ಸ್ಮರಣಾರ್ಥ ಅಂಚೆಚೀಟಿ ಬಿಡುಗಡೆ ಮಾಡಿದರು
"ಬೆಂಗಳೂರಿನ ಆಗಸವು ನವ ಭಾರತದ ಸಾಮರ್ಥ್ಯಗಳಿಗೆ ಸಾಕ್ಷಿಯಾಗಿದೆ. ಈ ಹೊಸ ಎತ್ತರವೇ ನವ ಭಾರತದ ವಾಸ್ತವವಾಗಿದೆ”
"ದೇಶವನ್ನು ಬಲಪಡಿಸಲು ಕರ್ನಾಟಕದ ಯುವಜನತೆ ತಮ್ಮ ತಾಂತ್ರಿಕ ಪರಿಣತಿಯನ್ನು ರಕ್ಷಣಾ ಕ್ಷೇತ್ರದಲ್ಲಿ ತೊಡಗಿಸಬೇಕು"
"ಹೊಸ ಚಿಂತನೆ, ಹೊಸ ವಿಧಾನದೊಂದಿಗೆ ದೇಶವು ಮುನ್ನಡೆದರೆ, ಅದರ ವ್ಯವಸ್ಥೆಗಳು ಹೊಸ ಚಿಂತನೆಗೆ ಅನುಗುಣವಾಗಿ ಬದಲಾಗಲು ಆರಂಭಿಸುತ್ತವೆ"
"ಇಂದು, ಏರೋ ಇಂಡಿಯಾ ಕೇವಲ ಪ್ರದರ್ಶನ ಮಾತ್ರವಲ್ಲ, ಇದು ರಕ್ಷಣಾ ಉದ್ಯಮದ ವ್ಯಾಪ್ತಿಯನ್ನು ಮಾತ್ರವಲ್ಲದೆ ಭಾರತದ ಆತ್ಮ ವಿಶ್ವಾಸವನ್ನು ಪ್ರದರ್ಶಿಸುತ್ತದೆ"
"21ನೇ ಶತಮಾನದ ನವ ಭಾರತವು ಯಾವುದೇ ಅವಕಾಶವನ್ನು ಕಳೆದುಕೊಳ್ಳುವುದಿಲ್ಲ ಅಥವಾ ಪ್ರಯತ್ನದಲ್ಲಿ ಕೊರತೆ ಕಾಣುವುದಿಲ್ಲ"
"ಭಾರತವು ಅತಿ ದೊಡ್ಡ ರಕ್ಷಣಾ ಉತ್ಪಾದನಾ ರಾಷ್ಟ್ರಗಳಲ್ಲಿ ಸೇರ್ಪಡೆಗೊಳ್ಳಲು ತ್ವರಿತ ದಾಪುಗಾಲುಗಳನ್ನು ಹಾಕುತ್ತದೆ ಮತ್ತು ನಮ್ಮ ಖಾಸಗಿ ವಲಯ ಮತ್ತು ಹೂಡಿಕೆದಾರರು ಅದರಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತಾರೆ"
"ಇಂದಿನ ಭಾರತವು ವೇಗವಾಗಿ ಯೋಚಿಸುತ್ತದೆ, ದೂರದೃಷ್ಟಿಯಿಂದ ಯೋಚಿಸುತ್ತದೆ ಮತ್ತು ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ"
"ಏರೋ ಇಂಡಿಯಾದ ಕಿವಿಗಡಚಿಕ್ಕುವ ಘರ್ಜನೆಯು ಭಾರತದ ಸುಧಾರಣೆ, ಕಾರ್ಯಕ್ಷಮತೆ ಮತ್ತು ಪರಿವರ್ತನೆಯ ಸಂದೇಶವನ್ನು ಪ್ರತಿಧ್ವನಿಸುತ್ತದೆ"

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರೋ ಇಂಡಿಯಾ 2023 ವೈಮಾನಿಕ ಪ್ರದರ್ಶನದ 14 ನೇ ಆವೃತ್ತಿಯನ್ನು ಉದ್ಘಾಟಿಸಿದರು. ಏರೋ ಇಂಡಿಯಾ 2023 ರ ಘೋಷವಾಕ್ಯ "ಕೋಟ್ಯಂತರ ಅವಕಾಶಗಳಿಗೆ ರನ್‌ ವೇ”. ಸುಮಾರು 100 ವಿದೇಶಿ ಮತ್ತು 700 ಭಾರತೀಯ ಕಂಪನಿಗಳು ಸೇರಿದಂತೆ 800 ರಕ್ಷಣಾ ಕಂಪನಿಗಳ ಜೊತೆಗೆ 80 ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆಗೆ ಇದು ಸಾಕ್ಷಿಯಾಗಲಿದೆ. ಪ್ರಧಾನಮಂತ್ರಿಯವರ ‘ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್’ದೃಷ್ಟಿಕೋನಕ್ಕೆ ಅನುಗುಣವಾಗಿ, ಸ್ವದೇಶಿ ಉಪಕರಣಗಳು/ತಂತ್ರಜ್ಞಾನಗಳನ್ನು ಪ್ರದರ್ಶಿಸಲು ಮತ್ತು ವಿದೇಶಿ ಕಂಪನಿಗಳೊಂದಿಗೆ ಪಾಲುದಾರಿಕೆಯನ್ನು ರೂಪಿಸುವ ಬಗ್ಗೆ ಈ ಪ್ರದರ್ಶನವು ಗಮನ ಕೇಂದ್ರೀಕರಿಸುತ್ತದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಬೆಂಗಳೂರಿನ ಆಗಸವು ನವಭಾರತದ ಸಾಮರ್ಥ್ಯಗಳಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು. ಈ ಹೊಸ ಎತ್ತರವು ನವ ಭಾರತದ ವಾಸ್ತವವಾಗಿದೆ, ಇಂದು ಭಾರತವು ಹೊಸ ಎತ್ತರಗಳನ್ನು ಮುಟ್ಟುತ್ತಿದೆ ಮತ್ತು ಅವುಗಳನ್ನೂ ಮೀರುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು.

ಏರೋ ಇಂಡಿಯಾ 2023 ಭಾರತದ ಬೆಳೆಯುತ್ತಿರುವ ಸಾಮರ್ಥ್ಯಗಳಿಗೆ ಉಜ್ವಲ ಉದಾಹರಣೆಯಾಗಿದೆ ಮತ್ತು ಈ ಸಮಾರಂಭದಲ್ಲಿ 100 ಕ್ಕೂ ಹೆಚ್ಚು ರಾಷ್ಟ್ರಗಳ ಉಪಸ್ಥಿತಿಯು ಇಡೀ ಜಗತ್ತು ಭಾರತದ ಮೇಲೆ ಇಟ್ಟಿರುವ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ಹೇಳಿದರು. ವಿಶ್ವದ ಪ್ರಸಿದ್ಧ ಕಂಪನಿಗಳೊಂದಿಗೆ ಭಾರತದ ಎಂಎಸ್‌ಎಂಇಗಳು ಮತ್ತು ಸ್ಟಾರ್ಟ್‌ಅಪ್‌ಗಳು ಸೇರಿದಂತೆ 700 ಕ್ಕೂ ಹೆಚ್ಚು ಪ್ರದರ್ಶಕರ ಭಾಗವಹಿಸುವಿಕೆಯನ್ನು ಅವರು ಪ್ರಸ್ತಾಪಿಸಿದರು. ಏರೋ ಇಂಡಿಯಾ 2023 ರ ಘೋಷವಾಕ್ಯವಾದ 'ಕೋಟ್ಯಂತರ ಅವಕಾಸಗಳಿಗೆ ರನ್‌ ವೇ' ಎಂಬ ವಿಷಯದ ಮೇಲೆ ಬೆಳಕು ಚೆಲ್ಲಿದ ಪ್ರಧಾನಿಯವರು, ಆತ್ಮನಿರ್ಭರ ಭಾರತದ ಶಕ್ತಿಯು ಪ್ರತಿದಿನವೂ ಹೆಚ್ಚುತ್ತಲೇ ಇದೆ ಎಂದರು.

ಪ್ರದರ್ಶನದ ಜೊತೆಗೆ ಆಯೋಜಿಸಲಾಗುತ್ತಿರುವ ರಕ್ಷಣಾ ಸಚಿವರ ಸಮ್ಮೇಳನ ಮತ್ತು ಸಿಇಒ ದುಂಡುಮೇಜಿನ ಸಭೆಗಳ ಬಗ್ಗೆ ಪ್ರಸ್ತಾಪಿಸಿದ ಶ್ರೀ ಮೋದಿ, ಈ ವಲಯದಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಏರೋ ಇಂಡಿಯಾದ ಸಾಮರ್ಥ್ಯ ಹೆಚ್ಚಾಗುತ್ತದೆ ಎಂದು ಹೇಳಿದರು.

ಭಾರತದ ತಾಂತ್ರಿಕ ಪ್ರಗತಿಯ ಕೇಂದ್ರವಾಗಿರುವ ಕರ್ನಾಟಕದಲ್ಲಿ ನಡೆಯುತ್ತಿರುವ ಏರೋ ಇಂಡಿಯಾದ ಮಹತ್ವವನ್ನು ಪ್ರಧಾನಿ ಒತ್ತಿ ಹೇಳಿದರು. ಇದರಿಂದ ವೈಮಾನಿಕ ಕ್ಷೇತ್ರದಲ್ಲಿ ಕರ್ನಾಟಕದ ಯುವಜನತೆಗೆ ಹೊಸ ದಾರಿಗಳು ತೆರೆದುಕೊಳ್ಳಲಿವೆ ಎಂದರು. ದೇಶದ ಬಲವರ್ಧನೆಗಾಗಿ ತಮ್ಮ ತಾಂತ್ರಿಕ ಪರಿಣತಿಯನ್ನು ರಕ್ಷಣಾ ಕ್ಷೇತ್ರದಲ್ಲಿ ತೊಡಗಿಸುವಂತೆ ಕರ್ನಾಟಕದ ಯುವಜನರಿಗೆ ಪ್ರಧಾನಿ ಕರೆ ನೀಡಿದರು.

"ಹೊಸ ಚಿಂತನೆ, ಹೊಸ ವಿಧಾನದೊಂದಿಗೆ ದೇಶವು ಮುನ್ನಡೆದಾಗ ಅದರ ವ್ಯವಸ್ಥೆಗಳು ಹೊಸ ಚಿಂತನೆಗೆ ಅನುಗುಣವಾಗಿ ಬದಲಾಗಲು ಪ್ರಾರಂಭಿಸುತ್ತವೆ, ಏರೋ ಇಂಡಿಯಾ 2023 ನವ ಭಾರತದ ಬದಲಾಗುತ್ತಿರುವ ವಿಧಾನವನ್ನು ಪ್ರತಿಬಿಂಬಿಸುತ್ತದೆ” ಎಂದು ಪ್ರಧಾನಮಂತ್ರಿ ಹೇಳಿದರು. ಹಿಂದೆ ‘ಏರೋ ಇಂಡಿಯಾ ಕೇವಲ ಒಂದು ಪ್ರದರ್ಶನ’ಮತ್ತು ‘ಭಾರತಕ್ಕೆ ಮಾರಾಟ ಮಾಡುವ’ ಅವಕಾಶವಾಗಿತ್ತು, ಆದರೆ ಈಗ ಗ್ರಹಿಕೆ ಬದಲಾಗಿದೆ ಎಂದು ಪ್ರಧಾನಿ ಹೇಳಿದರು. "ಇಂದು, ಏರೋ ಇಂಡಿಯಾ ಭಾರತದ ಶಕ್ತಿಯಾಗಿದೆ ಮತ್ತು ಇದು ಕೇವಲ ಪ್ರದರ್ಶನವಲ್ಲ, ಇದು ರಕ್ಷಣಾ ಉದ್ಯಮದ ವ್ಯಾಪ್ತಿಯನ್ನು ಮಾತ್ರವಲ್ಲದೆ ಭಾರತದ ಆತ್ಮ ವಿಶ್ವಾಸವನ್ನು ಪ್ರದರ್ಶಿಸುತ್ತದೆ” ಎಂದು ಪ್ರಧಾನಿ ಹೇಳಿದರು.

ಭಾರತದ ಯಶಸ್ಸುಗಳು ಅದರ ಸಾಮರ್ಥ್ಯಗಳಿಗೆ ಸಾಕ್ಷಿಯಾಗುತ್ತಿವೆ ಎಂದು ಪ್ರಧಾನಿ ಹೇಳಿದರು. ತೇಜಸ್, ಐಎನ್‌ಎಸ್ ವಿಕ್ರಾಂತ್, ಸೂರತ್ ಮತ್ತು ತುಮಕೂರಿನ ಸುಧಾರಿತ ತಯಾರಿಕಾ ಘಟಕಗಳು ಆತ್ಮನಿರ್ಭರ ಭಾರತದ ಸಾಮರ್ಥ್ಯವಾಗಿದ್ದು, ಅದರೊಂದಿಗೆ ವಿಶ್ವದ ಹೊಸ ಪರ್ಯಾಯಗಳು ಮತ್ತು ಅವಕಾಶಗಳನ್ನು ಜೋಡಿಸಲಾಗಿದೆ ಎಂದು ಪ್ರಧಾನಿ ಹೇಳಿದರು.

"21ನೇ ಶತಮಾನದ ನವ ಭಾರತವು ಯಾವುದೇ ಅವಕಾಶವನ್ನು ಕಳೆದುಕೊಳ್ಳುವುದಿಲ್ಲ ಅಥವಾ ಅದರ ಯಾವುದೇ ಪ್ರಯತ್ನದಲ್ಲೂ ಕೊರತೆ ಕಾಣುವುದಿಲ್ಲ" ಎಂದು ಪ್ರಧಾನಿಯವರು ಹೇಳಿದರು, ಸುಧಾರಣೆಗಳ ಸಹಾಯದಿಂದ ಪ್ರತಿಯೊಂದು ಕ್ಷೇತ್ರದಲ್ಲೂ ಕ್ರಾಂತಿಯನ್ನು ತರಲಾಗಿದೆ. ದಶಕಗಳಿಂದ ಅತಿದೊಡ್ಡ ರಕ್ಷಣಾ ಆಮದುದಾರನಾಗಿದ್ದ ರಾಷ್ಟ್ರವು ಈಗ ವಿಶ್ವದ 75 ದೇಶಗಳಿಗೆ ರಕ್ಷಣಾ ಸಾಧನಗಳನ್ನು ರಫ್ತು ಮಾಡಲು ಪ್ರಾರಂಭಿಸಿದೆ ಎಂದು ಅವರು ಒತ್ತಿ ಹೇಳಿದರು.

ಕಳೆದ 8-9 ವರ್ಷಗಳಲ್ಲಿ ರಕ್ಷಣಾ ಕ್ಷೇತ್ರದ ಪರಿವರ್ತನೆಯನ್ನು ಉಲ್ಲೇಖಿಸಿದ ಪ್ರಧಾನಿಯವರು, 2024-25ರ ವೇಳೆಗೆ ರಕ್ಷಣಾ ರಫ್ತುಗಳನ್ನು 1.5 ಶತಕೋಟಿಯಿಂದ 5 ಶತಕೋಟಿಗೆ ಕೊಂಡೊಯ್ಯುವ ಗುರಿ ಇದೆ ಎಂದು ಹೇಳಿದರು. "ಇಲ್ಲಿಂದ ಭಾರತವು ಅತಿ ದೊಡ್ಡ ರಕ್ಷಣಾ ಉತ್ಪಾದನಾ ರಾಷ್ಟ್ರಗಳಲ್ಲಿ ಸೇರ್ಪಡೆಗೊಳ್ಳಲು ಕ್ಷಿಪ್ರ ದಾಪುಗಾಲುಗಳನ್ನು ಹಾಕುತ್ತದೆ ಮತ್ತು ನಮ್ಮ ಖಾಸಗಿ ವಲಯ ಮತ್ತು ಹೂಡಿಕೆದಾರರು ಅದರಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತಾರೆ" ಎಂದು ಪ್ರಧಾನಮಂತ್ರಿ ಹೇಳಿದರು. ಖಾಸಗಿ ವಲಯವು ರಕ್ಷಣಾ ಕ್ಷೇತ್ರದಲ್ಲಿ ಹೂಡಿಕೆ ಮಾಡುವಂತೆ ಪ್ರಧಾನಿ ಕರೆ ನೀಡಿದರು, ಇದು ಭಾರತದಲ್ಲಿ ಮತ್ತು ಇತರ ಹಲವು ದೇಶಗಳಲ್ಲಿ ಅವರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಹೇಳಿದರು.

"ಇಂದಿನ ಭಾರತವು ವೇಗವಾಗಿ ಯೋಚಿಸುತ್ತದೆ, ದೂರದೃಷ್ಟಿಯಿಂದ ಯೋಚಿಸುತ್ತದೆ ಮತ್ತು ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ" ಎಂದ ಶ್ರೀ ಮೋದಿ, ಅಮೃತ ಕಾಲದಲ್ಲಿ ಭಾರತವನ್ನು ಯುದ್ಧ ವಿಮಾನದ ಪೈಲಟ್‌ಗೆ ಹೋಲಿಸಿದರು. ಭಾರತವು ನಿರ್ಭೀತಿಯ, ಹೊಸ ಎತ್ತರಕ್ಕೆ ಏರಲು ಉತ್ಸುಕವಾಗಿರುವ ರಾಷ್ಟ್ರ ಎಂದು ಪ್ರಧಾನಿ ಹೇಳಿದರು. ಭಾರತವು ಎಷ್ಟೇ ವೇಗದಲ್ಲಿ, ಎಷ್ಟೇ ಎತ್ತರಕ್ಕೆ ಹಾರಿದರೂ ಅದು ಯಾವಾಗಲೂ ಭದ್ರವಾದ ಬೇರುಗಳನ್ನು ಹೊಂದಿರುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು.

"ಏರೋ ಇಂಡಿಯಾದ ಕಿವಿಗಡಚಿಕ್ಕುವ ಘರ್ಜನೆಯು ಭಾರತದ ಸುಧಾರಣೆ, ಕಾರ್ಯಕ್ಷಮತೆ ಮತ್ತು ಪರಿವರ್ತನೆಯ ಸಂದೇಶವನ್ನು ಪ್ರತಿಧ್ವನಿಸುತ್ತದೆ" ಎಂದು ಪ್ರಧಾನಿ ಹೇಳಿದರು. ಭಾರತದಲ್ಲಿ 'ಸುಲಭ ವ್ಯವಹಾರ'ಕ್ಕಾಗಿ ಮಾಡಲಾದ ಸುಧಾರಣೆಗಳನ್ನು ಇಡೀ ಜಗತ್ತು ಗಮನಿಸುತ್ತಿದೆ ಎಂದು ಅವರು ಹೇಳಿದರು. ಜಾಗತಿಕ ಹೂಡಿಕೆಗಳು ಮತ್ತು ಭಾರತೀಯ ನಾವೀನ್ಯತೆಗಳಿಗೆ ಅನುಕೂಲವಾಗುವ ವಾತಾವರಣವನ್ನು ಸೃಷ್ಟಿಸಲು ತೆಗೆದುಕೊಂಡ ವಿವಿಧ ಕ್ರಮಗಳನ್ನು ಅವರು ವಿವರಿಸಿದರು. ರಕ್ಷಣಾ ಮತ್ತು ಇತರ ವಲಯಗಳಲ್ಲಿ ವಿದೇಶಿ ನೇರ ಹೂಡಿಕೆಯಲ್ಲಿ ಮಾಡಿದ ಸುಧಾರಣೆಗಳು ಮತ್ತು ಕೈಗಾರಿಕೆಗಳಿಗೆ ಪರವಾನಗಿಗಳನ್ನು ನೀಡುವ ಪ್ರಕ್ರಿಯೆಗಳ ಸರಳೀಕರಣವನ್ನು ಅವರು ಪ್ರಸ್ತಾಪಿಸಿದರು. ಈ ವರ್ಷದ ಬಜೆಟ್‌ನಲ್ಲಿ ತಯಾರಿಕಾ ಘಟಕಗಳಿಗೆ ತೆರಿಗೆ ಪ್ರಯೋಜನಗಳನ್ನು ಹೆಚ್ಚಿಸಲಾಗಿದೆ ಎಂದು ಪ್ರಧಾನಿ ಹೇಳಿದರು.

ಬೇಡಿಕೆ, ಪರಿಣತಿ ಹಾಗೂ ಅನುಭವ ಇರುವಲ್ಲಿ ಕೈಗಾರಿಕೆ ಬೆಳವಣಿಗೆ ಸಹಜ ಎಂದು ಪ್ರಧಾನಿ ಹೇಳಿದರು. ಈ ಕ್ಷೇತ್ರವನ್ನು ಬಲಪಡಿಸುವ ಪ್ರಯತ್ನಗಳು ಇನ್ನಷ್ಟು ಬಲವಾಗಿ ಮುಂದುವರಿಯಲಿವೆ ಎಂದು ಅವರು ಭರವಸೆ ನೀಡಿದರು.

ಕರ್ನಾಟಕ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್, ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಕೇಂದ್ರ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್, ಕೇಂದ್ರ ನಾಗರಿಕ ವಿಮಾನಯಾನ ಸಚಿವ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀ ಅಜಯ್ ಭಟ್ ಉಪಸ್ಥಿತರಿದ್ದರು. 

ಹಿನ್ನೆಲೆ

ಪ್ರಧಾನಮಂತ್ರಿಯವರ ‘ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್’ದೃಷ್ಟಿಕೋನಕ್ಕೆ ಅನುಗುಣವಾಗಿ, ಸ್ವದೇಶಿ ಉಪಕರಣಗಳು/ತಂತ್ರಜ್ಞಾನಗಳನ್ನು ಪ್ರದರ್ಶಿಸಲು ಮತ್ತು ವಿದೇಶಿ ಕಂಪನಿಗಳೊಂದಿಗೆ ಪಾಲುದಾರಿಕೆಯನ್ನು ರೂಪಿಸುವ ಬಗ್ಗೆ ಪ್ರದರ್ಶನವು ಗಮನ ಕೇಂದ್ರೀಕರಿಸುತ್ತದೆ. ಭಾರತ ರಕ್ಷಣಾ ವಲಯದಲ್ಲಿ ಆತ್ಮನಿರ್ಭರತೆಗೆ ಪ್ರಧಾನಮಂತ್ರಿಯವರು ನೀಡುತ್ತಿರುವ ಒತ್ತು ಕೂಡ ಪ್ರದರ್ಶಿಸಲ್ಪಡುತ್ತದೆ, ಈ ಕಾರ್ಯಕ್ರಮವು ವಿನ್ಯಾಸ ನಾಯಕತ್ವದಲ್ಲಿ ದೇಶದ ಪ್ರಗತಿ, ಯುಎವಿ ವಲಯದಲ್ಲಿನ ಬೆಳವಣಿಗೆ, ರಕ್ಷಣಾ ಬಾಹ್ಯಾಕಾಶ ಮತ್ತು ಭವಿಷ್ಯದ ತಂತ್ರಜ್ಞಾನಗಳನ್ನು ಪ್ರದರ್ಶಿಸುತ್ತದೆ. ಇದಲ್ಲದೆ, ಲಘು ಯುದ್ಧ ವಿಮಾನ (ಎಲ್‌ ಸಿ ಎ)-ತೇಜಸ್, ಹೆಚ್‌ ಟಿ ಟಿ-40, ಡೋರ್ನಿಯರ್ ಲಘು ಉಪಯೋಗಿ ಹೆಲಿಕಾಪ್ಟರ್ (ಎಲ್‌ ಯು ಹೆಚ್), ಲಘು ಯುದ್ಧ ಹೆಲಿಕಾಪ್ಟರ್ ಎಲ್‌ ಸಿ ಹೆಚ್) ಮತ್ತು ಸುಧಾರಿತ ಲಘು ಹೆಲಿಕಾಪ್ಟರ್ (ಎ ಎಲ್‌ ಹೆಚ್) ನಂತಹ ದೇಶೀಯ ಏರ್ ಪ್ಲಾಟ್‌ಫಾರ್ಮ್‌ಗಳ ರಫ್ತುಗಳನ್ನು ಉತ್ತೇಜಿಸುತ್ತದೆ. ಜಾಗತಿಕ ಪೂರೈಕೆ ಸರಪಳಿಯಲ್ಲಿ ದೇಶೀಯ ಎಂಎಸ್‌ಎಂಇಗಳು ಮತ್ತು ಸ್ಟಾರ್ಟ್-ಅಪ್‌ಗಳನ್ನು ಸಂಯೋಜಿಸಲು ಮತ್ತು ಸಹ-ಅಭಿವೃದ್ಧಿ ಮತ್ತು ಸಹ-ಉತ್ಪಾದನೆಗಾಗಿ ಪಾಲುದಾರಿಕೆ ಸೇರಿದಂತೆ ವಿದೇಶಿ ಹೂಡಿಕೆಗಳನ್ನು ಆಕರ್ಷಿಸಲು ಈ ಪ್ರದರ್ಶನವು ಸಹಾಯ ಮಾಡುತ್ತದೆ.

ಏರೋ ಇಂಡಿಯಾ 2023 80 ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆಗೆ ಸಾಕ್ಷಿಯಾಗಲಿದೆ. ಏರೋ ಇಂಡಿಯಾ 2023 ರಲ್ಲಿ ಸುಮಾರು 30 ದೇಶಗಳ ಸಚಿವರು ಮತ್ತು ಜಾಗತಿಕ ಮತ್ತು ಭಾರತೀಯ ಒಇಎಂ ಗಳ 65 ಸಿಇಒ ಗಳು ಭಾಗವಹಿಸುವ ಸಾಧ್ಯತೆಯಿದೆ.

ಏರೋ ಇಂಡಿಯಾ 2023 ವೈಮಾನಿಕ ಪ್ರದರ್ಶನವು ಸುಮಾರು 100 ವಿದೇಶಿ ಮತ್ತು 700 ಭಾರತೀಯ ಕಂಪನಿಗಳು ಸೇರಿದಂತೆ 800 ಕ್ಕೂ ಹೆಚ್ಚು ರಕ್ಷಣಾ ಕಂಪನಿಗಳ ಭಾಗವಹಿಸುವಿಕೆಗೆ ಸಾಕ್ಷಿಯಾಗಲಿದೆ. ಎಂಎಸ್‌ಎಂಇಗಳು ಮತ್ತು ಸ್ಟಾರ್ಟ್‌ಅಪ್‌ಗಳು ಪ್ರದರ್ಶನದಲ್ಲಿ ಭಾಗವಹಿಸುವ ಭಾರತದ ಕಂಪನಿಗಳಲ್ಲಿ ಸೇರಿವೆ, ಇದು ದೇಶದಲ್ಲಿ ಸ್ಥಾಪಿತ ತಂತ್ರಜ್ಞಾನಗಳ ಪ್ರಗತಿ, ಏರೋಸ್ಪೇಸ್ ಮತ್ತು ರಕ್ಷಣಾ ಸಾಮರ್ಥ್ಯಗಳಲ್ಲಿನ ಬೆಳವಣಿಗೆಯನ್ನು ಪ್ರದರ್ಶಿಸುತ್ತದೆ. ಏರೋ ಇಂಡಿಯಾ 2023 ರಲ್ಲಿ ಏರ್‌ಬಸ್, ಬೋಯಿಂಗ್, ಡಸಾಲ್ಟ್ ಏವಿಯೇಷನ್, ಲಾಕ್‌ಹೀಡ್ ಮಾರ್ಟಿನ್, ಇಸ್ರೇಲ್ ಏರೋಸ್ಪೇಸ್ ಉದ್ಯಮ, ಬ್ರಹ್ಮೋಸ್ ಏರೋಸ್ಪೇಸ್, ಆರ್ಮಿ ಏವಿಯೇಷನ್, ಎಚ್‌ಸಿ ರೊಬೊಟಿಕ್ಸ್, ಎಸ್‌ಎಬಿ, ಸಫ್ರಾನ್, ರೋಲ್ಸ್ ರಾಯ್ಸ್, ಲಾರ್ಸೆನ್ ಮತ್ತು ಟೌಬ್ರೊ, ಭಾರತ್ ಫೋರ್ಜ್ ಲಿಮಿಟೆಡ್, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ ಎ ಎಲ್), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿ ಇ ಎಲ್), ಭಾರತ್ ಡೈನಾಮಿಕ್ಸ್ ಲಿಮಿಟೆಡ್ (ಬಿ ಡಿ ಎಲ್) ಮತ್ತು ಬಿಇಎಂಎಲ್ ಲಿಮಿಟೆಡ್ ಭಾಗವಹಿಸುವ ಪ್ರಮುಖ ಕಂಪನಿಗಳಾಗಿವೆ.

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Exclusive: Just two friends in a car, says Putin on viral carpool with PM Modi

Media Coverage

Exclusive: Just two friends in a car, says Putin on viral carpool with PM Modi
NM on the go

Nm on the go

Always be the first to hear from the PM. Get the App Now!
...
India–Russia friendship has remained steadfast like the Pole Star: PM Modi during the joint press meet with Russian President Putin
December 05, 2025

Your Excellency, My Friend, राष्ट्रपति पुतिन,
दोनों देशों के delegates,
मीडिया के साथियों,
नमस्कार!
"दोबरी देन"!

आज भारत और रूस के तेईसवें शिखर सम्मेलन में राष्ट्रपति पुतिन का स्वागत करते हुए मुझे बहुत खुशी हो रही है। उनकी यात्रा ऐसे समय हो रही है जब हमारे द्विपक्षीय संबंध कई ऐतिहासिक milestones के दौर से गुजर रहे हैं। ठीक 25 वर्ष पहले राष्ट्रपति पुतिन ने हमारी Strategic Partnership की नींव रखी थी। 15 वर्ष पहले 2010 में हमारी साझेदारी को "Special and Privileged Strategic Partnership” का दर्जा मिला।

पिछले ढाई दशक से उन्होंने अपने नेतृत्व और दूरदृष्टि से इन संबंधों को निरंतर सींचा है। हर परिस्थिति में उनके नेतृत्व ने आपसी संबंधों को नई ऊंचाई दी है। भारत के प्रति इस गहरी मित्रता और अटूट प्रतिबद्धता के लिए मैं राष्ट्रपति पुतिन का, मेरे मित्र का, हृदय से आभार व्यक्त करता हूँ।

Friends,

पिछले आठ दशकों में विश्व में अनेक उतार चढ़ाव आए हैं। मानवता को अनेक चुनौतियों और संकटों से गुज़रना पड़ा है। और इन सबके बीच भी भारत–रूस मित्रता एक ध्रुव तारे की तरह बनी रही है।परस्पर सम्मान और गहरे विश्वास पर टिके ये संबंध समय की हर कसौटी पर हमेशा खरे उतरे हैं। आज हमने इस नींव को और मजबूत करने के लिए सहयोग के सभी पहलुओं पर चर्चा की। आर्थिक सहयोग को नई ऊँचाइयों पर ले जाना हमारी साझा प्राथमिकता है। इसे साकार करने के लिए आज हमने 2030 तक के लिए एक Economic Cooperation प्रोग्राम पर सहमति बनाई है। इससे हमारा व्यापार और निवेश diversified, balanced, और sustainable बनेगा, और सहयोग के क्षेत्रों में नए आयाम भी जुड़ेंगे।

आज राष्ट्रपति पुतिन और मुझे India–Russia Business Forum में शामिल होने का अवसर मिलेगा। मुझे पूरा विश्वास है कि ये मंच हमारे business संबंधों को नई ताकत देगा। इससे export, co-production और co-innovation के नए दरवाजे भी खुलेंगे।

दोनों पक्ष यूरेशियन इकॉनॉमिक यूनियन के साथ FTA के शीघ्र समापन के लिए प्रयास कर रहे हैं। कृषि और Fertilisers के क्षेत्र में हमारा करीबी सहयोग,food सिक्युरिटी और किसान कल्याण के लिए महत्वपूर्ण है। मुझे खुशी है कि इसे आगे बढ़ाते हुए अब दोनों पक्ष साथ मिलकर यूरिया उत्पादन के प्रयास कर रहे हैं।

Friends,

दोनों देशों के बीच connectivity बढ़ाना हमारी मुख्य प्राथमिकता है। हम INSTC, Northern Sea Route, चेन्नई - व्लादिवोस्टोक Corridors पर नई ऊर्जा के साथ आगे बढ़ेंगे। मुजे खुशी है कि अब हम भारत के seafarersकी polar waters में ट्रेनिंग के लिए सहयोग करेंगे। यह आर्कटिक में हमारे सहयोग को नई ताकत तो देगा ही, साथ ही इससे भारत के युवाओं के लिए रोजगार के नए अवसर बनेंगे।

उसी प्रकार से Shipbuilding में हमारा गहरा सहयोग Make in India को सशक्त बनाने का सामर्थ्य रखता है। यह हमारेwin-win सहयोग का एक और उत्तम उदाहरण है, जिससे jobs, skills और regional connectivity – सभी को बल मिलेगा।

ऊर्जा सुरक्षा भारत–रूस साझेदारी का मजबूत और महत्वपूर्ण स्तंभ रहा है। Civil Nuclear Energy के क्षेत्र में हमारा दशकों पुराना सहयोग, Clean Energy की हमारी साझा प्राथमिकताओं को सार्थक बनाने में महत्वपूर्ण रहा है। हम इस win-win सहयोग को जारी रखेंगे।

Critical Minerals में हमारा सहयोग पूरे विश्व में secure और diversified supply chains सुनिश्चित करने के लिए महत्वपूर्ण है। इससे clean energy, high-tech manufacturing और new age industries में हमारी साझेदारी को ठोस समर्थन मिलेगा।

Friends,

भारत और रूस के संबंधों में हमारे सांस्कृतिक सहयोग और people-to-people ties का विशेष महत्व रहा है। दशकों से दोनों देशों के लोगों में एक-दूसरे के प्रति स्नेह, सम्मान, और आत्मीयताका भाव रहा है। इन संबंधों को और मजबूत करने के लिए हमने कई नए कदम उठाए हैं।

हाल ही में रूस में भारत के दो नए Consulates खोले गए हैं। इससे दोनों देशों के नागरिकों के बीच संपर्क और सुगम होगा, और आपसी नज़दीकियाँ बढ़ेंगी। इस वर्ष अक्टूबर में लाखों श्रद्धालुओं को "काल्मिकिया” में International Buddhist Forum मे भगवान बुद्ध के पवित्र अवशेषों का आशीर्वाद मिला।

मुझे खुशी है कि शीघ्र ही हम रूसी नागरिकों के लिए निशुल्क 30 day e-tourist visa और 30-day Group Tourist Visa की शुरुआत करने जा रहे हैं।

Manpower Mobility हमारे लोगों को जोड़ने के साथ-साथ दोनों देशों के लिए नई ताकत और नए अवसर create करेगी। मुझे खुशी है इसे बढ़ावा देने के लिए आज दो समझौतेकिए गए हैं। हम मिलकर vocational education, skilling और training पर भी काम करेंगे। हम दोनों देशों के students, scholars और खिलाड़ियों का आदान-प्रदान भी बढ़ाएंगे।

Friends,

आज हमने क्षेत्रीय और वैश्विक मुद्दों पर भी चर्चा की। यूक्रेन के संबंध में भारत ने शुरुआत से शांति का पक्ष रखा है। हम इस विषय के शांतिपूर्ण और स्थाई समाधान के लिए किए जा रहे सभी प्रयासों का स्वागत करते हैं। भारत सदैव अपना योगदान देने के लिए तैयार रहा है और आगे भी रहेगा।

आतंकवाद के विरुद्ध लड़ाई में भारत और रूस ने लंबे समय से कंधे से कंधा मिलाकर सहयोग किया है। पहलगाम में हुआ आतंकी हमला हो या क्रोकस City Hall पर किया गया कायरतापूर्ण आघात — इन सभी घटनाओं की जड़ एक ही है। भारत का अटल विश्वास है कि आतंकवाद मानवता के मूल्यों पर सीधा प्रहार है और इसके विरुद्ध वैश्विक एकता ही हमारी सबसे बड़ी ताक़त है।

भारत और रूस के बीच UN, G20, BRICS, SCO तथा अन्य मंचों पर करीबी सहयोग रहा है। करीबी तालमेल के साथ आगे बढ़ते हुए, हम इन सभी मंचों पर अपना संवाद और सहयोग जारी रखेंगे।

Excellency,

मुझे पूरा विश्वास है कि आने वाले समय में हमारी मित्रता हमें global challenges का सामना करने की शक्ति देगी — और यही भरोसा हमारे साझा भविष्य को और समृद्ध करेगा।

मैं एक बार फिर आपको और आपके पूरे delegation को भारत यात्रा के लिए बहुत बहुत धन्यवाद देता हूँ।