ಮಲಯಾಳಂ ಚಿತ್ರರಂಗ ಮತ್ತು ಸಾಹಿತ್ಯದಲ್ಲಿ ಅತ್ಯಂತ ಗೌರವಾನ್ವಿತ ವ್ಯಕ್ತಿಗಳಲ್ಲಿ ಒಬ್ಬರಾದ ಶ್ರೀ ಎಂ.ಟಿ.ವಾಸುದೇವನ್ ನಾಯರ್ ಜಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಮಾನವ ಭಾವನೆಗಳ ಆಳವಾದ ಅನ್ವೇಷಣೆಯೊಂದಿಗೆ ಶ್ರೀ ಎಂ.ಟಿ.ವಾಸುದೇವನ್ ನಾಯರ್ ಜಿ ಅವರ ಕೃತಿಗಳು ಹಲವು ಪೀಳಿಗೆಗಳನ್ನು ರೂಪಿಸಿವೆ ಮತ್ತು ಇನ್ನೂ ಅನೇಕರಿಗೆ ಸ್ಫೂರ್ತಿ ನೀಡುವುದನ್ನು ಮುಂದುವರಿಸುತ್ತಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.

ಪ್ರಧಾನಮಂತ್ರಿ ಅವರು ತಮ್ಮ X ಸಾಮಾಜಿಕ ಮಾಧ್ಯಮ  ಜಾಲತಾಣದಲ್ಲಿ ಹೀಗೆ ಹೇಳಿದ್ದಾರೆ.

“ಮಲಯಾಳಂ ಚಿತ್ರರಂಗ ಮತ್ತು ಸಾಹಿತ್ಯದಲ್ಲಿ ಅತ್ಯಂತ ಗೌರವಾನ್ವಿತ ವ್ಯಕ್ತಿಗಳಲ್ಲಿ ಒಬ್ಬರಾದ ಶ್ರೀ ಎಂ.ಟಿ.ವಾಸುದೇವನ್ ನಾಯರ್ ಜಿ ಅವರ ನಿಧನದಿಂದ ದುಃಖವಾಗಿದೆ. ಅವರ ಕೃತಿಗಳು, ಮಾನವ ಭಾವನೆಗಳ ಆಳವಾದ ಪರಿಶೋಧನೆಯೊಂದಿಗೆ ಹಲವು ಪೀಳಿಗೆಗಳನ್ನು ರೂಪಿಸಿವೆ ಮತ್ತು ಇನ್ನೂ ಹಲವರಿಗೆ ಪ್ರೇರೇಣೆ ನೀಡುವುದನ್ನು ಮುಂದುವರಿಸಿವೆ. ಅವರು ಮೌನ ಮತ್ತು ದುರ್ಬಲ ವರ್ಗದಲ್ಲಿರುವವರಿಗೆ ಧ್ವನಿ ನೀಡಿದರು. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s GDP growth likely to stay strong at 7-7.2% in FY27 despite global risks: Report

Media Coverage

India’s GDP growth likely to stay strong at 7-7.2% in FY27 despite global risks: Report
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 30 ಆಗಸ್ಟ್ 2026
August 30, 2026

Tiranga in Tashkent, Relief in Nepal: Soft Power Meets First Responder

Vocal for Local, Nari Shakti, Real Heroes: Mann Ki Baat’s Atmanirbhar Hour