನಡವಳಿಕೆ, ಪ್ರಯೋಗಾಲಯ ನಿಗಾ ಹೆಚ್ಚಿಸುವುದು ಮತ್ತು ಎಲ್ಲ ಬಗೆಯ ಗಂಭೀರ ಉಸಿರಾಟ ಸಮಸ್ಯೆ(ಸಾರಿ) ಪ್ರಕರಣಗಳ ಪರೀಕ್ಷೆಯನ್ನು ಮುಂದುವರಿಸಿ, ಹೆಚ್ಚಿನ ಗಮನಹರಿಸುವಂತೆ ಪ್ರಧಾನಿ ಸಲಹೆ ನೀಡಿದರು. 
ನಮ್ಮ ಆಸ್ಪತ್ರೆಗಳು ಎಲ್ಲ ಬಗೆಯ ತುರ್ತು ಸಂದರ್ಭಗಳನ್ನು ಎದುರಿಸಲು ಸಿದ್ಧವಾಗಿವೆ ಎಂಬುದನ್ನು ಖಾತರಿಪಡಿಸಲು ನಿರಂತರವಾಗಿ ಮಾಕ್ ಡ್ರಿಲ್ ಗಳನ್ನು ನಡೆಸಬೇಕಾಗಿದೆ.

ಸಮುದಾಯ ಉಸಿರಾಟದ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು, ಜನದಟ್ಟಣೆ ಇರುವ ಸಾರ್ವಜನಿಕ ಪ್ರದೇಶಗಳಲ್ಲಿ ಕೋವಿಡ್ ಸೂಕ್ತ ನಡವಳಿಕೆಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಪ್ರಧಾನಮಂತ್ರಿ ಸಮುದಾಯಕ್ಕೆ ಕರೆ ನೀಡಿದರು.

ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಶ್ರೀ ಪಿ.ಕೆ. ಮಿಶ್ರಾ, ನೀತಿ ಆಯೋಗದ ಸದಸ್ಯ(ಆರೋಗ್ಯ) ವಿ.ಕೆ. ಪೌಲ್, ಸಂಪುಟ ಕಾರ್ಯದರ್ಶಿ ಶ್ರೀ ರಾಜೀವ್ ಗೌಬಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯದರ್ಶಿ, ಫಾರ್ಮಸೆಟಿಕಲ್ಸ್ ಕಾರ್ಯದರ್ಶಿ, ಜೈವಿಕ ತಂತ್ರಜ್ಞಾನ ಕಾರ್ಯದರ್ಶಿ, ಐಸಿಎಂಆರ್ ಮಹಾನಿರ್ದೇಶಕರು, ಪ್ರಧಾನಮಂತ್ರಿಗಳ ಕಾರ್ಯಾಲಯದ ಸಲಹೆಗಾರ ಶ್ರೀ ಅಮಿತ್ ಕರೆ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.  

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India to add 100 merchant ships to its fleet in 5 years: Sarbananda Sonowal

Media Coverage

India to add 100 merchant ships to its fleet in 5 years: Sarbananda Sonowal
NM on the go

Nm on the go

Always be the first to hear from the PM. Get the App Now!
...
ಆಗಸ್ಟ್ 27ರಂದು 'ಖೇಲೋ ಇಂಡಿಯಾ' ಸಂವಾದದಲ್ಲಿ ಯುವಜನರನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಮಂತ್ರಿ
August 26, 2026
'ಖೇಲೋ ಇಂಡಿಯಾ' ಸಂವಾದವು ಕ್ರೀಡೆ, ಯುವ ನಾಯಕತ್ವ, ನಾಗರಿಕ ಜವಾಬ್ದಾರಿ, ಸ್ವಯಂಸೇವೆ, ಫಿಟ್‌ನೆಸ್‌ ಮತ್ತು ರಾಷ್ಟ್ರ ನಿರ್ಮಾಣವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಲಿದೆ
'ಖೇಲೋ ಇಂಡಿಯಾ' ಸಂವಾದದ ಅಡಿಯಲ್ಲಿ ನಡೆಯುವ 'ಯುವ ಸಂವಾದ'ವು ಐದು ಪ್ರಮುಖ ವಿಷಯಗಳ ಮೇಲೆ ಕೇಂದ್ರೀಕರಿಸಲಿದೆ: ಕ್ರೀಡೆ, ಒಲಿಂಪಿಕ್ ಆಕಾಂಕ್ಷೆಗಳು, ಯುವ ನಾಯಕತ್ವ, 'ವಿಕಸಿತ ಭಾರತ' ಮತ್ತು 'ನಶಾ ಮುಕ್ತ ಯುವ' ಅಭಿಯಾನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 27ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಖೇಲೋ ಇಂಡಿಯಾ' ಸಂವಾದವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ಯುವಕರಿಗೆ ಭಾರತದ ಕ್ರೀಡಾ ಪ್ರಯಾಣದಲ್ಲಿ ತೊಡಗಿಸಿಕೊಳ್ಳಲು, ಅವರ ಆಕಾಂಕ್ಷೆಗಳನ್ನು ಹಂಚಿಕೊಳ್ಳಲು ಮತ್ತು ಬಲವಾದ ಯುವಕರ ನೇತೃತ್ವದ 'ವಿಕಸಿತ ಭಾರತ'ಕ್ಕಾಗಿ ತಮ್ಮ ವಿಚಾರಗಳನ್ನು ನೀಡಲು ಸಹಾಯ ಮಾಡುವುದು ಕಾರ್ಯಕ್ರಮದ ಉದ್ದೇಶವಾಗಿದೆ.

2026ರ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ 'ಮೇರಾ ಯುವ ಭಾರತ್' (ಮೈ ಭಾರತ್‌) ಆಯೋಜಿಸಿರುವ ಈ ಕಾರ್ಯಕ್ರಮವು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ ಪ್ರತಿಯೊಂದು ಜಿಲ್ಲೆಯ ಎರಡು ಕಾಲೇಜುಗಳಲ್ಲಿ ಯುವಕರ ಭಾಗವಹಿಸುವಿಕೆಯೊಂದಿಗೆ ದೇಶಾದ್ಯಂತ ನಡೆಯಲಿದೆ. ಯುವಕರ ಆಕಾಂಕ್ಷೆಗಳನ್ನು ರಾಷ್ಟ್ರೀಯ ಅಭಿವೃದ್ಧಿ ಕಾರ್ಯಸೂಚಿಯ ಕೇಂದ್ರಭಾಗದಲ್ಲಿ ಇರಿಸಿಕೊಂಡು ಸದೃಢ, ಶಿಸ್ತುಬದ್ಧ ಮತ್ತು ಕ್ರೀಡಾ ರಾಷ್ಟ್ರವನ್ನು ನಿರ್ಮಿಸುವ ಪ್ರಧಾನಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ.

ರಾಷ್ಟ್ರವ್ಯಾಪಿ ನಡೆಯುವ 'ಖೇಲೋ ಇಂಡಿಯಾ ಸಂವಾದ'ವು ಕ್ರೀಡೆ, ಯುವ ನಾಯಕತ್ವ, ನಾಗರಿಕ ಜವಾಬ್ದಾರಿ, ಸ್ವಯಂ ಸೇವೆ, ಫಿಟ್ನೆಸ್ ಮತ್ತು ರಾಷ್ಟ್ರ ನಿರ್ಮಾಣವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಲಿದೆ. ಭಾರತದ ಯುವ ಮತ್ತು ಕ್ರೀಡಾ ಪರಿಸರ ವ್ಯವಸ್ಥೆಯ ಕುರಿತಾದ ನಿರಂತರ ಸಂವಾದದಲ್ಲಿ ಯುವಕರ ಆಲೋಚನೆಗಳು ಮತ್ತು ದೃಷ್ಟಿಕೋನಗಳಿಗೆ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಜೊತೆಗೆ, ದೇಶದ ಕ್ರೀಡಾ ಮಹತ್ವಾಕಾಂಕ್ಷೆಗಳೊಂದಿಗೆ ಯುವಕರು ತೊಡಗಿಸಿಕೊಳ್ಳಲು ಇದು ನೇರ ಮಾರ್ಗವನ್ನು ಒದಗಿಸುತ್ತದೆ.

ರಾಷ್ಟ್ರೀಯ ಕಾರ್ಯಕ್ರಮದ ನಂತರ ಯುವ ಭಾಗಿದಾರರು, 'ಮೈ ಭಾರತ್' ಸ್ವಯಂಸೇವಕರು, ಸ್ಥಳೀಯ ಕ್ರೀಡಾಪಟುಗಳು ಮತ್ತು ಜನಪ್ರತಿನಿಧಿಗಳನ್ನು ಒಳಗೊಂಡ ಸ್ಥಳೀಯ ಸಂವಾದಗಳು ನಡೆಯಲಿವೆ. ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಯುವಕರು ಮತ್ತು ಪ್ರಮುಖ ಭಾರತೀಯ ಅಥ್ಲೀಟ್‌ಗಳು ಹಾಗೂ ಪದಕ ವಿಜೇತರ ನಡುವಿನ ನೇರ ಸಂವಾದವು ಈ ಉಪಕ್ರಮದ ಪ್ರಮುಖ ಲಕ್ಷಣವಾಗಿದೆ. 'ಯುವ ಸಂವಾದ'ವು ಈ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದು, ಇದರಲ್ಲಿ ಯುವ ಭಾಗಿದಾರರನ್ನು ತಮ್ಮ ಸ್ವಂತ ಆಲೋಚನೆಗಳು, ದೃಷ್ಟಿಕೋನಗಳು ಮತ್ತು ಆಕಾಂಕ್ಷೆಗಳನ್ನು ವ್ಯಕ್ತಪಡಿಸಲು ಆಹ್ವಾನಿಸಲಾಗುತ್ತದೆ. ಈ ಸಂವಾದವನ್ನು ಐದು ವಿಷಯಗಳ ಸುತ್ತ ರಚಿಸಲಾಗಿದೆ:

  • ಉತ್ತಮ ಸೌಲಭ್ಯಗಳು, ತರಬೇತಿ, ಕ್ರೀಡಾ ವಿಜ್ಞಾನ ಮತ್ತು ಎಲ್ಲರನ್ನೂ ಒಳಗೊಂ ಭಾಗವಹಿಸುವಿಕೆಯ ಮೂಲಕ ಭಾರತದ ಕ್ರೀಡಾ ಪರಿಸರ ವ್ಯವಸ್ಥೆಯನ್ನು ಸುಧಾರಿಸುವುದು;
  • ವೈಜ್ಞಾನಿಕ ಪ್ರತಿಭಾ ಶೋಧನೆ, ಪಾರದರ್ಶಕ ಆಯ್ಕೆ ಮತ್ತು ದೀರ್ಘಕಾಲೀನ ಕ್ರೀಡಾಪಟು ಅಭಿವೃದ್ಧಿಯ ಮೂಲಕ 2036ರ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಗೆ ಪ್ರತಿಭೆಗಳನ್ನು ಪೋಷಿಸುವುದು;
  • ಆಡಳಿತ ವೇದಿಕೆಗಳು ಮತ್ತು 'ಮೈ ಭಾರತ್' ನೇತೃತ್ವದ ಸ್ವಯಂಸೇವಕ ಸೇವೆಯ ಮೂಲಕ ಯುವ ನಾಯಕರನ್ನು ಸೃಷ್ಟಿಸುವುದು;
  • ನಾಗರಿಕ ಪ್ರಜ್ಞೆ, ಭವಿಷ್ಯಕ್ಕೆ ಸಿದ್ಧವಾದ ಕೌಶಲ್ಯಗಳು ಮತ್ತು ರಚನಾತ್ಮಕ ಸ್ವಯಂಸೇವಕ ಸೇವೆಯನ್ನು ಬೆಳೆಸುವ ಮೂಲಕ ವಿಕಸಿತ ಭಾರತಕ್ಕಾಗಿ ಯುವಕರನ್ನು ಸಬಲೀಕರಣಗೊಳಿಸುವುದು;
  • ಮಾದಕ ವ್ಯಸನದ ವಿರುದ್ಧ ಹೋರಾಡಲು ಕ್ರೀಡೆ ಮತ್ತು ಸಮಾನಮನಸ್ಕ ಜಾಲಗಳನ್ನು ಬಳಸಿಕೊಳ್ಳುವ 'ನಶಾ ಮುಕ್ತ ಯುವ ಆಂದೋಲ'ನವನ್ನು ಉತ್ತೇಜಿಸುವುದು. ಇದು 2026ರ ಆಗಸ್ಟ್ 2ರಂದು ಪ್ರಾರಂಭಿಸಲಾದ ಪ್ರಧಾನಮಂತ್ರಿಯವರ 100 ವಾರಗಳ ರಾಷ್ಟ್ರವ್ಯಾಪಿ ಅಭಿಯಾನದ ಅಡಿಯಲ್ಲಿ ಸಾಪ್ತಾಹಿಕ 'ಜನ ಭಾಗೀದಾರಿ' ಚಟುವಟಿಕೆಗಳಿಂದ ಬೆಂಬಲಿತವಾಗಿದೆ.