ದಿತ್ವಾ ಚಂಡಮಾರುತದಿಂದ ಉಂಟಾದ ವಿನಾಶದಿಂದ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಶ್ರೀಲಂಕಾದ ಜನರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಹೃತ್ಪೂರ್ವಕ ಸಂತಾಪ ಸೂಚಿಸಿದ್ದಾರೆ. ಎಲ್ಲಾ ದಿತ್ವಾ ಚಂಡಮಾರುತದಿಂದ ಪೀಡಿತ ಕುಟುಂಬಗಳ ಸುರಕ್ಷತೆ, ಸಾಂತ್ವನ ಮತ್ತು ತ್ವರಿತ ಚೇತರಿಕೆಗಾಗಿ ಅವರು ಪ್ರಾರ್ಥಿಸಿದ್ದಾರೆ.

ಭಾರತದ ಸನಿಹದ ಕಡಲ ನೆರೆಯ ರಾಷ್ಟ್ರದೊಂದಿಗೆ ಒಗ್ಗಟ್ಟಿನ ಬಲವಾದ ಸೂಚನೆಯಾಗಿ, ಭಾರತ ಸರ್ಕಾರವು ಆಪರೇಷನ್ ಸಾಗರ್ ಬಂಧು ಅಡಿಯಲ್ಲಿ ಪರಿಹಾರ ಸಾಮಗ್ರಿಗಳು ಮತ್ತು ಪ್ರಮುಖ ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ (ಹೆಚ್.ಎ.ಡಿ.ಆರ್.) ಬೆಂಬಲವನ್ನು ತುರ್ತಾಗಿ  ಈಗಾಗಲೇ ರವಾನಿಸಿದೆ. ಪರಿಸ್ಥಿತಿ ವಿಕಸನಗೊಳ್ಳುತ್ತಿದ್ದಂತೆ ಹೆಚ್ಚುವರಿ ನೆರವು ಮತ್ತು ಸಹಾಯವನ್ನು ಒದಗಿಸಲು ಭಾರತ ಸಿದ್ಧವಾಗಿದೆ.

ಭಾರತದ “ನೆರೆಹೊರೆಯವರು ಮೊದಲು ನೀತಿ” ಹಾಗೂ “ಮಹಾಸಾಗರ ಯೋಜನೆ”ಯ ಪರಿಕಲ್ಪನೆಯ ದೃಷ್ಟಿಕೋನ ಮತ್ತು ತತ್ವಗಳಿಂದ ಮಾರ್ಗದರ್ಶನ ಪಡೆದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, “ಶ್ರೀಲಂಕಾದ ಅತಿಅಗತ್ಯದ ಸಮಯದ ಸಂದರ್ಭದಲ್ಲಿ ಭಾರತವು ಜೊತೆಗೆ ದೃಢವಾಗಿ ನಿಲ್ಲುತ್ತದೆ” ಎಂದು ಪುನರುಚ್ಚರಿಸಿದರು.

ಎಕ್ಸ್ ತಾಣದ ಸಂದೇಶದಲ್ಲಿ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ:

"ದಿತ್ವಾ ಚಂಡಮಾರುತದಿಂದಾಗಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಶ್ರೀಲಂಕಾದ ಜನರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಎಲ್ಲಾ ಪೀಡಿತ ಕುಟುಂಬಗಳ ಸುರಕ್ಷತೆ, ಸಾಂತ್ವನ ಮತ್ತು ತ್ವರಿತ ಚೇತರಿಕೆಗಾಗಿ ನಾನು ಪ್ರಾರ್ಥಿಸುತ್ತೇನೆ.

ನಮ್ಮ ಹತ್ತಿರದ ಕಡಲ ನೆರೆಯವರೊಂದಿಗೆ ಒಗ್ಗಟ್ಟಿನಲ್ಲಿ, ಭಾರತವು “ಆಪರೇಷನ್ ಸಾಗರ್ ಬಂಧು ಯೋಜನೆ”ಯಡಿಯಲ್ಲಿ ಪರಿಹಾರ ಸಾಮಗ್ರಿಗಳು ಮತ್ತು ಪ್ರಮುಖ ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ (ಹೆಚ್.ಎ.ಡಿ.ಆರ್.) ಬೆಂಬಲವನ್ನು ತುರ್ತಾಗಿ ರವಾನಿಸಿದೆ. ಪರಿಸ್ಥಿತಿ ಅನುಸಾರವಾಗಿ, ಅವಕಾಶ ವಿಕಸನಗೊಳ್ಳುತ್ತಿದ್ದಂತೆ ಹೆಚ್ಚಿನ ನೆರವು ಮತ್ತು ಸಹಾಯವನ್ನು ಒದಗಿಸಲು ನಾವು ಸಿದ್ಧರಿದ್ದೇವೆ.

ಭಾರತದ “ನೆರೆಹೊರೆಯವರು ಮೊದಲು ನೀತಿ” ಹಾಗೂ “ಮಹಾಸಾಗರ ಯೋಜನೆ”ಯ ಪರಿಕಲ್ಪನೆಯ ದೃಷ್ಟಿಕೋನದಲ್ಲಿ ಭಾರತವು, ಶ್ರೀಲಂಕಾದ ಅಗತ್ಯದ ಸಂದಿಗ್ದ ಸಮಯದಲ್ಲಿ ಜೊತೆಯಲ್ಲಿ ದೃಢವಾಗಿ ನಿಲ್ಲುವುದನ್ನು ಮುಂದುವರೆಸುತ್ತದೆ.

@anuradisanayake”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India, US achieve diplomatic breakthrough with trade deal; tariffs on Indian goods cut to 18%

Media Coverage

India, US achieve diplomatic breakthrough with trade deal; tariffs on Indian goods cut to 18%
NM on the go

Nm on the go

Always be the first to hear from the PM. Get the App Now!
...
Prime Minister shares a Sanskrit Subhashitam emphasising the Power of Self-Confidence in Building a Developed India
February 03, 2026

Prime Minister Shri Narendra Modi today shared a Sanskrit Subhashitam emphasizing the transformative role of self-confidence in realizing the vision of a developed India.

In a post on X, he wrote:

"आत्मविश्वास वह शक्ति है, जिसके बल पर सब कुछ संभव है। विकसित भारत के सपने को साकार करने में देशवासियों की यही शक्ति बहुत काम आने वाली है।

श्रीर्मङ्गलात् प्रभवति प्रागल्भ्यात् सम्प्रवर्धते।

दाक्ष्यात् तु कुरुते मूलं संयमात् प्रतितिष्ठति॥ "