ದೇಶಾದ್ಯಂತ ಶಿಕ್ಷಣ ಸಂಸ್ಥೆಗಳಿಗೆ 100 '5ಜಿ ಬಳಕೆ ಪ್ರಯೋಗಾಲಯ' ಪ್ರದಾನ
ಪ್ರಧಾನಮಂತ್ರಿಯವರ ದೂರದೃಷ್ಟಿಯನ್ನು ಶ್ಲಾಘಿಸಿದ ಉದ್ಯಮದ ಮುಖಂಡರು
"ಭವಿಷ್ಯವು ಇಲ್ಲಿ ಮತ್ತು ಈಗ ಇದೆ"
"ನಮ್ಮ ಯುವ ಪೀಳಿಗೆ ತಂತ್ರಜ್ಞಾನ ಕ್ರಾಂತಿಯನ್ನು ಮುನ್ನಡೆಸುತ್ತಿದೆ"
"ಭಾರತವು ದೇಶದಲ್ಲಿ ʻ5ಜಿʼ ಸಂಪರ್ಕಜಾಲವನ್ನು ವಿಸ್ತರಿಸುತ್ತಿರುವುದಷ್ಟೇ ಅಲ್ಲದೆ, ʻ6ಜಿʼ ಯಲ್ಲಿ ನಾಯಕನಾಗಲು ಒತ್ತು ನೀಡುತ್ತಿದೆ"
"ನಾವು ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಜಾಪ್ರಭುತ್ವದ ಶಕ್ತಿಯನ್ನು ನಂಬುತ್ತೇವೆ"
"ಬಂಡವಾಳದ ಲಭ್ಯತೆ, ಸಂಪನ್ಮೂಲಗಳ ಲಭ್ಯತೆ ಮತ್ತು ತಂತ್ರಜ್ಞಾನದ ಲಭ್ಯತೆಯು ನಮ್ಮ ಸರ್ಕಾರದ ಆದ್ಯತೆಯಾಗಿದೆ"
"ಭಾರತದ ʻಸೆಮಿಕಂಡಕ್ಟರ್ ಮಿಷನ್ʼ ದೇಶೀಯ ಬೇಡಿಕೆಗಳನ್ನು ಮಾತ್ರವಲ್ಲದೆ ಜಾಗತಿಕ ಅವಶ್ಯಕತೆಗಳನ್ನು ಪೂರೈಸುವ ಉದ್ದೇಶದಿಂದ ಪ್ರಗತಿಯ ಹಾದಿಯಲ್ಲಿದೆ"
"ಡಿಜಿಟಲ್ ತಂತ್ರಜ್ಞಾನದ ಅಭಿವೃದ್ಧಿಯಲ್ಲಿ, ಭಾರತವು ಯಾವುದೇ ಅಭಿವೃದ್ಧಿ ಹೊಂದಿದ ರಾಷ್ಟ್ರಕ್ಕಿಂತಲೂ ಹಿಂದುಳಿದಿಲ್ಲ "
"ತಂತ್ರಜ್ಞಾನವು ಭಾರತವನ್ನು ಅಭಿವೃದ್ಧಿಶೀಲ ರಾಷ್ಟ್ರದಿಂದ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ತ್ವರಿತವಾಗಿ ಪರಿವರ್ತಿಸುವ ನಿಟ್ಟಿನಲ್ಲಿ ವೇಗವರ್ಧಕವಾಗಿ ಕೆಲಸ ಮಾಡುತ್ತದೆ"
"21ನೇ ಶತಮಾನವು ಭಾರತದ ಚಿಂತನೆಯ ನಾಯಕತ್ವದ ಯುಗವನ್ನು ಸೂಚಿಸುತ್ತದೆ"

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ʻಭಾರತ್ ಮಂಟಪʼದಲ್ಲಿ ʻಇಂಡಿಯಾ ಮೊಬೈಲ್ ಕಾಂಗ್ರೆಸ್ʼನ 7ನೇ ಆವೃತ್ತಿಗೆ (ಐಎಂಸಿ-2023) ಚಾಲನೆ ನೀಡಿದರು. ʻಇಂಡಿಯಾ ಮೊಬೈಲ್ ಕಾಂಗ್ರೆಸ್ʼ ಏಷ್ಯಾದ ಅತಿದೊಡ್ಡ ಟೆಲಿಕಾಂ, ಮಾಧ್ಯಮ ಮತ್ತು ತಂತ್ರಜ್ಞಾನ ವೇದಿಕೆಯಾಗಿದ್ದು, 2023ರ ಅಕ್ಟೋಬರ್ 27 ರಿಂದ 29 ರವರೆಗೆ 'ಗ್ಲೋಬಲ್ ಡಿಜಿಟಲ್ ಇನ್ನೋವೇಶನ್' ಎಂಬ ವಿಷಯಾಧಾರಿತವಾಗಿ ನಡೆಯಲಿದೆ. ʻಐಎಂಸಿ-2023ʼ ಪ್ರಮುಖ ಅತ್ಯಾಧುನಿಕ ತಂತ್ರಜ್ಞಾನಗಳ ಡೆವಲಪರ್, ತಯಾರಕ ಮತ್ತು ರಫ್ತುದಾರರಾಗಿ ಭಾರತದ ಸ್ಥಾನವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ದೇಶಾದ್ಯಂತದ ಶಿಕ್ಷಣ ಸಂಸ್ಥೆಗಳಿಗೆ 100 '5ಜಿ ಯೂಸ್ ಕೇಸ್ ಲ್ಯಾಬ್'ಗಳನ್ನು (5ಜಿ ಬಳಕೆ ಪ್ರಯೋಗಾಲಯ) ಪ್ರದಾನ ಮಾಡಿದರು.

 

ಪ್ರಧಾನಮಂತ್ರಿಯವರು ಸಭಾಂಗಣ 5ರಲ್ಲಿ ವಸ್ತುಪ್ರದರ್ಶನವನ್ನು ಉದ್ಘಾಟಿಸಿದರು ಮತ್ತು ವಸ್ತು ಪ್ರದರ್ಶನದಲ್ಲಿ ಹೆಜ್ಜೆ ಹಾಕಿದರು. 

ಉದ್ಯಮದ ಮುಖಂಡರು ಸಹ ಈ ಸಂದರ್ಭದಲ್ಲಿ ಮಾತನಾಡಿದರು. ʻರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್ʼನ ಅಧ್ಯಕ್ಷ ಶ್ರೀ ಆಕಾಶ್ ಎಂ ಅಂಬಾನಿ ಅವರು, ಇತ್ತೀಚಿನ ತಂತ್ರಜ್ಞಾನಗಳ ಬಳಕೆಯನ್ನು ಅಳವಡಿಸಿಕೊಳ್ಳುವ ಮೂಲಕ ಯುವ ಪೀಳಿಗೆಯ ಜೀವನವನ್ನು ಸುಧಾರಿಸುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಶ್ಲಾಘಿಸಿದರು. ʻಡಿಜಿಟಲ್ ಇಂಡಿಯಾʼ ಕಾರ್ಯಕ್ರಮವನ್ನು ಎಲ್ಲರನ್ನೂ ಒಳಗೊಂಡ, ನವೀನ ಮತ್ತು ಸುಸ್ಥಿರವಾಗಿಸುವಲ್ಲಿ ಪ್ರಧಾನಿಯವರು ದೇಶದ ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಅವರು ಒತ್ತಿ ಹೇಳಿದರು. ʻಜಿಯೋʼ ಭಾರತದ ಎಲ್ಲಾ 22 ಸರ್ಕ್ಯೂಟ್ಗಳಲ್ಲಿ 10 ಲಕ್ಷಕ್ಕೂ ಹೆಚ್ಚು ʻ5 ಜಿʼ ಸೆಲ್ಗಳನ್ನು ಸ್ಥಾಪಿಸಿದೆ, ಒಟ್ಟಾರೆ ʻ5ಜಿʼ ವಿತರಣೆಗೆ ಶೇಕಡಾ 85 ರಷ್ಟು ಕೊಡುಗೆ ನೀಡಿದೆ. ʻ5ಜಿʼ ಸ್ಟ್ಯಾಕ್ ಅನ್ನು ಭಾರತೀಯ ಪ್ರತಿಭೆಗಳು ವಿನ್ಯಾಸಗೊಳಿಸಿ, ಅಭಿವೃದ್ಧಿಪಡಿಸಿ, ತಯಾರಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು. "125 ದಶಲಕ್ಷ ಬಳಕೆದಾರರನ್ನು ಹೊಂದಿರುವ ಭಾರತವು ಅಗ್ರ 3 `5ಜಿ’-ಶಕ್ತ ರಾಷ್ಟ್ರಗಳಲ್ಲಿ ಒಂದಾಗಿದೆ. ಪ್ರಧಾನಿಯವರು ಇಡೀ ರಾಷ್ಟ್ರವನ್ನು ಏಕೀಕರಿಸಿದ್ದಾರೆ ಎಂದು ಹೇಳಿದ ಆಕಾಶ್ ಅಂಬಾನಿ ಅವರು, ಇದಕ್ಕೆ ಜಿಎಸ್ಟಿ, ಭಾರತದ ಡಿಜಿಟಲ್ ಕ್ರಾಂತಿ ಮತ್ತು ವಿಶ್ವದ ಅತಿ ಎತ್ತರದ ಪ್ರತಿಮೆಯ ಉದಾಹರಣೆಗಳನ್ನು ನೀಡಿದರು. "ಇಂಡಿಯಾ ಮೊಬೈಲ್ ಕಾನ್ಫರೆನ್ಸ್ನಲ್ಲಿ ನಮ್ಮೆಲ್ಲರಿಗೂ ನಿಮ್ಮ ಪ್ರಯತ್ನಗಳು ಸ್ಫೂರ್ತಿ ನೀಡುತ್ತವೆ" ಎಂದು ಅವರು ಪುನರುಚ್ಚರಿಸಿದರು. ಎಲ್ಲಾ ಡಿಜಿಟಲ್ ಉದ್ಯಮಿಗಳು, ಆವಿಷ್ಕಾರಕರು ಮತ್ತು ನವೋದ್ಯಮಗಳ ಪರವಾಗಿ, ಶ್ರೀ ಅಂಬಾನಿ ಅವರು ಭಾರತದ ʻಅಮೃತ ಕಾಲʼ ಸಂದರ್ಭದಲ್ಲಿ ಭಾರತದ ಕನಸನ್ನು ನನಸು ಮಾಡುವುದಾಗಿ ಭರವಸೆ ನೀಡಿದರು.

 

ʻಭಾರ್ತಿ ಎಂಟರ್ಪ್ರೈಸಸ್ʼನ ಅಧ್ಯಕ್ಷರಾದ ಶ್ರೀ ಸುನಿಲ್ ಭಾರ್ತಿ ಮಿತ್ತಲ್ ಅವರು ಮಾತನಾಡಿ, ಡಿಜಿಟಲ್ ಇಂಡಿಯಾದ ರೂಪದಲ್ಲಿ ಪ್ರಧಾನಮಂತ್ರಿಯವರು ನೀಡಿದ ದೃಷ್ಟಿಕೋನವನ್ನು ಸ್ಮರಿಸಿದರು. ಇದು ಅತೀವ ವೇಗದಲ್ಲಿ ಡಿಜಿಟಲ್ ಮೂಲಸೌಕರ್ಯದ ಅಭಿವೃದ್ಧಿಗೆ ಕಾರಣವಾಯಿತು ಎಂದರು. ಪ್ರಧಾನಮಂತ್ರಿಯವರ ʻಜೆಎಎಂʼ(ಜನ್ಧನ್-ಆಧಾರ್-ಮೊಬೈಲ್) ತ್ರಿಶಕ್ತಿಗಳ ಕಾರ್ಯವಿಧಾನದಿಂದ ಉಂಟಾದ ಪರಿವರ್ತನೆ ಮತ್ತು ಭಾರತದ ಡಿಜಿಟಲ್ ರೂಪಾಂತರವನ್ನು ಜಗತ್ತು ಹೇಗೆ ಗಮನಿಸಿದೆ ಎಂಬುದನ್ನು ಅವರು ಒತ್ತಿ ಹೇಳಿದರು. ಭಾರತದ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ (ಡಿಪಿಐ) ಅನೇಕ ದೇಶಗಳನ್ನು ಚಕಿತಗೊಳಿಸಿದೆ ಎಂದು ಅವರು ಹೇಳಿದರು. ಶ್ರೀ ಮಿತ್ತಲ್ ಅವರ ಪ್ರಕಾರ ಪ್ರಧಾನಮಂತ್ರಿಯವರ ದೃಷ್ಟಿಕೋನದ ಎರಡನೇ ಪ್ರಮುಖ ಆಧಾರಸ್ತಂಭವೆಂದರೆ ʻಮೇಕ್ ಇನ್ ಇಂಡಿಯಾʼ. ಇದರ ಅಡಿಯಲ್ಲಿ ಕಳೆದ ಒಂದು ವರ್ಷದಲ್ಲಿ ಉತ್ಪಾದನೆಯಲ್ಲಿ ಆಗಿರುವ ಪ್ರಗತಿಯನ್ನು ಮಿತ್ತಲ್ ಅವರು ಉಲ್ಲೇಖಿಸಿದರು. "ಭಾರತವು ಉತ್ಪಾದನೆಯಲ್ಲಿ ಬಹಳ ಮುಂದುವರಿದಿದೆ. ʻಆಪಲ್ʼನಿಂದ ಡಿಕ್ಸನ್, ʻಸ್ಯಾಮ್ಸಂಗ್ʼನಿಂದ ಟಾಟಾ ಹೀಗೆ ಪ್ರತಿಯೊಂದು ಕಂಪನಿಯು ಅದು ಸಣ್ಣದಿರಲಿ ದೊಡ್ಡದಿರಲಿ ಅಥವಾ ನವೋದ್ಯಮವಾಗಿರಲಿ ಉತ್ಪಾದನೆಯಲ್ಲಿ ತೊಡಗಿವೆ. ಭಾರತವು ಉತ್ಪಾದನಾ ರಾಷ್ಟ್ರವಾಗಿ ಹೊರಹೊಮ್ಮಿದೆ. ವಿಶೇಷವಾಗಿ ಡಿಜಿಟಲ್ ಮೂಲಸೌಕರ್ಯ ಕ್ಷೇತ್ರದಲ್ಲಿ ಅತಿದೊಡ್ಡ ಪ್ರಮಾಣದ ಉತ್ಪಾದನೆ ಮೂಲಕ ವಿಶ್ವ ನಾಯಕನಾಗಿ ಹೊರಹೊಮ್ಮಿದೆ,ʼʼ ಎಂದು ಅವರು ಹೇಳಿದರು. 5000 ಪಟ್ಟಣಗಳು ಮತ್ತು 20,000 ಹಳ್ಳಿಗಳಲ್ಲಿ ಏರ್ಟೆಲ್ ʻ5ಜಿʼ ಸೇವೆಗೆ ಈಗಾಗಲೇ ಚಾಲನೆ ನೀಡಿದೆ ಎಂದು ಮಾಹಿತಿ ನೀಡಿದ ಅವರು, ಮಾರ್ಚ್ 2024ರ ವೇಳೆಗೆ ʻ5ಜಿʼ ಇಡೀ ದೇಶವನ್ನು ಒಳಗೊಳ್ಳಲಿದೆ ಎಂದರು. ಈ ನಿಟ್ಟಿನಲ್ಲಿ ಪ್ರಧಾನಿಯವರು ನೀಡಿದ ಕರೆಯನ್ನು ಸ್ಮರಿಸಿದರು. ಇದು ನಿಜವಾಗಿಯೂ ವಿಶ್ವದ ಅತ್ಯಂತ ವೇಗದ ʻ5ಜಿʼ ಚಾಲನೆ ಆಗಲಿದೆ ಎಂದು ಅವರು ಹೇಳಿದರು.

ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷರಾದ ಶ್ರೀ ಕುಮಾರ ಮಂಗಲಂ ಬಿರ್ಲಾ ಅವರು ಮಾತನಾಡಿ, ಭಾರತದ ಡಿಜಿಟಲ್ ರೂಪಾಂತರವನ್ನು ಮುನ್ನಡೆಸುವಲ್ಲಿ ಪ್ರಧಾನಮಂತ್ರಿಯವರ ದೂರದೃಷ್ಟಿಯ ನಾಯಕತ್ವಕ್ಕೆ ಧನ್ಯವಾದ ಅರ್ಪಿಸಿದರು. ಅಲ್ಲದೆ, ಪ್ರತಿಯೊಬ್ಬರಿಗೂ ಪ್ರಯೋಜನಗಳನ್ನು ಖಾತ್ರಿಪಡಿಸುವ 'ಅಂತ್ಯೋದಯ' ತತ್ವವನ್ನು ಆಧರಿಸಿದ ʻಡಿಜಿಟಲ್ ಸೇರ್ಪಡೆʼಯತ್ತ ಪ್ರಧಾನಿಯವರ ಬದ್ಧತೆಯನ್ನು ಶ್ಲಾಘಿಸಿದರು. ಜಾಗತಿಕ ಮನ್ನಣೆಯನ್ನು ಗಳಿಸಿರುವ ಡಿಜಿಟಲ್ ವಿಕಾಸದಲ್ಲಿ ಭಾರತದ ಬೆಳವಣಿಗೆಗೆ ಈ ಕಾರ್ಯವಿಧಾನವೇ ಕಾರಣ ಅವರು ಶ್ಲಾಘಿಸಿದರು. "ಪ್ರಧಾನಮಂತ್ರಿಯವರ ದೃಷ್ಟಿಕೋನದಿಂದ ಪ್ರೇರಿತರಾಗಿ ಭಾರತವು ಜಾಗತಿಕ ದಕ್ಷಿಣದ ಚಾಂಪಿಯನ್ ಆಗಿ ಹೊರಹೊಮ್ಮಿದೆ" ಎಂದು ಶ್ರೀ ಬಿರ್ಲಾ ಹೇಳಿದರು. ಗುರುತು, ಪಾವತಿ ಮತ್ತು ದತ್ತಾಂಶ ನಿರ್ವಹಣೆಯಲ್ಲಿ ಭಾರತದ ಕ್ರಾಂತಿಕಾರಿ ಸಾರ್ವಜನಿಕ ಮೂಲಸೌಕರ್ಯ ಅಳವಡಿಸಿಕೊಳ್ಳಲು ಅನೇಕ ದೇಶಗಳು ಉತ್ಸುಕವಾಗಿವೆ ಎಂದು ಒತ್ತಿ ಹೇಳಿದರು. ಪ್ರಧಾನಮಂತ್ರಿಯವರ ದೃಷ್ಟಿಕೋನವನ್ನು ಸಾಧಿಸುವಲ್ಲಿ ಜವಾಬ್ದಾರಿಯುತ ಪಾಲುದಾರರಾಗಲು ʻವೊಡಾಫೋನ್-ಐಡಿಯಾʼ ಬದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದರು. ಪ್ರಧಾನಮಂತ್ರಿಯವರ ಮಾರ್ಗದರ್ಶನದಲ್ಲಿ ʻ6ಜಿʼಯಂತಹ ಕ್ಷೇತ್ರಗಳಲ್ಲಿ ಭವಿಷ್ಯದ ತಂತ್ರಜ್ಞಾನಗಳ ಮಾನದಂಡಗಳ ಅಭಿವೃದ್ಧಿಯಲ್ಲಿ ಭಾರತ ಸಕ್ರಿಯವಾಗಿ ತೊಡಗಿಸಿಕೊಂಡಿದೆ ಎಂದು ಅವರು ಉಲ್ಲೇಖಿಸಿದರು. ಸರಕಾರ ನೀಡುತ್ತಿರುವ ಅಪಾರ ಬೆಂಬಲಕ್ಕಾಗಿ ಅವರು ಧನ್ಯವಾದ ಅರ್ಪಿಸಿದರು.

 

ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, 21ನೇ ಶತಮಾನದ ಬದಲಾಗುತ್ತಿರುವ ಕಾಲದಲ್ಲಿ, ಈ ಕಾರ್ಯಕ್ರಮವು ಕೋಟ್ಯಂತರ ಜನರ ಜೀವನವನ್ನು ಬದಲಾಯಿಸುವ ಶಕ್ತಿಯನ್ನು ಹೊಂದಿದೆ ಎಂದರು. ತಂತ್ರಜ್ಞಾನದ ವೇಗದ ಗತಿಯನ್ನು ಅರ್ಥಮಾಡಿಕೊಂಡ ಪ್ರಧಾನಮಂತ್ರಿಯವರು, "ಭವಿಷ್ಯವು ಇಲ್ಲಿ ಮತ್ತು ಈಗ ಇದೆ" ಎಂದು ಹೇಳಿದರು. ದೂರಸಂಪರ್ಕ, ತಂತ್ರಜ್ಞಾನ ಮತ್ತು ಸಂಪರ್ಕದಲ್ಲಿ ಭವಿಷ್ಯದ ಇಣುಕುನೋಟಗಳನ್ನು ಒದಗಿಸಲು ಈ ಸಂದರ್ಭದಲ್ಲಿ ಆಯೋಜಿಸಲಾದ ಪ್ರದರ್ಶನವನ್ನು ಅವರು ಶ್ಲಾಘಿಸಿದರು. ʻ6 ಜಿʼ, ʻಎಐʼ, ಸೈಬರ್ ಭದ್ರತೆ, ಅರೆವಾಹಕಗಳು, ಡ್ರೋನ್ ಅಥವಾ ಬಾಹ್ಯಾಕಾಶ ಕ್ಷೇತ್ರಗಳು, ಆಳ ಸಮುದ್ರ, ಹಸಿರು ತಂತ್ರಜ್ಞಾನ ಅಥವಾ ಇತರ ಕ್ಷೇತ್ರಗಳನ್ನು ಉಲ್ಲೇಖಿಸಿದ ಅವರು, "ಭವಿಷ್ಯವು ಸಂಪೂರ್ಣವಾಗಿ ವಿಭಿನ್ನವಾಗಿರಲಿದೆ ಮತ್ತು ನಮ್ಮ ಯುವ ಪೀಳಿಗೆಯು ತಂತ್ರಜ್ಞಾನ ಕ್ರಾಂತಿಯನ್ನು ಮುನ್ನಡೆಸುತ್ತಿರುವುದು ಸಂತೋಷದ ವಿಷಯವಾಗಿದೆ" ಎಂದು ಹೇಳಿದರು.

ಕಳೆದ ವರ್ಷ ಭಾರತದಲ್ಲಿ ʻ5ಜಿʼ ಸೇವೆಗೆ ಚಾಲನೆ ದೊರೆತದ್ದು ವಿಶ್ವದ ಉಳಿದ ದೇಶಗಳನ್ನು ಚಕಿತಗೊಳಿಸಿತು ಎಂದು ಶ್ರೀ ಮೋದಿ ಸ್ಮರಿಸಿದರು. ʻ5ಜಿʼ ಯಶಸ್ಸಿನ ನಂತರ ಭಾರತವು ವಿರಮಿಸಲಿಲ್ಲ, ಮತ್ತು ಅದನ್ನು ಪ್ರತಿಯೊಬ್ಬ ವ್ಯಕ್ತಿಗೆ ಕೊಂಡೊಯ್ಯುವ ಕೆಲಸವನ್ನು ಕೈಗೆತ್ತಿಕೊಂಡಿದೆ ಎಂದು ಅವರು ಒತ್ತಿ ಹೇಳಿದರು. "ಭಾರತವು ʻ5ಜಿʼಗೆ ಚಾಲನೆ ಹಂತದಿಂದ ʻ5 ಜಿʼ ತಲುಪಿಸುವ ಹಂತಕ್ಕೆ ಸಾಗಿದೆ," ಎಂದು ಅವರು ಹೇಳಿದರು. ʻ5ಜಿʼ ಜಾರಿಯಾದ ಒಂದು ವರ್ಷದೊಳಗೆ, 4 ಲಕ್ಷ ʻ5ಜಿʼ ಬೇಸ್ ಸ್ಟೇಷನ್ಗಳ ಅಭಿವೃದ್ಧಿಯ ಬಗ್ಗೆ ಪ್ರಧಾನಿ ಮಾಹಿತಿ ನೀಡಿದರು, ಇದು ಶೇ.97ರಷ್ಟು ನಗರಗಳು ಮತ್ತು ಶೇ.80ರಷ್ಟು ಜನಸಂಖ್ಯೆಯನ್ನು ಒಳಗೊಂಡಿದೆ. ಒಂದು ವರ್ಷದಲ್ಲಿ ಸರಾಸರಿ ಮೊಬೈಲ್ ಬ್ರಾಡ್ ಬ್ಯಾಂಡ್ ವೇಗವು 3 ಪಟ್ಟು ಹೆಚ್ಚಾಗಿದೆ ಎಂದು ಅವರು ಒತ್ತಿಹೇಳಿದರು. ಬ್ರಾಡ್ಬ್ಯಾಂಡ್  ವೇಗದ ವಿಷಯದಲ್ಲಿ ಭಾರತವು 118ನೇ ಸ್ಥಾನದಿಂದ 43 ನೇ ಸ್ಥಾನಕ್ಕೆ ಏರಿದೆ ಎಂದು ಅವರು ಹೇಳಿದರು. "ಭಾರತವು ದೇಶದಲ್ಲಿ ʻ5ಜಿʼ ಸಂಪರ್ಕಜಾಲವನ್ನು ವಿಸ್ತರಿಸುತ್ತಿರುವುದು ಮಾತ್ರವಲ್ಲದೆ, ʻ6ಜಿʼಯಲ್ಲಿ ನಾಯಕನಾಗಲು ಒತ್ತು ನೀಡುತ್ತಿದೆ" ಎಂದು ಅವರು ಹೇಳಿದರು. ʻ2ಜಿʼ ಅವಧಿಯಲ್ಲಿ ನಡೆದ ಹಗರಣದ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ, ಪ್ರಸ್ತುತ ಸರ್ಕಾರದ ಅಧಿಕಾರಾವಧಿಯಲ್ಲಿ ನಡೆದ ʻ4ಜಿʼ ಜಾರಿಯು ಕಳಂಕಗಳಿಂದ ಮುಕ್ತವಾಗಿದೆ ಎಂದರು. ʻ6ಜಿʼ ತಂತ್ರಜ್ಞಾನದೊಂದಿಗೆ ಭಾರತವು ಮುನ್ನಡೆ ಸಾಧಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

 

ಇಂಟರ್ನೆಟ್ ಸಂಪರ್ಕ ಮತ್ತು ವೇಗದಲ್ಲಿನ ಸುಧಾರಣೆಯು ಕೇವಲ ಶ್ರೇಯಾಂಕ ಮತ್ತು ಸಂಖ್ಯೆಗೆ ಸೀಮಿತವಾಗಿಲ್ಲ. ಅದನ್ನೂ ಮೀರಿ ಅದು ಜೀವನವನ್ನು ಸುಲಭಗೊಳಿಸಲು ಕಾರಣವಾಗುತ್ತದೆ ಎಂದು ಅವರು ಹೇಳಿದರು. ಶಿಕ್ಷಣ, ಔಷಧ, ಪ್ರವಾಸೋದ್ಯಮ ಮತ್ತು ಕೃಷಿಯಲ್ಲಿ ಸುಧಾರಿತ ಸಂಪರ್ಕ ಮತ್ತು ವೇಗದ ಪ್ರಯೋಜನಗಳ ಬಗ್ಗೆ ಅವರು ವಿವರಿಸಿದರು.

"ನಾವು ಪ್ರಜಾಪ್ರಭುತ್ವದ ಶಕ್ತಿಯನ್ನು ನಂಬುತ್ತೇವೆ. ಅಭಿವೃದ್ಧಿಯ ಲಾಭವು ಪ್ರತಿಯೊಂದು ವರ್ಗ ಮತ್ತು ಪ್ರದೇಶವನ್ನು ತಲುಪಬೇಕು, ಪ್ರತಿಯೊಬ್ಬರೂ ಭಾರತದ ಸಂಪನ್ಮೂಲಗಳಿಂದ ಪ್ರಯೋಜನ ಪಡೆಯಬೇಕು, ಪ್ರತಿಯೊಬ್ಬರೂ ಘನತೆಯ ಜೀವನವನ್ನು ಹೊಂದಿರಬೇಕು ಮತ್ತು ತಂತ್ರಜ್ಞಾನದ ಪ್ರಯೋಜನ ಎಲ್ಲರಿಗೂ ತಲುಪಬೇಕು. ಈ ದಿಕ್ಕಿನಲ್ಲಿ ನಾವು ಕ್ಷಿಪ್ರಗತಿಯಲ್ಲಿ ಕೆಲಸ ಮಾಡುತ್ತಿದ್ದೇವೆ", ಎಂದು ಪ್ರಧಾನಿ ಹೇಳಿದರು. "ನನ್ನ ಪ್ರಕಾರ ಇದುವೇ ಇದು ಅತಿದೊಡ್ಡ ಸಾಮಾಜಿಕ ನ್ಯಾಯ" ಎಂದು ಅವರು ಹೇಳಿದರು. "ಬಂಡವಾಳದ ಲಭ್ಯತೆ, ಸಂಪನ್ಮೂಲಗಳ ಲಭ್ಯತೆ ಮತ್ತು ತಂತ್ರಜ್ಞಾನದ ಲಭ್ಯತೆ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಮುದ್ರಾ ಯೋಜನೆಯಡಿ ಅಡಮಾನ ರಹಿತ ಸಾಲಗಳು, ಶೌಚಾಲಯಗಳ ಲಭ್ಯತೆ ಮತ್ತು ʻಜೆಎಎಂʼ (ಜನಧನ್-ಆಧಾರ್-ಮೊಬೈಲ್) ತ್ರಿಶಕ್ತಿಗಳ ಮೂಲಕ ಜಾರಿಗೊಳಿಸಲಾದ ʻನೇರ ನಗದು ವರ್ಗಾವಣೆʼ(ಡಿಬಿಟಿ) ವ್ಯವಸ್ಥೆಯು ಸಾಮಾನ್ಯ ನಾಗರಿಕರಿಗೆ ಈ ಹಿಂದೆ ದೊರೆಯದ ಹಕ್ಕುಗಳನ್ನು ಖಾತ್ರಿಪಡಿಸುತ್ತಿವೆ ಎಂದು ಅವರು ಉಲ್ಲೇಖಿಸಿದರು. ಈ ನಿಟ್ಟಿನಲ್ಲಿ ದೂರಸಂಪರ್ಕ ತಂತ್ರಜ್ಞಾನದ ಪಾತ್ರವನ್ನು ಅವರು ಎತ್ತಿ ತೋರಿಸಿದರು ಮತ್ತು ʻಭಾರತ್ ನೆಟ್ʼ ಸುಮಾರು 2 ಲಕ್ಷ ಗ್ರಾಮ ಪಂಚಾಯಿತಿಗಳನ್ನು ಬ್ರಾಡ್ಬ್ಯಾಂಡ್ ನೊಂದಿಗೆ ಸಂಪರ್ಕಿಸಿದೆ ಎಂದರು. 10,000 ʻಅಟಲ್ ಟಿಂಕರಿಂಗ್ ಲ್ಯಾಬ್ʼಗಳು ಸುಮಾರು 75 ಲಕ್ಷ ಮಕ್ಕಳನ್ನು ಅತ್ಯಾಧುನಿಕ ತಂತ್ರಜ್ಞಾನಕ್ಕೆ ಪರಿಚಯಿಸುತ್ತಿವೆ. ಇಂದು ಪ್ರಾರಂಭಿಸಲಾದ ʻ5 ಜಿ ಬಳಕೆಯ ಪ್ರಯೋಗಾಲಯʼಗಳು ಇದೇ ರೀತಿಯ ಪರಿಣಾಮವನ್ನು ಬೀರುತ್ತವೆ ಎಂಬ ಭರವಸೆಯನ್ನು ಅವರು ವ್ಯಕ್ತಪಡಿಸಿದರು. "ಈ ಪ್ರಯೋಗಾಲಯಗಳು ಯುವಕರನ್ನು ದೊಡ್ಡ ಕನಸು ಕಾಣಲು ಪ್ರೇರೇಪಿಸುತ್ತವೆ ಮತ್ತು ಅವುಗಳನ್ನು ಸಾಧಿಸುವ ವಿಶ್ವಾಸವನ್ನು ನೀಡುತ್ತವೆ," ಎಂದು ಅವರು ಹೇಳಿದರು.

ಕಳೆದ ಕೆಲವು ವರ್ಷಗಳಲ್ಲಿ ಭಾರತದ ನವೋದ್ಯಮ ಪರಿಸರ ವ್ಯವಸ್ಥೆಯು ವಿಶ್ವದಲ್ಲಿ ತನ್ನದೇ ಆದ ಮಹತ್ವದ ಸ್ಥಾನವನ್ನು ಗಳಿಸಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. "ಭಾರತವು ಕಡಿಮೆ ಸಮಯದಲ್ಲಿ 100 ʻಯುನಿಕಾರ್ನ್ʼಗಳನ್ನು ಗಳಿಸಿದೆ ಮತ್ತು ಈಗ ವಿಶ್ವದ ಅಗ್ರ 3 ನವೋದ್ಯಮ ಪರಿಸರ ವ್ಯವಸ್ಥೆಗಳಲ್ಲಿ ಒಂದಾಗಿದೆ" ಎಂದು ಶ್ರೀ ಮೋದಿ ಹೇಳಿದರು. 2014ಕ್ಕೂ ಮೊದಲು ಭಾರತವು ಕೆಲವೇ ನೂರು ನವೋದ್ಯಮಗಳಿಗೆ ನೆಲೆಯಾಗಿತ್ತು, ಆದರೆ ಇಂದು ಆ ಸಂಖ್ಯೆ ಸುಮಾರು ಒಂದು ಲಕ್ಷಕ್ಕೆ ಏರಿದೆ ಎಂದು ಪ್ರಧಾನಿ ಹೇಳಿದರು. ದೇಶದ ನವೋದ್ಯಮಗಳಿಗೆ ಮಾರ್ಗದರ್ಶನ ನೀಡಲು ʻಭಾರತೀಯ ಮೊಬೈಲ್ ಕಾಂಗ್ರೆಸ್ʼ ಕೈಗೊಂಡಿರುವ 'ಆಸ್ಪೈರ್' ಕಾರ್ಯಕ್ರಮದ ಬಗ್ಗೆಯೂ ಪ್ರಧಾನಿ ಮೋದಿ ಪ್ರಸ್ತಾಪಿಸಿದರು ಮತ್ತು ಈ ಕ್ರಮವು ಭಾರತದ ಯುವಕರಿಗೆ ಭಾರಿ ಪ್ರಯೋಜನವನ್ನು ನೀಡುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಭಾರತದ ಪ್ರಯಾಣವನ್ನು ಸ್ಮರಿಸಬೇಕು ಎಂದು ಅವರು ಒತ್ತಿ ಹೇಳಿದರು. ಹಳೆಯ ತಂತ್ರಜ್ಞಾನದಿಂದಾಗಿ ಎದುರಿಸಿದ ತೊಂದರೆಗಳನ್ನು ಸ್ಮರಿಸಿದ ಶ್ರೀ ಮೋದಿ, ಹಿಂದಿನ ಸರ್ಕಾರಗಳು ಇದೇ ಸ್ಥಿತಿಯಲ್ಲಿದ್ದವು ಎಂದು ಗಮನಸೆಳೆದರು. ಹಿಂದಿನ ಸರ್ಕಾರಗಳ ಹಳೆಯ ವಿಧಾನಗಳನ್ನು ಕೆಲಸ ಮಾಡದ ಮೊಬೈಲ್ ಸಾಧನಕ್ಕೆ ಹೋಲಿಕೆ ಮಾಡುವ ಮೂಲಕ ಪ್ರಧಾನಿ ಗಮನಸೆಳೆದರು. "2014ರ ನಂತರ, ಜನರು ಹಳೆಯ ತಂತ್ರಜ್ಞಾನಗಳನ್ನು ಬಳಸುವುದನ್ನು ನಿಲ್ಲಿಸಿದರು, ಬ್ಯಾಟರಿಗಳನ್ನು ಬದಲಾಯಿಸುವುದು ಅಥವಾ ಸಿಸ್ಟಂ ರೀಸ್ಟಾರ್ಟ್ ಮಾಡುವಂತಹ ಕೆಲಸಗಳು ವ್ಯರ್ಥ ಪ್ರಯತ್ನಗಳಾದವು," ಎಂದು ಅವರು ಹೇಳಿದರು.  ಭಾರತವು ಮೊಬೈಲ್ ಫೋನ್ಗಳ ಆಮದುದಾರನಾಗಿತ್ತು, ಆದರೆ ಇಂದು ಭಾರತವು ವಿಶ್ವದ ಎರಡನೇ ಅತಿದೊಡ್ಡ ಮೊಬೈಲ್ ತಯಾರಕ ರಾಷ್ಟ್ರವಾಗಿದೆ ಎಂದು ಅವರು ಸ್ಮರಿಸಿದರು. ಎಲೆಕ್ಟ್ರಾನಿಕ್ಸ್ ಉತ್ಪಾದನೆಯ ವಿಷಯಕ್ಕೆ ಬಂದಾಗ ಹಿಂದಿನ ಸರ್ಕಾರಗಳ ಅವಧಿಯಲ್ಲಿ ದೂರದೃಷ್ಟಿಯ ಕೊರತೆಯ ಬಗ್ಗೆ ಹೇಳಿದ ಶ್ರೀ ಮೋದಿ, ಭಾರತವು ಇಂದು ದೇಶಿಯವಾಗಿ ತಯಾರಿಸಿದ ಸುಮಾರು 2 ಲಕ್ಷ ಕೋಟಿ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ಸ್ ಅನ್ನು ರಫ್ತು ಮಾಡುತ್ತಿದೆ ಎಂದು ಮಾಹಿತಿ ನೀಡಿದರು. ಭಾರತದಲ್ಲಿ ʻಪಿಕ್ಸೆಲ್ ಫೋನ್ʼಗಳನ್ನು ತಯಾರಿಸುವುದಾಗಿ ʻಗೂಗಲ್ʼ ಇತ್ತೀಚೆಗೆ ಘೋಷಿಸಿದ ಬಗ್ಗೆಯೂ ಅವರು ಬೆಳಕು ಚೆಲ್ಲಿದರು. ʻಸ್ಯಾಮ್ಸಂಗ್ ಫೋಲ್ಡ್ ಫೈವ್ʼ ಮತ್ತು ʻಆಪಲ್ ಐಫೋನ್ 15ʼ ಅನ್ನು ಈಗಾಗಲೇ ಇಲ್ಲಿ ತಯಾರಿಸಲಾಗುತ್ತಿದೆ ಎಂದು ಅವರು ಹೇಳಿದರು.

 

ಮೊಬೈಲ್ ಮತ್ತು ವಿದ್ಯುನ್ಮಾನ ಉತ್ಪಾದನೆಯಲ್ಲಿ ಈ ಯಶಸ್ಸನ್ನು ಇನ್ನಷ್ಟು ಮುಂದಕ್ಕೆ ಕೊಂಡೊಯ್ಯುವ ಅಗತ್ಯವನ್ನು ಪ್ರಧಾನಿ ಒತ್ತಿ ಹೇಳಿದರು. "ಟೆಕ್ ಪರಿಸರ ವ್ಯವಸ್ಥೆಯಲ್ಲಿ ಹಾರ್ಡ್ವೇರ್ ಮತ್ತು ಸಾಫ್ಟ್ವೇರ್ ಎರಡರ ಯಶಸ್ಸಿಗೆ, ನಾವು ಭಾರತದಲ್ಲಿ ಬಲವಾದ ಸೆಮಿಕಂಡಕ್ಟರ್ ಉತ್ಪಾದನಾ ವಲಯವನ್ನು ನಿರ್ಮಿಸುವುದು ಮುಖ್ಯ" ಎಂದು ಅವರು ಹೇಳಿದರು. ಅರೆವಾಹಕಗಳ ಅಭಿವೃದ್ಧಿಗೆ 80 ಸಾವಿರ ಕೋಟಿ ರೂ.ಗಳ ʻಪಿಎಲ್ಐʼ ಯೋಜನೆ ಜಾರಿಯಲ್ಲಿದೆ ಎಂದು ಮಾಹಿತಿ ನೀಡಿದರು. ಇಂದು, ಪ್ರಪಂಚದಾದ್ಯಂತದ ಸೆಮಿಕಂಡಕ್ಟರ್ ಕಂಪನಿಗಳು ಭಾರತೀಯ ಕಂಪನಿಗಳ ಸಹಯೋಗದೊಂದಿಗೆ ಸೆಮಿಕಂಡಕ್ಟರ್ ಜೋಡಣೆ ಮತ್ತು ಪರೀಕ್ಷಾ ಸೌಲಭ್ಯಗಳಲ್ಲಿ ಹೂಡಿಕೆ ಮಾಡುತ್ತಿವೆ. ಭಾರತದ ʻಸೆಮಿಕಂಡಕ್ಟರ್ ಮಿಷನ್ʼ ತನ್ನ ದೇಶೀಯ ಬೇಡಿಕೆಯನ್ನು ಮಾತ್ರವಲ್ಲದೆ ವಿಶ್ವದ ಅಗತ್ಯಗಳನ್ನು ಪೂರೈಸುವ ದೃಷ್ಟಿಕೋನದೊಂದಿಗೆ ಮುಂದುವರಿಯುತ್ತಿದೆ ಎಂದು ಅವರು ಹೇಳಿದರು.

ಅಭಿವೃದ್ಧಿಶೀಲ ರಾಷ್ಟ್ರವನ್ನು ಅಭಿವೃದ್ಧಿ ಹೊಂದಿದ ದೇಶವಾಗಿ ಮಾರ್ಪಡಿಸುವಲ್ಲಿ ತಂತ್ರಜ್ಞಾನದ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಡಿಜಿಟಲ್ ತಂತ್ರಜ್ಞಾನದ ಅಭಿವೃದ್ಧಿಯಲ್ಲಿ ಭಾರತವು ಇತರೆ ಯಾವುದೇ ಅಭಿವೃದ್ಧಿ ಹೊಂದಿದ ರಾಷ್ಟ್ರಕ್ಕಿಂತಲೂ ಹಿಂದುಳಿದಿಲ್ಲ ಎಂದರು. ವಿವಿಧ ಕ್ಷೇತ್ರಗಳನ್ನು ತಂತ್ರಜ್ಞಾನದೊಂದಿಗೆ ಸಂಪರ್ಕಿಸುವ ಉಪಕ್ರಮಗಳನ್ನು ಪಟ್ಟಿ ಮಾಡಿದ ಪ್ರಧಾನಮಂತ್ರಿಯವರು, ಲಾಜಿಸ್ಟಿಕ್ಸ್ನಲ್ಲಿ ʻಪಿಎಂ ಗತಿಶಕ್ತಿʼ, ಆರೋಗ್ಯ ಕ್ಷೇತ್ರದಲ್ಲಿ ʻರಾಷ್ಟ್ರೀಯ ಆರೋಗ್ಯ ಮಿಷನ್ʼ ಮತ್ತು ಕೃಷಿ ವಲಯದಲ್ಲಿ ʻಅಗ್ರಿ ಸ್ಟ್ಯಾಕ್ʼನಂತಹ ವೇದಿಕೆಗಳನ್ನು ಉಲ್ಲೇಖಿಸಿದರು. ವೈಜ್ಞಾನಿಕ ಸಂಶೋಧನೆ, ʻಕ್ವಾಂಟಮ್ ಮಿಷನ್ʼ ಮತ್ತು ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನ ಹಾಗೂ  ದೇಶೀಯ ವಿನ್ಯಾಸಗಳು ಮತ್ತು ತಂತ್ರಜ್ಞಾನ ಅಭಿವೃದ್ಧಿಗೆ ಉತ್ತೇಜನ ನೀಡುವಲ್ಲಿ ಭಾರಿ ಹೂಡಿಕೆಗಳ ಬಗ್ಗೆ ಅವರು ಉಲ್ಲೇಖಿಸಿದರು

ಪ್ರಮುಖ ವಿಷಯವಾದ ಸೈಬರ್ ಭದ್ರತೆ ಮತ್ತು ಸಂಪರ್ಕಜಾಲ ಮೂಲಸೌಕರ್ಯದ ಸುರಕ್ಷತೆ ಬಗ್ಗೆ ಪ್ರಧಾನಿ ಮೋದಿ ಗಮನ ಸೆಳೆದರು. ʻಜಿ 20ʼ ಶೃಂಗಸಭೆಯಲ್ಲಿ 'ಸೈಬರ್ ಭದ್ರತೆಯ ಜಾಗತಿಕ ಅಪಾಯಗಳು' ಕುರಿತ ಚರ್ಚೆಯನ್ನು ಸ್ಮರಿಸಿದರು. ಸೈಬರ್ ಭದ್ರತೆಗೆ ಇಡೀ ಉತ್ಪಾದನಾ ಮೌಲ್ಯ ಸರಪಳಿಯಲ್ಲಿ ಸ್ವಾವಲಂಬನೆ ಬಹಳ ಮುಖ್ಯ ಎಂದು ಹೇಳಿದ ಪ್ರಧಾನಿ, ಅದು ಹಾರ್ಡ್ವೇರ್, ಸಾಫ್ಟ್ವೇರ್ ಅಥವಾ ಸಂಪರ್ಕಜಾಲ ಯಾವುದೇ ಆಗಿರಲಿ, ಮೌಲ್ಯ ಸರಪಳಿಯಲ್ಲಿರುವ ಎಲ್ಲವೂ ರಾಷ್ಟ್ರೀಯ ಡೊಮೇನ್ಗೆ ಸೇರಿದಾಗ ಭದ್ರತೆಯನ್ನು ಕಾಪಾಡಿಕೊಳ್ಳುವುದು ಸುಲಭವಾಗುತ್ತದೆ ಎಂದು ಒತ್ತಿ ಹೇಳಿದರು. ವಿಶ್ವದ ಪ್ರಜಾಪ್ರಭುತ್ವ ಸಮಾಜಗಳನ್ನು ಸುರಕ್ಷಿತವಾಗಿಡುವ ಬಗ್ಗೆ ʻಭಾರತೀಯ ಮೊಬೈಲ್ ಕಾಂಗ್ರೆಸ್ʼನಲ್ಲಿ ಚರ್ಚೆ ನಡೆಸುವ ಅಗತ್ಯವನ್ನು ಶ್ರೀ ಮೋದಿ ಒತ್ತಿ ಹೇಳಿದರು

 

ಈ ಹಿಂದೆ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ವಿಷಯಕ್ಕೆ ಬಂದಾಗ ಅವಕಾಶಗಳನ್ನು ಕಳೆದುಕೊಂಡಿದ್ದಕ್ಕಾಗಿ ಪ್ರಧಾನಿ ವಿಷಾದಿಸಿದರು. ಭಾರತದ ಐಟಿ ವಲಯವನ್ನು ಉಲ್ಲೇಖಿಸಿದ ಅವರು, ಈಗಾಗಲೇ ಅಭಿವೃದ್ಧಿ ಹೊಂದಿದ ತಂತ್ರಜ್ಞಾನಗಳಲ್ಲಿ ಭಾರತ ತನ್ನ ಪ್ರತಿಭೆಯನ್ನು ಪ್ರದರ್ಶಿಸಿದೆ. "21ನೇ ಶತಮಾನದ ಈ ಅವಧಿಯು ಭಾರತದ ಚಿಂತನೆಯ ನಾಯಕತ್ವದ ಸಮಯವಾಗಿದೆ" ಎಂದು ಶ್ರೀ ಮೋದಿ ಒತ್ತಿ ಹೇಳಿದರು ಮತ್ತು ಇತರರು ಅನುಸರಿಸಬಹುದಾದ ಹೊಸ ಕ್ಷೇತ್ರಗಳನ್ನು ಕಂಡು ಹಿಡಿಯುವಂತೆ ಚಿಂತಕರಿಗೆ ಕರೆ ನೀಡಿದರು. ಇಂದು ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ಇಡೀ ಜಗತ್ತನ್ನು ಮುನ್ನಡೆಸುತ್ತಿರುವ ʻಯುಪಿಐʼನ ಉದಾಹರಣೆಯನ್ನು ಅವರು ನೀಡಿದರು. "ಭಾರತವು ಯುವ ಜನಶಕ್ತಿ ಮತ್ತು ಸದೃಢ ಪ್ರಜಾಪ್ರಭುತ್ವದ ಶಕ್ತಿಯನ್ನು ಹೊಂದಿದೆ" ಎಂದು ಪ್ರಧಾನಿ ಹೇಳಿದರು. ʻಭಾರತೀಯ ಮೊಬೈಲ್ ಕಾಂಗ್ರೆಸ್ʼನ ಸದಸ್ಯರು, ವಿಶೇಷವಾಗಿ ಯುವ ಸದಸ್ಯರು ಈ ದಿಕ್ಕಿನಲ್ಲಿ ಮುನ್ನಡೆಯಬೇಕು ಎಂದು ಅವರು ಕರೆ ನೀಡಿದರು. "ಇಂದು, ನಾವು ಅಭಿವೃದ್ಧಿ ಹೊಂದಿದ ಭಾರತವಾಗುವ ಗುರಿಯನ್ನು ಸಾಕಾರಗೊಳಿಸುತ್ತಿರುವ ಹೊತ್ತಿನಲ್ಲಿ, ನಾವು ಚಿಂತನೆಯ ನಾಯಕರಾಗಿ ಮುಂದುವರಿದರೆ,  ಆ ಪರಿವರ್ತನೆಯು ಇಡೀ ವಲಯದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರಬಲ್ಲದು," ಎಂದು ಹೇಳುವ ಮೂಲಕ ಪ್ರಧಾನಿ ಮಾತು ಮುಗಿಸಿದರು.

ಕೇಂದ್ರ ಸಂವಹನ ಸಚಿವ ಶ್ರೀ ಅಶ್ವಿನಿ ವೈಷ್ಣವ್, ಕೇಂದ್ರ ಸಂವಹನ ಖಾತೆ ಸಹಾಯಕ ಸಚಿವ ಶ್ರೀ ದೇವುಸಿನ್ಹ ಚೌಹಾಣ್, ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್ ಅಧ್ಯಕ್ಷ ಶ್ರೀ ಆಕಾಶ್ ಎಂ ಅಂಬಾನಿ, ಭಾರ್ತಿ ಎಂಟರ್ಪ್ರೈಸಸ್ ಅಧ್ಯಕ್ಷ ಶ್ರೀ ಸುನಿಲ್ ಭಾರ್ತಿ ಮಿತ್ತಲ್ ಮತ್ತು ಆದಿತ್ಯ ಬಿರ್ಲಾ ಗ್ರೂಪ್ನ ಅಧ್ಯಕ್ಷ ಶ್ರೀ ಕುಮಾರ್ ಮಂಗಲಂ ಬಿರ್ಲಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿನ್ನೆಲೆ

'100 5ಜಿ ಲ್ಯಾಬ್ಸ್ ಉಪಕ್ರಮ'ವು, ಭಾರತದ ವಿಶಿಷ್ಟ ಅಗತ್ಯಗಳು ಮತ್ತು ಜಾಗತಿಕ ಬೇಡಿಕೆಗಳನ್ನು ಪೂರೈಸುವ ʻ5 ಜಿʼ ಅನ್ವಯಿಕೆಗಳ ಅಭಿವೃದ್ಧಿಯನ್ನು ಉತ್ತೇಜಿಸುವ ಮೂಲಕ 5 ಜಿ ತಂತ್ರಜ್ಞಾನಕ್ಕೆ ಸಂಬಂಧಿಸಿದ ಅವಕಾಶಗಳನ್ನು ಅರಿತುಕೊಳ್ಳುವ ಪ್ರಯತ್ನವಾಗಿದೆ. ಈ ವಿಶಿಷ್ಟ ಉಪಕ್ರಮವು ಶಿಕ್ಷಣ, ಕೃಷಿ, ಆರೋಗ್ಯ, ವಿದ್ಯುತ್, ಸಾರಿಗೆ ಮುಂತಾದ ವಿವಿಧ ಸಾಮಾಜಿಕ ಆರ್ಥಿಕ ಕ್ಷೇತ್ರಗಳಲ್ಲಿ ನಾವೀನ್ಯತೆಯನ್ನು ಉತ್ತೇಜಿಸುತ್ತದೆ ಮತ್ತು 5ಜಿ ತಂತ್ರಜ್ಞಾನದ ಬಳಕೆಯಲ್ಲಿ ದೇಶವನ್ನು ಮುಂಚೂಣಿಗೆ ಕೊಂಡೊಯ್ಯುತ್ತದೆ. ಈ ಉಪಕ್ರಮವು ದೇಶದಲ್ಲಿ ʻ6ಜಿ-ಸನ್ನದ್ಧ ಶೈಕ್ಷಣಿಕ ಮತ್ತು ನವೋದ್ಯಮ ಪರಿಸರ ವ್ಯವಸ್ಥೆಯನ್ನು ನಿರ್ಮಿಸಲು ಒಂದು ಪ್ರಮುಖ ಹೆಜ್ಜೆಯಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ, ಈ ಉಪಕ್ರಮವು ರಾಷ್ಟ್ರೀಯ ಭದ್ರತೆಗೆ ನಿರ್ಣಾಯಕವಾದ ದೇಶೀಯ ಟೆಲಿಕಾಂ ತಂತ್ರಜ್ಞಾನದ ಅಭಿವೃದ್ಧಿಯತ್ತ ಒಂದು ಮಹತ್ವದ ಹೆಜ್ಜೆಯಾಗಿದೆ.

ʻಇಂಡಿಯಾ ಮೊಬೈಲ್ ಕಾಂಗ್ರೆಸ್ʼ(ಐಎಂಸಿ) ಏಷ್ಯಾದ ಅತಿದೊಡ್ಡ ಟೆಲಿಕಾಂ, ಮಾಧ್ಯಮ ಮತ್ತು ತಂತ್ರಜ್ಞಾನ ವೇದಿಕೆಯಾಗಿದ್ದು, 2023 ರ ಅಕ್ಟೋಬರ್ 27 ರಿಂದ 29 ರವರೆಗೆ ನಡೆಯಲಿದೆ. ದೂರಸಂಪರ್ಕ ಮತ್ತು ತಂತ್ರಜ್ಞಾನದಲ್ಲಿ ಭಾರತದ ಅದ್ಭುತ ಪ್ರಗತಿಯನ್ನು ಎತ್ತಿ ತೋರಿಸಲು, ಮಹತ್ವದ ಪ್ರಕಟಣೆಗಳನ್ನು ಹೊರಡಿಸಲು ಮತ್ತು ನವೋದ್ಯಮಗಳಿಗೆ ತಮ್ಮ ನವೀನ ಉತ್ಪನ್ನಗಳು ಮತ್ತು ಪರಿಹಾರಗಳನ್ನು ಪ್ರದರ್ಶಿಸಲು ಅವಕಾಶವನ್ನು ಒದಗಿಸಲು ಈ ಕಾರ್ಯಕ್ರಮವು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ.

'ಗ್ಲೋಬಲ್ ಡಿಜಿಟಲ್ ಇನ್ನೋವೇಶನ್' ಎಂಬ ಧ್ಯೇಯವಾಕ್ಯದೊಂದಿಗೆ, ʻಐಎಂಸಿ-2023ʼ ಪ್ರಮುಖ ಅತ್ಯಾಧುನಿಕ ತಂತ್ರಜ್ಞಾನಗಳ ಡೆವಲಪರ್, ತಯಾರಕ ಮತ್ತು ರಫ್ತುದಾರರಾಗಿ ಭಾರತದ ಸ್ಥಾನವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ.  ಮೂರು ದಿನಗಳ ಸಮ್ಮೇಳನದಲ್ಲಿ 5ಜಿ, 6ಜಿ ಮತ್ತು ಕೃತಕ ಬುದ್ಧಿಮತ್ತೆ (ಎಐ) ನಂತಹ ತಂತ್ರಜ್ಞಾನಗಳನ್ನು ವಿಶೇಷವಾಗಿ ಪ್ರದರ್ಶಿಸಲಾಗುವುದು ಮತ್ತು ಸೆಮಿಕಂಡಕ್ಟರ್ ಉದ್ಯಮ, ಹಸಿರು ತಂತ್ರಜ್ಞಾನ, ಸೈಬರ್ ಭದ್ರತೆ ಇತ್ಯಾದಿಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲಾಗುವುದು.

ಈ ವರ್ಷ, ʻಐಎಂಸಿʼಯು 'ಆಸ್ಪೈರ್' ಎಂಬ ನವೋದ್ಯಮ ಕಾರ್ಯಕ್ರಮವನ್ನು ಪರಿಚಯಿಸುತ್ತಿದೆ. ಇದು ಹೊಸ ಉದ್ಯಮಶೀಲತಾ ಉಪಕ್ರಮಗಳು ಮತ್ತು ಸಹಯೋಗಗಳಿಗೆ ವೇಗ ನೀಡುವ ಉದ್ದೇಶದಿಂದ ನವೋದ್ಯಮಗಳು, ಹೂಡಿಕೆದಾರರು ಮತ್ತು ಸ್ಥಾಪಿತ ವ್ಯವಹಾರಗಳ ನಡುವೆ ಸಂಪರ್ಕವನ್ನು ಬೆಳೆಸುತ್ತದೆ.

ʻಐಎಂಸಿ-2023ʼರಲ್ಲಿ ಸುಮಾರು 5000 ಸಿಇಒ ಮಟ್ಟದ ಪ್ರತಿನಿಧಿಗಳು, 230 ಪ್ರದರ್ಶಕರು, 400 ನವೋದ್ಯಮಗಳು ಮತ್ತು ಇತರ ಪಾಲುದಾರರು ಸೇರಿದಂತೆ ಸುಮಾರು 22 ದೇಶಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ.

 

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Solar powers India as electricity demand hits record high of 256 GW

Media Coverage

Solar powers India as electricity demand hits record high of 256 GW
NM on the go

Nm on the go

Always be the first to hear from the PM. Get the App Now!
...
Today, Sikkim has beautifully showcased the spirit of “Ek Bharat, Shreshtha Bharat”: PM Modi in Gangtok
April 28, 2026
Known for Serenity and Enterprise, Sikkim Sees Rapid Progress :PM
One of the best things I noticed all along the way, was the cleanliness of Sikkim's roads: PM
No garbage as far as the eye can see,cleanliness in the air too, cleanliness on the roads as well, the people of Sikkim, are true protectors of nature, its brand ambassadors: PM
We are placing maximum focus on connectivity and infrastructure in Sikkim; In recent years, hundreds of kilometers of highways have been constructed here, Work is progressing rapidly to connect every village with roads: PM
Another vast horizon of possibilities for Sikkim lies in sports;The youth here have showcased their capability and talent on grand stages: PM
Our government is committed to ensuring that alongside robust health infrastructure, people also receive affordable medical treatment: PM
Previously, we provided Ayushman cards to ensure free healthcare for the poor; Now, this facility is being extended to all senior citizens aged 70 years and above, medicines are available at highly affordable prices at Jan Aushadhi Kendras: PM
Sikkim's model of organic and natural farming serves as an inspiration for the entire nation : PM
The lifestyle of Sikkim and Sikkim’s resolve have today become an integral part of the nation's vision: PM

भारत माता की जय।

भारत माता की जय।

भारत माता की जय।

सिक्किम के राज्यपाल श्री ओम माथुर जी, यहां के लोकप्रिय, ऊर्जावान युवा और मेरे परम मित्र श्री प्रेम सिंह तमांग जी, संसद में मेरे साथी श्री दोरजी शेरिंग लेपचा जी, डॉ. इन्द्र हांग सुब्बा जी, श्री दिली राम थापा जी और सिक्किम के मेरे प्यारे भाइयों और बहनों।

समग्र सिक्किम वासी लाई स्वर्ण जयंती को धेरै धेरै बधाई तथा शुभकामना, नमस्ते, टाशी डिले!

खाम-रि-मो! तपाईंहरू कॉस्तो हुनु-हुन्छ ?

साथियों,

मैं कल दोपहर बाद गंगटोक पहुंचा था, और यहां मेरे आने से पहले, मैं बंगाल चुनावों की गहमा-गहमी में जरा व्यस्त था। यहां आते ही एक नई अनुभूति, एक नया आनंद, चारों तरफ उत्सव का माहौल, मन खुशियों से भर गया। रात में हुई बारिश, फिर सुबह की ठंडक और ये खिली हुई धूप, सिक्किम के रंग ही निराले हैं।

साथियों,

पूरब का स्वर्ग सिक्किम, ऑर्किड्स का गार्डन सिक्किम, इसका अप्रतिम सौंदर्य, यहां की शांति, यहां का आध्यात्मिक आनंद, ये अनुभूति बड़े सौभाग्य से मिलती है। आज मैं यहां के ऑर्किड्स को भी देखने गया था। मेरे लिए जितना समय तय हुआ था, मैं ज्यादा ही समय वहां बिता रहा था। और मैं देशभर के टूरिस्टों को, प्रकृति प्रेमी टूरिस्टों को, अगर उन्होंने सिक्किम का ये ऑर्किड नहीं देखा है, तो कुछ भी नहीं देखा है। और मुझे विश्वास है कि इस बार टूरिस्ट, सिक्किम के टूरिज्म के सारे आंकड़े इस बार पार कर देंगे। ऑर्किड में मैंने देखा प्रकृति के वो रंग, उनका उल्लास, मेरा मन अभी भी उसी में डूबा हुआ है।

साथियों,

आज हमें सिक्किम की 50 वर्ष की यात्रा का उत्सव मनाने का अवसर मिला है। जब अवसर इतना ऐतिहासिक हो और इतने दिव्य माहौल में हो रहा हो, तो उसकी भव्यता कई गुना बढ़ जाती है। पालजोर का ये स्टेडियम आज उसी अद्भुत आभा से भरा हुआ है। यहां जो सांस्कृतिक कार्यक्रम हुए, कलाकारों की मुग्ध कर देने वाली प्रस्तुतियां हुईं। सिक्किम के आप लोगों का जो उत्साह दिखा, सामने पहाड़ों और आसमान में प्रकृति की सुंदर छटा दिखी। ऐसा लग रहा था, जैसे प्रकृति और संस्कृति साथ मिलकर जीवंत हो उठी। वाकई ये स्मूर्तियां हमेशा मेरे दिल में बनी रहेगी। और मैं जो भी कोरियोग्राफी करने वाले लोग होंगे, जो भी गाने वाले लोग होंगे, सबको बधाई देता हूं। और आज का ये कार्यक्रम मैं चाहूंगा कि ये टीवी, मीडिया वाले, दूरदर्शन वाले देश को बार-बार दिखाएं। जब देश में राजनीतिक स्वार्थ के चलते भाषावाद, प्रांतवाद, ऊंच-नीच, देश में भेदभाव के लिए लगातार कोशिश हो रही है, आज सिक्किम ने ‘एक भारत श्रेष्ठ भारत’ के दर्शन करा दिए। उन्होंने इस छोटे से कार्यक्रम में पूरा हिंदुस्तान आंखों के सामने खड़ा कर दिया। और अभी भी जो उन्होंने बैठने की रचना की है, मुझे ऊपर से दिखता है, पूरा हिंदुस्तान है, और जो जिस प्रदेश का है, वैसे ही परिवेश है, उधर गुजरात तो गुजराती कपड़ों में लोग बैठे हैं। वाकई-वाकई आपने दिल जीत लिया है। ये मोदी का नहीं, पूरे हिंदुस्तान का दिल जीत लिया है आज। यही तो भारत भक्ति होती है, यही तो देशभक्ति होती है। नई पीढ़ी में इसी से देशभक्ति के भाव जगते हैं। बहुत-बहुत बधाई आप लोगों को।

साथियों,

सिक्किम आने पर मुझे इसलिए भी बहुत खुशी है, क्योंकि पिछली बार मैं खराब मौसम के कारण यहां तक नहीं पहुंच पाया था। मुझे बागडोगरा से ऑनलाइन ही आपसे जुड़ना पड़ा था। आपसे यहां आकर ना मिल पाने की वो कसक मेरे मन में बनी हुई थी। और जब भी प्रेम सिंह जी मिलते थे ना, तो मेरी आंखें झुक जाती थी कि आपने इतनी मेहनत की, मैं आ नहीं पाया, और इसलिए मैं इंतजार में था, वो इंतजार भी आज इस अवसर के माध्यम से पूरा हुआ है।

साथियों,

सिक्किम के लोगों से मिलना मुझे हमेशा एक अलग सुकून देता है। आपकी ये सौम्यता, आपकी ये सादगी, आपके चेहरों की मुस्कान अद्भुत है। यहां आने से पहले भी मैं सिक्किम के कई प्रतिभाशाली लोगों से मिला। सिक्किम के प्रबुद्ध लोग, पद्म सम्मान विजेता, आर्टिस्ट और फुटबॉलर्स उनसे अलग-अलग विषयों पर मेरी बात हुई।

साथियों,

कल शाम को जो रोड शो हुआ, मैं उसे भी अब तक भूल नहीं पाया हूं, और शायद कभी नहीं भूल पाऊंगा। हाथों में हमारा ये प्यारा तिरंगा। लगातार भारत माता का जयकारा, और वंदे मातरम का उद्घोष, पूरा वातावरण ‘एक भारत श्रेष्ठ भारत’ की तस्वीरों से रंगा हुआ था। गंजू लामा द्वार से लोकभवन के रास्ते तक, जिस तरह सिक्किम के मेरे भाई-बहन अपना प्यार देने उमड़े, जिस तरह सभी जातीय समुदायों ने स्वागत किया, हर समुदाय की अपनी वेशभूषा, अपना-अपना संगीत, अपनी-अपनी परंपराएं, पूरा माहौल ही एक बड़े महोत्सव में बदल गया था। ये दृश्य ऐसा था, जैसे प्रकृति की गोद में अलग-अलग रंग खिले हों। बड़ी संख्या में मेरी माताएं-बहनें, बच्चे और बुजुर्ग भी अपना आशीर्वाद देने आए थे। और जो एक सबसे अच्छी बात मुझे पूरे रास्ते भर दिखी, वो थी सिक्किम की सड़कों की स्वच्छता, आप सबको सैल्यूट। दूर-दूर तक कोई गंदगी नहीं, वायु में भी स्वच्छता, सड़कों पर भी स्वच्छता, सिक्किम के आप लोग प्रकृति के पक्के वाले संरक्षक हैं, ब्रैंड एंबेसेडर हैं। मैं फिर देशवासियों को कहता हूं, सिक्किम आइए। कितना साफ-सुथरा, स्वच्छ बनाए रखा है सिक्किम को।

भाइयों-बहनों,

कल रोड शो जो हुआ, और अभी इस आयोजन के लिए मैं आप सभी का और सभी कलाकारों का हृदय से बहुत-बहुत आभार प्रकट करता हूं, आपका अभिनंदन करता हूं। मैं सिक्किम के लोगों को, और सभी देशवासियों को 50 वर्ष की इस महत्वपूर्ण यात्रा के इस उत्सव की बहुत-बहुत बधाई देता हूं। मैं आपको विश्वास दिलाता हूं, आपके प्यार, आपका स्नेह, आपके आशीर्वाद का ये कर्ज, इसे चुकाने के लिए मैं कोई कोर-कसर बाकी नहीं छोडूंगा।

साथियों,

सिक्किम की यात्रा मानवीय मूल्यों की यात्रा है। ये विकास और विरासत को साथ लेकर चलने की यात्रा है। सिक्किम की अनेक पीढ़ियों ने इस यात्रा को आगे बढ़ाया है। गत् 50 वर्ष में जिन-जिन लोगों ने सिक्किम को आगे बढ़ाया है, यहां तक पहुंचाया है, उन सबको मैं आज हृदय से बहुत-बहुत बधाई देता हूं, उनका अभिनंदन करता हूं। जिस समय, जिसको जो करना था, उसने किया, उसने सिक्किम को दिया। अब, इसकी ज़िम्मेदारी हमारे पर है, हमारे ऊपर है। सिक्किम की सरकार, मेरे मित्र प्रेम सिंह जी के नेतृत्व में पूरी ईमानदारी से सिक्किम की विरासत को संजोने और विकास को गति देने का काम कर रही है। हमारे लिए सिक्किम, नॉर्थ ईस्ट केवल देश का एक अहम हिस्सा ही नहीं है, बल्कि ये भारत की ‘अष्ट लक्ष्मी’ हैं। नॉर्थ ईस्ट ये हिंदुस्तान की ‘अष्ट लक्ष्मी’ हैं। इसलिए, हम ‘एक्ट ईस्ट’ की पॉलिसी पर तो काम कर ही रहे हैं, हमने नॉर्थ ईस्ट के लिए ‘एक्ट फास्ट’ का संकल्प भी लिया है। और इसलिए ‘एक्ट ईस्ट’, ‘एक्ट फास्ट’। आज भी यहाँ हजारों करोड़ रुपए की 30 से ज्यादा परियोजनाओं का लोकार्पण और शिलान्यास हुआ है। इनमें रोड, पावर, टूरिज्म, हेल्थ, एजुकेशन, हर तरह के प्रोजेक्ट शामिल हैं। नॉर्थ सिक्किम के क्षेत्रों में 2023 के बाद जो चुनौतियां आईं, उन्हें भी ध्यान में रखा गया है। जहां-जहां कनेक्टिविटी प्रभावित हुई, वहां उसे फिर से मजबूत करने पर फोकस किया गया है। मैं इनके लिए सिक्किम के आप सभी लोगों को बहुत-बहुत बधाई देता हूं।

साथियों,

हमारे सिक्किम की बहुत बड़ी ताकत उसकी टूरिज़्म इकोनॉमी है। सिक्किम का क्षेत्रफल देश के कुल क्षेत्रफल का एक परसेंट से भी कम है, लेकिन देश की 25 परसेंट से ज्यादा फ्लोरल diversity हमारे सिक्किम में मिलती है। यहाँ पक्षियों की करीब 500 प्रजातियाँ, बटरफ़्लाइज़ की करीब 700 प्रजातियाँ, खूबसूरत फॉरेस्ट कवर, कंचनजंगा का अद्भुत आकर्षण, कितना कुछ है। इसलिए हर कोई बार-बार सिक्किम आना चाहता है।

साथियों,

सिक्किम के टूरिज्म से यहां बहुत बड़ी संख्या में लोगों की आय जुड़ी हुई है। और टूरिज्म तभी बढ़ता है, उस राज्य का इंफ्रास्ट्रक्चर जब बढ़िया हो, तब बढ़ता है। इसीलिए हम सिक्किम की कनेक्टिविटी और यहां इंफ्रास्ट्रक्चर पर सबसे ज्यादा फोकस कर रहे हैं। बीते वर्षों में यहाँ सैकड़ों किलोमीटर हाइवेज का निर्माण हुआ है। गाँव-गाँव तक सड़कों को पहुंचाने के लिए तेजी से काम चल रहा है। ऐसे आधुनिक इंफ्रास्ट्रक्चर पहले जिनकी कल्पना भी नहीं होती थी, आज वो हकीकत बन रहे हैं। बागडोगरा से गंगटोक तक एक्सप्रेसवे का निर्माण हो, सेवोक-रंगपो रेल लाइन हो, ये प्रोजेक्ट सिक्किम को पूरे देश से जोड़ने का जरिया बन रहे हैं। यहां नए नेशनल हाईवेज, उसका निर्माण भी कराया जा रहा है। गंगटोक जैसे शहरों में रिंग रोड जैसी परियोजनाएं भविष्य के लिए जरूरी हैं। इस दिशा में भी काम आगे बढ़ रहा है।

भाइयों-बहनों,

बीजेपी सरकार जो काम आज कर रही है, वो पहले भी हो सकते थे, लेकिन काँग्रेस की सरकारों ने हमेशा सिक्किम के विकास को पीछे धकेला। सेवोक-रंगपो रेल लाइन का ही उदाहरण लीजिए, इस प्रोजेक्ट को 2008-2009 में मंजूरी मिली थी, लेकिन जमीन पर काम नहीं हुआ, कागज पर लटका रहा। परियोजना फाइलों में ही पड़ी रही। केंद्र में बीजेपी सरकार आने के बाद विकास को फिर से गति मिली है। पहली बार सिक्किम तक रेल पहुँचने जा रही है।

साथियों,

पर्यटन को बढ़ावा देने के लिए हमें नए ideas की भी जरूरत होती है। आज हम इसी सोच के साथ काम कर रहे हैं। भालेढूंगा, येन-येंग और पेलिंग में रोपवे का निर्माण इसी का उदाहरण है। भालेढूंगा में स्काइवॉक का भी निर्माण कराया जा रहा है। और अब सिंहशोर Bridge पर ग्लास डेक स्काइवॉक भी बनाने की तैयारी है। नाथूला और नामली जैसी जगहों पर बार्डर एक्सपीरियंस को बेहतर बनाने का काम भी हो रहा है।

साथियों,

हमारी सरकार के इन प्रयासों से आपका जीवन आसान होगा, सिक्किम आने वाले पर्यटकों की संख्या और बढ़ेगी, और आपकी आमदनी में भी वृद्धि होगी। और मैं देशभर के टूरिस्टों को हमेशा आग्रह करता हूं। आप यात्रा के लिए जाएं, आप एडवेंचर टूरिज्म के लिए जाएं, आप एनवायरमेंट टूरिज्म के लिए जाएं, लेकिन जहां जाए, वहां जो लोकल उत्पाद होते हैं, आपकी यात्रा के बजट का 5% वहां से कुछ ना कुछ खरीदना कंपलसरी होना चाहिए। लोकल को वोकल बनाने का रास्ता यहीं से शुरू होता है। आप जहां जाए, वहीं का खाना खाएं, जहां जाए वहीं की चीजें खरीदें, Souvenir के तौर पर ले जाएं। ताकि यहां के लोगों को दूर-दूर पहाड़ों में रहने वाले छोटे-छोटे समूहों को ये जो इतनी बड़ी मात्रा में मेरी बहनें आई हैं, ये इतनी बढ़िया-बढ़िया चीजें बनाती हैं सेल्फ हेल्प ग्रुप में, वो खरीदने वाले लोग देश भर से आने चाहिए और इससे यहां रोजगार के अवसर भी बढ़ेंगे।

साथियों,

सिक्किम में इको-वेलनेस टूरिज़्म का भी बहुत स्कोप है, हम इसे भी प्रमोट कर रहे हैं। स्थानीय लोगों को टूरिज़्म से ज्यादा से ज्यादा आय हो, इसके लिए 1 हजार होमस्टे भी बिल्ड किए जा रहे हैं। Adventure टूरिज़्म के लिए भी इंफ्रास्ट्रक्चर को सपोर्ट किया जा रहा है।

साथियों,

सिक्किम के लिए संभावनाओं का एक और आसमान स्पोर्ट्स में भी है, खेलकूद में भी है। यहाँ के युवाओं ने स्पोर्ट्स में अपनी क्षमता और प्रतिभा को बड़े-बड़े मंचों पर साबित किया है। फुटबाल, बॉक्सिंग, आर्चरी, इन खेलों में यहाँ से निकले खिलाड़ियों ने सिक्किम और देश का नाम रोशन किया है।

साथियों,

इन प्रतिभाओं को आगे बढ़ाने के लिए हम ‘खेलो इंडिया’ और ‘फिट इंडिया’ जैसे मूवमेंट चला रहे हैं। यहाँ की State Sports Academy को भी पुनर्जीवित किया गया है। सिक्किम प्रिमियर लीग जैसी sports events को बढ़ावा दिया जा रहा है, ताकि ज्यादा से ज्यादा संख्या में खिलाड़ियों को खेलने का मौका मिले, उनके खेलने में सुधार आए।

साथियों,

यहाँ जसलाल प्रधान जी के नाम पर state-of-the-art boxing academy का भी प्रस्ताव है। इंटीग्रेटेड स्पोर्ट्स और कल्चरल विलेज जैसे प्रोजेक्ट भी आगे बढ़ रहे हैं। इससे सिक्किम के युवाओं को बेहतर सुविधाएं मिलेंगी, और वे अपने खेल को और चमका भी पाएंगे।

साथियों,

आज जिन प्रोजेक्ट्स का लोकार्पण और शिलान्यास हुआ है, उनमें हेल्थ सेक्टर से जुड़े कई बड़े काम भी शामिल हैं। एक समय था, जब सिक्किम और नॉर्थ ईस्ट को कांग्रेस की सरकारों ने पूरी तरह नजर अंदाज कर रखा था। यहाँ स्वास्थ्य सेवाएं बहुत सीमित होती थीं। इस कारण से टूरिस्ट भी यहाँ आने में संकोच करते थे, लेकिन आज वो चुनौती भी खत्म हो रही है। आज सिक्किम में करीब 200 आयुष्मान आरोग्य मंदिर काम कर रहे हैं। आज यहाँ 4 डिस्ट्रिक्ट हॉस्पिटल्स हैं, Tertiary care हॉस्पिटल है, वेलनेस सेंटर्स हैं, यहाँ आयुष सुविधाओं का भी हजारों लोग लाभ ले रहे हैं। ड्रेजॉन्ग नामग्यल सोवा रिग्पा हॉस्पिटल के लोकार्पण के बाद सिक्किम के हेल्थकेयर सिस्टम को और बूस्ट मिलेगा।

भाइयों-बहनों,

हेल्थ इंफ्रास्ट्रक्चर के साथ-साथ लोगों को सस्ता इलाज भी मिले, हमारी सरकार इसके लिए भी कमिटेड है। पहले हमने गरीबों को मुफ्त इलाज के लिए आयुष्मान कार्ड दिये थे। अब ये सुविधा 70 वर्ष और उससे ऊपर वाले उम्र के सभी बुजुर्गों को भी दी जा रही है। साथ ही, जन औषधि केन्द्रों पर दवाएं भी बेहद सस्ते दामों पर उपलब्ध हैं। इन प्रयासों से यहाँ के लोगों का जीवन तो आसान हुआ ही है, इलाज पर होने वाला आपका खर्च भी कम हो रहा है।

साथियों,

आज आर्थिक प्रगति और संसाधनों को लेकर विश्व का नज़रिया तेजी से बदल रहा है। आज दुनिया sustainable lifestyle की बात कर रही है। आज क्लीन एनर्जी पर दुनिया का फोकस है। आज organic फूड्स को प्राथमिकता दी जा रही है। मुझे खुशी है कि हमारा नॉर्थ ईस्ट और सिक्किम इस futuristic ग्रोथ का बड़ा केंद्र है। सिक्किम ने पूरे देश को दिशा दिखाई है। सिक्किम ने तो 10 साल पहले, 2016 में ही पूरे राज्य को organic state घोषित कर दिया था। हमारा डेमाजोंग अब केवल राइस उत्पादन के लिए नहीं जाना जाता, उसकी पहचान अब organic राइस के लिए होने लगी है। बड़ी इलायची, अदरक, हल्दी, एवोकाडो, कीवी, ऐसे कितने ही उत्पाद देश और दुनिया के बाजार तक पहुँच रहे हैं। सिक्किम में medicinal plants की भी सैकड़ों प्रजातियाँ पाई जाती हैं। ये भी स्थानीय लोगों की आय बढ़ाने का जरिया बन रही है।

साथियों,

Organic और प्राकृतिक खेती का सिक्किम का मॉडल, ये पूरे देश के लिए एक प्रेरणा है। सिक्किम की लाइफस्टाइल, सिक्किम के संकल्प, आज ये देश के विज़न का हिस्सा बन चुके हैं। यहां प्राकृतिक खेती को बढ़ावा देने अब ऑर्गेनिक प्रोसेसिंग प्लांट भी शुरू किये गए हैं। इससे किसानों को बाजार से सीधा जुड़ने का मौका मिल रहा है।

साथियों,

सिक्किम की आर्थिक प्रगति में एक बहुत बड़ी भूमिका यहाँ के सेल्फ हेल्प ग्रुप्स और इन महिलाओं की भी है। इन सेल्फ हेल्प ग्रुप्स के प्रॉडक्ट्स बड़े बाज़ारों तक पहुंचे, डिजिटल इंडिया इसमें एक बड़ी भूमिका निभा रहा है। “स्वयं सिक्किम” जैसे प्लेटफॉर्म आज इन महिलाओं को सशक्त बना रहे हैं।

साथियों,

क्लीन एनर्जी के क्षेत्र में सिक्किम की व्यापक क्षमता मौजूद है। यहाँ के पर्यावरण को भी संरक्षित रखते हुए, हमें सिक्किम के इस potential का और इस्तेमाल करना है। मैं जानता हूं, पर्यावरण संरक्षण, ये सिक्किम के लोगों का स्वभाव है। जब देश ने ‘एक पेड़ मां के नाम’ की पहल शुरू की थी, सिक्किम के लोगों ने कर्तव्य भाव से आगे बढ़ाया, और मुख्यमंत्री जी ने यहां के लोग को प्रेरणा देकर के “मेरो रुख मेरो संतति” पहल भी चला रहे हैं। इसके तहत हर शिशु के जन्म पर 108 पेड़ लगाए जाते हैं। मुझे लगता है ये पहल पूरी दुनिया के लिए एक प्रेरणा है। हमें पर्यावरण से जुड़े अपने प्रयासों को और निष्ठा से आगे बढ़ाना है। ये हमारी ऐसी विरासत है, जो हमें अगली पीढ़ी के लिए सुरक्षित रखना है।

साथियों,

सिक्किम और तेज गति से आगे बढ़े, विकसित भारत के सपने को गति दे, हमें इसके लिए मिलकर मेहनत करनी है। हमें सिक्किम को नई ऊंचाइयों पर लेकर जाना है। इसी संकल्प के साथ एक बार फिर, आप सभी को इस अवसर पर शुभकामनाएं देता हूं। आप सभी के उज्ज्वल भविष्य की कामना करता हूं। और आज 50 वर्ष की यात्रा अब हमें दो पड़ाव पूरे करने हैं। जब

सिक्किम की यात्रा के 100 साल होंगे तब क्या करेंगे? सिक्किम की यात्रा के 75 साल होंगे तब तक क्या करेंगे? और देश की आजादी के 100 साल होंगे, विकसित भारत का सपना जो है, 2047 उसके लिए आज से तैयारी शुरू कर करके संकल्प के साथ हम आगे बढ़े। इसी भावना के साथ फिर एक बार हृदय से मैं आप सबका बहुत-बहुत आभार व्यक्त करता हूं। बहुत-बहुत धन्यवाद। मेरे साथ बोलिए-

भारत माता की जय। भारत माता की जय। भारत माता की जय।

वंदे मातरम। वंदे मातरम। वंदे मातरम।

वंदे मातरम। वंदे मातरम। वंदे मातरम।

वंदे मातरम। वंदे मातरम। वंदे मातरम।

वंदे मातरम।