ಬಾಂಗ್ಲಾದೇಶದಲ್ಲಿ ಹೊಸದಾಗಿ ರಚನೆಯಾಗಿರುವ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರ ಜವಾಬ್ದಾರಿ ವಹಿಸಿಕೊಂಡಿರುವ ನೊಬೆಲ್‌ ಪುರಸ್ಕೃತ ಪ್ರೊಫೆಸರ್‌ ಮೊಹಮದ್‌ ಯೂನಸ್‌ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ. 

ನೆರೆಯ ರಾಷ್ಟ್ರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಲಿ ಹಾಗೂ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯದವರು ಸುರಕ್ಷಿತರಾಗಿರಲಿ ಎಂದು ಶ್ರೀ ಮೋದಿ ಹಾರೈಸಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್‌ ಮಾಡಿದ್ಧಾರೆ:

“ಹೊಸ ಜವಾಬ್ದಾರಿಗಳನ್ನು ವಹಿಸಿಕೊಂಡಿರುವ ಪ್ರೊಫೆಸರ್‌ ಮೊಹಮದ್‌ ಯೂನಸ್ ಅವರಿಗೆ ಶುಭಾಶಯಗಳು. ಹಿಂದೂಗಳು ಮತ್ತು ಇತರ ಎಲ್ಲಾ ಅಲ್ಪಸಂಖ್ಯಾತ ಸಮುದಾಯಗಳ ರಕ್ಷಣೆ ಮತ್ತು ಸುರಕ್ಷತೆ ಖಾತರಿಪಡಿಸುತ್ತಾ ಪರಿ‍ಸ್ಥಿತಿ ಶೀಘ್ರವೇ ಸಹಜ ಸ್ಥಿತಿಗೆ ಮರಳಲಿ ಎಂದು ನಾವು ಆಶಿಸುತ್ತೇವೆ. ಶಾಂತಿ, ಭದ್ರತೆ ಮತ್ತು ಅಭಿವೃದ್ಧಿಯೊಂದಿಗೆ ಉಭಯ ದೇಶಗಳ ಜನರ ಆಶೋತ್ತರಗಳ ಈಡೇರಿಕೆಗೆ ಬಾಂಗ್ಲಾದೇಶದೊಂದಿಗೆ ಕಾರ್ಯನಿರ್ವಹಿಸಲು ಭಾರತದ ಬದ್ಧತೆ ಮುಂದುವರಿಯಲಿದೆ.”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India accelerates ‘semiconductor drive’ with Rs 1.64 lakh crore investment plan

Media Coverage

India accelerates ‘semiconductor drive’ with Rs 1.64 lakh crore investment plan
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಜೂನ್ 2026
June 29, 2026

PM Modi Advancing National Strength Through Unity, Innovation and Janbhagidari