ವಿಕಸಿತ ಭಾರತದ ಕಡೆಗಿನ ಪಯಣವನ್ನು ವೇಗಗೊಳಿಸುವಲ್ಲಿ ಭಾರತದ ಯುವಕರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ: ಪ್ರಧಾನಮಂತ್ರಿ
ಉದ್ಯೋಗ ಮೇಳವು ಯುವ ಶಕ್ತಿಗೆ ಹೊಸ ಅವಕಾಶಗಳ ಮೂಲಕ ಸಬಲೀಕರಣಗೊಳಿಸುವ ನಮ್ಮ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ: ಪ್ರಧಾನಮಂತ್ರಿ
ಭಾರತದ ಯುವ ಜನಸಂಖ್ಯೆ ಮತ್ತು ತಾಂತ್ರಿಕ ಪ್ರಗತಿಯಿಂದ ಜಗತ್ತು ಅಪಾರವಾಗಿ ಉತ್ಸುಕವಾಗಿದೆ; ಇಂದು ಜಾಗತಿಕ ಸಮುದಾಯವು ಭಾರತದ ಅಭಿವೃದ್ಧಿಯ ಪಯಣದಲ್ಲಿ ಪಾಲುದಾರರಾಗಲು ಬಯಸುತ್ತಿದೆ: ಪ್ರಧಾನಮಂತ್ರಿ
ಇಂದು, ಸ್ವಚ್ಛ ಇಂಧನ, ನಿರ್ಣಾಯಕ ಖನಿಜಗಳು, ಹಸಿರು ಹೈಡ್ರೋಜನ್ ಮತ್ತು ಸುಸ್ಥಿರ ಉತ್ಪಾದನೆಗೆ ಸಂಬಂಧಿಸಿದ ಕ್ಷೇತ್ರಗಳು ಸಹ ಕ್ಷಿಪ್ರ ವೇಗದಲ್ಲಿ ಮುನ್ನಡೆಯುತ್ತಿವೆ; ಈ ಕ್ಷೇತ್ರಗಳಲ್ಲಿನ ಪಾಲುದಾರಿಕೆಗಳು ಹೊಸ ಆರ್ಥಿಕತೆ ಮತ್ತು ಹೊಸ ಅವಕಾಶಗಳ ಬಾಗಿಲುಗಳನ್ನು ತೆರೆಯುತ್ತಿವೆ: ಪ್ರಧಾನಮಂತ್ರಿ
ಪ್ರತಿಯೊಬ್ಬ ಭಾರತೀಯನೂ ಇಂದು ದೃಢವಾದ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದ್ದಾನೆ; ಈ ಸಂಕಲ್ಪವು 2047ರ ವೇಳೆಗೆ 'ವಿಕಸಿತ ಭಾರತ'ವನ್ನು ನಿರ್ಮಿಸುವುದಾಗಿದೆ. ಈ ಉದ್ದೇಶವನ್ನು ಸಾಕಾರಗೊಳಿಸಲು, ದೇಶವು ಪ್ರಸ್ತುತ ಹಲವಾರು ಕ್ಷೇತ್ರಗಳಲ್ಲಿ ಹೂಡಿಕೆ ಮಾಡುತ್ತಿದೆ ಮತ್ತು ಈ ಹೂಡಿಕೆಗಳು ದೇಶದ ಯುವಕರಿಗೆ ಲಕ್ಷಾಂತರ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿವೆ: ಪ್ರಧಾನಮಂತ್ರಿ
ಇಂದು, ಗ್ರಾಮೀಣ ಪ್ರದೇಶಗಳಲ್ಲೂ ಕ್ಷಿಪ್ರ ಪರಿವರ್ತನೆ ಸ್ಪಷ್ಟವಾಗಿ ಗೋಚರಿಸುತ್ತಿದೆ; ಸುಧಾರಿತ ಸಂಪರ್ಕ ವ್ಯವಸ್ಥೆಯು ರೈತರು, ಸಣ್ಣ ವ್ಯಾಪಾರಿಗಳು ಮತ್ತು ವಿದ್ಯಾರ್ಥಿಗಳಿಗೆ ಹೊಸ ಮಾರ್ಗಗಳನ್ನು ಕಲ್ಪಿಸಿದೆ: ಪ್ರಧಾನಮಂತ್ರಿ
ಇಂದು ಭಾರತೀಯ ಯುವಕರು, ಪ್ರತಿ ಜಾಗತಿಕ ರಂಗದಲ್ಲೂ ತಮ್ಮ ಛಾಪು ಮೂಡಿಸುತ್ತಿದ್ದಾರೆ; ಇದೇ ಉತ್ಸಾಹ ಮತ್ತು ಶಕ್ತಿಯು ಸಾರ್ವಜನಿಕ ಸೇವೆಯಲ್ಲೂ ಪ್ರತಿಫಲಿಸಬೇಕು. ತಮ್ಮ ಕೆಲಸವನ್ನು ರಾಷ್ಟ್ರ ಸೇವೆಯ ಮಾಧ್ಯಮವೆಂದು ಭಾವಿಸುವ ಇಂತಹ ಯುವಕರ ಪರಿಶ್ರಮದಿಂದ ವಿಕಸಿತ ಭಾರತ ನಿರ್ಮಾಣವಾಗಲಿದೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ, ಬೆಳಿಗ್ಗೆ 11 ಗಂಟೆಗೆ ನಡೆದ 19ನೇ ಉದ್ಯೋಗ ಮೇಳದಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂದರ್ಭವನ್ನು ದೇಶಾದ್ಯಂತದ ಸಾವಿರಾರು ಯುವಕರಿಗೆ ಅತ್ಯಂತ ಮಹತ್ವದ ದಿನ ಎಂದು ಬಣ್ಣಿಸಿದರು. ಸರ್ಕಾರಿ ಸೇವೆಗೆ ಹೊಸದಾಗಿ ಸೇರಿದವರನ್ನು ಸ್ವಾಗತಿಸಿದ ಅವರು, ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತದ ಅಭಿವೃದ್ಧಿಗೆ ಅವರು ನೀಡಲಿರುವ ಮುಂಬರುವ ಕೊಡುಗೆಯ ಬಗ್ಗೆ  ಒತ್ತಿಹೇಳಿದರು. "ಮುಂಬರುವ ವರ್ಷಗಳಲ್ಲಿ, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ನೀವೆಲ್ಲರೂ ನಿರ್ಣಾಯಕ ಪಾತ್ರ ವಹಿಸಲಿದ್ದೀರಿ" ಎಂದು ಶ್ರೀ ಮೋದಿ ಪ್ರತಿಪಾದಿಸಿದರು.

ನೇಮಕಗೊಂಡವರನ್ನು ಈ ಮೈಲಿಗಲ್ಲಿಗೆ ತಲುಪಿಸಿದ ಅವರ ಸಮರ್ಪಣೆ ಮತ್ತು ಕಠಿಣ ಸಿದ್ಧತೆಯನ್ನು ಗೌರವಿಸಿದ ಪ್ರಧಾನಮಂತ್ರಿಯವರು, ಪ್ರತಿಯೊಬ್ಬರಿಗೂ ತಮ್ಮ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು. ಯಾವುದೇ ವೈಯಕ್ತಿಕ ಸಾಧನೆಯು ಕೇವಲ ಒಬ್ಬರಿಂದಲೇ ಸಾಧ್ಯವಾಗುವುದಿಲ್ಲ ಎಂಬುದನ್ನು ಗುರುತಿಸಿದ ಅವರು, ಈ ಪಯಣದಲ್ಲಿ ಬೆಂಬಲವಾಗಿ ನಿಂತ ಅವರ ಕುಟುಂಬಗಳು ಮತ್ತು ಪೋಷಕರಿಗೂ ತಮ್ಮ ಶುಭ ಹಾರೈಕೆಗಳನ್ನು ತಿಳಿಸಿದರು.

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐದು ದೇಶಗಳ ರಾಜತಾಂತ್ರಿಕ ಪ್ರವಾಸದ ಅನುಭವಗಳನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು, ಹತ್ತಾರು ದೇಶಗಳನ್ನು ಪ್ರತಿನಿಧಿಸುವ ಜಾಗತಿಕ ಸಂಸ್ಥೆಗಳ ಮುಖ್ಯಸ್ಥರು ಭಾರತದ ಯುವಕರು ಮತ್ತು ಅದರ ತಾಂತ್ರಿಕ ಪ್ರಗತಿಯ ಬಗ್ಗೆ ವ್ಯಕ್ತಪಡಿಸಿದ ಅಪಾರ ಉತ್ಸಾಹವನ್ನು ವಿವರಿಸಿದರು. ಭಾರತದ ಉದಯದಲ್ಲಿ ಭಾಗವಹಿಸಲು ಜಗತ್ತು ಉತ್ಸುಕವಾಗಿದೆ ಎಂದು ಅವರು ಬಣ್ಣಿಸಿದರು. "ಜಗತ್ತು ಭಾರತದ ಅಭಿವೃದ್ಧಿಯ ಪಯಣದ ಭಾಗವಾಗಲು ಬಯಸುತ್ತದೆ" ಎಂದು ಶ್ರೀ ಮೋದಿ ನೆನಪಿಸಿಕೊಂಡರು.

ಪ್ರವಾಸದ ರಾಜತಾಂತ್ರಿಕ ಮತ್ತು ಆರ್ಥಿಕ ಫಲಿತಾಂಶಗಳನ್ನು ವಿವರಿಸಿದ ಪ್ರಧಾನಮಂತ್ರಿಯವರು, ಭೇಟಿ ನೀಡಿದ ಪ್ರತಿ ದೇಶದೊಂದಿಗೆ ಮಾಡಿಕೊಳ್ಳಲಾದ ವಲಯ-ನಿರ್ದಿಷ್ಟ ಒಪ್ಪಂದಗಳು ಮತ್ತು ನಡೆದ ಚರ್ಚೆಗಳ ನೀಲನಕಾಶೆಯನ್ನು ಪ್ರಸ್ತುತಪಡಿಸಿದರು. ನೆದರ್ಲ್ಯಾಂಡ್ಸ್‌ನೊಂದಿಗೆ ಸೆಮಿಕಂಡಕ್ಟರ್‌ಗಳು, ನೀರು, ಕೃಷಿ ಮತ್ತು ಸುಧಾರಿತ ಉತ್ಪಾದನೆ ಕುರಿತು ಚರ್ಚೆಗಳು; ಸ್ವೀಡನ್‌ನೊಂದಿಗೆ ಎಐ (AI) ಮತ್ತು ಡಿಜಿಟಲ್ ನಾವೀನ್ಯತೆ ಕ್ಷೇತ್ರಗಳಲ್ಲಿನ ಸಹಕಾರದ ಕುರಿತು ಮಾತುಕತೆಗಳು; ನಾರ್ವೆಯೊಂದಿಗೆ ಹಸಿರು ತಂತ್ರಜ್ಞಾನ ಮತ್ತು ಕಡಲ ಸಹಕಾರದ ಕುರಿತು ಚರ್ಚೆಗಳು; ಯುಎಇ ಯೊಂದಿಗೆ ಕಾರ್ಯತಂತ್ರದ ಇಂಧನ ಮತ್ತು ತಂತ್ರಜ್ಞಾನ ಪಾಲುದಾರಿಕೆಗಳ ಕುರಿತು ತಿಳುವಳಿಕೆ ಪತ್ರಗಳು; ಮತ್ತು ಇಟಲಿಯೊಂದಿಗೆ ರಕ್ಷಣೆ, ನಿರ್ಣಾಯಕ ಖನಿಜಗಳು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನದ ಒಪ್ಪಂದಗಳು ಇದರಲ್ಲಿ ಸೇರಿವೆ. ಭಾರತದ ಅಂತಾರಾಷ್ಟ್ರೀಯ ಪಾಲುದಾರಿಕೆಗಳನ್ನು ಉದ್ದೇಶಪೂರ್ವಕವಾಗಿ ಅದರ ಯುವಕರ ಸೇವೆಗಾಗಿಯೇ ರೂಪಿಸಲಾಗಿದೆ ಎಂದು ಪ್ರಧಾನಿ ಶ್ರೀ ಮೋದಿ ಸ್ಪಷ್ಟಪಡಿಸಿದರು. "ಭಾರತದ ಯುವಕರಿಗೆ ಉದ್ಯೋಗ ಮತ್ತು ಜಾಗತಿಕ ಮನ್ನಣೆ ಸಿಗಬೇಕೆಂಬುದೇ ಇದರ ಉದ್ದೇಶವಾಗಿದೆ" ಎಂದು ಶ್ರೀ ಮೋದಿ ಪ್ರತಿಪಾದಿಸಿದರು.

ಪ್ರತಿಯೊಂದು ಒಪ್ಪಂದವು ಉದ್ಯೋಗ ಸೃಷ್ಟಿಗೆ ನೇರವಾಗಿ ಸಂಬಂಧಿಸಿದೆ ಎಂದು ತಿಳಿಸಿದ ಪ್ರಧಾನಮಂತ್ರಿಯವರು, ಪ್ರತಿಯೊಂದು ಹೊಸ ಹೂಡಿಕೆ, ಪ್ರತಿಯೊಂದು ತಂತ್ರಜ್ಞಾನ ಪಾಲುದಾರಿಕೆ ಮತ್ತು ಪ್ರತಿಯೊಂದು ಕೈಗಾರಿಕಾ ಸಹಯೋಗವು ಅಂತಿಮವಾಗಿ ಭಾರತದ ಯುವ ಜನತೆಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಒತ್ತಿಹೇಳಿದರು. ಈ ಸಹಯೋಗಗಳ ದೀರ್ಘಕಾಲೀನ ಮಹತ್ವವನ್ನು ಅವರು ಮತ್ತೊಮ್ಮೆ ಒತ್ತಿಹೇಳಿದರು. "ಇವು ಮುಂದಿನ 25 ವರ್ಷಗಳವರೆಗೆ ಜಾಗತಿಕ ಬೆಳವಣಿಗೆಯನ್ನು ನಿರ್ಧರಿಸುವ ಕೈಗಾರಿಕೆಗಳನ್ನು ರೂಪಿಸುವ ಕ್ಷೇತ್ರಗಳಾಗಿವೆ" ಎಂದು ಶ್ರೀ ಮೋದಿ ಹೇಳಿದರು.

ಜಾಗತಿಕ ಪೂರೈಕೆ ಸರಪಳಿಯಲ್ಲಿ ಭಾರತವು ವಿಶ್ವಾಸಾರ್ಹ ಪಾಲುದಾರನಾಗಿ ಬೆಳೆಯುತ್ತಿರುವುದಕ್ಕೆ 'ಎಎಸ್‌ಎಂಎಲ್-ಟಾಟಾ ಎಲೆಕ್ಟ್ರಾನಿಕ್ಸ್' (ASML–Tata Electronics) ಒಪ್ಪಂದವನ್ನು ಜ್ವಲಂತ ಉದಾಹರಣೆಯಾಗಿ ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಡಚ್ ಸೆಮಿಕಂಡಕ್ಟರ್ ದೈತ್ಯ ಸಂಸ್ಥೆಯು ಒಪ್ಪಂದಕ್ಕೆ ಸಹಿ ಹಾಕಿದ ಕೆಲವೇ ಕೆಲವು ದೇಶಗಳಲ್ಲಿ ಭಾರತವೂ ಒಂದು ಎಂದು ಹೇಳುವ ಮೂಲಕ ಎಲ್ಲರ ಗಮನಸೆಳೆದರು. ಎಐ (AI) ಕುರಿತು ಸ್ವೀಡನ್‌ನೊಂದಿಗಿನ ಪಾಲುದಾರಿಕೆ ಮತ್ತು ಸೂಪರ್‌ಕಂಪ್ಯೂಟಿಂಗ್‌ನಲ್ಲಿ ಯುಎಇ ಯೊಂದಿಗಿನ ಸಹಕಾರವು ಭಾರತದ ತಾಂತ್ರಿಕ ಸಾಮರ್ಥ್ಯಗಳನ್ನು ಅದೇ ರೀತಿ ಬಲಪಡಿಸುತ್ತದೆ ಎಂದು ಅವರು ಹೇಳಿದರು. "ಈ ಒಂದು ಎಎಸ್‌ಎಂಎಲ್-ಟಾಟಾ ಎಲೆಕ್ಟ್ರಾನಿಕ್ಸ್ ಒಪ್ಪಂದವೊಂದೇ ಭಾರತದಲ್ಲಿ ಸಾವಿರಾರು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ" ಎಂದು ಶ್ರೀ ಮೋದಿ ಅವರು ತಿಳಿಸಿದರು.

ಸ್ವಚ್ಛ ಇಂಧನ, ನಿರ್ಣಾಯಕ ಖನಿಜಗಳು, ಹಸಿರು ಹೈಡ್ರೋಜನ್ ಮತ್ತು ಸುಸ್ಥಿರ ಉತ್ಪಾದನೆಯು ಅಪಾರ ಅವಕಾಶಗಳ ಕ್ಷೇತ್ರಗಳಾಗಿ ವೇಗವಾಗಿ ಬೆಳೆಯುತ್ತಿರುವುದನ್ನು ಎತ್ತಿ ತೋರಿಸಿದ ಪ್ರಧಾನಮಂತ್ರಿಯವರು, ಹಸಿರು ಪರಿವರ್ತನೆ ಮತ್ತು ಸುಸ್ಥಿರ ತಂತ್ರಜ್ಞಾನದಲ್ಲಿ ಸ್ವೀಡನ್, ನಾರ್ವೆ ಮತ್ತು ಇಟಲಿಯೊಂದಿಗೆ ಬೆಳೆಯುತ್ತಿರುವ ಸಹಯೋಗವು ಭವಿಷ್ಯದ ಸ್ವಚ್ಛ ಉತ್ಪಾದನಾ ಕೈಗಾರಿಕೆಗಳಲ್ಲಿ ಭಾರತವನ್ನು ಬಲವಾಗಿ ಮುನ್ನಡೆಸಲಿದೆ ಎಂದರು. "ಈ ಪಾಲುದಾರಿಕೆಗಳು ಹೊಸ ಆರ್ಥಿಕತೆ ಮತ್ತು ಹೊಸ ಅವಕಾಶಗಳ ಬಾಗಿಲುಗಳನ್ನು ತೆರೆಯುತ್ತಿವೆ" ಎಂದು ಶ್ರೀ ಮೋದಿ ಪ್ರತಿಪಾದಿಸಿದರು.

ಬಂದರುಗಳು, ಹಡಗು ನಿರ್ಮಾಣ ಮತ್ತು ಕಡಲ ಮೂಲಸೌಕರ್ಯ ಒಪ್ಪಂದಗಳ ಕುರಿತು ವೇಗವಾಗಿ ನಡೆಯುತ್ತಿರುವ ಕೆಲಸಗಳನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಯುಎಇ ಮತ್ತು ನಾರ್ವೆಯೊಂದಿಗಿನ ಪಾಲುದಾರಿಕೆಯು ಭಾರತದ ಹಡಗು ನಿರ್ಮಾಣ ಪರಿಸರ ವ್ಯವಸ್ಥೆಯನ್ನು ಬಲಪಡಿಸುತ್ತದೆ, ಇದು ದೇಶದ ಇಂಜಿನಿಯರ್‌ಗಳು, ತಂತ್ರಜ್ಞರು ಮತ್ತು ನುರಿತ ಕಾರ್ಮಿಕರ ಅವಕಾಶಗಳ ಹಾರಿಜಾನ್ ಅನ್ನು ನೇರವಾಗಿ ವಿಸ್ತರಿಸುತ್ತದೆ ಎಂದರು. "ಭಾರತದ ಇಂಜಿನಿಯರ್‌ಗಳು, ತಂತ್ರಜ್ಞರು ಮತ್ತು ನುರಿತ ಕಾರ್ಮಿಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ" ಎಂದು ಶ್ರೀ ಮೋದಿ ಅವರು ಒತ್ತಿ ಹೇಳಿದರು.

ಪ್ರತಿಯೊಂದು ಹೊಸ ಪಾಲುದಾರಿಕೆಯು ಭಾರತೀಯ ಸ್ಟಾರ್ಟ್-ಅಪ್‌ಗಳು, ಸಂಶೋಧಕರು ಮತ್ತು ಯುವ ವೃತ್ತಿಪರರಿಗೆ ಜಾಗತಿಕ ಸಂಪರ್ಕವನ್ನು ವಿಸ್ತರಿಸುತ್ತದೆ ಎಂಬುದರ ಬಗ್ಗೆ ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಇಂದು ಜಗತ್ತು ದೊಡ್ಡ ಪ್ರಮಾಣದಲ್ಲಿ ನಾವೀನ್ಯತೆ ಮಾಡುವ, ನಿರ್ಮಿಸುವ ಮತ್ತು ಫಲಿತಾಂಶ ನೀಡುವ ರಾಷ್ಟ್ರಗಳನ್ನು ಗೌರವಿಸುತ್ತದೆ ಎಂದರು. ಭಾರತವು ಈ ಮೂರೂ ರಂಗಗಳಲ್ಲಿ ಮುನ್ನಡೆಯುತ್ತಿರುವುದಕ್ಕೆ ಅವರು ಹೆಮ್ಮೆ ವ್ಯಕ್ತಪಡಿಸಿದರು. "ಪ್ರಗತಿಯ ಹಿಂದಿನ ಅತ್ಯಂತ ದೊಡ್ಡ ಶಕ್ತಿ ಎಂದರೆ ಭಾರತದ ಯುವಶಕ್ತಿ, ಅಂದರೆ ನೀವೆಲ್ಲರೂ" ಎಂದು ಶ್ರೀ ಮೋದಿ ಪುನರುಚ್ಚರಿಸಿದರು.

ಈ ಸಂದರ್ಭವನ್ನು ದೊಡ್ಡ ರಾಷ್ಟ್ರೀಯ ಮಿಷನ್‌ನೊಂದಿಗೆ ಜೋಡಿಸಿದ ಪ್ರಧಾನಮಂತ್ರಿಯವರು, 2047ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸುವ ಸಾಮೂಹಿಕ ಸಂಕಲ್ಪದ ಬಗ್ಗೆ ಮಾತನಾಡಿದರು. ಸರ್ಕಾರದ ವಿವಿಧ ವಲಯಗಳ ಹೂಡಿಕೆಯು ಈ ಮಹತ್ವಾಕಾಂಕ್ಷೆಯ ನೇರ ಪರಿಣಾಮವಾಗಿ ಲಕ್ಷಾಂತರ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ ಎಂದು ತಿಳಿಸಿದರು. "ಈ ಹೂಡಿಕೆಯು ದೇಶದ ಯುವಕರಿಗೆ ಲಕ್ಷಾಂತರ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ" ಎಂದು ಶ್ರೀ ಮೋದಿ ಹೇಳಿದರು.

ಭಾರತದ ಉದಯೋನ್ಮುಖ ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಯ ವ್ಯಾಪ್ತಿಯನ್ನು ಪಟ್ಟಿ ಮಾಡಿದ ಪ್ರಧಾನಮಂತ್ರಿಯವರು, ಸೆಮಿಕಂಡಕ್ಟರ್ ಉತ್ಪಾದನೆಗಾಗಿ ಸಂಪೂರ್ಣ ದೇಶೀಯ ಪೂರೈಕೆ ಸರಪಳಿಯನ್ನು ಸ್ಥಾಪಿಸಲಾಗುತ್ತಿದೆ ಮತ್ತು ಹತ್ತು ಪ್ರಮುಖ ಸೆಮಿಕಂಡಕ್ಟರ್ ಘಟಕಗಳು ಶೀಘ್ರದಲ್ಲೇ ಜಾಗತಿಕ ಮಟ್ಟದಲ್ಲಿ ತಮ್ಮ ಮುದ್ರೆಯನ್ನು ಒತ್ತಲಿವೆ, ಈಗಾಗಲೇ ಹೆಚ್ಚಿನ ಸಂಖ್ಯೆಯ ಯುವ ಭಾರತೀಯರು ಅವುಗಳಲ್ಲಿ ಉದ್ಯೋಗವನ್ನು ಕಂಡುಕೊಂಡಿದ್ದಾರೆ ಎಂದು ಘೋಷಿಸಿದರು. "ಭಾರತದ ಸೆಮಿಕಂಡಕ್ಟರ್ ಘಟಕಗಳು ಜಗತ್ತಿನಲ್ಲಿ ತಮ್ಮ ಮುದ್ರೆಯನ್ನು ಒತ್ತಲಿವೆ" ಎಂದು ಪ್ರಧಾನ ಮಂತ್ರಿ ಶ್ರೀ ಮೋದಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸುಮಾರು ₹75,000 ಕೋಟಿ ಹೂಡಿಕೆಯ ಬೆಂಬಲದೊಂದಿಗೆ ಭಾರತದಲ್ಲಿ ಅಭಿವೃದ್ಧಿಯಾಗುತ್ತಿರುವ ಹಡಗು ನಿರ್ಮಾಣ, ಹಡಗು ದುರಸ್ತಿ ಮತ್ತು ಓವರ್‌ಹಾಲಿಂಗ್ (overhauling) ಹಾಗೂ ಪರಿಸರ ವ್ಯವಸ್ಥೆಯ ಕಡೆಗೆ ಗಮನ ಸೆಳೆದ ಪ್ರಧಾನಮಂತ್ರಿಯವರು, ವಿಮಾನಯಾನ ವಲಯವನ್ನು ಪರಿವರ್ತಿಸುವ ಭರವಸೆ ನೀಡುವ ನಿರ್ವಹಣೆ, ಓವರ್‌ಹಾಲ್ ಮತ್ತು ದುರಸ್ತಿ ಸೌಲಭ್ಯಗಳನ್ನು ಒಳಗೊಂಡ ಸಂಪೂರ್ಣ 'ಎಂಆರ್‌ಒ' (MRO) ಪರಿಸರ ವ್ಯವಸ್ಥೆಯ ಅಭಿವೃದ್ಧಿಯನ್ನು ಎತ್ತಿ ತೋರಿಸಿದರು. "ಭಾರತದ ಯುವಕರಿಗೆ ಹೊಸ ಉದ್ಯೋಗ ವಲಯವೊಂದು ಮುಕ್ತವಾಗಲಿದೆ" ಎಂದು ಶ್ರೀ ಮೋದಿ ಅವರು ಪ್ರತಿಪಾದಿಸಿದರು.

ಭಾರತವು ಒಂದು ಪ್ರಮುಖ ಎಲೆಕ್ಟ್ರಾನಿಕ್ಸ್ ತಯಾರಕ ದೇಶವಾಗಿ ಹೊರಹೊಮ್ಮುತ್ತಿರುವುದನ್ನು ಬಣ್ಣಿಸಿದ ಪ್ರಧಾನಮಂತ್ರಿಯವರು, ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (PLI) ಯೋಜನೆಯು ದಾಖಲೆಯ ಎಲೆಕ್ಟ್ರಾನಿಕ್ಸ್ ಉತ್ಪಾದನೆಯನ್ನು ಮುನ್ನಡೆಸುವ ಮತ್ತು ಯುವಕರಿಗೆ ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸುವ ಎಂಜಿನ್ ಆಗಿದೆ ಎಂದರು, ಇದರೊಂದಿಗೆ ಸಂಪೂರ್ಣ ಎಲೆಕ್ಟ್ರಾನಿಕ್ಸ್ ಮೌಲ್ಯ ಸರಪಳಿಯನ್ನು ದೇಶೀಯವಾಗಿಯೇ ನಿರ್ಮಿಸಲಾಗುತ್ತಿದೆ. "ಪಿಎಲ್‌ಐ (PLI) ಯೋಜನೆಯು ದೇಶದಲ್ಲಿ ದಾಖಲೆಯ ಎಲೆಕ್ಟ್ರಾನಿಕ್ಸ್ ಉತ್ಪಾದನೆಗೆ ಕಾರಣವಾಗುತ್ತಿದೆ" ಎಂದು ಹೇಳುವ ಮೂಲಕ ಶ್ರೀ ಮೋದಿ ಅವರು ಎಲ್ಲರ ಗಮನ ಸೆಳೆದರು.

ಸಾರ್ವಜನಿಕ ಮತ್ತು ಖಾಸಗಿ ವಲಯಗಳೆರಡೂ ಜಂಟಿಯಾಗಿ ಈ ಬಹುಮುಖಿ ಉಪಕ್ರಮಗಳಲ್ಲಿ ಭಾರಿ ಪ್ರಮಾಣದ ಹೂಡಿಕೆಯನ್ನು ತೊಡಗಿಸುತ್ತಿವೆ ಎಂದು ಒತ್ತಿಹೇಳಿದ ಪ್ರಧಾನಮಂತ್ರಿಯವರು, ಹೊಸದಾಗಿ ನೇಮಕಗೊಂಡ ಸರ್ಕಾರಿ ಉದ್ಯೋಗಿಗಳು ವ್ಯಾಪಾರ ಮತ್ತು ಉದ್ಯಮಗಳನ್ನು ಸುಗಮಗೊಳಿಸುವಲ್ಲಿ ತಮ್ಮ ಪಾತ್ರದ ಬಗ್ಗೆ ಗಮನ ಹರಿಸಬೇಕು ಎಂದು ಕರೆ ನೀಡಿದರು. "ಸುಲಭ ವ್ಯಾಪಾರ ನಿರ್ವಹಣೆಯು  ದೇಶಕ್ಕೆ ಅತ್ಯಂತ ದೊಡ್ಡ ಆದ್ಯತೆಯಾಗಿದೆ" ಎಂದು ಶ್ರೀ ಮೋದಿ ಅವರು ಪ್ರತಿಪಾದಿಸಿದರು.

ಉದ್ಯೋಗ ಸೃಷ್ಟಿ ಮತ್ತು ಸಮಗ್ರ ಬೆಳವಣಿಗೆಯನ್ನು ಮುನ್ನಡೆಸುವಲ್ಲಿ, ಮೂಲಸೌಕರ್ಯವಹಿಸುವ  ಪ್ರಮುಖ ಪಾತ್ರದ ಕುರಿತು ಒತ್ತಿಹೇಳಿದ ಪ್ರಧಾನಮಂತ್ರಿಯವರು, ಹಳ್ಳಿಗಳು, ಸಣ್ಣ ಪಟ್ಟಣಗಳು ಮತ್ತು ದೂರದ ಪ್ರದೇಶಗಳನ್ನು ಅಭಿವೃದ್ಧಿಯ ಚೌಕಟ್ಟಿನಲ್ಲಿ ಸಂಯೋಜಿಸಿದಾಗ ಮಾತ್ರ ರಾಷ್ಟ್ರೀಯ ಪ್ರಗತಿಯ ನಿಜವಾದ ಲಾಭವು ಅದರ ಸಂಪೂರ್ಣ ಸಾಮರ್ಥ್ಯವನ್ನು ತಲುಪುತ್ತದೆ ಎಂದರು. "ಹಳ್ಳಿಗಳು ಮತ್ತು ದೂರದ ಪ್ರದೇಶಗಳು ಅಭಿವೃದ್ಧಿಯೊಂದಿಗೆ ಸಂಪರ್ಕ ಹೊಂದಿದಾಗ, ದೇಶದ ಪ್ರಗತಿಯ ಪ್ರಯೋಜನವು ಹೆಚ್ಚಿನ ಜನರನ್ನು ತಲುಪುತ್ತದೆ" ಎಂದು ಶ್ರೀ ಮೋದಿ ಅವರು ಒತ್ತಿ ಹೇಳಿದರು.

ಕಳೆದ ಹನ್ನೆರಡು ವರ್ಷಗಳಲ್ಲಿ ರೈಲ್ವೆ, ಹೆದ್ದಾರಿಗಳು, ವಿಮಾನ ನಿಲ್ದಾಣಗಳು, ಲಾಜಿಸ್ಟಿಕ್ಸ್, ಬಂದರುಗಳು ಮತ್ತು ಡಿಜಿಟಲ್ ನೆಟ್‌ವರ್ಕ್‌ಗಳಾದ್ಯಂತ ನಿರ್ಮಿಸಲಾದ ಮೂಲಸೌಕರ್ಯಗಳ ವ್ಯಾಪ್ತಿಯನ್ನು ಪಟ್ಟಿ ಮಾಡಿದ ಪ್ರಧಾನಮಂತ್ರಿಯವರು, ಸಂಪರ್ಕ ವ್ಯವಸ್ಥೆಯು ರೈತರು, ಸಣ್ಣ ವ್ಯಾಪಾರಿಗಳು ಮತ್ತು ವಿದ್ಯಾರ್ಥಿಗಳಿಗೆ ಹೊಸ ಮಾರ್ಗಗಳನ್ನು ಮುಕ್ತಗೊಳಿಸಿದೆ ಎಂದರು, ಈ ಪರಿವರ್ತನೆಯು ಈಗ ಭಾರತದ ಹಳ್ಳಿಗಳನ್ನೂ ಸಹ ಅತ್ಯಂತ ವೇಗವಾಗಿ ಮರುರೂಪಿಸುತ್ತಿದೆ. "ಗ್ರಾಮಗಳಲ್ಲೂ ಸಹ ಅತ್ಯಂತ ಶೀಘ್ರ ಗತಿಯಲ್ಲಿ ಬದಲಾವಣೆಗಳು ಆಗುತ್ತಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ" ಎಂದು ಶ್ರೀ ಮೋದಿ ತಿಳಿಸಿದರು.

ಕೋಟ್ಯಾಂತರ ಭಾರತೀಯ ಕುಟುಂಬಗಳಿಗೆ, ಜಲ ಜೀವನ್ ಮಿಷನ್ ಅಡಿಯಲ್ಲಿ ಕಾಯಂ ಮನೆಗಳು, ಗೃಹ ಶೌಚಾಲಯಗಳು, ವಿದ್ಯುತ್ ಮತ್ತು ನಲ್ಲಿ ನೀರಿನ ಸಂಪರ್ಕ ಒದಗಿಸಿರುವ ಮೂಲಭೂತ ಸೌಕರ್ಯಗಳ ಸಾಮಾಜಿಕ ಪ್ರಭಾವವನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ಈ ಮೂಲಭೂತ ಬದಲಾವಣೆಗಳು ಕೇವಲ ಸೌಕರ್ಯಗಳಿಗೆ ಮಾತ್ರ ಸೀಮಿತವಾಗಿಲ್ಲ ಎಂದರು. "ಈ ಬದಲಾವಣೆಗಳ ಪ್ರಭಾವ ಕೇವಲ ಸೌಕರ್ಯಗಳಿಗೆ ಮಾತ್ರ ಸೀಮಿತವಾಗಿಲ್ಲ" ಎಂದು ಶ್ರೀ ಮೋದಿ ಅವರು ಹೇಳಿದರು.

ಗ್ರಾಮೀಣ ರಸ್ತೆಗಳು, ಸುಧಾರಿತ ವಿದ್ಯುತ್ ಮತ್ತು ಡಿಜಿಟಲ್ ಸಂಪರ್ಕಗಳು ಆರ್ಥಿಕ ಚಟುವಟಿಕೆಗಳನ್ನು ಹೇಗೆ ಬಹುಗುಣಗೊಳಿಸಿವೆ, ಮಾರುಕಟ್ಟೆಗಳ ಸಂಪರ್ಕವನ್ನು ಸುಲಭಗೊಳಿಸಿವೆ, ಸಣ್ಣ ಉದ್ಯಮಗಳು ಅಭಿವೃದ್ಧಿ ಹೊಂದಲು ಶಕ್ತಿ ನೀಡಿವೆ ಮತ್ತು ಹಳ್ಳಿಗಳನ್ನು ಹೊಸ ಡಿಜಿಟಲ್ ವ್ಯವಸ್ಥೆಗಳಿಗೆ ಒಳಪಡಿಸಿವೆ ಎಂಬುದನ್ನು ವಿವರಿಸಿದ ಪ್ರಧಾನಮಂತ್ರಿಯವರು, ಈ ಪರಸ್ಪರ ಸಂಪರ್ಕಿತ ಸುಧಾರಣೆಗಳು ಒಟ್ಟಾಗಿ ಭಾರತದ ಆರ್ಥಿಕತೆಯ ವೇಗವನ್ನು ಹೆಚ್ಚಿಸಿವೆ ಮತ್ತು ಲಕ್ಷಾಂತರ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಿವೆ ಎಂದರು. "ಇವೆಲ್ಲವೂ ಉದ್ಯೋಗ ಸೃಷ್ಟಿಯ ಮೇಲೆ ಸಕಾರಾತ್ಮಕ ಪ್ರಭಾವ ಬೀರಿದೆ" ಎಂದು ಶ್ರೀ ಮೋದಿ ಅವರು ಪುನರುಚ್ಚರಿಸಿದರು.

ಉತ್ಪಾದನೆ, ತಂತ್ರಜ್ಞಾನ, ಸ್ಟಾರ್ಟ್-ಅಪ್‌ಗಳು, ಡಿಜಿಟಲ್ ಸೇವೆಗಳು, ರೈಲ್ವೆ, ರಕ್ಷಣೆ ಮತ್ತು ಬಾಹ್ಯಾಕಾಶ ಕ್ಷೇತ್ರಗಳಾದ್ಯಂತ ಇಂದು ಭಾರತದ ಯುವಕರಿಗೆ ಲಭ್ಯವಿರುವ ಅವಕಾಶಗಳು ದೇಶದ ಇತಿಹಾಸದಲ್ಲೇ ಹಿಂದೆಂದೂ ಕಂಡಿರದಂತಹುದು ಎಂದು ಘೋಷಿಸಿದ ಪ್ರಧಾನಮಂತ್ರಿಯವರು, ಗರಿಷ್ಠ ಸಂಖ್ಯೆಯ ಯುವಕರು ಈ ಅವಕಾಶಗಳನ್ನು ಬಳಸಿಕೊಳ್ಳಲು ಮತ್ತು ಅವರ ಪ್ರತಿಭೆಯನ್ನು ಸಂಪೂರ್ಣವಾಗಿ ಪ್ರದರ್ಶಿಸಲು ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿದರು. "ಭಾರತದ ಯುವಕರು ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಲು ಇಂದು ಹೊಂದಿರುವ ಅವಕಾಶಗಳು ಹಿಂದೆಂದೂ ಇರಲಿಲ್ಲ" ಎಂದು ಶ್ರೀ ಮೋದಿ ಪ್ರತಿಪಾದಿಸಿದರು.

ಐಟಿಐಗಳ (ITIs) ಆಧುನೀಕರಣ, ರಾಷ್ಟ್ರೀಯ ಕೌಶಲ್ಯ ತರಬೇತಿ ಸಂಸ್ಥೆಗಳ ಬಲವರ್ಧನೆ ಮತ್ತು 'ಪಿಎಂ ಸೇತು' (PM SETU) ಉಪಕ್ರಮದ ಜಾರಿ ಸೇರಿದಂತೆ ಕೌಶಲ್ಯ ಅಭಿವೃದ್ಧಿ, ಉದ್ಯಮ-ಸಂಯೋಜಿತ ಶಿಕ್ಷಣ ಮತ್ತು ಭವಿಷ್ಯದ ತಂತ್ರಜ್ಞಾನದಲ್ಲಿ ಸರ್ಕಾರದ ಪ್ರಸ್ತುತ ಹೂಡಿಕೆಯ ಬಗ್ಗೆ ವಿವರಿಸಿದ ಪ್ರಧಾನಮಂತ್ರಿಯವರು, ತ್ವರಿತಗತಿಯಲ್ಲಿ ಅಭಿವೃದ್ಧಿಯಾಗುತ್ತಿರುವ ಆರ್ಥಿಕತೆಯ ವೇಗಕ್ಕೆ ಹೊಂದಿಕೊಳ್ಳಲು, ನಿರಂತರ ಸಿದ್ಧತೆಯ ಪ್ರಾಮುಖ್ಯತೆ ಬಗ್ಗೆ ಅವರು  ಒತ್ತಿಹೇಳಿದರು. "ಕೌಶಲ್ಯ ಅಭಿವೃದ್ಧಿ, ಉದ್ಯಮ-ಸಂಯೋಜಿತ ಶಿಕ್ಷಣ ಮತ್ತು ಭವಿಷ್ಯದ ತಂತ್ರಜ್ಞಾನಕ್ಕೆ ನಿರಂತರ ಒತ್ತು ನೀಡಲಾಗುತ್ತಿದೆ" ಎಂದು ಶ್ರೀ ಮೋದಿ ಅವರು ತಿಳಿಸಿದರು.

ದೇಶಾದ್ಯಂತ ಸ್ವಯಂ ಉದ್ಯೋಗ ಮತ್ತು ಉದ್ಯಮಶೀಲತೆಯ ಹೊಸ ಸಂಸ್ಕೃತಿಯ ಉದಯವನ್ನು ಶ್ಲಾಘಿಸಿದ ಪ್ರಧಾನಮಂತ್ರಿಯವರು, ಭಾರತವು 2.3 ಲಕ್ಷಕ್ಕೂ ಹೆಚ್ಚು ಮಾನ್ಯತೆ ಪಡೆದ ಸ್ಟಾರ್ಟ್-ಅಪ್‌ಗಳೊಂದಿಗೆ ವಿಶ್ವದ ಮೂರನೇ ಅತಿ ದೊಡ್ಡ ಸ್ಟಾರ್ಟ್-ಅಪ್ ಪರಿಸರ ವ್ಯವಸ್ಥೆಯಾಗಿ ಹೊರಹೊಮ್ಮಿದೆ ಮತ್ತು ಈ ಪರಿವರ್ತನೆಯು ಇನ್ನು ಮುಂದೆ ಕೇವಲ ಮೆಟ್ರೋಪಾಲಿಟನ್ ಕೇಂದ್ರಗಳಿಗೆ ಸೀಮಿತವಾಗಿಲ್ಲ ಎಂದರು. "ಈ ಬದಲಾವಣೆಯು ಕೇವಲ ದೊಡ್ಡ ನಗರಗಳಿಗೆ ಮಾತ್ರ ಸೀಮಿತವಾಗಿಲ್ಲ" ಎಂದು ಶ್ರೀ ಮೋದಿ ಅವರು ಪ್ರತಿಪಾದಿಸಿದರು.

ಟೈರ್-2 ಮತ್ತು ಟೈರ್-3 ನಗರಗಳ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ಟಾರ್ಟ್-ಅಪ್‌ಗಳು ಮತ್ತು ನಾವೀನ್ಯತೆಗಳ ಜಗತ್ತನ್ನು ಪ್ರವೇಶಿಸುತ್ತಿದ್ದಾರೆ ಮತ್ತು ಈ ಆಂದೋಲನವು ರಾಷ್ಟ್ರೀಯ ಆರ್ಥಿಕತೆಯ ಪ್ರಮುಖ ಅಂಶವಾಗಿದೆ ಎಂದು ಹೆಮ್ಮೆಯಿಂದ ಹೇಳಿದ ಪ್ರಧಾನಮಂತ್ರಿಯವರು, ಈ ಉದ್ಯಮಶೀಲತೆಯ ಉಲ್ಬಣದಲ್ಲಿ ಭಾರತದ ಮಹಿಳೆಯರ ಬೆಳೆಯುತ್ತಿರುವ ಮತ್ತು ನಿರ್ಣಾಯಕ ಪಾತ್ರವನ್ನು ಎತ್ತಿ ತೋರಿಸಿದರು. ಮುದ್ರಾ ಯೋಜನೆಯ ಮೂಲಕ ಕೋಟ್ಯಂತರ ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು ಪಿಎಂ ಸ್ವನಿಧಿ ಯಂತಹ ಯೋಜನೆಗಳ ಮೂಲಕ ಸಾಧ್ಯವಾದ ಸ್ವಾವಲಂಬನೆಯನ್ನು ಗುರುತಿಸಿದ ಶ್ರೀ ಮೋದಿ, "ಇಂದು ಹಳ್ಳಿಗಳು ಮತ್ತು ಸಣ್ಣ ಪಟ್ಟಣಗಳಲ್ಲಿ ಹಿಂದೆಂದಿಗಿಂತಲೂ ಹೆಚ್ಚು ಮಹಿಳೆಯರು ಸಂಪೂರ್ಣವಾಗಿ ತಮ್ಮದೇ ಆದ ಹೊಸ ಉದ್ಯಮಗಳನ್ನು ಪ್ರಾರಂಭಿಸುತ್ತಿದ್ದಾರೆ" ಎಂದರು.

ಹೊಸದಾಗಿ ನೇಮಕಗೊಂಡವರನ್ನು ನೇರವಾಗಿ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಯಾವುದೇ ಸಂಸ್ಥೆಯ ನಿಜವಾದ ಶಕ್ತಿ ಅಲ್ಲಿನ ಜನರಲ್ಲಿದೆ ಮತ್ತು ಅವರು ಸೇರುತ್ತಿರುವ ವ್ಯವಸ್ಥೆಯು ಕೋಟ್ಯಂತರ ನಾಗರಿಕರ ಜೀವನದೊಂದಿಗೆ ನಿಕಟವಾದ ಮತ್ತು ನೇರವಾದ ಸಂಪರ್ಕ ಹೊಂದಿದೆ ಎಂಬುದನ್ನು ನೆನಪಿಸಿದರು. ಸರ್ಕಾರಿ ಉದ್ಯೋಗವು ಮೊದಲನೆಯದಾಗಿ ಜನರ ಜೀವನವನ್ನು ಸುಲಭಗೊಳಿಸುವ ಮಾಧ್ಯಮವಾಗಿದೆ ಎಂದು ಅವರು ತಿಳಿಸಿದರು. "ನೀವು ಯಾವುದೇ ಇಲಾಖೆಯಲ್ಲಿ ಸೇವೆ ಸಲ್ಲಿಸಿದರೂ, ನಿಮ್ಮ ನಡವಳಿಕೆ, ಸಹಾನುಭೂತಿ ಮತ್ತು ಕೆಲಸ ಮಾಡುವ ವಿಧಾನವು ಅತ್ಯಂತ ಮಹತ್ವದ್ದಾಗಿರುತ್ತದೆ" ಎಂದು ಶ್ರೀ ಮೋದಿ ಹೇಳಿದರು.

ಹೊಸದಾಗಿ ನೇಮಕಗೊಂಡವರ ಮೇಲೆ ದೇಶದ ನಾಗರಿಕರು ಹೊಂದಿರುವ ವಿಶ್ವಾಸವನ್ನು ದೃಢೀಕರಿಸಿದ ಪ್ರಧಾನಮಂತ್ರಿಯವರು, ಪ್ರತಿಯೊಬ್ಬ ಯುವ ಕರ್ಮಯೋಗಿಯು, ತಮ್ಮ ಹುದ್ದೆಯನ್ನು ಒಂದು ಜೀವಂತ ಜವಾಬ್ದಾರಿಯೆಂದು ಭಾವಿಸಬೇಕು, ಭಾರತದ ಜನರ ಬೆಳೆಯುತ್ತಿರುವ ಆಕಾಂಕ್ಷೆಗಳನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಅದಕ್ಕೆ ಅನುಗುಣವಾಗಿ ತಮ್ಮ ಕರ್ತವ್ಯಗಳನ್ನು ನಿಭಾಯಿಸಬೇಕು ಎಂದು ಕರೆ ನೀಡಿದರು. "ಈಗ ನಿಮ್ಮ ಕೆಲಸದ ಮೂಲಕ ಆ ನಂಬಿಕೆಯನ್ನು ಬಲಪಡಿಸುವುದು ನಿಮ್ಮ ಜವಾಬ್ದಾರಿಯಾಗಿದೆ" ಎಂದು ಶ್ರೀ ಮೋದಿ ಹೇಳಿದರು.

ಹೊಸದಾಗಿ ನೇಮಕಗೊಂಡವರ ಮೇಲೆ ದೇಶದ ನಾಗರಿಕರು ಹೊಂದಿರುವ ವಿಶ್ವಾಸವನ್ನು ದೃಢೀಕರಿಸಿದ ಪ್ರಧಾನಮಂತ್ರಿಯವರು, ಪ್ರತಿಯೊಬ್ಬ ಯುವ ಕರ್ಮಯೋಗಿಯು, ತಮ್ಮ ಹುದ್ದೆಯನ್ನು ಒಂದು ಜೀವಂತ ಜವಾಬ್ದಾರಿಯೆಂದು ಭಾವಿಸಬೇಕು, ಭಾರತದ ಜನರ ಬೆಳೆಯುತ್ತಿರುವ ಆಕಾಂಕ್ಷೆಗಳನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಅದಕ್ಕೆ ಅನುಗುಣವಾಗಿ ತಮ್ಮ ಕರ್ತವ್ಯಗಳನ್ನು ನಿಭಾಯಿಸಬೇಕು ಎಂದು ಕರೆ ನೀಡಿದರು. "ಈಗ ನಿಮ್ಮ ಕೆಲಸದ ಮೂಲಕ ಆ ನಂಬಿಕೆಯನ್ನು ಬಲಪಡಿಸುವುದು ನಿಮ್ಮ ಜವಾಬ್ದಾರಿಯಾಗಿದೆ" ಎಂದು ಶ್ರೀ ಮೋದಿ ಹೇಳಿದರು.

ಹೊಸ ಸರ್ಕಾರಿ ಉದ್ಯೋಗಿಗಳು ಜೀವಮಾನವಿಡೀ ಕಲಿಯಲು ಮತ್ತು ಹೊಸ ತಂತ್ರಜ್ಞಾನಗಳು, ವ್ಯವಸ್ಥೆಗಳು ಹಾಗೂ ವಿಕಸನಗೊಳ್ಳುತ್ತಿರುವ ಅಗತ್ಯಗಳಿಗೆ ನಿರಂತರವಾಗಿ ಹೊಂದಿಕೊಳ್ಳಲು ಬದ್ಧರಾಗಿರಬೇಕು ಎಂದು ಒತ್ತಾಯಿಸಿದ ಪ್ರಧಾನಮಂತ್ರಿಯವರು, 'ಐಗಾಟ್ ಕರ್ಮಯೋಗಿ' (iGOT Karmayogi) ವೇದಿಕೆ ಮತ್ತು 'ಕರ್ಮಯೋಗಿ ಪ್ರಾರಂಭ್' ಮಾಡ್ಯೂಲ್ ಅನ್ನು ತಮ್ಮ ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಆತ್ಮವಿಶ್ವಾಸದಿಂದ ಕಾರ್ಯ ನಿರ್ವಹಿಸಲು ಸಹಾಯ ಮಾಡುವ ಪ್ರಬಲ ಸಾಧನಗಳಾಗಿ ಶ್ಲಾಘಿಸಿದರು. "ಇದರ ಗರಿಷ್ಠ ಪ್ರಯೋಜನವನ್ನು ಪಡೆದುಕೊಳ್ಳುವಂತೆ ನಾನು ನಿಮ್ಮನ್ನು ಆಗ್ರಹಿಸುತ್ತೇನೆ" ಎಂದು ಶ್ರೀ ಮೋದಿ ತಿಳಿಸಿದರು.

ಒಂದು ಸ್ಪೂರ್ತಿದಾಯಕ ಕರೆಯೊಂದಿಗೆ ಭಾಷಣ ಮುಕ್ತಾಯಗೊಳಿಸಿದ ಪ್ರಧಾನಮಂತ್ರಿಯವರು, ಇಂದು ನೇಮಕಾತಿ ಪತ್ರಗಳನ್ನು ಸ್ವೀಕರಿಸುತ್ತಿರುವ ಯುವಕರು, ತಮ್ಮೊಳಗೆ ಅದೇ ಉತ್ಸಾಹ ಮತ್ತು ಶಕ್ತಿಯನ್ನು ಹೊಂದಿದ್ದಾರೆ, ಅದರಿಂದಲೇ ಭಾರತದ ಯುವಕರು ಜಗತ್ತಿನಾದ್ಯಂತ ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮ ಮುದ್ರೆಯನ್ನು ಒತ್ತುತ್ತಿದ್ದಾರೆ ಮತ್ತು ಈ ಉತ್ಸಾಹವು ಅವರ ಸಾರ್ವಜನಿಕ ಸೇವೆಯಲ್ಲೂ ಇರಬೇಕು ಎಂದು ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು. "ತಮ್ಮ ಕೆಲಸವನ್ನು ರಾಷ್ಟ್ರ ಸೇವೆಯ ಮಾಧ್ಯಮವೆಂದು ಪರಿಗಣಿಸುವ ಯುವಕರ ಶ್ರಮದಿಂದ ವಿಕಸಿತ ಭಾರತ ನಿರ್ಮಾಣವಾಗಲಿದೆ" ಎಂದು ಶ್ರೀ ಮೋದಿ ಪ್ರತಿಪಾದಿಸಿದರು.

ತಮ್ಮ ಮುಕ್ತಾಯ ಭಾಷಣದಲ್ಲಿ, ಹೊಸದಾಗಿ ನೇಮಕಗೊಂಡವರು ಭಾರತದ ಅಭಿವೃದ್ಧಿಯ ಪಯಣಕ್ಕೆ ಹೊಸ ವೇಗವನ್ನು ನೀಡಲಿದ್ದಾರೆ ಮತ್ತು ಅವರ ಕೆಲಸ ಹಾಗೂ ನಿರ್ಧಾರಗಳ ಮೂಲಕ ವಿಕಸಿತ ಭಾರತದ ಸಂಕಲ್ಪ ಈಡೇರಲಿದೆ ಎಂದು ಪ್ರಧಾನಮಂತ್ರಿಯವರು ತಮ್ಮ ಸಂಪೂರ್ಣ ವಿಶ್ವಾಸವನ್ನು ವ್ಯಕ್ತಪಡಿಸಿದರು. ನೇಮಕಾತಿ ಪತ್ರಗಳನ್ನು ಸ್ವೀಕರಿಸುತ್ತಿರುವ ಎಲ್ಲಾ ಯುವಕರಿಗೆ ಮುಂಬರುವ ಭವಿಷ್ಯಕ್ಕಾಗಿ ಅವರು ತಮ್ಮ ಹೃತ್ಪೂರ್ವಕ ಶುಭ ಹಾರೈಕೆಗಳನ್ನು ತಿಳಿಸಿದರು.

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Railways to operate over 300 special trains for Jagannath Rath Yatra, 100 for Onam: Ashwini Vaishnaw

Media Coverage

Railways to operate over 300 special trains for Jagannath Rath Yatra, 100 for Onam: Ashwini Vaishnaw
NM on the go

Nm on the go

Always be the first to hear from the PM. Get the App Now!
...
List of Outcomes: Prime Minister’s visit to Indonesia
July 07, 2026

MoUs / Agreements

Sl. No.Title
1.

Extension of Framework Agreement on Cooperation in Exploration and Uses of Outer Space for Peaceful Purposes

2.

MoU between CDSCO and BPOM on cooperation in the field of Medical Products Regulation

3.

MoU on Cooperation in the field of Minerals and Technology of Steel Supply Chain

4.

MoU on Cooperation in the field of Agriculture and Allied Sectors
  

5.

Extension of MoU and Implementation Agreementon Maritime Safety and Security Cooperation

6.

MoU between National Disaster Management Authority (NDMA) and National Agency for Disaster Management, Indonesia

7.

MoU on Cooperation in the Field of Telecommunications Technologies and Services

 

8.

MoU on Research, Technology, and Innovation Cooperation

9.

Implementation Agreement on Health Workforce Collaboration

10.

MoU between Election Commission of India (ECI) and the General Elections Commission (KPU) of Indonesia

11.

Cooperation on BrahMos Missile System

12.

Air-to-Air Missile Cooperation Agreement

13.

Strategic Joint Venture between Steel Authority of India (SAIL) and Pt. Krakatau Steel for establishment of Stainless-Steel Slab manufacturing facility in Indonesia

14.

MoU between Non-Ferrous Materials Technology Development Centre (NFTDC), Midwest Ltds., and PT PERMINAS on development of Rare Earth Magnets

Announcements

Sl. No.Title
1.

India’s assistance for conservation and restoration of Prambanan Temple Complex, Yogyakarta

2.

Deployment of Indonesian Liaison Officer in IFC-IOR

3.

Supply of 100 tonnes of high-quality DWR 162 wheat seeds to Indonesia

4.

Commemoration of “Tagore-Dewantara Year of Cultural and Educational Diplomacy”

5.

Setting up of Indian Institute of Management, Bangalore branch campus at Singhasari SEZ, Indonesia

6.

Launch of Indonesia Open Network (ION), based on Open Network for Digital Commerce (ONDC) architecture in India