Close relations between India and Finland based on shared values of democracy, rule of law, equality, freedom of speech, and respect for human rights: PM
PM Modi invites Finland to join the International Solar Alliance (ISA) and the Coalition for Disaster Resilient Infrastructure (CDRI)

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫಿನ್ ಲೆಂಡ್ ಗಣರಾಜ್ಯದ ಘನತೆವೆತ್ತ ಪ್ರಧಾನಿ ಸನ್ನಾ ಮರೀನ್ ವರ್ಚುವಲ್ ಶೃಂಗ ಸಭೆ ಮೂಲಕ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಸಮಗ್ರ ದ್ವಿಪಕ್ಷೀಯ ವಿಷಯಗಳು, ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಬಹುಪಕ್ಷೀಯ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.

 

 

ಭಾರತ – ಫಿನ್ ಲೆಂಡ್ ನಡುವಿನ ನಿಕಟ ಬಾಂಧವ್ಯ, ಪ್ರಜಾತಂತ್ರದ ಮೌಲ್ಯಗಳು, ಕಾನೂನಿನ ನಿಯಮಗಳು, ಸಮಾನತೆ, ವಾಕ್ ಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳಿಗೆ ಗೌರವ ನೀಡುವ ಕುರಿತಾದ ವಿಚಾರಗಳ ಬಗ್ಗೆಯೂ ಉಭಯ ನಾಯಕರು ಚರ್ಚಿಸಿದರು.

ಬಹುಪಕ್ಷೀಯತೆ ಕುರಿತಂತೆ ತಮ್ಮ ಬಲಿಷ್ಠ ಬದ್ಧತೆಯನ್ನು ಈ ನಾಯಕರು ಪುನರುಚ್ಚರಿಸಿದ್ದು, ನಿಯಮ ಆಧರಿತ ಅಂತಾರಾಷ್ಟ್ರೀಯ ಆದೇಶ, ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ಬದಲಾವಣೆ ವಿರುದ್ಧದ ಹೋರಾಟ ಕುರಿತು ಸಮಾಲೋಚನೆ ನಡೆಸಿದರು.

ದ್ವಿಪಕ್ಷೀಯ ಕಾರ್ಯಕ್ರಮಗಳ ಕುರಿತು ಇಬ್ಬರೂ ನಾಯಕರು ಪ್ರಗತಿ ಪರಿಶೀಲನೆ ನಡೆಸಿದ್ದು, ವ್ಯಾಪಾರ, ಹೂಡಿಕೆ, ನಾವೀನ್ಯತೆ, ಶಿಕ್ಷಣ, ಕೃತಕ ಬುದ್ದಿಮತ್ತೆ ಸೇರಿ ಬೆಳವಣಿಗೆಯಾಗುತ್ತಿರುವ ತಂತ್ರಜ್ಞಾನ, 5ಜಿ/6ಜಿ, ಅತ್ಯಾಧುನಿಕ ಕ್ವಾಂಟಮ್ ಆಫ್ ಕಂಪ್ಯೂಟಿಂಗ್ ಸೇರಿದಂತೆ ಪರಸ್ಪರ ಬಾಂಧವ್ಯ ವೃದ್ಧಿ ಕುರಿತು ಚರ್ಚಿಸಿದರು.

ಶುದ್ಧ ಮತ್ತು ಹಸಿರು ತಂತ್ರಜ್ಞಾನ ವಲಯದಲ್ಲಿ ಫಿನ್ ಲೆಂಡ್ ಸಾರಥ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಸುಸ್ಥಿರ ಅಭಿವೃದ್ಧಿಯಲ್ಲಿ ಭಾರತದ ನೇತೃತ್ವಕ್ಕೆ ಫಿನ್ ಲೆಂಡ್ ಕಂಪೆನಿಗಳು ಪಾಲುದಾರಾಗುವ ಸಾಮರ್ಥ್ಯದ ಬಗ್ಗೆ ಗಮನಹರಿಸಿದರು. ನವೀಕೃತ ಮತ್ತು ಜೈವಿಕ ಇಂಧನ, ಸುಸ್ಥಿರತೆ, ಶಿಕ್ಷಣದಲ್ಲಿನ ತಂತ್ರಜ್ಞಾನ, ಔ಼ಷಧ ಮತ್ತು ಡಿಜಿಟಲೀಕರಣ ವಲಯದಲ್ಲಿ ಸಹಕಾರ ಹೆಚ್ಚಿಸುವಂತೆ ಸಲಹೆ ಮಾಡಿದರು.

ಭಾರತ – ಐರೋಪ್ಯ ಒಕ್ಕೂಟ, ಹಿಮ ವಲಯದಲ್ಲಿ ಸಹಕಾರ, ವಿಶ್ವ ವಾಣಿಜ್ಯ ಸಂಘಟನೆ - ಡಬ್ಲ್ಯೂಟಿಓ ಮತ್ತು ವಿಶ್ವ ಸಂಸ್ಥೆಯ ಸುಧಾರಣೆಗಳು ಸೇರಿದಂತೆ ಜಾಗತಿಕ ಮತ್ತು ಪ್ರಾದೇಶಿಕ ವಿಚಾರಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವಿನಿಮಯಮಾಡಿಕೊಂಡರು. ಆಫ್ರಿಕಾದಲ್ಲಿ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಲು ಭಾರತ ಮತ್ತು ಫಿನ್ ಲೆಂಡ್ ನಡುವೆ ಪರಸ್ಪರ ಸಹಕಾರ ಸಾಮರ್ಥ್ಯ ವೃದ್ಧಿಸುವ ಕುರಿತಂತೆಯೂ ಎರಡೂ ಬದಿಯಿಂದ ಚರ್ಚಿಸಲಾಯಿತು.

ಅಂತಾರಾಷ್ಟ್ರೀಯ ಸೌರ ಒಕ್ಕೂಟ [ಐಎಸ್ಎ] ಮತ್ತು ವಿಪತ್ತು ಎದುರಿಸುವ ಮೂಲ ಸೌಕರ್ಯ ಅಭಿವೃದ್ಧಿ ಒಕ್ಕೂಟ [ಸಿ.ಡಿ.ಆರ್.ಐ]ಕ್ಕೆ ಸೇರುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫಿನ್ ಲೆಂಡ್ ಗೆ ಆಹ್ವಾನ ನೀಡಿದರು.

ಕೋವಿಡ್ 19 ಪರಿಸ್ಥಿತಿ, ಲಸಿಕೆ ಅಭಿಯಾನ ಕುರಿತು ತಮ್ಮ ರಾಷ್ಟ್ರಗಳಲ್ಲಿನ ಪರಿಸ್ಥಿತಿ ಬಗ್ಗೆ ಇಬ್ಬರೂ ನಾಯಕರು ಚರ್ಚಿಸಿದರು. ಎಲ್ಲಾ ರಾಷ್ಟ್ರಗಳಿಗೆ ತುರ್ತಾಗಿ ಮತ್ತು ಕೈಗೆಟುಕುವ ರೀತಿಯಲ್ಲಿ ಲಸಿಕೆ ದೊರಕಿಸಿಕೊಡುವ ಜಾಗತಿಕ ಪ್ರಯತ್ನಗಳ ಮಹತ್ವದ ಕುರಿತಾಗಿ ಚರ್ಚಿಸಿದರು.

ಪೋರ್ಟೋದಲ್ಲಿ ನಡೆಯಲಿರುವ ಭಾರತ – ಐರೋಪ್ಯ ಒಕ್ಕೂಟ ನಾಯಕರ ಸಭೆ, ನಾರ್ಡಿಕ್ ಶೃಂಗ ಸಭೆಗಳನ್ನು ಎದುರು ನೋಡುತ್ತಿರುವುದಾಗಿ ಉಭಯ ನಾಯಕರು ಹೇಳಿದ್ದಾರೆ.

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Cabinet approves ₹1,570 crore ship repair facility at Vadinar, Gujarat

Media Coverage

Cabinet approves ₹1,570 crore ship repair facility at Vadinar, Gujarat
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 6 ಮೇ 2026
May 06, 2026

New India, New Pride: When Self-Reliance Meets Results — A Tribute to PM Modi