ಎಲ್ಲಾ ಸುಧಾರಣೆಗಳ ಹೃದಯಭಾಗದಲ್ಲಿ ನಾಗರಿಕರ ಕಲ್ಯಾಣವೇ ಇರಬೇಕು ಎಂದು ಪ್ರಧಾನಮಂತ್ರಿ ಅವರು ಹೇಳಿದರು
ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಆಡಳಿತ ಪ್ರಕ್ರಿಯೆಗಳನ್ನು ವಿಕಸನಗೊಳಿಸುವ ಅಗತ್ಯವನ್ನು ಪ್ರಧಾನಮಂತ್ರಿ ಪ್ರತಿಪಾದಿಸಿದರು
ರಾಷ್ಟ್ರದ ಅಭಿವೃದ್ಧಿ ಗುರಿಗಳನ್ನು ತಲುಪಲು 'ಸಂಪೂರ್ಣ ಸರ್ಕಾರದ ವಿಧಾನ' ಮತ್ತು ಅಡೆತಡೆಗಳನ್ನು ಒಡೆಯಲು ಪ್ರಧಾನಮಂತ್ರಿ ಕರೆ ನೀಡಿದರು
ವಿಕಸಿತ ಭಾರತ ನಿರ್ಮಾಣದ ಕನಸು ಜನಾಂದೋಲನವಾಗಬೇಕು ಮತ್ತು ಯುವಜನತೆಯು ಇದರ ಅಡಿಪಾಯವಾಗಿರಬೇಕು ಎಂದು ಪ್ರಧಾನಮಂತ್ರಿ ಹೇಳಿದರು
ಮಾದಕ ದ್ರವ್ಯ ಸೇವನೆಯ ವಿರುದ್ಧ ಹೋರಾಡಲು ಮತ್ತು ಯುವಜನತೆಯನ್ನು ಸಬಲೀಕರಣಗೊಳಿಸಲು ಸಮನ್ವಯದ ಕ್ರಮದ ಅಗತ್ಯವನ್ನು ಹೇಳಿದ ಪ್ರಧಾನಮಂತ್ರಿ
ಭಾರತವನ್ನು ಜಾಗತಿಕ ಕ್ರೀಡಾ ಕೇಂದ್ರವಾಗಿ ರೂಪಿಸಲು ಸಮಗ್ರ ವಿಧಾನಕ್ಕೆ ಪ್ರಧಾನಮಂತ್ರಿ ಮಹತ್ವ
ಪಿಎಂ-ಕುಸುಮ್‌ ನ ಪರಿವರ್ತನಾ ಸಾಮರ್ಥ್ಯ ಮತ್ತು ಜಾಗತಿಕ ಕೌಶಲ್ಯ ಮ್ಯಾಪಿಂಗ್‌ ನ ಅಗತ್ಯವನ್ನು ಪ್ರಧಾನಮಂತ್ರಿ ಹೇಳಿದರು
ತಮ್ಮ ತಮ್ಮ ಕ್ಷೇತ್ರಗಳ ವಿವಿಧ ಉಪಕ್ರಮಗಳು ಮತ್ತು ಸವಾಲುಗಳ ಕುರಿತು ತಮ್ಮ ಅನುಭವಗಳು ಹಾಗೂ ದೃಷ್ಟಿಕೋನಗಳನ್ನು ಹಂಚಿಕೊಂಡ ಕಾರ್ಯದರ್ಶಿಗಳು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಅಧಿಕೃತ ನಿವಾಸವಾದ 7, ಲೋಕ ಕಲ್ಯಾಣ ಮಾರ್ಗದಲ್ಲಿ, ವಿಕಸಿತ ಭಾರತದ ಗುರಿಗಳತ್ತ ಗ್ರಾಮೀಣಾಭಿವೃದ್ಧಿ, ಕೃಷಿ, ಸಮಾಜ ಕಲ್ಯಾಣ ಮತ್ತು ಸಂಬಂಧಿತ ವಲಯಗಳ ಪ್ರಗತಿಯನ್ನು ಪರಿಶೀಲಿಸಲು ಕಾರ್ಯದರ್ಶಿಗಳೊಂದಿಗೆ ನಡೆದ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಎಲ್ಲಾ ಸುಧಾರಣೆಗಳ ಹೃದಯಭಾಗದಲ್ಲಿ ನಾಗರಿಕರ ಕಲ್ಯಾಣವೇ ಇರಬೇಕು ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಜನರ ಅಗತ್ಯಗಳ ಸುತ್ತ ವಿನ್ಯಾಸಗೊಳಿಸಲಾದ ಸುಧಾರಣೆಗಳು ನೈಜ ವೇಗವನ್ನು ಪಡೆದುಕೊಳ್ಳಬೇಕು ಮತ್ತು ಅರ್ಥಪೂರ್ಣ ಪರಿವರ್ತನೆಯನ್ನು ತರಬೇಕು ಎಂದು ಅವರು ಹೇಳಿದರು. ಸುಧಾರಣೆಗಳ ಉದ್ದೇಶವು ಕೇವಲ ಸರ್ಕಾರದ ಕಾರ್ಯಾಚರಣೆಯನ್ನು ಸುಧಾರಿಸುವುದು ಮಾತ್ರವಲ್ಲ, ಬದಲಿಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಪ್ರಯಾಣವನ್ನು ವೇಗಗೊಳಿಸುವುದಾಗಿದೆ ಎಂದು ಅವರು ಪ್ರತಿಪಾದಿಸಿದರು.

ಆಡಳಿತ ವ್ಯವಸ್ಥೆಗಳು ಕ್ಷಿಪ್ರ ಬದಲಾವಣೆಗಳಿಗೆ ಸಾಕ್ಷಿಯಾಗುತ್ತಿವೆ ಎಂದು ಹೇಳಿದ ಪ್ರಧಾನಮಂತ್ರಿ ಅವರು, ಕ್ರಿಯಾಶೀಲ ಮತ್ತು ವಿಕಸನಗೊಳ್ಳುತ್ತಿರುವ ವಾತಾವರಣದ ಅಗತ್ಯಗಳನ್ನು ಪರಿಣಾಮಕಾರಿಯಾಗಿ ಪೂರೈಸಲು ಆಡಳಿತ ಪ್ರಕ್ರಿಯೆಗಳನ್ನು ಅಳವಡಿಸಿಕೊಳ್ಳುವ ಮತ್ತು ಬಲಪಡಿಸುವ ಪ್ರಾಮುಖ್ಯತೆಯನ್ನು ಹೇಳಿದರು. ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಉದ್ಭವಿಸುತ್ತಿರುವ ಅಗತ್ಯಗಳ ಸಮಗ್ರ ಮ್ಯಾಪಿಂಗ್ ಅನ್ನು ಕೈಗೊಳ್ಳಲು ಅವರು ಸಲಹೆ ನೀಡಿದರು.

ರಾಷ್ಟ್ರದ ಅಭಿವೃದ್ಧಿ ಗುರಿಗಳನ್ನು ತಲುಪಲು ಸಂಪೂರ್ಣ ಸರ್ಕಾರ ವಿಧಾನದ ಅಗತ್ಯವನ್ನು ಪ್ರಧಾನಮಂತ್ರಿ ಅವರು ಹೇಳಿದರು. ವಿಕಸಿತ ಭಾರತ ನಿರ್ಮಾಣದ ಕನಸು 'ಜನಾಂದೋಲನ'ವಾಗಬೇಕು ಮತ್ತು ಭಾರತದ ಯುವಜನತೆಯು ಈ ದೃಷ್ಟಿಕೋನದ ಅಡಿಪಾಯವಾಗಬೇಕು ಎಂದು ಅವರು ಒತ್ತಿ ಹೇಳಿದರು.

ಯುವಜನರ ಮಾದಕ ದ್ರವ್ಯ ಸೇವನೆಯ ಗಂಭೀರ ಸಮಸ್ಯೆಯನ್ನು ಎದುರಿಸುವ ಪ್ರಾಮುಖ್ಯತೆಯನ್ನು ಪ್ರಧಾನಮಂತ್ರಿ ಅವರು ಹೇಳಿದರು. ಇಲಾಖೆಯ ಅಡೆತಡೆಗಳನ್ನು ಒಡೆದುಹಾಕಲು ಮತ್ತು ಯುವ-ಕೇಂದ್ರಿತ ಉಪಕ್ರಮಗಳಲ್ಲಿ ಹೆಚ್ಚಿನ ಅಂತರ-ಇಲಾಖೆಯ ಸಮನ್ವಯವನ್ನು ಬೆಳೆಸಲು ಸಾಂಸ್ಥಿಕ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಪ್ರಯತ್ನಗಳನ್ನು ಮಾಡಬೇಕು ಎಂದು ಅವರು ಸಲಹೆ ನೀಡಿದರು.

ಕ್ರೀಡೆಯ ಅಭಿವೃದ್ಧಿಗಾಗಿ ಸಮಗ್ರ ವಿಧಾನವನ್ನು ಅಳವಡಿಸಿಕೊಳ್ಳುವ ಅಗತ್ಯವನ್ನು ಪ್ರಧಾನಮಂತ್ರಿ ಅವರು ಹೇಳಿದರು. ಕ್ರೀಡಾ ಪ್ರವಾಸೋದ್ಯಮವು ಪ್ರಮುಖ ಗಮನ ಹರಿಸುವ ಕ್ಷೇತ್ರವಾಗಿ ಹೊರಹೊಮ್ಮುತ್ತಿರುವುದರಿಂದ, ಭಾರತವು ಜಾಗತಿಕ ಕ್ರೀಡಾ ಕೇಂದ್ರವಾಗಿ ಸ್ಥಾಪಿತವಾಗಲು ಪ್ರಮುಖ ಅಂತರರಾಷ್ಟ್ರೀಯ ಕ್ರೀಡಾಕೂಟಗಳನ್ನು ಆಯೋಜಿಸುವ ಗುರಿ ಹೊಂದಿರಬೇಕು ಎಂದು ಅವರು ಹೇಳಿದರು. ಕ್ರೀಡಾ ವಲಯದಲ್ಲಿ ತಂತ್ರಜ್ಞಾನವನ್ನು ಉತ್ತೇಜಿಸುವ ಮತ್ತು ನವೋದ್ಯಮಗಳ ಮೂಲಕ ನಾವೀನ್ಯತೆಯನ್ನು ಪೋಷಿಸುವ ಪ್ರಾಮುಖ್ಯತೆಯನ್ನು ಅವರು ಹೇಳಿದರು.

ಪಿಎಂ ಕುಸುಮ್ ಯೋಜನೆಯಂತಹ ಉಪಕ್ರಮಗಳನ್ನು ರೈತರು ವ್ಯಾಪಕವಾಗಿ ಅಳವಡಿಸಿಕೊಳ್ಳುವುದು ಕೃಷಿ ಕ್ಷೇತ್ರಕ್ಕೆ ಪರಿವರ್ತನಾತ್ಮಕ ಬದಲಾವಣೆಗಳನ್ನು ತರಬಲ್ಲದು ಎಂದು ಪ್ರಧಾನಮಂತ್ರಿ ಹೇಳಿದರು. ಅಂತರರಾಷ್ಟ್ರೀಯ ಅವಕಾಶಗಳು ಮತ್ತು ಭವಿಷ್ಯದ ಅಗತ್ಯಗಳೊಂದಿಗೆ ಉತ್ತಮ ಹೊಂದಾಣಿಕೆಯನ್ನು ಖಚಿತಪಡಿಸಿಕೊಳ್ಳಲು ಜಾಗತಿಕ ಕೌಶಲ್ಯ ಅಗತ್ಯಗಳ ಮ್ಯಾಪಿಂಗ್ ಮಾಡುವ ಅಗತ್ಯವನ್ನು ಅವರು ಒತ್ತಿಹೇಳಿದರು.

ಕಾರ್ಯದರ್ಶಿಗಳು ತಮ್ಮ ತಮ್ಮ ಕ್ಷೇತ್ರಗಳ ವಿವಿಧ ಉಪಕ್ರಮಗಳು ಮತ್ತು ಸವಾಲುಗಳ ಕುರಿತು ತಮ್ಮ ಅನುಭವಗಳು ಹಾಗೂ ದೃಷ್ಟಿಕೋನಗಳನ್ನು ಹಂಚಿಕೊಂಡರು. ಪ್ರಧಾನಮಂತ್ರಿಯವರು ತಮ್ಮ ಸಲಹೆಗಳನ್ನು ಮತ್ತು ಭವಿಷ್ಯದ ಕ್ರಿಯಾ ಯೋಜನೆಗಾಗಿ ತಮ್ಮ ದೃಷ್ಟಿಕೋನವನ್ನು ಹಂಚಿಕೊಂಡರು. ಈ ಸಭೆಯು ಪರಿಣಾಮಕಾರಿ ಅನುಷ್ಠಾನ, ಹೆಚ್ಚಿನ ಸಮನ್ವಯ ಮತ್ತು ವಿಕಸಿತ ಭಾರತದ ಗುರಿಗಳತ್ತ ವೇಗವರ್ಧಿತ ಪ್ರಗತಿಯ ಮೇಲೆ ಗಮನ ಕೇಂದ್ರೀಕರಿಸುವ ಮೂಲಕ ವಿವಿಧ ವಲಯಗಳಾದ್ಯಂತ ಸಮಗ್ರ ಮತ್ತು ಫಲಪ್ರದ ಚರ್ಚೆಗಳಿಗೆ ಸಾಕ್ಷಿಯಾಯಿತು.

ಈ ಸಭೆಯಲ್ಲಿ ಸಂಪುಟ ಕಾರ್ಯದರ್ಶಿ, ಪ್ರಮುಖ ಸಚಿವಾಲಯಗಳ ಕಾರ್ಯದರ್ಶಿಗಳು ಹಾಗೂ ಪ್ರಧಾನಮಂತ್ರಿಗಳ ಕಚೇರಿಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s continuing tradition of celebrating its teachers

Media Coverage

India’s continuing tradition of celebrating its teachers
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 5 ಸೆಪ್ಟೆಂಬರ್ 2026
September 05, 2026

The New Indian Equation: Policy + People = Tangible Progress Under PM Modi