ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, 2021ನೇ ಸಾಲಿನಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಡಿಯಲ್ಲಿ ಆಯೋಜಿಸಲಾದ 'ಸೃಜನಶೀಲತೆಯಲ್ಲಿ ಏಕತೆ' ಸ್ಪರ್ಧೆಯ ವಿಜೇತರನ್ನು ಮತ್ತು ಅದರಲ್ಲಿ ಭಾಗವಹಿಸಿದವರನ್ನು ಅಭಿನಂದಿಸಿದ್ದಾರೆ.

ದೇಶಾದ್ಯಂತ 5 ಲಕ್ಷಕ್ಕೂ ಹೆಚ್ಚು ಜನರು ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು, ಅದರಲ್ಲಿ 272 ವಿಜೇತರನ್ನು ಆಯ್ಕೆ ಮಾಡಲಾಗಿದೆ. ಅವರ ಸೃಜನಶೀಲತೆಗಾಗಿ ಸಂಸ್ಕೃತಿ ಸಚಿವಾಲಯ ಅವರಿಗೆ ಪ್ರಶಸ್ತಿಯನ್ನು ನೀಡಿದೆ. ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯನ್ನು ದೆಹಲಿಯ ನೆಹರೂ ಪಾರ್ಕ್ ನಲ್ಲಿ ಆಯೋಜಿಸಲಾಗಿತ್ತು.

ಅಮೃತ ಮಹೋತ್ಸವದ ಸರಣಿ ಟ್ವೀಟ್ ಗಳಿಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರು, 
"ಅದ್ಭುತ ಸೃಜನಶೀಲತೆಯಿಂದ ತುಂಬಿದ ಈ ದೇಶಭಕ್ತಿಯ ಮನೋಭಾವವು #UnityInCreativity ಗೆ ಹೊಸ ಹುರುಪನ್ನು ನೀಡಿದೆ. ಲಕ್ಷಾಂತರ ದೇಶವಾಸಿಗಳು ಇದರಲ್ಲಿ ಸಕ್ರಿಯವಾಗಿ ಭಾಗವಹಿಸಿದ ರೀತಿ ಎಲ್ಲರಿಗೂ ಸ್ಫೂರ್ತಿ ನೀಡಿದೆ. ವಿಜೇತರಿಗೆ ಮತ್ತು ಎಲ್ಲಾ ಸ್ಪರ್ಧಿಗಳಿಗೆ ಅನೇಕ ಅಭಿನಂದನೆಗಳು" ಎಂದು ಟ್ವೀಟ್ ಮಾಡಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
A Milestone in Financial Inclusion: The Success Story of PMSBY

Media Coverage

A Milestone in Financial Inclusion: The Success Story of PMSBY
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 9 ಮೇ 2026
May 09, 2026

Citizens Celebrate India’s Civilisational & Economic Awakening Under PM Narendra Modi