ಕೇರಳದ ಮಾಜಿ ಮುಖ್ಯಮಂತ್ರಿ ಶ್ರೀ ಉಮ್ಮನ್ ಚಾಂಡಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ.
ವಿಶೇಷವಾಗಿ ಈ ಹಿಂದೆ ಇವರಿಬ್ಬರೂ ತಮ್ಮ ತಮ್ಮ ರಾಜ್ಯಗಳ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದಾಗ, ಶ್ರೀ ಚಾಂಡಿ ಅವರೊಂದಿಗಿನ ನಡೆಸಿದ ವಿವಿಧ ಸಂವಾದಗಳನ್ನು ಶ್ರೀ ಮೋದಿಯವರು ನೆನಪಿಸಿಕೊಂಡರು.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು ಈ ರೀತಿ ಹೇಳಿದ್ದಾರೆ;
“ಶ್ರೀ ಉಮ್ಮನ್ ಚಾಂಡಿ ಜೀ ಅವರ ನಿಧನದೊಂದಿಗೆ, ಸಾರ್ವಜನಿಕ ಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಮತ್ತು ಕೇರಳದ ಪ್ರಗತಿಗೆ ಶ್ರಮಿಸಿದ ವಿನಮ್ರ ಮತ್ತು ಸಮರ್ಪಿತ ನಾಯಕನನ್ನು ನಾವು ಕಳೆದುಕೊಂಡಿದ್ದೇವೆ. ವಿಶೇಷವಾಗಿ ನಾವಿಬ್ಬರೂ ನಮ್ಮ ನಮ್ಮ ರಾಜ್ಯಗಳ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದಾಗ ಮತ್ತು ನಂತರ ನಾನು ದೆಹಲಿಗೆ ತೆರಳಿದಾಗ, ನಾನು ಅವರೊಂದಿಗೆ ನಡೆಸಿದ ವಿವಿಧ ಸಂವಾದಗಳನ್ನು ನೆನಪಿಸಿಕೊಳ್ಳುತ್ತೇನೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಬೆಂಬಲಿಗರೊಂದಿಗೆ ಇವೆ. ಅವರ ಆತ್ಮಕೆ ಶಾಂತಿ ಸಿಗಲಿ."
In the passing away of Shri Oommen Chandy Ji, we have lost a humble and dedicated leader who devoted his life to public service and worked towards the progress of Kerala. I recall my various interactions with him, particularly when we both served as Chief Ministers of our… pic.twitter.com/S6rd22T24j
— Narendra Modi (@narendramodi) July 18, 2023
പൊതുസേവനത്തിനായി ജീവിതം ഉഴിഞ്ഞുവെക്കുകയും കേരളത്തിന്റെ പുരോഗതിക്കായി പ്രവർത്തിക്കുകയും ചെയ്ത എളിമയും, അർപ്പണബോധമുള്ള നേതാവിനെയാണ് ശ്രീ ഉമ്മൻ ചാണ്ടി ജിയുടെ വിയോഗത്തിലൂടെ നമുക്ക് നഷ്ടമായത്. ഞങ്ങൾ രണ്ടുപേരും അതത് സംസ്ഥാനങ്ങളിലെ മുഖ്യമന്ത്രിമാരായി സേവനമനുഷ്ഠിച്ചപ്പോഴും പിന്നീട് ഞാൻ… pic.twitter.com/EorQ5L2c5x
— Narendra Modi (@narendramodi) July 18, 2023


