ಇಟಲಿಯ ಟುರಿನ್‌ನಲ್ಲಿ ನಡೆದ ವಿಶೇಷ ಒಲಿಂಪಿಕ್ಸ್ ವಿಶ್ವ ಚಳಿಗಾಲದ ಕ್ರೀಡಾಕೂಟ 2025ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಕ್ರೀಡಾಪಟುಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.  ಭಾರತೀಯ ಕ್ರೀಡಾ ತಂಡ 33 ಪದಕಗಳನ್ನು ಗೆದ್ದು, ಜಾಗತಿಕ ವೇದಿಕೆಯಲ್ಲಿ ರಾಷ್ಟ್ರಕ್ಕೆ ಹೆಮ್ಮೆ ತಂದಿದೆ.

ಶ್ರೀ ಮೋದಿ ಅವರು ಇಂದು ಸಂಸತ್ತಿನಲ್ಲಿ ಕ್ರೀಡಾಪಟುಗಳನ್ನು ಭೇಟಿ ಮಾಡಿದರು ಹಾಗೂ ಅವರ ಸಮರ್ಪಣೆ ಮತ್ತು ಸಾಧನೆಗಳಿಗಾಗಿ ಅವರನ್ನು ಅಭಿನಂದಿಸಿದರು.

ಪ್ರಧಾನಮಂತ್ರಿಗಳು ಎಕ್ಸ್  ನಲ್ಲಿ ಹೀಗೆ ಬರೆದಿದ್ದಾರೆ:

“ಇಟಲಿಯ ಟುರಿನ್‌ನಲ್ಲಿ ನಡೆದ ವಿಶೇಷ ಒಲಿಂಪಿಕ್ಸ್ ವಿಶ್ವ ಚಳಿಗಾಲದ ಕ್ರೀಡಾಕೂಟದಲ್ಲಿ ನಮ್ಮ ಅಥ್ಲೀಟ್‌ಗಳು 33 ಪದಕಗಳನ್ನು ಜಯಿಸಿ ತವರಿಗೆ ಕೀರ್ತಿ ತಂದಿದ್ದು, ಅವರ ಬಗ್ಗೆ ನನಗೆ ಅಪಾರ ಹೆಮ್ಮೆ ಇದೆ!

ಸಂಸತ್ತಿನಲ್ಲಿ ಕ್ರೀಡಾಪಟುಗಳನ್ನು ಭೇಟಿ ಮಾಡಿ ಅವರ ಸಾಧನೆಗಾಗಿ ಅಭಿನಂದನೆ ಸಲ್ಲಿಸಿದೆ.

@SpecialOlympics”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Goods exports rise 15%+, top $200 billion

Media Coverage

Goods exports rise 15%+, top $200 billion
NM on the go

Nm on the go

Always be the first to hear from the PM. Get the App Now!
...
ಶ್ರೀ ಎ. ಬಾಲಕೃಷ್ಣನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
August 27, 2026

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವೇಕಾನಂದ ಕೇಂದ್ರದ ಅಖಿಲ ಭಾರತ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಶ್ರೀ ಎ. ಬಾಲಕೃಷ್ಣನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಶ್ರೀ ಬಾಲಕೃಷ್ಣನ್ ಜಿ ಅವರು ಸಮಾಜಕ್ಕೆ ನೀಡಿರುವ ಗಣನೀಯ ಕೊಡುಗೆಯನ್ನು ಶ್ರೀ ನರೇಂದ್ರ ಮೋದಿ ಸ್ಮರಿಸಿದ್ದಾರೆ, ಅವರು ತಮ್ಮ ಜೀವನದ ಐದು ದಶಕಗಳಿಗೂ ಅಧಿಕ ಕಾಲ ಸ್ವಾಮಿ ವಿವೇಕಾನಂದರ ಆದರ್ಶಗಳಿಗೆ ಮತ್ತು ರಾಷ್ಟ್ರದ ಸೇವೆಗೆ ಮೀಸಲಿಟ್ಟಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. "ಅವರು ಈಶಾನ್ಯ ರಾಜ್ಯಗಳೊಂದಿಗೆ ವಿಶೇಷವಾಗಿ ಗಾಢವಾದ ಸಂಬಂಧವನ್ನು ಹೊಂದಿದ್ದರು. ಶೈಕ್ಷಣಿಕ, ಸಾಮಾಜಿಕ ಮತ್ತು ರಾಷ್ಟ್ರ ನಿರ್ಮಾಣ ಚಟುವಟಿಕೆಗಳಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ" ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಮಂತ್ರಿ ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

ವಿವೇಕಾನಂದ ಕೇಂದ್ರದ ಅಖಿಲ ಭಾರತ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಶ್ರೀ ಎ. ಬಾಲಕೃಷ್ಣನ್ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ.

ಬಾಲಕೃಷ್ಣನ್ ತಮ್ಮ ಜೀವನದ ಐದು ದಶಕಗಳಿಗೂ ಅಧಿಕ ಸಮಯವನ್ನು ಸ್ವಾಮಿ ವಿವೇಕಾನಂದರ ಆದರ್ಶಗಳಿಗೆ ಮತ್ತು ಸಮಾಜದ ಸೇವೆಗೆ ಮೀಸಲಿಟ್ಟಿದ್ದರು. ವಿವೇಕಾನಂದ ಕೇಂದ್ರದ ಆರಂಭಿಕ ಜೀವನ್ರತಿಗಳಲ್ಲಿ ಒಬ್ಬರಾಗಿ, ಅವರು ದೇಶಾದ್ಯಂತ ಅವಿಶ್ರಾಂತವಾಗಿ ಕಾರ್ಯನಿರ್ವಹಿಸಿದರು. ಅವರು ಈಶಾನ್ಯ ರಾಜ್ಯಗಳೊಂದಿಗೆ ವಿಶೇಷವಾಗಿ ಗಾಢವಾದ ಸಂಬಂಧವನ್ನು ಹೊಂದಿದ್ದರು. ಅವರು ಶೈಕ್ಷಣಿಕ, ಸಾಮಾಜಿಕ ಮತ್ತು ರಾಷ್ಟ್ರ ನಿರ್ಮಾಣ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಇಡೀ ವಿವೇಕಾನಂದ ಕೇಂದ್ರ ಕುಟುಂಬ ಮತ್ತು ಅವರ ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಓಂ ಶಾಂತಿ.

@vkendra