ವಿಶೇಷ ಆರ್ಥಿಕ ವಲಯ ಮತ್ತು ಆಳ ಸಮುದ್ರಗಳಲ್ಲಿನ ಮೀನುಗಾರಿಕೆ ಚರ್ಚೆಯ ಕೇಂದ್ರಬಿಂದು
ಮೀನುಗಾರಿಕೆ ಮತ್ತು ಮೀನುಗಾರರ ಸುರಕ್ಷತೆಯನ್ನು ಹೆಚ್ಚಿಸಲು ಉಪಗ್ರಹ ತಂತ್ರಜ್ಞಾನದ ಬಳಕೆಗೆ ಪ್ರಧಾನಮಂತ್ರಿ ಕರೆ
ಸ್ಮಾರ್ಟ್ ಬಂದರುಗಳು, ಡ್ರೋನ್ ಸಾಗಣೆ ಮತ್ತು ಮೌಲ್ಯವರ್ಧಿತ ಪೂರೈಕೆ ಸರಪಳಿಗಳೊಂದಿಗೆ ಮೀನುಗಾರಿಕೆ ಆಧುನೀಕರಣಕ್ಕೆ ಪ್ರಧಾನಮಂತ್ರಿಗಳ ಒತ್ತು
ಕೃಷಿ ವಲಯದಲ್ಲಿ ಕೃಷಿ ತಂತ್ರಜ್ಞಾನ ಇರುವಂತೆಯೇ, ಉತ್ಪಾದನೆ, ಸಂಸ್ಕರಣೆ ಮತ್ತು ಮಾರುಕಟ್ಟೆ ವಿಧಾನಗಳನ್ನು ಉತ್ತಮಪಡಿಸಲು ಮೀನುಗಾರಿಕೆ ವಲಯದಲ್ಲಿ ಮೀನು ತಂತ್ರಜ್ಞಾನದ ವ್ಯಾಪಕ ಅಳವಡಿಕೆಗೆ ಪ್ರಧಾನಮಂತ್ರಿಗಳ ಸಲಹೆ
ಅಮೃತ ಸರೋವರಗಳಲ್ಲಿ ಮೀನುಗಾರಿಕೆ ಮತ್ತು ಜೀವನೋಪಾಯಕ್ಕಾಗಿ ಅಲಂಕಾರಿಕ ಮೀನುಗಾರಿಕೆ ಉತ್ತೇಜನದ ಕುರಿತು ಪ್ರಧಾನಮಂತ್ರಿಗಳ ಚರ್ಚೆ
ಇಂಧನಕ್ಕಾಗಿಯೂ, ಪೌಷ್ಟಿಕಾಂಶಕ್ಕಾಗಿಯೂ, ಔಷಧಗಳ ತಯಾರಿಕೆಗೂ ಮತ್ತು ಇತರ ಕ್ಷೇತ್ರಗಳಿಗೂ ಕಡಲಕಳೆಗಳ ಬಹುಮುಖ ಬಳಕೆಯ ಸಾಧ್ಯತೆಗಳ ಪರಿಶೀಲನೆಗೆ ಪ್ರಧಾನಮಂತ್ರಿಗಳ ಸಲಹೆ
ಒಳನಾಡಿನ ಪ್ರದೇಶಗಳಲ್ಲಿ ಮೀನು ಪೂರೈಕೆಯನ್ನು ಹೆಚ್ಚಿಸಲು ಕಾರ್ಯತಂತ್ರ ರೂಪಿಸಲು ಪ್ರಧಾನಮಂತ್ರಿಗಳ ಕರೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಮೀನುಗಾರಿಕೆ ವಲಯದ ಪ್ರಗತಿಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದರು. ಈ ಸಭೆಯಲ್ಲಿ ವಿಶೇಷವಾಗಿ ವಿಶೇಷ ಆರ್ಥಿಕ ವಲಯ (EEZ) ಮತ್ತು ಆಳ ಸಮುದ್ರದಲ್ಲಿನ ಮೀನುಗಾರಿಕೆಯ ಮೇಲೆ ಗಮನಹರಿಸಲಾಯಿತು.  

ಮೀನು ಸಂಪನ್ಮೂಲಗಳನ್ನು ಉತ್ತಮವಾಗಿ ಬಳಸಿಕೊಳ್ಳಲು ಮತ್ತು ಮೀನುಗಾರರಿಗೆ ಸುರಕ್ಷತಾ ಸೂಚನೆಗಳನ್ನು ನೀಡಲು ಉಪಗ್ರಹ ತಂತ್ರಜ್ಞಾನದ ವಿಸ್ತೃತ ಬಳಕೆಯನ್ನು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು.

ಸ್ಮಾರ್ಟ್ ಬಂದರುಗಳು ಮತ್ತು ಮಾರುಕಟ್ಟೆಗಳು, ಮೀನುಗಾರಿಕೆ ಉತ್ಪನ್ನಗಳ ಸಾಗಣೆ ಮತ್ತು ಮಾರುಕಟ್ಟೆಗಾಗಿ ಡ್ರೋನ್ಗಳ ಬಳಕೆಯ ಮೂಲಕ ಈ ವಲಯವನ್ನು ಆಧುನೀಕರಿಸಲು ಪ್ರಧಾನಮಂತ್ರಿಗಳು ಒತ್ತು ನೀಡಿದರು. ಪೂರೈಕೆ ಸರಪಳಿಗೆ ಮೌಲ್ಯವನ್ನು ಸೇರಿಸಲು ಆರೋಗ್ಯಕರ ಕಾರ್ಯನಿರ್ವಹಣಾ ವ್ಯವಸ್ಥೆಯ ಕಡೆಗೆ ಸಾಗಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.

ಇದಲ್ಲದೆ, ಪ್ರಧಾನಮಂತ್ರಿಯವರು ನಾಗರಿಕ ವಿಮಾನಯಾನ ಇಲಾಖೆಯೊಂದಿಗೆ ಸಮಾಲೋಚಿಸಿ, ಉತ್ಪಾದನಾ ಕೇಂದ್ರಗಳಿಂದ ಹತ್ತಿರದ ದೊಡ್ಡ ನಗರ/ಪಟ್ಟಣಗಳ ಮಾರುಕಟ್ಟೆಗಳಿಗೆ ತಾಜಾ ಮೀನುಗಳನ್ನು ಸಾಗಿಸಲು ತಾಂತ್ರಿಕ ನಿಯಮಾವಳಿಗಳ ಪ್ರಕಾರ ಡ್ರೋನ್ಗಳ ಬಳಕೆಯ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಸೂಚಿಸಿದರು.

ಉತ್ಪನ್ನದ ಸಂಸ್ಕರಣೆ ಮತ್ತು ಪ್ಯಾಕೇಜಿಂಗ್ ನಲ್ಲಿ ಸುಧಾರಣೆಗಳ ಅಗತ್ಯವನ್ನು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಖಾಸಗಿ ವಲಯದಿಂದ ಹೂಡಿಕೆಗಳನ್ನು ಸುಲಭಗೊಳಿಸುವ ಕುರಿತು ಸಹ ಚರ್ಚಿಸಲಾಯಿತು.

ತಂತ್ರಜ್ಞಾನದ ಬಳಕೆಯ ಕುರಿತು ಮಾತನಾಡಿದ ಪ್ರಧಾನಮಂತ್ರಿಯವರು, ಕೃಷಿ ವಲಯದಲ್ಲಿ ಕೃಷಿ ತಂತ್ರಜ್ಞಾನವನ್ನು ಅಳವಡಿಸಿಕೊಂಡಿರುವಂತೆಯೇ, ಮೀನುಗಾರಿಕೆ ವಲಯದಲ್ಲಿ ಉತ್ಪಾದನೆ, ಸಂಸ್ಕರಣೆ ಮತ್ತು ಮಾರುಕಟ್ಟೆ ಪದ್ಧತಿಗಳನ್ನು ಸುಧಾರಿಸಲು 'ಮೀನು ತಂತ್ರಜ್ಞಾನ'ವನ್ನು ಹೆಚ್ಚಾಗಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಅಮೃತ ಸರೋವರಗಳಲ್ಲಿ ಮೀನುಗಾರಿಕೆ ಕೈಗೊಳ್ಳುವುದರಿಂದ ಆ ಜಲಮೂಲಗಳ ಸುಸ್ಥಿರತೆ ಹೆಚ್ಚಾಗುವುದರ ಜೊತೆಗೆ ಮೀನುಗಾರರ ಬದುಕಿಗೂ ಅನುಕೂಲವಾಗುತ್ತದೆ ಎಂದು ಪ್ರಧಾನಮಂತ್ರಿಯವರು ತಿಳಿಸಿದರು. ಅಲಂಕಾರಿಕ ಮೀನುಗಾರಿಕೆಯನ್ನೂ ಆದಾಯ ಗಳಿಸುವ ಒಂದು ಮಾರ್ಗವಾಗಿ ಬೆಳೆಸಬೇಕೆಂದು ಅವರು ಪ್ರತಿಪಾದಿಸಿದರು.

ಮೀನಿಗೆ ಹೆಚ್ಚು ಬೇಡಿಕೆಯಿದ್ದರೂ ಪೂರೈಕೆ ಕಡಿಮೆ ಇರುವ ಒಳನಾಡಿನ ಪ್ರದೇಶಗಳ ಅಗತ್ಯಗಳನ್ನು ಪೂರೈಸಲು ಒಂದು ಯೋಜನೆಯನ್ನು ರೂಪಿಸಬೇಕು ಎಂದು ಪ್ರಧಾನಮಂತ್ರಿಯವರು ಅಭಿಪ್ರಾಯಪಟ್ಟರು.

ಇಂಧನಕ್ಕಾಗಿಯೂ, ಪೌಷ್ಟಿಕಾಂಶಕ್ಕಾಗಿಯೂ, ಔಷಧಗಳ ತಯಾರಿಕೆಗೂ ಮತ್ತು ಇತರ ಕ್ಷೇತ್ರಗಳಿಗೂ ಕಡಲಕಳೆಗಳನ್ನು ಬಳಸುವ ಸಾಧ್ಯತೆಗಳನ್ನು ಹುಡುಕಬೇಕು ಎಂದು ಪ್ರಧಾನಮಂತ್ರಿಯವರು ಸಲಹೆ ನೀಡಿದರು. ಸಂಬಂಧಪಟ್ಟ ಎಲ್ಲ ಇಲಾಖೆಗಳೂ ಒಗ್ಗೂಡಿ ಕೆಲಸ ಮಾಡಿ, ತಂತ್ರಜ್ಞಾನವನ್ನು ಬಳಸಿಕೊಂಡು ಕಡಲಕಳೆಗಳ ಕ್ಷೇತ್ರದಲ್ಲಿ ಬೇಕಾದ ಉತ್ಪಾದನೆ ಮತ್ತು ಫಲಿತಾಂಶಗಳನ್ನು ಖಚಿತಪಡಿಸಿಕೊಳ್ಳಬೇಕು, ಮತ್ತು ಅದರ ಸಂಪೂರ್ಣ ಹೊಣೆಗಾರಿಕೆಯನ್ನು ತೆಗೆದುಕೊಳ್ಳಬೇಕು ಎಂದು ಅವರು ಹೇಳಿದರು.

ಆಧುನಿಕ ಮೀನುಗಾರಿಕೆ ವಿಧಾನಗಳ ಕುರಿತು ಮೀನುಗಾರರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡುವಂತೆಯೂ ಪ್ರಧಾನಮಂತ್ರಿಯವರು ಸಲಹೆ ನೀಡಿದರು. ಈ ವಲಯದ ಬೆಳವಣಿಗೆಗೆ ಅಡ್ಡಿಯುಂಟುಮಾಡುವ ಅಂಶಗಳ ಒಂದು ಋಣಾತ್ಮಕ ಪಟ್ಟಿಯನ್ನು ನಿರ್ವಹಿಸುವುದು ಅಗತ್ಯ. ಇದರಿಂದ ಆ ಅಡೆತಡೆಗಳನ್ನು ನಿವಾರಿಸಲು ಮತ್ತು ಮೀನುಗಾರರ ವ್ಯವಹಾರವನ್ನು ಸುಲಭಗೊಳಿಸಲು ಹಾಗೂ ಅವರ ಜೀವನಮಟ್ಟವನ್ನು ಉತ್ತಮಪಡಿಸಲು ಕ್ರಿಯಾ ಯೋಜನೆಗಳನ್ನು ರೂಪಿಸಬಹುದು ಎಂದು ಅವರು ಹೇಳಿದರು.

ಸಭೆಯ ಸಂದರ್ಭದಲ್ಲಿ, ಪ್ರಮುಖ ಯೋಜನೆಗಳಲ್ಲಿನ ಪ್ರಗತಿ, ಹಿಂದಿನ ಪರಿಶೀಲನೆಯ ಸಮಯದಲ್ಲಿ ನೀಡಲಾದ ಸಲಹೆಗಳ ಅನುಷ್ಠಾನ, ಮತ್ತು ಭಾರತದ ವಿಶೇಷ ಆರ್ಥಿಕ ವಲಯ (EEZ) ಹಾಗೂ ಅಂತರರಾಷ್ಟ್ರೀಯ ಜಲಪ್ರದೇಶಗಳಿಂದ ಸುಸ್ಥಿರ ಮೀನುಗಾರಿಕೆಗಾಗಿ ಉದ್ದೇಶಿಸಲಾಗಿರುವ ಅನುಕೂಲಕರ ನಿಯಮಗಳ ಕುರಿತು ಒಂದು ಪ್ರದರ್ಶನವನ್ನು ಸಹ ಏರ್ಪಡಿಸಲಾಗಿತ್ತು.

2015 ರಿಂದ, ಭಾರತ ಸರ್ಕಾರವು ವಿವಿಧ ಸರ್ಕಾರಿ ಯೋಜನೆಗಳು ಮತ್ತು ಕಾರ್ಯಕ್ರಮಗಳಾದ ನೀಲಿ ಕ್ರಾಂತಿ ಯೋಜನೆ, ಮೀನುಗಾರಿಕೆ ಮತ್ತು ಜಲಕೃಷಿ ಮೂಲಸೌಕರ್ಯ ಅಭಿವೃದ್ಧಿ ನಿಧಿ (FIDF), ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ (PMMSY), ಪ್ರಧಾನ ಮಂತ್ರಿ ಮತ್ಸ್ಯ ಸಮೃದ್ಧಿ ಸಹ ಯೋಜನೆ (PM-MKSSY) ಮತ್ತು ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಮೂಲಕ ₹ 38,572 ಕೋಟಿಗಳ ಹೂಡಿಕೆಯನ್ನು ಹೆಚ್ಚಿಸಿದೆ. ಭಾರತವು 2024-25 ರಲ್ಲಿ 195 ಲಕ್ಷ ಟನ್ ವಾರ್ಷಿಕ ಮೀನು ಉತ್ಪಾದನೆಯನ್ನು ದಾಖಲಿಸಿದೆ ಮತ್ತು ಈ ವಲಯವು 9% ಕ್ಕಿಂತ ಹೆಚ್ಚಿನ ಬೆಳವಣಿಗೆ ದರವನ್ನು ಹೊಂದಿದೆ.

ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಕೇಂದ್ರ ಸಚಿವ ಶ್ರೀ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಲನ್ ಸಿಂಗ್, ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಡಾ. ಪಿ.ಕೆ. ಮಿಶ್ರಾ, ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿ - 2 ಶ್ರೀ ಶಕ್ತಿಕಾಂತ ದಾಸ್, ಪ್ರಧಾನಮಂತ್ರಿಯವರ ಸಲಹೆಗಾರ ಶ್ರೀ ಅಮಿತ್ ಖರೆ, ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

 

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
Most NE districts now ‘front runners’ in development goals: Niti report

Media Coverage

Most NE districts now ‘front runners’ in development goals: Niti report
NM on the go

Nm on the go

Always be the first to hear from the PM. Get the App Now!
...
ಪ್ರಧಾನಿ ಮೋದಿಯವರಿಗೆ ಅತ್ಯುನ್ನತ ನಾಗರಿಕ ಗೌರವಗಳು
July 09, 2025

ಪ್ರಧಾನಿ ನರೇಂದ್ರ ಮೋದಿಯವರಿಗೆ ಹಲವಾರು ರಾಷ್ಟ್ರಗಳು ಅತ್ಯುನ್ನತ ನಾಗರಿಕ ಗೌರವಗಳನ್ನು ನೀಡಿ ಗೌರವಿಸಿವೆ. ಈ ಮನ್ನಣೆಗಳು ಪ್ರಧಾನಿ ಮೋದಿಯವರ ನಾಯಕತ್ವ ಮತ್ತು ದೃಷ್ಟಿಯ ಪ್ರತಿಬಿಂಬವಾಗಿದ್ದು, ಜಾಗತಿಕ ವೇದಿಕೆಯಲ್ಲಿ ಭಾರತದ ಹೊರಹೊಮ್ಮುವಿಕೆಯನ್ನು ಬಲಪಡಿಸಿದೆ. ಇದು ಪ್ರಪಂಚದಾದ್ಯಂತದ ದೇಶಗಳೊಂದಿಗೆ ಭಾರತದ ಬೆಳೆಯುತ್ತಿರುವ ಬಾಂಧವ್ಯವನ್ನು ಪ್ರತಿಬಿಂಬಿಸುತ್ತದೆ.

ಕಳೆದ ಏಳು ವರ್ಷಗಳಲ್ಲಿ ಪ್ರಧಾನಿ ಮೋದಿಯವರಿಗೆ ನೀಡಿದ ಪ್ರಶಸ್ತಿಗಳನ್ನು ನೋಡೋಣ.

ದೇಶಗಳು ನೀಡುವ ಪ್ರಶಸ್ತಿಗಳು:

1. ಏಪ್ರಿಲ್ 2016 ರಲ್ಲಿ, ಸೌದಿ ಅರೇಬಿಯಾಕ್ಕೆ ಭೇಟಿ ನೀಡಿದಾಗ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೌದಿ ಅರೇಬಿಯಾದ ಅತ್ಯುನ್ನತ ನಾಗರಿಕ ಗೌರವ- ಕಿಂಗ್ ಅಬ್ದುಲ್ ಅಜೀಜ್ ಸಾಶ್ ಅನ್ನು ನೀಡಲಾಯಿತು. ದೊರೆ ಸಲ್ಮಾನ್ ಬಿನ್ ಅಬ್ದುಲಜೀಜ್ ಅವರು ಪ್ರಧಾನಿಗೆ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

2. ಅದೇ ವರ್ಷ, ಪ್ರಧಾನಿ  ಮೋದಿಯವರಿಗೆ ಅಫ್ಘಾನಿಸ್ತಾನದ ಅತ್ಯುನ್ನತ ನಾಗರಿಕ ಗೌರವವಾದ ಘಾಜಿ ಅಮೀರ್ ಅಮಾನುಲ್ಲಾ ಖಾನ್ ಅವರ ರಾಜ್ಯ ಆದೇಶವನ್ನು ನೀಡಲಾಯಿತು.

3. 2018 ರಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ತೀನ್‌ಗೆ ಐತಿಹಾಸಿಕ ಭೇಟಿ ನೀಡಿದಾಗ, ಅವರಿಗೆ ಗ್ರ್ಯಾಂಡ್ ಕಾಲರ್ ಆಫ್ ಸ್ಟೇಟ್ ಆಫ್ ಪ್ಯಾಲೆಸ್ಟೈನ್ ಪ್ರಶಸ್ತಿಯನ್ನು ನೀಡಲಾಯಿತು. ಇದು ವಿದೇಶಿ ಗಣ್ಯರಿಗೆ ನೀಡುವ ಪ್ಯಾಲೆಸ್ತೀನ್‌ನ ಅತ್ಯುನ್ನತ ಗೌರವವಾಗಿದೆ.

4. 2019 ರಲ್ಲಿ, ಪ್ರಧಾನ ಮಂತ್ರಿಗೆ ಆರ್ಡರ್ ಆಫ್ ಜಾಯೆದ್ ಪ್ರಶಸ್ತಿಯನ್ನು ನೀಡಲಾಯಿತು. ಇದು ಯುನೈಟೆಡ್ ಅರಬ್ ಎಮಿರೇಟ್ಸ್‌ನ ಅತ್ಯುನ್ನತ ನಾಗರಿಕ ಗೌರವವಾಗಿದೆ.

5. ರಷ್ಯಾವು ಪ್ರಧಾನಿ ಮೋದಿಯವರಿಗೆ ತಮ್ಮ ಅತ್ಯುನ್ನತ ನಾಗರಿಕ ಗೌರವ - 2019 ರಲ್ಲಿ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ಪ್ರಶಸ್ತಿಯನ್ನು ನೀಡಿತು.

6. ಆರ್ಡರ್ ಆಫ್ ದಿ ಡಿಸ್ಟಿಂಗ್ವಿಶ್ಡ್ ರೂಲ್ ಆಫ್ ನಿಶಾನ್ ಇಝುದ್ದೀನ್- ವಿದೇಶಿ ಗಣ್ಯರಿಗೆ ನೀಡಲಾಗುವ ಮಾಲ್ಡೀವ್ಸ್‌ನ ಅತ್ಯುನ್ನತ ಗೌರವವನ್ನು 2019 ರಲ್ಲಿ ಪ್ರಧಾನಿ ಮೋದಿಯವರಿಗೆ ನೀಡಲಾಯಿತು.

7. ಪ್ರಧಾನಿ ಮೋದಿ ಅವರು 2019 ರಲ್ಲಿ ಪ್ರತಿಷ್ಠಿತ ಕಿಂಗ್ ಹಮದ್ ಆರ್ಡರ್ ಆಫ್ ರಿನೈಸಾನ್ಸ್ ಅನ್ನು ಪಡೆದರು. ಈ ಗೌರವವನ್ನು ಬಹ್ರೇನ್ ನೀಡಿತು.

8. ಯುಎಸ್ ಸರ್ಕಾರದಿಂದ ಲೀಜನ್ ಆಫ್ ಮೆರಿಟ್, ಅತ್ಯುತ್ತಮ ಸೇವೆಗಳು ಮತ್ತು ಸಾಧನೆಗಳ ಕಾರ್ಯಕ್ಷಮತೆಯಲ್ಲಿ ಅಸಾಧಾರಣವಾದ ಅರ್ಹತೆಯ ನಡವಳಿಕೆಗಾಗಿ ನೀಡಲಾಗುವ ಯುನೈಟೆಡ್ ಸ್ಟೇಟ್ಸ್ ಸಶಸ್ತ್ರ ಪಡೆಗಳ ಪ್ರಶಸ್ತಿಯನ್ನು 2020 ರಲ್ಲಿ ಪಿಎಂ ಮೋದಿಯವರಿಗೆ ನೀಡಲಾಯಿತು.

9. ಡಿಸೆಂಬರ್ 2021 ರಲ್ಲಿ ಭೂತಾನ್ ಪ್ರಧಾನಿ ಮೋದಿಯವರಿಗೆ ಅತ್ಯುನ್ನತ ನಾಗರಿಕ ಅಲಂಕಾರ, ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ನೀಡಿ ಗೌರವಿಸಿದೆ
 
ಅತ್ಯುನ್ನತ ನಾಗರಿಕ ಗೌರವಗಳ ಹೊರತಾಗಿ,  ಪ್ರಧಾನಿ   ಮೋದಿಯವರಿಗೆ ಪ್ರಪಂಚದಾದ್ಯಂತದ ಪ್ರತಿಷ್ಠಿತ ಸಂಸ್ಥೆಗಳಿಂದ ಹಲವಾರು ಪ್ರಶಸ್ತಿಗಳನ್ನು ನೀಡಲಾಗಿದೆ.

1. ಸಿಯೋಲ್ ಶಾಂತಿ ಪ್ರಶಸ್ತಿ: ಮನುಕುಲದ ಸಾಮರಸ್ಯ, ರಾಷ್ಟ್ರಗಳ ನಡುವಿನ ಸಮನ್ವಯ ಮತ್ತು ವಿಶ್ವ ಶಾಂತಿಗೆ ಕೊಡುಗೆಗಳ ಮೂಲಕ ತಮ್ಮ ಛಾಪು ಮೂಡಿಸಿದ ವ್ಯಕ್ತಿಗಳಿಗೆ ಸಿಯೋಲ್ ಶಾಂತಿ ಪ್ರಶಸ್ತಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ದ್ವೈವಾರ್ಷಿಕವಾಗಿ ನೀಡಲಾಗುತ್ತದೆ. ಪ್ರಧಾನಿ ಮೋದಿ ಅವರಿಗೆ 2018 ರಲ್ಲಿ ಪ್ರತಿಷ್ಠಿತ ಪ್ರಶಸ್ತಿ ನೀಡಲಾಯಿತು.

2. ಯುಎನ್ ಚಾಂಪಿಯನ್ಸ್ ಆಫ್ ದಿ ಅರ್ಥ್ ಪ್ರಶಸ್ತಿ: ಇದು ವಿಶ್ವಸಂಸ್ಥೆಯ ಅತ್ಯುನ್ನತ ಪರಿಸರ ಗೌರವವಾಗಿದೆ. 2018 ರಲ್ಲಿ, ಜಾಗತಿಕ ವೇದಿಕೆಯಲ್ಲಿ ಅವರ ದಿಟ್ಟ ಪರಿಸರ ನಾಯಕತ್ವಕ್ಕಾಗಿ ಯುಎನ್ ಪ್ರಧಾನಿ ಮೋದಿಯನ್ನು ಗುರುತಿಸಿತು.

3. ಮೊದಲ ಬಾರಿಗೆ ಫಿಲಿಪ್ ಕೋಟ್ಲರ್ ಅಧ್ಯಕ್ಷೀಯ ಪ್ರಶಸ್ತಿಯನ್ನು 2019 ರಲ್ಲಿ ಪ್ರಧಾನಿ ಮೋದಿ ಅವರಿಗೆ ನೀಡಲಾಯಿತು. ಈ ಪ್ರಶಸ್ತಿಯನ್ನು ವಾರ್ಷಿಕವಾಗಿ ರಾಷ್ಟ್ರದ ನಾಯಕನಿಗೆ ನೀಡಲಾಗುತ್ತದೆ. ಪ್ರಧಾನಿ ಮೋದಿಯವರು "ರಾಷ್ಟ್ರಕ್ಕೆ ಅತ್ಯುತ್ತಮ ನಾಯಕತ್ವ" ಕ್ಕಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಶಸ್ತಿಯ ಉಲ್ಲೇಖವು ಹೇಳಿದೆ.

4. 2019 ರಲ್ಲಿ, ಪ್ರಧಾನಿ ಮೋದಿಯವರಿಗೆ ಸ್ವಚ್ಛ ಭಾರತ ಅಭಿಯಾನಕ್ಕಾಗಿ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್‌ನಿಂದ 'ಗ್ಲೋಬಲ್ ಗೋಲ್‌ಕೀಪರ್' ಪ್ರಶಸ್ತಿಯನ್ನು ನೀಡಲಾಯಿತು. ಸ್ವಚ್ಛ ಭಾರತ ಅಭಿಯಾನವನ್ನು "ಜನರ ಆಂದೋಲನ" ಆಗಿ ಪರಿವರ್ತಿಸಿದ ಮತ್ತು ತಮ್ಮ ದೈನಂದಿನ ಜೀವನದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದ ಭಾರತೀಯರಿಗೆ ಪ್ರಧಾನಿ ಮೋದಿ ಈ ಪ್ರಶಸ್ತಿಯನ್ನು ಅರ್ಪಿಸಿದರು.

5. 2021 ರಲ್ಲಿ, ಪ್ರಧಾನಿ ಮೋದಿಯವರಿಗೆ ಸ್ವಚ್ಛ ಭಾರತ ಅಭಿಯಾನಕ್ಕಾಗಿ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್‌ನಿಂದ 'ಗ್ಲೋಬಲ್ ಗೋಲ್‌ಕೀಪರ್' ಪ್ರಶಸ್ತಿಯನ್ನು ನೀಡಲಾಯಿತು. ಸ್ವಚ್ಛ ಭಾರತ ಅಭಿಯಾನವನ್ನು "ಜನರ ಆಂದೋಲನ" ಆಗಿ ಪರಿವರ್ತಿಸಿದ ಮತ್ತು ತಮ್ಮ ದೈನಂದಿನ ಜೀವನದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದ ಭಾರತೀಯರಿಗೆ ಪ್ರಧಾನಿ ಮೋದಿ ಈ ಪ್ರಶಸ್ತಿಯನ್ನು ಅರ್ಪಿಸಿದರು.