ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ (ಆರ್‌ ಎಸ್‌ ಪಿ) ಅಧ್ಯಕ್ಷರಾದ ಶ್ರೀ ರಬಿ ಲಾಮಿಚಾನೆ ಮತ್ತು ಆರ್‌ ಎಸ್‌ ಪಿಯ ಹಿರಿಯ ನಾಯಕರಾದ ಶ್ರೀ ಬಾಲೇಂದ್ರ ಶಾ ಅವರೊಂದಿಗೆ ಆತ್ಮೀಯವಾದ ದೂರವಾಣಿ ಸಂಭಾಷಣೆ ನಡೆಸಿದರು.

ನೇಪಾಳ ಚುನಾವಣೆಯಲ್ಲಿ ಆರ್‌ ಎಸ್‌ ಪಿ ಯ ಅಭೂತಪೂರ್ವ ಯಶಸ್ಸಿಗೆ ಮತ್ತು ಚುನಾವಣಾ ವಿಜಯಕ್ಕಾಗಿ ಇಬ್ಬರೂ ನಾಯಕರನ್ನು ಶ್ರೀ ಮೋದಿ ಅವರು ಅಭಿನಂದಿಸಿದ್ದಾರೆ. ಮುಂಬರುವ ಹೊಸ ಸರ್ಕಾರಕ್ಕೆ ತಮ್ಮ ಶುಭಾಶಯ ಕೋರುತ್ತಾ ಪರಸ್ಪರ ಸಮೃದ್ಧಿ, ಪ್ರಗತಿ ಮತ್ತು ಎರಡೂ ದೇಶಗಳ ಜನರ ಯೋಗಕ್ಷೇಮಕ್ಕಾಗಿ ಅವರೊಂದಿಗೆ ಕೆಲಸ ಮಾಡುವ ಭಾರತದ ಬದ್ಧತೆಯನ್ನು ಪ್ರಧಾನಮಂತ್ರಿ ಪುನರುಚ್ಚರಿಸಿದ್ದಾರೆ.

ಭವಿಷ್ಯದ ಭಾರತ-ನೇಪಾಳ ಬಾಂಧವ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಾ ಪ್ರಧಾನಮಂತ್ರಿಗಳು, ಜಂಟಿ ಪ್ರಯತ್ನಗಳೊಂದಿಗೆ ಎರಡೂ ರಾಷ್ಟ್ರಗಳ ನಡುವಿನ ಪಾಲುದಾರಿಕೆಯು ಮುಂದಿನ ವರ್ಷಗಳಲ್ಲಿ ಹೊಸ ಎತ್ತರ ತಲುಪಲಿದೆ ಎಂದು ಹೇಳಿದರು.

ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಮಂತ್ರಿಗಳು ಹೀಗೆ ಹೇಳಿದ್ದಾರೆ: 

“ರಾಷ್ಟ್ರೀಯ ಸ್ವತಂತ್ರ ಪಕ್ಷದ (ಆರ್‌ ಎಸ್‌ ಪಿ) ಅಧ್ಯಕ್ಷರಾದ ಶ್ರೀ ರಬಿ ಲಾಮಿಚಾನೆ ಮತ್ತು ಆರ್‌ ಎಸ್‌ ಪಿಯ ಹಿರಿಯ ನಾಯಕರಾದ ಶ್ರೀ ಬಾಲೇಂದ್ರ ಶಾ ಅವರೊಂದಿಗೆ ಆತ್ಮೀಯವಾದ ದೂರವಾಣಿ ಸಂಭಾಷಣೆ ನಡೆಸಿದೆ.

ನೇಪಾಳ ಚುನಾವಣೆಯಲ್ಲಿ ಆರ್‌ ಎಸ್‌ ಪಿ ಯ ಅಭೂತಪೂರ್ವ ಯಶಸ್ಸಿಗೆ ಮತ್ತು ಚುನಾವಣಾ ಗೆಲುವಿಗಾಗಿ ಇಬ್ಬರೂ ನಾಯಕರನ್ನು ಅಭಿನಂದಿಸಿದೆ. ಅವರ ಹೊಸ ಸರ್ಕಾರಕ್ಕೆ ಮತ್ತು ನಮ್ಮ ಎರಡೂ ದೇಶಗಳ ಪರಸ್ಪರ ಸಮೃದ್ಧಿ, ಪ್ರಗತಿ ಮತ್ತು ಯೋಗಕ್ಷೇಮಕ್ಕಾಗಿ ಅವರೊಂದಿಗೆ ಕಾರ್ಯನಿರ್ವಹಿಸುವ ಭಾರತದ ಬದ್ಧತೆಗೆ ಶುಭ ಕೋರಿದೆ.

ನಮ್ಮ ಜಂಟಿ ಪ್ರಯತ್ನಗಳೊಂದಿಗೆ ಭಾರತ ಮತ್ತು ನೇಪಾಳ ಬಾಂಧವ್ಯ ಮುಂಬರುವ ವರ್ಷಗಳಲ್ಲಿ ಹೊಸ ಎತ್ತರಕ್ಕೇರಲಿದೆ ಎಂದು ನನಗೆ ವಿಶ್ವಾಸವಿದೆ.

@hamrorabi

@ShahBalen

@party_swatantra”

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
‘Cheese from India makes its mark globally’: PM Modi lauds Indian winners at Mundial do Queijo

Media Coverage

‘Cheese from India makes its mark globally’: PM Modi lauds Indian winners at Mundial do Queijo
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 23 ಎಪ್ರಿಲ್ 2026
April 23, 2026

Inclusive Innovation: Empowering Every Citizen in the New India Under the Leadership of PM Modi