ಹೊಸದಾಗಿ ನೇಮಕಾತಿಗೊಂಡ 51,000 ಉದ್ಯೋಗಿಗಳಿಗೆ ನೇಮಕಪತ್ರ ವಿತರಣೆ
“ಸೇವೆಗೆ ನೇಮಕಗೊಂಡವರ ಶ್ರದ್ಧೆಯು, ದೇಶ ತನ್ನ ಗುರಿಗಳನ್ನು ಸಾಧಿಸಲು ಅನುವು ಮಾಡಿಕೊಡುತ್ತದೆ’’
“ನಾರಿಶಕ್ತಿ ವಂದನ ಅಧಿನಿಯಮ ಹೊಸ ಸಂಸತ್ತಿನಲ್ಲಿ ರಾಷ್ಟ್ರದ ಹೊಸ ಆರಂಭವಾಗಿದೆ’’
“ಸರ್ಕಾರದ ನೀತಿಗಳು ಹೊಸ ಮನಸ್ಥಿತಿ, ನಿರಂತರ ಮೇಲ್ವಿಚಾರಣೆ, ಸಮರೋಪಾದಿ ಅನುಷ್ಠಾನ ಮತ್ತು ಸಾಮೂಹಿಕ ಭಾಗವಹಿಸುವಿಕೆಯನ್ನು ಆಧರಿಸಿವೆ, ಇದು ಸ್ಮರಣಾರ್ಹ ಗುರಿಗಳನ್ನು ಸಾಧಿಸಲು ದಾರಿ ಮಾಡಿಕೊಟ್ಟಿದೆ’’
ಈ ರೋಜ್ ಗಾರ್ ಮೇಳ ದೇಶಾದ್ಯಂತ 46 ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆಯಿತು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರೋಜ್ ಗಾರ್ ಮೇಳ ಉದ್ದೇಶಿಸಿ ಭಾಷಣ ಮಾಡಿದರು ಮತ್ತು ಹೊಸದಾಗಿ ನೇಮಕಗೊಂಡ 51,000 ಮಂದಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಹೊಸದಾಗಿ ನೇಮಕಗೊಂಡರು ದೇಶಾದ್ಯಂತ ಅಂಚೆ ಇಲಾಖೆ, ಭಾರತೀಯ ಆಡಿಟ್ ಮತ್ತು ಅಕೌಂಟ್ಸ್ ಇಲಾಖೆ, ಅಣು ಇಂಧನ ಇಲಾಖೆ, ಕಂದಾಯ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ರಕ್ಷಣಾ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿ ಸರ್ಕಾರದ ಹಲವು ಇಲಾಖೆಗಳು/ಸಚಿವಾಲಯಗಳಿಗೆ ಸೇರ್ಪಡೆಯಾಗಲಿದ್ದಾರೆ. ಈ ರೋಜ್ ಗಾರ್ ಮೇಳ ದೇಶಾದ್ಯಂತ 46 ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆಯಿತು.

 

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಂದು ನೇಮಕಾತಿ ಪತ್ರ ಪಡೆದವರನ್ನು ಅಭಿನಂದಿಸಿದರು. ಅವರ ಕಠಿಣ ಪರಿಶ್ರಮ ಮತ್ತು ಬದ್ಧತೆಯ ಮನೋಭಾವದಿಂದ ಇಲ್ಲಿಗೆ ಬಂದಿರುವ ಅವರು ಲಕ್ಷಾಂತರ ಅಭ್ಯರ್ಥಿಗಳ ಸಮೂಹದಿಂದ ಆಯ್ಕೆಯಾಗಿದ್ದಾರೆ ಎಂದು ಹೇಳಿದರು. ದೇಶಾದ್ಯಂತ ಗಣೇಶ ಉತ್ಸವದ ಸಂಭ್ರಮವನ್ನು ಉಲ್ಲೇಖಿಸಿದ ಪ್ರಧಾನಿ, ಈ ಶುಭ ಸಂದರ್ಭದಲ್ಲಿ ನೇಮಕಗೊಂಡವರಿಗೆ ಇದು ಹೊಸ ಜೀವನದ ‘ಶ್ರೀ ಗಣೇಶ’ ಎಂದು ಹೇಳಿದರು. "ಭಗವಾನ್ ಗಣೇಶನು ಸಾಧನೆಗಳ ದೇವರು", ಸೇವೆಯ ಕಡೆಗೆ ನೇಮಕಗೊಂಡವರ ಶ್ರದ್ಧೆಯು, ದೇಶವು ತನ್ನ ಗುರಿಗಳನ್ನು ಸಾಧಿಸಲು ಅನುವು ಮಾಡಿಕೊಡುತ್ತದೆ ಎಂಬ ವಿಶ್ವಾಸವನ್ನು ಪ್ರಧಾನಮಂತ್ರಿ ವ್ಯಕ್ತಪಡಿಸಿದರು.

ದೇಶವು ಐತಿಹಾಸಿಕ ಸಾಧನೆಗಳಿಗೆ ಸಾಕ್ಷಿಯಾಗುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಜನಸಂಖ್ಯೆಯ ಅರ್ಧದಷ್ಟು ಜನರನ್ನು ಸಬಲೀಕರಣಗೊಳಿಸಿದ ನಾರಿಶಕ್ತಿ ವಂದನ ಅಧಿನಿಯಮವನ್ನು ಅವರು ಪ್ರಸ್ತಾಪಿಸಿದರು. “30 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಮಹಿಳಾ ಮೀಸಲು ಮಸೂದೆ  ಉಭಯ ಸದನಗಳಲ್ಲಿ ದಾಖಲೆಯ ಮತಗಳಿಂದ ಅಂಗೀಕಾರವಾಗಿದೆ. ಈ ನಿರ್ಧಾರವು ಹೊಸ ಸಂಸತ್ತಿನ ಮೊದಲ ಅಧಿವೇಶನದಲ್ಲಿ ನಡೆಯಿತು, ಒಂದು ರೀತಿಯಲ್ಲಿ, ಇದು ಹೊಸ ಸಂಸತ್ತಿನಲ್ಲಿ ರಾಷ್ಟ್ರಕ್ಕೆ ಹೊಸ ಆರಂಭ ದೊರೆತಿದೆ” ಎಂದು ಪ್ರಧಾನಿ ಮೋದಿ ಬಲವಾಗಿ ಪ್ರತಿಪಾದಿಸಿದರು.  

ಹೊಸದಾಗಿ ನೇಮಕಗೊಂಡವರಲ್ಲಿ ಮಹಿಳೆಯರ ಗಮನಾರ್ಹ ಉಪಸ್ಥಿತಿಯನ್ನು ಶ್ಲಾಘಿಸಿದ ಪ್ರಧಾನಿ, ದೇಶದ ಹೆಣ್ಣುಮಕ್ಕಳು ಪ್ರತಿಯೊಂದು ಕ್ಷೇತ್ರದಲ್ಲೂ ಹೆಸರು ಮಾಡುತ್ತಿದ್ದಾರೆ ಎಂದು ಹೇಳಿದರು. “ನಾರಿಶಕ್ತಿಯ ಸಾಧನೆಯ ಬಗ್ಗೆ ನನಗೆ ಅಪಾರ ಹೆಮ್ಮೆ ಇದೆ ಮತ್ತು ಅವರ ಬೆಳವಣಿಗೆಗೆ ಹೊಸ ಮಾರ್ಗಗಳನ್ನು ತೆರೆಯುವುದು ಸರ್ಕಾರದ ನೀತಿಯಾಗಿದೆ’’ ಎಂದು ಅವರು ಹೇಳಿದರು. ಯಾವುದೇ ವಲಯದಲ್ಲಿ ಮಹಿಳೆಯರ ಉಪಸ್ಥಿತಿಯು ಸದಾ ಆ ಪ್ರತಿಯೊಂದು ವಲಯದಲ್ಲಿ ಸಕಾರಾತ್ಮಕ ಬದಲಾವಣೆಗಳಿಗೆ ಕಾರಣವಾಗಿದೆ ಎಂದು ಪ್ರಧಾನಿ ಉಲ್ಲೇಖಿಸಿದರು

 

ನವಭಾರತದ ಆಕಾಂಕ್ಷೆಗಳು ಉತ್ತುಂಗಕ್ಕೇರುತ್ತಿರುವುದನ್ನು ಉಲ್ಲೇಖಿಸಿದ ಪ್ರಧಾನಿ, ಈ ನವಭಾರತದ ಕನಸುಗಳು ಉತ್ಕೃಷ್ಟವಾಗಿವೆ ಎಂದು ಹೇಳಿದರು.  “2047 ರ ವೇಳೆಗೆ ಭಾರತವು ವಿಕಸಿತ ಭಾರತ ಆಗುವ ಸಂಕಲ್ಪವನ್ನು ಕೈಗೊಂಡಿದೆ" ಎಂದು ಪ್ರಧಾನಮಂತ್ರಿ ಹೇಳಿದರು. ಮುಂದಿನ ಕೆಲವು ವರ್ಷಗಳಲ್ಲಿ, ರಾಷ್ಟ್ರವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ. ಮುಂಬರುವ ದಿನಗಳಲ್ಲಿ ಸರ್ಕಾರಿ ನೌಕರರು ಸಾಕಷ್ಟು ಕೊಡುಗೆಗಳನ್ನು ನೀಡಲಿದ್ದಾರೆ ಎಂದು ಅವರು ಒತ್ತಿ ಹೇಳಿದರು. ಅವರು ‘ಪ್ರಜೆಗಳು ಮೊದಲು’(ಸಿಟಿಜನ್ ಫಸ್ಟ್ಗ) ಎಂಬ ವಿಧಾನವನ್ನು ಅನುಸರಿಸುತ್ತಾರೆ ಎಂದು ಅವರು ಬಲವಾಗಿ ಪ್ರತಿಪಾದಿಸಿದರು. ಇಂದು ನೇಮಕಗೊಂಡಿರುವವರು ತಂತ್ರಜ್ಞಾನದೊಂದಿಗೆ ಬೆಳೆದಿರುವುದನ್ನು ಗಮನಿಸಿದ ಪ್ರಧಾನಮಂತ್ರಿಯವರು ತಮ್ಮ ಕಾರ್ಯಕ್ಷೇತ್ರದಲ್ಲಿ ಅದನ್ನು ಬಳಸಿಕೊಳ್ಳಲು ಮತ್ತು ಆಡಳಿತದ ದಕ್ಷತೆಯನ್ನು ಸುಧಾರಿಸಲು ಒತ್ತು ನೀಡಬೇಕೆಂದು ಹೇಳಿದರು.

ಆಡಳಿತದಲ್ಲಿ ತಂತ್ರಜ್ಞಾನದ ಬಳಕೆಯ ಕುರಿತು ಮತ್ತಷ್ಟು ವಿವರಿಸಿದ ಪ್ರಧಾನಮಂತ್ರಿ, ಆನ್‌ಲೈನ್ ರೈಲ್ವೆ ಕಾಯ್ದಿರಿಸುವುದು, ಆಧಾರ್ ಕಾರ್ಡ್, ಡಿಜಿಲಾಕರ್, ಇಕೆವೈಸಿ, ಗ್ಯಾಸ್ ಬುಕಿಂಗ್, ಬಿಲ್ ಪಾವತಿಗಳು, ಡಿಬಿಟಿ ಮತ್ತು ಡಿಜಿಯಾತ್ರಾ ಮೂಲಕ ದಾಖಲಾತಿಗಳ ಸಂಕೀರ್ಣತೆಯ ನಿವಾರಣೆ ಮಾಡಲಾಗಿದೆ ಎಂದರು. “ತಂತ್ರಜ್ಞಾನವು ಭ್ರಷ್ಟಾಚಾರವನ್ನು ನಿಲ್ಲಿಸಿದೆ, ವಿಶ್ವಾಸಾರ್ಹತೆ ಸುಧಾರಿಸಿದೆ, ಕಡಿಮೆ ಸಂಕೀರ್ಣತೆ, ಸೌಕರ್ಯವನ್ನು ಹೆಚ್ಚಿಸಿದೆ" ಎಂದು ಪ್ರಧಾನಿ ಹೇಳಿದರು. ಹೊಸದಾಗಿ ನೇಮಕಗೊಂಡಿರುವವರು ಆ ನಿಟ್ಟಿನಲ್ಲಿ ಮತ್ತಷ್ಟು ಕೆಲಸ ಮಾಡಲು ಕರೆ ನೀಡಿದರು.

 

ಕಳೆದ 9 ವರ್ಷಗಳಲ್ಲಿ, ಸರ್ಕಾರದ ನೀತಿಗಳು ಹೊಸ ಮನಸ್ಥಿತಿ, ನಿರಂತರ ಮೇಲ್ವಿಚಾರಣೆ, ಸಮರೋಪಾದಿಯಲ್ಲಿ ಅನುಷ್ಠಾನ ಮತ್ತು ಸಾಮೂಹಿಕ ಸಹಭಾಗಿತ್ವವನ್ನು ಆಧರಿಸಿವೆ ಮತ್ತು ಸ್ಮರಣಾರ್ಹ ಗುರಿಗಳನ್ನು ಸಾಧಿಸಲು ದಾರಿ ಮಾಡಿಕೊಟ್ಟಿವೆ ಎಂದು ಪ್ರಧಾನಿ ಹೇಳಿದರು. ಸ್ವಚ್ಛ ಭಾರತ ಮತ್ತು ಜಲ ಜೀವನ್ ಮಿಷನ್‌ನಂತಹ ಅಭಿಯಾನಗಳ ಉದಾಹರಣೆಗಳನ್ನು ನೀಡಿದ ಪ್ರಧಾನಮಂತ್ರಿ, ಗರಿಷ್ಠ ಪ್ರಮಾಣವನ್ನು ಸಾಧಿಸಲು ಪ್ರಯತ್ನಿಸುತ್ತಿರುವ ಸರ್ಕಾರದ ಸಮರೋಪಾದಿ ಅನುಷ್ಠಾನ ವಿಧಾನವನ್ನು ಪ್ರಮುಖವಾಗಿ ತಿಳಿಸಿದರು. ದೇಶಾದ್ಯಂತ ಯೋಜನೆಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ತಿಳಿಸಿದ ಅವರು ಸ್ವತಃ ಪ್ರಧಾನಿ ಬಳಸುತ್ತಿರುವ ಪ್ರಗತಿ ವೇದಿಕೆಯ ಉದಾಹರಣೆಯನ್ನು ನೀಡಿದರು. ಸರ್ಕಾರದ ಯೋಜನೆಗಳನ್ನು ತಳಮಟ್ಟದಲ್ಲಿ ಅನುಷ್ಠಾನಗೊಳಿಸುವ ಅತ್ಯುನ್ನತ ಜವಾಬ್ದಾರಿ ಸರ್ಕಾರಿ ನೌಕರರ ಮೇಲಿದೆ ಎಂದು ಅವರು ಒತ್ತಿ ಹೇಳಿದರು. ಲಕ್ಷಗಟ್ಟಲೆ ಯುವಕರು ಸರ್ಕಾರಿ ಸೇವೆಗಳಿಗೆ ಸೇರಿದಾಗ ನೀತಿ ಜಾರಿಯ ವೇಗ ಮತ್ತು ಪ್ರಮಾಣವು ಉತ್ತೇಜನ ಪಡೆಯುತ್ತದೆ, ಇದರಿಂದಾಗಿ ಸರ್ಕಾರಿ ವಲಯದ ಹೊರಗೆ ಉದ್ಯೋಗದಲ್ಲಿ ಉತ್ತೇಜನ ಮತ್ತು ಹೊಸ ಉದ್ಯೋಗ ನೀತಿಗಳನ್ನು ರೂಪಿಸಲು ಕಾರಣವಾಗುತ್ತದೆ ಎಂದು ಅವರು ಪ್ರಸ್ತಾಪಿಸಿದರು.

ಜಿಡಿಪಿ ಬೆಳವಣಿಗೆ ಮತ್ತು ಉತ್ಪಾದನೆ ಮತ್ತು ರಫ್ತುಗಳಲ್ಲಿನ ಏರಿಳಿತದ ಕುರಿತು ಮಾತನಾಡಿದ ಪ್ರಧಾನಮಂತ್ರಿ, ಆಧುನಿಕ ಮೂಲಸೌಕರ್ಯದಲ್ಲಿ ಹಿಂದೆಂದೂ ನಿರೀಕ್ಷಿಸದ ಪ್ರಮಾಣದಲ್ಲಿ ಹೂಡಿಕೆಯನ್ನು ಮಾಡಲಾಗುತ್ತಿದೆ ಎಂದು ಪ್ರಸ್ತಾಪಿಸಿದರು. ನವೀಕರಿಸಬಹುದಾದ ಇಂಧನ, ಸಾವಯವ ಕೃಷಿ, ರಕ್ಷಣೆ ಮತ್ತು ಪ್ರವಾಸೋದ್ಯಮದಂತಹ ಕ್ಷೇತ್ರಗಳ ಬಗ್ಗೆ ಹೂಡಿಕೆದಾರರು ಹೊಸ ಉತ್ಸಾಹವನ್ನು ತೋರಿಸುತ್ತಿದ್ದಾರೆ. ಭಾರತದ ಆತ್ಮನಿರ್ಭರ ಅಭಿಯಾನವು ಮೊಬೈಲ್ ಫೋನ್‌ಗಳಿಂದ ವಿಮಾನವಾಹಕ ನೌಕೆಗಳವರೆಗೆ, ಕರೋನಾ ಲಸಿಕೆಯಿಂದ ಯುದ್ಧ ವಿಮಾನಗಳವರೆಗೆ ಫಲಿತಾಂಶಗಳನ್ನು ತೋರಿಸುತ್ತಿದೆ. ಹಾಗಾಗಿ ಇಂದು ಯುವಜನತೆಗೆ ಹೊಸ ಹೊಸ ಅವಕಾಶಗಳು ಹುಟ್ಟಿಕೊಳ್ಳುತ್ತಿವೆ ಎಂದು ಹೇಳಿದರು.

 

ದೇಶದ ಜೀವನದಲ್ಲಿ ಮತ್ತು ಹೊಸದಾಗಿ ನೇಮಕಾತಿಗೊಂಡವರಲ್ಲಿ ಮುಂದಿನ 25 ವರ್ಷಗಳ ಅಮೃತ ಕಾಲದ ಮಹತ್ವವನ್ನು ಪ್ರಧಾನಮಂತ್ರಿ ಪುನರುಚ್ಚರಿಸಿದರು. ತಂಡದ ಕೆಲಸ(ಟೀಮ್ ವರ್ಕ್) ಗೆ ಹೆಚ್ಚಿನ ಆದ್ಯತೆ ನೀಡುವಂತೆ ಅವರು ತಿಳಿಸಿದರು. ಜಿ-20 ನಮ್ಮ ಸಂಪ್ರದಾಯ, ನಿರ್ಣಯ ಮತ್ತು ಆತಿಥ್ಯದ ಕಾರ್ಯಕ್ರಮವಾಗಿದೆ ಎಂದು ಪ್ರಧಾನಿ ಹೇಳಿದರು. ಈ ಯಶಸ್ಸು ವಿವಿಧ ಸಾರ್ವಜನಿಕ ಮತ್ತು ಖಾಸಗಿ ಇಲಾಖೆಗಳ ಯಶಸ್ಸು ಕೂಡ ಆಗಿದೆ. ಜಿ-20ಯ ಯಶಸ್ಸಿಗೆ ಎಲ್ಲರೂ ತಂಡವಾಗಿ ಕೆಲಸ ಮಾಡಿದರು ಎಂದರು. "ಇಂದು ನೀವೂ ಸಹ ಸರ್ಕಾರಿ ನೌಕರರ ಟೀಮ್ ಇಂಡಿಯಾದ ಭಾಗವಾಗುತ್ತಿರುವುದು ನನಗೆ ಖುಷಿ ತಂದಿದೆ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಹೊಸದಾಗಿ ನೇಮಕಗೊಂಡವರಿಗೆ ಸರ್ಕಾರದೊಂದಿಗೆ ನೇರವಾಗಿ ಕೆಲಸ ಮಾಡಲು ಅವಕಾಶವಿದೆ ಎಂದ ಪ್ರಧಾನಮಂತ್ರಿ ತಮ್ಮ ಕಲಿಕೆಯ ಪಯಣವನ್ನು ಮುಂದುವರಿಸಲು ಮತ್ತು ತಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ತಮ್ಮ ಜ್ಞಾನವನ್ನು ಹೆಚ್ಚಿಸಲು ಐಜಿಒಟಿ (ಐಗಾಟ್) ಕರ್ಮಯೋಗಿ ಪೋರ್ಟಲ್ ಅನ್ನು ಬಳಸಿಕೊಳ್ಳುವಂತೆ ಕರೆ ನೀಡಿದರು. ಭಾಷಣವನ್ನು ಮುಕ್ತಾಯಗೊಳಿಸುವ  ಮುನ್ನ ಪ್ರಧಾನಿ ಅವರು, ನೇಮಕಗೊಂಡವರನ್ನು ಮತ್ತು ಅವರ ಕುಟುಂಬಗಳನ್ನು ಅಭಿನಂದಿಸಿದರು ಮತ್ತು ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರದ ಸಂಕಲ್ಪವನ್ನು ಕೈಗೊಳ್ಳುವಂತೆ ಕರೆ ನೀಡಿದರು.

ಹಿನ್ನೆಲೆ:

ದೇಶಾದ್ಯಂತ 46 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ಆಯೋಜಿಸಲಾಗಿತ್ತು. ಈ ಉಪಕ್ರಮವನ್ನು ಬೆಂಬಲಿಸುವ ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ರಾಜ್ಯ ಸರ್ಕಾರಗಳು/ ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇಮಕಾತಿಗಳು ನಡೆಯುತ್ತಿವೆ. ದೇಶಾದ್ಯಂತ ಆಯ್ಕೆಯಾದವರು, ಅಂಚೆ ಇಲಾಖೆ, ಭಾರತೀಯ ಆಡಿಟ್ ಮತ್ತು ಅಕೌಂಟ್ಸ್ ಇಲಾಖೆ, ಅಣು ಶಕ್ತಿ ಇಲಾಖೆ, ಕಂದಾಯ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಸಚಿವಾಲಯ, ರಕ್ಷಣೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೇರಿದಂತೆ ವಿವಿಧ ಸಚಿವಾಲಯಗಳು/ಇಲಾಖೆಗಳಲ್ಲಿ ಸರ್ಕಾರಿ ಸೇವೆಗೆ ಸೇರ್ಪಡೆಯಾಗಲಿದ್ದಾರೆ.

 

ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿ ಅವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗಾರ್ ಮೇಳವು ಒಂದು ಹೆಜ್ಜೆಯಾಗಿದೆ. ರೋಜ್‌ಗಾರ್ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಯಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಯುವಜನರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸಲು ಅರ್ಥಪೂರ್ಣ ಅವಕಾಶಗಳನ್ನು ನೀಡುತ್ತಿದೆ ಎಂದು ನಿರೀಕ್ಷಿಸಲಾಗಿದೆ.


ಹೊಸದಾಗಿ ಸೇರ್ಪಡೆಗೊಂಡವರು ಐಜಿಒಟಿ ಕರ್ಮಯೋಗಿ ಪೋರ್ಟಲ್‌ನಲ್ಲಿ ಆನ್‌ಲೈನ್ ಮಾದರಿಯಲ್ಲಿರುವ ಕರ್ಮಯೋಗಿ ಪ್ರಾರಂಭ್ ಮೂಲಕ ತರಬೇತಿ ಪಡೆಯುವ ಅವಕಾಶವನ್ನು ಪಡೆಯುತ್ತಿದ್ದಾರೆ, ಅಲ್ಲಿ 680 ಕ್ಕೂ ಹೆಚ್ಚು ಇ-ಕಲಿಕೆ ಕೋರ್ಸ್‌ಗಳಿದ್ದು, ಅವುಗಳಲ್ಲಿ 'ಎಲ್ಲಿದ್ದರೂ ಕಲಿಯುವ’ ಸ್ವರೂಪದಲ್ಲಿ ವಿನ್ಯಾಸಗೊಳಿಸಿ ಲಭ್ಯವಾಗುವಂತೆ ಮಾಡಲಾಗಿದೆ.  

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's Major Ports Handled Record 915 Million Tonnes Cargo In FY26, Surpass Annual Target

Media Coverage

India's Major Ports Handled Record 915 Million Tonnes Cargo In FY26, Surpass Annual Target
NM on the go

Nm on the go

Always be the first to hear from the PM. Get the App Now!
...
PM Modi addresses Party Karyakartas on BJP Sthapana Diwas
April 06, 2026
We have fulfilled our commitment by bringing the Nari Shakti Vandan Adhiniyam, with the aim of implementing it in the 2029 elections: PM on Sthapana Diwas
Inspired by the ideals of the Rashtriya Swayamsevak Sangh, the BJP entered politics with a commitment to ‘clean and value-based governance’: PM Modi
India is achieving its climate goals ahead of time and has significantly expanded its renewable energy capacity, especially in solar power: PM Modi
The BJP has balanced development with heritage, ensuring due recognition to all great personalities of India, including Netaji Subhas Chandra Bose and the Azad Hind Fauj, while also promoting Khadi: PM
The BJP has consistently worked to strengthen national unity through initiatives like One Nation One Tax with GST, One Nation One Ration Card, and One Nation One Grid: PM Modi

PM Modi addressed BJP Karyakartas on the party’s Sthapana Diwas, paying tribute to generations of workers and their dedication, sacrifice and unwavering commitment. He reminisced about the early years when the BJP had neither power nor resources, and karyakartas travelled tirelessly to connect with people. He reiterated their belief in a brighter future for Bharat, which kept them going despite challenges like the Emergency, political isolation and violence.

The PM paid homage to all those who lost their lives for the welfare of people, particularly in states like West Bengal and Keralam and said BJP workers have always remained fearless and committed to nation-building.

Reflecting on BJP’s growth, PM Modi said the party’s success is rooted in a long journey of intent, policy and dedication. Inspired by the ideals of the Rashtriya Swayamsevak Sangh, BJP entered politics with a commitment to ‘clean and value-based governance’. Over the decades, the party built a strong cadre driven by service, discipline and ideological clarity.

He highlighted that the BJP has also set a new benchmark in coalition politics through the NDA, which has completed over 25 years, reflecting inclusivity and respect for regional aspirations.

Speaking on governance, he recalled that the party had resolved to ensure greater participation of women and fulfilled its commitment by bringing the Nari Shakti Vandan Adhiniyam, with the aim of implementing it in the 2029 elections.

He said that today, the BJP is guided by the principle of Antyodaya. He noted that through a saturation approach, the government has helped lift 25 crore people out of poverty.

PM Modi highlighted key milestones achieved by the government, including the removal of Article 370 in Jammu and Kashmir, fulfilling a long-standing commitment of the party.

He added that BJP has consistently worked to strengthen national unity through initiatives like One Nation One Tax with GST, One Nation One Ration Card, and One Nation One Grid, etc.,

Emphasising India’s global outlook, the PM said the country is guided by the spirit of “Vasudhaiva Kutumbakam” and is engaging with the world with equal closeness. He said BJP has balanced development with heritage, ensuring due recognition to all great personalities of India, including Netaji Subhas Chandra Bose and the Azad Hind Fauj, while also promoting Khadi and the spirit of self-reliance.

On economic and environmental progress, PM Modi noted that India is achieving its climate goals ahead of time and has significantly expanded its renewable energy capacity, especially in solar power.

Concluding his address, the Prime Minister reaffirmed that BJP will continue to work with dedication towards nation-building, guided by its core principle:
“Rashtra Pratham (Nation First)”.