ನಾಸಿಕ್-ಶಿರಡಿ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಆಗಿರುವ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ಪರಿಹಾರವನ್ನು ಘೋಷಿಸಿದ್ದಾರೆ.
ಪ್ರಧಾನಮಂತ್ರಿ ಕಾರ್ಯಾಲಯವು ಈ ರೀತಿ ಟ್ವೀಟ್ ಮಾಡಿದೆ;
"ನಾಸಿಕ್-ಶಿರಡಿ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಆಗಿರುವ ಪ್ರಾಣಹಾನಿಯಿಂದ ಬಹಳ ನೋವಾಗಿದೆ. ದುಃಖಿತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಮೃತರ ಕುಟುಂಬಕ್ಕೆ ಪಿ.ಎಂ.ಎನ್.ಆರ್.ಎಫ್.ನಿಂದ ರೂ. 2 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50,000 ಪರಿಹಾರವನ್ನು ನೀಡಲಾಗುವುದು: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
Pained by the loss of lives in an accident on the Nashik-Shirdi highway. Condolences to the bereaved families. May the injured recover soon. An ex-gratia of Rs. 2 lakh from PMNRF would be given to the next of kin of each deceased. The injured would be given Rs. 50,000: PM Modi
— PMO India (@PMOIndia) January 13, 2023


