ಬಿಹಾರದ ಕಟಿಹಾರ್ ನಲ್ಲಿ ನಡೆದ ಭೀಕರ ಅಪಘಾತ ಅತ್ಯಂತ ನೋವಿನಿಂದ ಕೂಡಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಆಳವಾದ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ವಾರಸುದಾರರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್ ಆರ್ ಎಫ್) ನಿಂದ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಶ್ರೀ ಮೋದಿ ಅವರು ಘೋಷಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ತಲಾ 50,000 ರೂ.ಗಳನ್ನು ನೀಡಲಾಗುವುದು ಎಂದು ಅವರು ಪ್ರಕಟಿಸಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ಬಿಹಾರದ ಕಟಿಹಾರ್ನಲ್ಲಿ ಸಂಭವಿಸಿದ ಅಪಘಾತ ಅತ್ಯಂತ ನೋವಿನ ಸಂಗತಿ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ.
ಮೃತರ ವಾರಸುದಾರರಿಗೆ ಪಿ ಎಂ ಎನ್ ಆರ್ ಎಫ್ ನಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು."
The mishap in Katihar, Bihar, is extremely painful. Condolences to those who have lost their loved ones. May the injured recover at the earliest.
— PMO India (@PMOIndia) April 11, 2026
An ex-gratia of Rs. 2 lakh from PMNRF would be given to the next of kin of each deceased. The injured would be given Rs. 50,000: PM…


