ಶ್ರೀ ರಾಮ್ ಸುತಾರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಶ್ರೀ ರಾಮ್ ಸುತಾರ್ ಅವರು ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆ ಸೇರಿದಂತೆ ಭಾರತಕ್ಕೆ ಕೆಲವು ಅಪ್ರತಿಮ ಮಹಾನ್ ಹೆಗ್ಗುರುತು ಕಲಾಕೃತಿಗಳನ್ನು ನೀಡಿದ ಅದ್ಭುತ ಪಾಂಡಿತ್ಯ ಹೊಂದಿದ ಶಿಲ್ಪಿಯಾಗಿದ್ದಾರೆ ಎಂದು ಪ್ರಧಾನಮಂತ್ರಿಯವರು ಹೇಳಿದ್ದಾರೆ. ಅವರ ಕೃತಿಗಳನ್ನು ಭಾರತದ ಇತಿಹಾಸ, ಸಂಸ್ಕೃತಿ ಮತ್ತು ಸಾಮೂಹಿಕ ಮನೋಭಾವದ ಪ್ರಬಲ ಅಭಿವ್ಯಕ್ತಿಗಳಾಗಿ ಯಾವಾಗಲೂ ಪ್ರಶಂಸಿಸಲಾಗುತ್ತದೆ ಮತ್ತು ಅವರು ಮುಂದಿನ ಪೀಳಿಗೆಗೆ ರಾಷ್ಟ್ರೀಯ ಹೆಮ್ಮೆಯನ್ನು ಅಮರಗೊಳಿಸಿದ್ದಾರೆ. ಅವರ ಕೃತಿಗಳು ಕಲಾವಿದರು ಮತ್ತು ನಾಗರಿಕರಿಗೆ ಸಮಾನವಾಗಿ ಸ್ಫೂರ್ತಿ ನೀಡುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ತಾಣದ ಸಂದೇಶದಲ್ಲಿ ಈ ರೀತಿ ಸಂದೇಶ ಬರೆದಿದ್ದಾರೆ;

“ಕೆವಾಡಿಯಾದಲ್ಲಿನ ಏಕತಾ ಪ್ರತಿಮೆ ಸೇರಿದಂತೆ ಭಾರತಕ್ಕೆ ಕೆಲವು ಅಪ್ರತಿಮ ಹೆಗ್ಗುರುತುಗಳನ್ನು ನೀಡಿದ ಅದ್ಭುತ ಶಿಲ್ಪಿ ಶ್ರೀ ರಾಮ್ ಸುತಾರ್ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ಕಲಾಕೃತಿಗಳು ಭಾರತದ ಇತಿಹಾಸ, ಸಂಸ್ಕೃತಿ ಮತ್ತು ಸಾಮೂಹಿಕ ಮನೋಭಾವದ ಪ್ರಬಲ ಅಭಿವ್ಯಕ್ತಿಗಳಾಗಿ ಯಾವಾಗಲೂ ಮೆಚ್ಚುಗೆ ಪಡೆಯುತ್ತವೆ. ಅವರು ಮುಂದಿನ ಪೀಳಿಗೆಗೆ ರಾಷ್ಟ್ರೀಯ ಹೆಮ್ಮೆಯನ್ನು ಅಮರವಾಗಿಸಿದ್ದಾರೆ. ಅವರ ಕೃತಿಗಳು ಕಲಾವಿದರು ಮತ್ತು ನಾಗರಿಕರನ್ನು ಸಮಾನವಾಗಿ ಪ್ರೇರೇಪಿಸುತ್ತಲೇ ಇರುತ್ತವೆ. ಅವರ ಕುಟುಂಬ, ಅಭಿಮಾನಿಗಳು ಮತ್ತು ಅವರ ಅದ್ಭುತ ಜೀವನ ಮತ್ತು ಕೆಲಸದಿಂದ ಸ್ಪರ್ಶಿಸಲ್ಪಟ್ಟ ಎಲ್ಲರಿಗೂ ನನ್ನ ಹೃತ್ಪೂರ್ವಕ ಸಂತಾಪಗಳು. ಓಂ ಶಾಂತಿ.” 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Indian coffee exports reach 140 countries in FY2025–26

Media Coverage

Indian coffee exports reach 140 countries in FY2025–26
NM on the go

Nm on the go

Always be the first to hear from the PM. Get the App Now!
...
ನಿಸ್ವಾರ್ಥ ಸೇವೆಯ ಮನೋಭಾವಕ್ಕೆ ಒತ್ತು ನೀಡುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡಿರುವ ಪ್ರಧಾನಮಂತ್ರಿ
August 07, 2026

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿಸ್ವಾರ್ಥ ಸೇವೆಯ ಸದ್ಗುಣ ಮತ್ತು ಪ್ರತಿಯಾಗಿ ಏನನ್ನೂ ನಿರೀಕ್ಷಿಸದೆ ಇತರರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಉದಾತ್ತ ಆದರ್ಶವನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತಂ ಪುಸ್ತಕವನ್ನು ಹಂಚಿಕೊಂಡಿದ್ದಾರೆ:

"किं चन्द्रमाः प्रत्युपकारलिप्सया करोति गोभिः कुमुदावबोधनम्।

स्वभाव एवोन्नतचेतसां सतां परोपकारव्यसनं हि जीवितम्॥"

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

किं चन्द्रमाः प्रत्युपकारलिप्सया करोति गोभिः कुमुदावबोधनम्।

स्वभाव एवोन्नतचेतसां सतां परोपकारव्यसनं हि जीवितम्॥