ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ನವೆಂಬರ್ 20ರಂದು ಜಾರ್ಜ್ ಟೌನ್ ನ ಸ್ಟೇಟ್‌ ಹೌಸ್ ನಲ್ಲಿ ಅಧ್ಯಕ್ಷ ಗೌರವಾನ್ವಿತ ಡಾ.ಮೊಹಮ್ಮದ್ ಇರ್ಫಾನ್ ಆಲಿ ಅವರನ್ನು ಭೇಟಿ ಮಾಡಿದ್ದರು. ಪ್ರಧಾನಿ ಅವರು ಸ್ಟೇಟ್‌ ಹೌಸ್‌ ಗೆ ಆಗಮಿಸುತ್ತಿದ್ದಂತೆಯೇ ಅಧ್ಯಕ್ಷ ಆಲಿ ಅವರು ಸ್ವಾಗತಿಸಿದರು ಮತ್ತು ಸಾಂಪ್ರದಾಯಿಕ ಗೌರವ ವಂದನೆ ಸಲ್ಲಿಸಿದರು.

ನಿಯೋಗ ಮಟ್ಟದ ಮಾತುಕತೆಯ ನಂತರ ಉಭಯ ನಾಯಕರು ಸೀಮಿತ ವಿಷಯಗಳ ಸಭೆಯನ್ನು ನಡೆಸಿದರು. ಭಾರತ ಮತ್ತು ಗಯಾನಾ ನಡುವೆ ಆಳವಾಗಿ ಬೇರೂರಿರುವ ಐತಿಹಾಸಿಕ ಸಂಬಂಧಗಳನ್ನು ಬಲವಾಗಿ ಪ್ರತಿಪಾದಿಸಿದ ಪ್ರಧಾನಿ ಅವರು, ತಮ್ಮ ಭೇಟಿಯು ದ್ವಿಪಕ್ಷೀಯ ಬಾಂಧವ್ಯಕ್ಕೆ ಮತ್ತಷ್ಟು ಉತ್ತೇಜನ ನೀಡಲಿದೆ ಎಂದು ಹೇಳಿದರು. ರಕ್ಷಣಾ, ವ್ಯಾಪಾರ ಮತ್ತು ಹೂಡಿಕೆ, ಆರೋಗ್ಯ ಮತ್ತು ಔಷಧ, ಸಾಂಪ್ರದಾಯಿಕ ಔಷಧ, ಆಹಾರ ಭದ್ರತೆ,  ಮೂಲಸೌಕರ್ಯ ಅಭಿವೃದ್ಧಿ, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಸಾಮರ್ಥ್ಯವೃದ್ಧಿ, ಸಂಸ್ಕೃತಿ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ಭಾರತ ಮತ್ತು ಗಯಾನಾ ನಡುವಿನ ಬಹುಮುಖಿ ಬಾಂಧವ್ಯಗಳ ಕುರಿತು ಉಭಯ ನಾಯಕರು ವ್ಯಾಪಕ ಚರ್ಚೆ ನಡೆಸಿದರು. ಇಂಧನ ವಲಯದಲ್ಲಿ ನಡೆಯುತ್ತಿರುವ ಸಹಕಾರದ ಸ್ಥಿತಿಗತಿಯ ಮಾಹಿತಿಯನ್ನು ಪಡೆದುಕೊಂಡ ಉಭಯ ನಾಯಕರು ಹೈಡ್ರೋಕಾರ್ಬನ್‌ಗಳು ಮತ್ತು ನವೀಕರಿಸಬಹುದಾದ ಇಂಧನ ವಲಯಗಳಲ್ಲಿ ಪಾಲುದಾರಿಕೆ ವೃದ್ಧಿಸಲು ಅಪಾರ ಸಾಮರ್ಥ್ಯವಿದೆ ಎಂಬುದನ್ನು ಉಲ್ಲೇಖಿಸಿದರು. ಅಭಿವೃದ್ಧಿ ಸಹಕಾರವು ಭಾರತ-ಗಯಾನಾ ಪಾಲುದಾರಿಕೆಯ ಪ್ರಮುಖ ಆಧಾರಸ್ತಂಭವಾಗಿದೆ. ಗಯಾನಾದ ಅಭಿವೃದ್ಧಿಯ ಆಕಾಂಕ್ಷೆಗಳನ್ನು ಪೂರೈಸಲು ಭಾರತದ ನಿರಂತರ ಬೆಂಬಲವನ್ನು ಪ್ರಧಾನಮಂತ್ರಿ ವ್ಯಕ್ತಪಡಿಸಿದರು.

ಉಭಯ ನಾಯಕರು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ವಿಚಾರ ವಿನಿಮಯ ನಡೆಸಿದರು. ಹವಾಮಾನ ಬದಲಾವಣೆಯನ್ನು ನಿಭಾಯಿಸಲು ಹೆಚ್ಚಿನ ಸಹಕಾರಕ್ಕಾಗಿ ಉಭಯ ನಾಯಕರು ಕರೆ ನೀಡಿದರು. ಭಾರತವು ಆಯೋಜಿಸಿದ್ದ ವಾಯ್ಸ್ ಆಫ್ ದಿ ಗ್ಲೋಬಲ್ ಸೌತ್ ಶೃಂಗಸಭೆಯಲ್ಲಿ ಭಾಗವಹಿಸಿದ್ದಕ್ಕಾಗಿ ಅಧ್ಯಕ್ಷ ಅಲಿ ಅವರಿಗೆ ಪ್ರಧಾನಿ ಧನ್ಯವಾದ ಅರ್ಪಿಸಿದರು. ಜಾಗತಿಕ ದಕ್ಷಿಣ ದೇಶಗಳ ನಡುವೆ ಒಗ್ಗಟ್ಟನ್ನು ಬಲಪಡಿಸಲು ಒಗ್ಗೂಡಿ ಕಾರ್ಯನಿರ್ವಹಿಸಲು ಉಭಯ ನಾಯಕರು ಒಪ್ಪಿದರು.

ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಬಲವರ್ಧನೆಗೊಳಿಸಲು ನಿಯಮಿತವಾಗಿ ಅಗ್ಗಾಗ್ಗೆ ಉನ್ನತ ಮಟ್ಟದ ಸಭೆಗಳನ್ನು ನಡೆಸಲು ಇಬ್ಬರೂ ನಾಯಕರು ಒಪ್ಪಿದರು. ಭೇಟಿಯ ವೇಳೆ ಹತ್ತು ಒಡಂಬಡಿಕೆಗಳಿಗೆ ಸಹಿ ಹಾಕಲಾಯಿತು. ಆ ಎಂಒಯುಗಳ ಪಟ್ಟಿಯನ್ನು ನೋಡಲು ಇಲ್ಲಿ ಕ್ಲಿಕ್‌ ಮಾಡಿ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s passenger vehicle sales jump 35% to 4.5 lakh in August as Maruti, M&M drive growth

Media Coverage

India’s passenger vehicle sales jump 35% to 4.5 lakh in August as Maruti, M&M drive growth
NM on the go

Nm on the go

Always be the first to hear from the PM. Get the App Now!
...
Prime Minister shares a Sanskrit Subhashitam, highlighting the virtues of instilling fearlessness and saving lives
September 02, 2026

Prime Minister Shri Narendra Modi shared a Sanskrit Subhashitam today, highlighting the virtues of instilling fearlessness and saving lives.

The Prime Minister wrote on X;

"अभयस्यैव यो दाता तस्यैव सुमहत्फलम् ।

न हि प्राणसमं दानं त्रिषु लोकेषु विद्यते ॥"

Whoever takes away people's fear receives great blessings, and in all three worlds, there is no greater gift than saving a life.