ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ರಾಮಾಯಣ ಮತ್ತು ಮಹಾಭಾರತ ಮಹಾಗ್ರಂಥಗಳ ಅರೇಬಿಕ್ ಅನುವಾದ ಭಾಷಾಂತರ ಮತ್ತು ಪ್ರಕಟಿಸುವ ಪ್ರಯತ್ನಕ್ಕಾಗಿ ಅಬ್ದುಲ್ಲಾ ಅಲ್-ಬರೂನ್ ಮತ್ತು ಅಬ್ದುಲ್ ಲತೀಫ್ ಅಲ್-ನಸೀಫ್ ಅವರನ್ನು ಅಭಿನಂದಿಸಿದ್ದಾರೆ. 

Xನ ಪೋಸ್ಟ್ ನಲ್ಲಿ, ಮೋದಿಯವರು:

"ರಾಮಾಯಣ ಮತ್ತು ಮಹಾಭಾರತದ ಅರೇಬಿಕ್ ಅನುವಾದಗಳನ್ನು ನೋಡಿ ನನಗೆ ಸಂತೋಷವಾಗಿದೆ. ಇದನ್ನು ಭಾಷಾಂತರಿಸಿ ಪ್ರಕಟಿಸುವಲ್ಲಿ ಅಬ್ದುಲ್ಲಾ ಅಲ್-ಬರೂನ್ ಮತ್ತು ಅಬ್ದುಲ್ ಲತೀಫ್ ಅಲ್-ನೆಸೀಫ್ ಅವರ ಪ್ರಯತ್ನಗಳನ್ನು ನಾನು ಶ್ಲಾಘಿಸುತ್ತೇನೆ. ಅವರ ಈ ಕಾರ್ಯವು ಜಾಗತಿಕವಾಗಿ ಭಾರತೀಯ ಸಂಸ್ಕೃತಿಯ ಜನಪ್ರಿಯತೆಯನ್ನು ಎತ್ತಿ ತೋರಿಸುತ್ತದೆ" ಎಂದು ಹೇಳಿದ್ದಾರೆ.

 

"يسعدني أن أرى ترجمات عربية ل"رامايان" و"ماهابهارات". وأشيد بجهود عبد الله البارون وعبد اللطيف النصف في ترجمات ونشرها. وتسلط مبادرتهما الضوء على شعبية الثقافة الهندية على مستوى العالم."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India can be a massive architect in AI: Economist Danny Quah

Media Coverage

India can be a massive architect in AI: Economist Danny Quah
NM on the go

Nm on the go

Always be the first to hear from the PM. Get the App Now!
...
ಉತ್ಸಾಹ ಮತ್ತು ಸಕಾರಾತ್ಮಕ ಶಕ್ತಿಯು ಯಶಸ್ಸಿಗೆ ಹೇಗೆ ಕಾರಣವಾಗುತ್ತದೆ ಎಂಬುದನ್ನು ಬಿಂಬಿಸುವ ಸಂಸ್ಕೃತ ಸುಭಾಷಿತಂವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
April 30, 2026

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತಂ ಪುಸ್ತಕವನ್ನು ಹಂಚಿಕೊಂಡಿದ್ದು, ಉತ್ಸಾಹ ಮತ್ತು ಸಕಾರಾತ್ಮಕ ಶಕ್ತಿಯು ವ್ಯಕ್ತಿಯು ತಮ್ಮ ಕಾರ್ಯಗಳಲ್ಲಿ ನಿರಂತರವಾಗಿ ಸಕ್ರಿಯವಾಗಿರಲು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.

ಈ ಅಚಲ ಉತ್ಸಾಹವು ಒಬ್ಬ ವ್ಯಕ್ತಿಯು ಸಾಧಿಸಲು ನಿರ್ಧರಿಸುವ ಎಲ್ಲಾ ಪ್ರಯತ್ನಗಳನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ ಎಂದು ಪ್ರಧಾನಿ ಹೇಳಿದರು.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ;

"कर्मशील और ऊर्जावान देशवासी ही राष्ट्र की सबसे बड़ी शक्ति हैं, जिनके परिश्रम से विकास की नई राहें तय होती हैं। इनके प्रयासों से देश समृद्धि, आत्मनिर्भरता और उन्नति के शिखर को छूता है।

अनिर्वेदो हि सततं सर्वार्थेषु प्रवर्तकः।

करोति सफलं जन्तोः कर्म यच्च करोति सः॥"

ಉತ್ಸಾಹ ಮತ್ತು ಸಕಾರಾತ್ಮಕ ಶಕ್ತಿಯು ವ್ಯಕ್ತಿಯನ್ನು ತಮ್ಮ ಕ್ರಿಯೆಗಳಲ್ಲಿ ನಿರಂತರವಾಗಿ ಸಕ್ರಿಯವಾಗಿರಲು ಪ್ರೇರೇಪಿಸುತ್ತದೆ. ಈ ಅಚಲ ಉತ್ಸಾಹವು ಒಬ್ಬ ವ್ಯಕ್ತಿಯು ಸಾಧಿಸಲು ನಿರ್ಧರಿಸುವ ಎಲ್ಲಾ ಪ್ರಯತ್ನಗಳನ್ನು ಯಶಸ್ಸಿನತ್ತ ಕರೆದೊಯ್ಯುತ್ತದೆ.