ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೊಲಂಬೊದ ಪವಿತ್ರ ಗಂಗಾರಾಮಯ ದೇವಸ್ಥಾನದಲ್ಲಿ ಪವಿತ್ರ ದೇವನಿಮೋರಿ ಅವಶೇಷಗಳ ಪ್ರದರ್ಶನವನ್ನು ಉದ್ಘಾಟಿಸಿದ್ದಕ್ಕಾಗಿ ಶ್ರೀಲಂಕಾದ ಅಧ್ಯಕ್ಷರಾದ ಶ್ರೀ ಅನುರ ಕುಮಾರ ದಿಸ್ಸಾನಾಯಕೆ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಏಪ್ರಿಲ್ 2025 ರಲ್ಲಿ ತಮ್ಮ ಶ್ರೀಲಂಕಾ ಭೇಟಿಯ ಸಂದರ್ಭದಲ್ಲಿ, ಈ ಪವಿತ್ರ ಅವಶೇಷಗಳನ್ನು ಶ್ರೀಲಂಕಾಕ್ಕೆ ತರಲು ನಿರ್ಧರಿಸಲಾಗಿತ್ತು, ಇದರಿಂದಾಗಿ ಅಲ್ಲಿನ ಜನರಿಗೆ ಗೌರವ ಸಲ್ಲಿಸಲು ಅವಕಾಶ ನೀಡಿದಂತಾಗುತ್ತದೆ ಎಂದು ಪ್ರಧಾನಮಂತ್ರಿಯವರು ಸ್ಮರಿಸಿದರು.

ಭಾರತ ಮತ್ತು ಶ್ರೀಲಂಕಾ ಶತಮಾನಗಳ ಹಳೆಯ ಸಮಾನ ಪರಂಪರೆ ಮತ್ತು ಸಾಂಸ್ಕೃತಿಕ ವಿನಿಮಯದ ಮೂಲಕ ಸುದೀರ್ಘ ನಾಗರಿಕ ಮತ್ತು ಆಧ್ಯಾತ್ಮಿಕ ಸಂಬಂಧಗಳಿಂದ ಬೆಸೆದುಕೊಂಡಿವೆ ಎಂದು ಶ್ರೀ ಮೋದಿ ಅವರು ಉಲ್ಲೇಖಿಸಿದರು. ಶ್ರೀಲಂಕಾಕ್ಕೆ ಪವಿತ್ರ ದೇವನಿಮೋರಿ ಅವಶೇಷಗಳ ಆಗಮನವು ಎರಡೂ ರಾಷ್ಟ್ರಗಳ ನಡುವಿನ ಶಾಶ್ವತ ಆಧ್ಯಾತ್ಮಿಕ ಬಂಧಕ್ಕೆ ಸಾಕ್ಷಿಯಾಗಿದೆ ಎಂದು ಅವರು ತಿಳಿಸಿದರು.

ಭಗವಾನ್ ಬುದ್ಧನ ಸಹಾನುಭೂತಿ, ಶಾಂತಿ ಮತ್ತು ಸಾಮರಸ್ಯದ ಕಾಲಾತೀತ ಸಂದೇಶವು ಮಾನವಕುಲಕ್ಕೆ ಮಾರ್ಗದರ್ಶನ ನೀಡುವುದನ್ನು ಮುಂದುವರಿಸುತ್ತದೆ ಮತ್ತು ಗಡಿಗಳಾಚೆ ಏಕತೆ ಹಾಗೂ ತಿಳಿವಳಿಕೆಯನ್ನು ಬೆಳೆಸುತ್ತದೆ ಎಂದು ಪ್ರಧಾನಮಂತ್ರಿಯವರು ಆಶಯ ವ್ಯಕ್ತಪಡಿಸಿದರು.

ಎಕ್ಸ್‌ ಖಾತೆಯಲ್ಲಿ ಶ್ರೀ ಮೋದಿ ಅವರು ಹೀಗೆ ತಿಳಿಸಿದ್ದಾರೆ:

"ಕೊಲಂಬೊದ ಪವಿತ್ರ ಗಂಗಾರಾಮಯ ದೇವಸ್ಥಾನದಲ್ಲಿ ಪವಿತ್ರ ದೇವನಿಮೋರಿ ಅವಶೇಷಗಳ ಪ್ರದರ್ಶನವನ್ನು ಉದ್ಘಾಟಿಸಿದ್ದಕ್ಕಾಗಿ ಅಧ್ಯಕ್ಷ ಅನುರ ಕುಮಾರ ದಿಸ್ಸಾನಾಯಕೆ ಅವರಿಗೆ ಕೃತಜ್ಞತೆಗಳು.

ಏಪ್ರಿಲ್ 2025 ರ ನನ್ನ ಭೇಟಿಯ ಸಂದರ್ಭದಲ್ಲಿ, ಈ ಅವಶೇಷಗಳನ್ನು ಶ್ರೀಲಂಕಾಕ್ಕೆ ತರಲು ನಿರ್ಧರಿಸಲಾಗಿತ್ತು, ಆ ಮೂಲಕ ಜನರು ತಮ್ಮ ಗೌರವವನ್ನು ಸಲ್ಲಿಸಲು ಅವಕಾಶ ನೀಡಲಾಯಿತು. ನಮ್ಮ ರಾಷ್ಟ್ರಗಳು ಸುದೀರ್ಘ ನಾಗರಿಕ ಮತ್ತು ಆಧ್ಯಾತ್ಮಿಕ ಸಂಬಂಧಗಳಿಂದ ಸಂಪರ್ಕ ಹೊಂದಿವೆ. ಭಗವಾನ್ ಬುದ್ಧನ ಸಹಾನುಭೂತಿ, ಶಾಂತಿ ಮತ್ತು ಸಾಮರಸ್ಯದ ಕಾಲಾತೀತ ಸಂದೇಶವು ಮಾನವಕುಲಕ್ಕೆ ಮಾರ್ಗದರ್ಶನ ನೀಡುತ್ತಿರಲಿ.

@anuradisanayake 

https://www.pib.gov.in/PressReleasePage.aspx?PRID=2222243&reg=3&lang=1”

 

 

“කොළඹ, ගංගාරාම විහාරස්ථානයේ දී පූජනීය දෙව්නිමෝරි ධාතු ප්‍රදර්ශනය විවෘත කිරීම සම්බන්ධයෙන් ජනාධිපති අනුර කුමාර දිසානායක මැතිතුමාට කෘතඥතාවය පළ කරමි.

මාගේ 2025 අප්‍රේල් සංචාරය අතරතුරදී මෙම ධාතුන් වහන්සේලා ශ්‍රී ලංකාවට වැඩම කරවන බවට තීරණය කරන ලද අතර ඒ අනුව ජනතාවට ධාතුන් වහන්සේලා වන්දනා කිරීමේ අවස්ථාව හිමි වී තිබේ. අප දෙරට ගැඹුරු ශිෂ්ටාචාරමය සහ ආධ්‍යාත්මික සබඳතාවන්ගෙන් බැඳී පවතී. දයානුකම්පාව, සාමය සහ සමඟිය පිළිබඳ බුදුන් වහන්සේගේ අකාලික පණිවිඩය තවදුරටත් මනුෂ්‍ය වර්ගයාට මඟ පෙන්වනු ලැබේවා!

@anuradisanayake

https://www.pib.gov.in/PressReleasePage.aspx?PRID=2222243&reg=3&lang=1”

 

 

“கொழும்பிலுள்ள புனித கங்காராமை விகாரையில் புனித தேவ்னிமோரி சின்னங்களின் தரிசனத்தை ஆரம்பித்துவைத்தமைக்காக ஜனாதிபதி அநுர குமார திசாநாயக்க அவர்களுக்கு நன்றி.

2025 ஏப்ரலில் எனது விஜயத்தின்போது இச்சின்னங்களை இலங்கைக்கு அனுப்புவது குறித்து தீர்மானிக்கப்பட்டதுடன் அதன் அடிப்படையில் மக்கள் வழிபாட்டினை மேற்கொள்வதற்கான வாய்ப்பு கிடைக்கப்பெற்றுள்ளது. நமது நாடுகள் ஆழமான நாகரீக மற்றும் ஆன்மீக பிணைப்புகளினால் இணைக்கப்பட்டுள்ளன. புத்த பெருமானின் கருணை, அமைதி மற்றும் நல்லிணக்கம் குறித்த காலத்தால் அழியாத செய்தியானது தொடர்ந்து மனித குலத்துக்கு வழிகாட்டட்டும்.

@anuradisanayake

https://www.pib.gov.in/PressReleasePage.aspx?PRID=2222243&reg=3&lang=1”

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'PM Modi Is One Of Our Greatest Friends': Netanyahu Says Israel Is 'Investing Heavily' In India Ties

Media Coverage

'PM Modi Is One Of Our Greatest Friends': Netanyahu Says Israel Is 'Investing Heavily' In India Ties
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 04 ಆಗಸ್ಟ್ 2026
August 04, 2026

From Auto PLI to Ramsar Sites: How India is Winning on Every Front Under PM Modi