ದುರಂತದ ಸ್ಥಳಕ್ಕೆ ಪ್ರಧಾನಮಂತ್ರಿ ಭೇಟಿ, ಘಟನೆ ನಂತರ ಅವಿರತವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ತಂಡಗಳ ಭೇಟಿ

ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಅನೇಕರು ಮೃತಪಟ್ಟಿದ್ದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳ ನೋವು ಮತ್ತು ನಷ್ಟದ ಅರಿವಿದೆ ಎಂದು ಅವರು ಸಂತಾಪ ಸೂಚಿಸಿದ್ದಾರೆ.

 

ಇದಕ್ಕೂ ಮುನ್ನ ಶ್ರೀ ಮೋದಿ ಅವರು ಅಹಮದಾಬಾದ್‌ನಲ್ಲಿ ಅವಘಡದ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನೇರವಾಗಿ ಪರಾಮರ್ಶಿಸಿದರು. ದುರಂತದ ನಂತರ ಅವಿಶ್ರಾಂತವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ತುರ್ತು ಪ್ರತಿಕ್ರಿಯಾ ತಂಡಗಳನ್ನು ಅವರು ಭೇಟಿ ಮಾಡಿದರು.

 

ಎಕ್ಸ್ ನಲ್ಲಿ ಪ್ರತ್ಯೇಕ ಪೋಸ್ಟ್ ಗಳಲ್ಲಿ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ:

"ಅಹಮದಾಬಾದ್‌ನಲ್ಲಿ ಸಂಭವಿಸಿದ ವೈಮಾನಿಕ ದುರಂತವು, ನಮ್ಮೆಲ್ಲರಿಗೂ ತೀವ್ರ ಆಘಾತಕಾರಿಯಾಗಿದೆ. ಈ ಹಠಾತ್ ಮತ್ತು ಹೃದಯವಿದ್ರಾವಕ ಘಟನೆಯಲ್ಲಿ ಅನೇಕರು ಪ್ರಾಣ ಕಳೆದುಕೊಂಡಿದ್ದು, ಪದಗಳಿಗೆ ನಿಲುಕದ್ದಾಗಿದೆ. ಎಲ್ಲಾ ದುಃಖಿತ ಕುಟುಂಬಗಳಿಗೆ ಸಂತಾಪಗಳು. ಅವರ ನೋವು ಮತ್ತು ಮುಂದಿನ ಅನೇಕ ವರ್ಷಗಳವರೆಗೆ ಅವರ ಸಾವಿನ ಶೂನ್ಯ ನಮಗೆ ತಿಳಿದಿದೆ. ಓಂ ಶಾಂತಿ."

"ಅಹಮದಾಬಾದ್‌ನಲ್ಲಿ ಅಪಘಾತ ಸ್ಥಳಕ್ಕೆ ಇಂದು ಭೇಟಿ ನೀಡಿದ್ದೆ. ವಿನಾಶದ ದೃಶ್ಯ ಅತೀವ ದುಃಖಕರ. ಘಟನೆ ನಂತರ ಅವಿಶ್ರಾಂತವಾಗಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ತಂಡಗಳನ್ನು ಭೇಟಿ ಮಾಡಿದೆ. ಈ ಊಹಿಸಲಾಗದ ಘೋರ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Cabinet approves ₹1,570 crore ship repair facility at Vadinar, Gujarat

Media Coverage

Cabinet approves ₹1,570 crore ship repair facility at Vadinar, Gujarat
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 6 ಮೇ 2026
May 06, 2026

New India, New Pride: When Self-Reliance Meets Results — A Tribute to PM Modi