ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿ. ಜ್ಞಾನಸುಂದರಂ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. 

ತಿರು ಡಿ. ಜ್ಞಾನಸುಂದರಂ ಅವರು ತಮಿಳು ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ನೀಡಿದ ಕೊಡುಗೆಗಳು ಸದಾ ಸ್ಮರಣೀಯವಾಗಿರುತ್ತವೆ. ತಮ್ಮ ಬರಹಗಳು ಹಾಗೂ ಜೀವನಪೂರ್ತಿ ಸಲ್ಲಿಸಿದ ಸಮರ್ಪಣೆಯ ಮೂಲಕ ಅವರು ಸಮಾಜದ ಸಾಂಸ್ಕೃತಿಕ ಪ್ರಜ್ಞೆಯನ್ನು ಸಮೃದ್ಧಗೊಳಿಸಿದರು. ಅವರ ಕೃತಿಗಳು ಮುಂದಿನ ಪೀಳಿಗೆಗಳ ಓದುಗರಿಗೂ ವಿದ್ವಾಂಸರಿಗೂ ಪ್ರೇರಣೆಯಾಗುತ್ತಲೇ ಇರುತ್ತವೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

2024ರ ಜನವರಿಯಲ್ಲಿ ಶ್ರೀ ರಂಗನಾಥಸ್ವಾಮಿ ದೇವಾಲಯಕ್ಕೆ ತಮ್ಮ ಭೇಟಿ ಸಂದರ್ಭದಲ್ಲಿ ಅವರೊಂದಿಗೆ ಸಂವಾದ ನಡೆಸಿದ್ದನ್ನು ಪ್ರಧಾನಮಂತ್ರಿ ಸ್ಮರಿಸಿದ್ದಾರೆ. ಕಂಬ ರಾಮಾಯಣದ ಬಗ್ಗೆ ಅವರ ಅರಿವು ಅತ್ಯಂತ ವಿಶಿಷ್ಟವಾಗಿತ್ತು ಎಂದು ಹೇಳಿದ್ದಾರೆ. 

ಜ್ಞಾನಸುಂದರಂ ಅವರ ಶೋಕತಪ್ತ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಹೃತ್ಪೂರ್ವಕ ಸಂತಾಪಗಳನ್ನು ತಿಳಿಸಿ, ಅಗಲಿದ ಆತ್ಮಕ್ಕೆ ಶಾಶ್ವತ ಶಾಂತಿಗಾಗಿ ಪ್ರಧಾನಮಂತ್ರಿ ಪ್ರಾರ್ಥಿಸಿದ್ದಾರೆ.

ಈ ಕುರಿತು ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಬರೆದುಕೊಂಡಿದ್ದಾರೆ;

''ತಿರು ಡಿ. ಜ್ಞಾನಸುಂದರಂ ಅವರ ಅಗಲಿಕೆಯ ಸುದ್ದಿ ನನಗೆ ತೀವ್ರ ನೋವು ತಂದಿದೆ. ತಮಿಳು ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ಅವರ ಕೊಡುಗೆ ಸದಾ ಸ್ಮರಣೀಯವಾಗಿರುತ್ತದೆ. ತಮ್ಮ ಬರಹಗಳು ಮತ್ತು ಜೀವನಪೂರ್ತಿ ಸಲ್ಲಿಸಿದ ಸಮರ್ಪಣೆಯ ಮೂಲಕ ಅವರು ಸಮಾಜದಲ್ಲಿ ಸಾಂಸ್ಕೃತಿಕ ಜಾಗೃತಿಯನ್ನು ಸಮೃದ್ಧಗೊಳಿಸಿದರು. ಅವರ ಕೃತಿಗಳು ಮುಂದಿನ ಪೀಳಿಗೆಗಳ ಓದುಗರಿಗೂ ವಿದ್ವಾಂಸರಿಗೂ ಪ್ರೇರಣೆಯಾಗುತ್ತಲೇ ಇರುತ್ತವೆ.

2024ರ ಜನವರಿಯಲ್ಲಿ ತಿರುಚಿರಾಪಳ್ಳಿ ಶ್ರೀ ರಂಗನಾಥಸ್ವಾಮಿ ದೇವಾಲಯಕ್ಕೆ ನಾನು ಭೇಟಿ ನೀಡಿದ ಸಂದರ್ಭದಲ್ಲಿ ಅವರೊಂದಿಗೆ ಸಂವಾದ ನಡೆಸಿದ್ದೆನು. ಕಂಬ ರಾಮಾಯಣದ ಕುರಿತು ಅವರ ಅರಿವು ಮತ್ತು ಜ್ಞಾನ ಅತ್ಯಂತ ವಿಶಿಷ್ಟವಾಗಿತ್ತು.

ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.”

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
From conflict to progress: Remote Irpanar village in Chhattisgarh gets electricity

Media Coverage

From conflict to progress: Remote Irpanar village in Chhattisgarh gets electricity
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ಎಪ್ರಿಲ್ 2026
April 27, 2026

Sabka Saath, Sabka Vikas 2.0: PM Modi Delivers Self-Reliance, Global Trade & National Pride