ಉತ್ತರ ಪ್ರದೇಶದ 75 ಜಿಲ್ಲೆಗಳ 75,000 ಫಲಾನುಭವಿಗಳಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆ - ನಗರ (ಪಿಎಂಎವೈ-ಯು) ಮನೆಗಳ ಕೀಲಿಗಳನ್ನು ಹಸ್ತಾಂತರಿಸಿದ ಪ್ರಧಾನಿ
ಸ್ಮಾರ್ಟ್ ಸಿಟಿ ಮಿಷನ್ ಮತ್ತು ಅಮೃತ್ ಯೋಜನೆ ಅಡಿಯಲ್ಲಿ ಉತ್ತರ ಪ್ರದೇಶದ 75 ನಗರಾಭಿವೃದ್ಧಿ ಯೋಜನೆಗಳ ಉದ್ಘಾಟನೆ/ ಶಂಕುಸ್ಥಾಪನೆ
ಲಕ್ನೋ, ಕಾನ್ಪುರ, ವಾರಾಣಸಿ, ಪ್ರಯಾಗರಾಜ್, ಗೋರಖ್‌ಪುರ, ಝಾನ್ಸಿ ಮತ್ತು ಗಾಜಿಯಾಬಾದ್‌ಗಳಿಗೆ ಫೇಮ್ II ಅಡಿಯಲ್ಲಿ 75 ಬಸ್ಸುಗಳಿಗೆ ಹಸಿರು ನಿಶಾನೆ
ಲಕ್ನೋದ ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ (ಬಿಬಿಎಯು) ಶ್ರೀ ಅಟಲ್ ಬಿಹಾರಿ ವಾಜಪೇಯಿ ಅಧ್ಯಯನ ಪೀಠ ಸ್ಥಾಪನೆಯ ಘೋಷಣೆ
ಆಗ್ರಾ, ಕಾನ್ಪುರ ಮತ್ತು ಲಲಿತಪುರದ ಮೂವರು ಫಲಾನುಭವಿಗಳೊಂದಿಗೆ ಅನೌಪಚಾರಿಕ ಸಂವಾದ
"ಪಿಎಂಎವೈ ಅಡಿಯಲ್ಲಿ ನಗರಗಳಲ್ಲಿ 1.13 ಕೋಟಿಗೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗುತ್ತಿದೆ ಮತ್ತು ಅದರಲ್ಲಿ 50 ಲಕ್ಷಕ್ಕೂ ಹೆಚ್ಚು ಮನೆಗಳನ್ನು ಈಗಾಗಲೇ ನಿರ್ಮಿಸಿ, ಬಡವರಿಗೆ ಹಸ್ತಾಂತರಿಸಲಾಗಿದೆ"
"ಪಿಎಂಎವೈ ಅಡಿಯಲ್ಲಿ ದೇಶದಲ್ಲಿ ಸುಮಾರು 3 ಕೋಟಿ ಮನೆಗಳನ್ನು ನಿರ್ಮಿಸಲಾಗಿದೆ, ಅವುಗಳ ವೆಚ್ಚಎಷ್ಟಾಗಿದೆ ಎಂದರೆ, ಮನೆಗಳನ್ನು ಪಡೆದ ಜನರು 'ಲಕ್ಷಾಧಿಪತಿ'ಗಳಾಗಿದ್ದಾರೆ "
"ಇಂದು, ನಾವು 'ಪಹ್ಲೆ ಆ್ಯಪ್' ಎಂದು ಹೇಳಬೇಕು - ತಂತ್ರಜ್ಞಾನ ಮೊದಲು" "ಎಲ್ಇಡಿ ಬೀದಿ ದೀಪಗಳನ್

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಲಕ್ನೋದಲ್ಲಿ ‘ಆಜಾದಿ@75-ಹೊಸ ನಗರ ಭಾರತ: ನಗರ ಚಿತ್ರಣದ ಪರಿವರ್ತನೆ’ಸಮ್ಮೇಳನ ಮತ್ತು ಎಕ್ಸ್‌ಪೋವನ್ನು ಉದ್ಘಾಟಿಸಿದರು. ಕೇಂದ್ರ ಸಚಿವರಾದ ಶ್ರೀ ರಾಜನಾಥ್ ಸಿಂಗ್, ಶ್ರೀ ಹರ್ದೀಪ್ ಪುರಿ, ಶ್ರೀ ಮಹೇಂದ್ರ ನಾಥ್ ಪಾಂಡೆ, ಶ್ರೀ ಕೌಶಲ್ ಕಿಶೋರ್, ಉತ್ತರ ಪ್ರದೇಶದ ರಾಜ್ಯಪಾಲೆ ಶ್ರೀಮತಿ ಆನಂದಿಬೆನ್ ಪಟೇಲ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಸಂದರ್ಭದಲ್ಲಿ ಹಾಜರಿದ್ದರು.

 

 

ಉತ್ತರ ಪ್ರದೇಶದ 75 ಜಿಲ್ಲೆಗಳ 75,000 ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ - ನಗರ (ಪಿಎಂಎವೈ-ಯು) ಮನೆಗಳ ಕೀಲಿಗಳನ್ನು ಪ್ರಧಾನಮಂತ್ರಿಯವರು ಡಿಜಿಟಲ್ ಆಗಿ ನೀಡಿದರು ಮತ್ತು ಯೋಜನೆಯ ಫಲಾನುಭವಿಗಳೊಂದಿಗೆ ವರ್ಚುವಲ್ ಸಂವಾದ ನಡೆಸಿದರು. ಸ್ಮಾರ್ಟ್ ಸಿಟಿ ಮಿಷನ್ ಮತ್ತು ಅಮೃತ್ ಅಡಿಯಲ್ಲಿ ಉತ್ತರ ಪ್ರದೇಶದ 75 ನಗರಾಭಿವೃದ್ಧಿ ಯೋಜನೆಗಳ ಉದ್ಘಾಟನೆ/ಶಂಕುಸ್ಥಾಪನೆಯನ್ನೂ ಪ್ರಧಾನಿ ನೆರವೇರಿಸಿದರು. ಲಕ್ನೋ, ಕಾನ್ಪುರ, ವಾರಾಣಸಿ, ಪ್ರಯಾಗರಾಜ್, ಗೋರಖ್‌ಪುರ, ಝಾನ್ಸಿ ಮತ್ತು ಗಾಜಿಯಾಬಾದ್ ಸೇರಿದಂತೆ ಏಳು ನಗರಗಳಿಗೆ ಫೇಮ್-II ಅಡಿಯಲ್ಲಿ 75 ಬಸ್ಸುಗಳಿಗೆ ಹಸಿರು ನಿಶಾನೆ ತೋರಿದರು. ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ವಿವಿಧ ಪ್ರಮುಖ ಕಾರ್ಯಗಳ ಅಡಿಯಲ್ಲಿ 75 ಯೋಜನೆಗಳನ್ನು ಒಳಗೊಂಡ ಕಾಫಿ ಟೇಬಲ್ ಪುಸ್ತಕವನ್ನು ಸಹ ಬಿಡುಗಡೆ ಮಾಡಲಾಯಿತು. ಲಕ್ನೋದ ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ (ಬಿಬಿಎಯು) ಶ್ರೀ ಅಟಲ್ ಬಿಹಾರಿ ವಾಜಪೇಯಿ ಪೀಠವನ್ನು ಸ್ಥಾಪಿಸುವುದಾಗಿ ಪ್ರಧಾನಮಂತ್ರಿಯವರು ಘೋಷಿಸಿದರು.

ಪ್ರಧಾನಿಯವರು ಆಗ್ರಾದ ಶ್ರೀಮತಿ ವಿಮಲೇಶ್ ಅವರೊಂದಿಗೆ ಸಂವಾದ ನಡೆಸುವಾಗ, ಪಿಎಂ ಆವಾಸ್, ಅನಿಲ ಸಿಲಿಂಡರ್, ಶೌಚಾಲಯ, ವಿದ್ಯುತ್, ನೀರಿನ ಸಂಪರ್ಕ ಮತ್ತು ಪಡಿತರ ಚೀಟಿ ಇತ್ಯಾದಿ ಯೋಜನೆಗಳಿಂದ ತಾವು ಪ್ರಯೋಜನ ಪಡೆದಿರುವುದಾಗಿ ಅವರು ತಿಳಿಸಿದರು. ಸರ್ಕಾರದ ಯೋಜನೆಗಳ ಲಾಭವನ್ನು ಪಡೆದುಕೊಳ್ಳುವಂತೆ ಮತ್ತು ಮಕ್ಕಳಿಗೆ, ವಿಶೇಷವಾಗಿ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವಂತೆ ಪ್ರಧಾನಿಯವರು ಆಕೆಗೆ ತಳಿಸಿದರು.

ಕಾನ್ಪುರದ ರಾಮ್ ಜಂಕಿ ಅವರೊಂದಿಗೆ ಸಂವಾದ ನಡೆಸಿದ ಪ್ರಧಾನಿಯವರು, ಹಾಲು ಮಾರಾಟಗಾರು ಸ್ವಾಮಿತ್ವ ಯೋಜನೆಯಿಂದ ಪ್ರಯೋಜನಗಳನ್ನು ಪಡೆದಿದ್ದಾರೆಯೇ ಎಂದು ಕೇಳಿದರು. ಫಲಾನುಭವಿಯು ತಾನು 10 ಸಾವಿರ ರೂಪಾಯಿ ಸಾಲವನ್ನು ಪಡೆದುಕೊಂಡಿರುವುದಾಗಿ ಮತ್ತು ಅದನ್ನು ತನ್ನ ವ್ಯವಹಾರದಲ್ಲಿ ಹೂಡಿಕೆ ಮಾಡಿರುವುದಾಗಿ ತಿಳಿಸಿದರು. ವ್ಯವಹಾರವನ್ನು ಡಿಜಿಟಲ್ ವಹಿವಾಟಿನಲ್ಲಿ ಹೆಚ್ಚಾಗಿ ಮಾಡುವಂತೆ ಆಕೆಗೆ ಪ್ರಧಾನಮಂತ್ರಿ ಸೂಚಿಸಿದರು.

ಲಲಿತಪುರದ ಪಿಎಂ ಆವಾಸ್ ಯೋಜನೆಯ ಫಲಾನುಭವಿ ಶ್ರೀಮತಿ ಬಬಿತಾ ಅವರ ಜೀವನೋಪಾಯ ಮತ್ತು ಯೋಜನೆಯ ಬಗ್ಗೆ ಅನುಭವವನ್ನು ಪ್ರಧಾನಿ ಕೇಳಿದರು. ಜನ್ ಧನ್ ಖಾತೆಯಿಂದಾಗಿ ಹಣವು ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ ಎಂದು ಅವರು ಹೇಳಿದರು. ತಂತ್ರಜ್ಞಾನವು ಬಡವರಿಗೆ ಹೆಚ್ಚು ಸಹಾಯ ಮಾಡುತ್ತದೆ ಎಂದು ಪ್ರಧಾನಿ ಹೇಳಿದರು. ಸ್ವಾಮಿತ್ವ ಯೋಜನೆಯ ಲಾಭಗಳನ್ನು ಪಡೆದುಕೊಳ್ಳುವಂತೆ ಪ್ರಧಾನಮಂತ್ರಿಯವರು ಆಕೆಗೆ ಕೇಳಿಕೊಂಡರು. ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿಯವರು ತುಂಬಾ ಆರಾಮವಾಗಿ ಮತ್ತು ಹರ್ಷಚಿತ್ತದಿಂದ ಮಾತುಕತೆ ನಡೆಸಿದರು. ಸಂವಾದವು ಅನೌಪಚಾರಿಕ ಮತ್ತು ಸಹಜವಾಗಿತ್ತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿಯವರು, ಎಲ್ಲಾ ಆಸ್ತಿಗಳು ಮನೆಯ ಪುರುಷರ ಹೆಸರಿನಲ್ಲೇ ಇರುವ ಪರಿಸ್ಥಿತಿ ಬದಲಾಗಬೇಕಿದೆ. ಈ ನಿಟ್ಟಿನ ಕ್ರಮವಾಗಿ, ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 80 ಪ್ರತಿಶತಕ್ಕಿಂತ ಹೆಚ್ಚು ಮನೆಗಳನ್ನು ಮಹಿಳೆಯರು ಅಥವಾ ಅವರು ಜಂಟಿ ಮಾಲೀಕತ್ವದಲ್ಲಿ ನೋಂದಾಯಿಸಲಾಗುತ್ತಿದೆ ಎಂದು ಹೇಳಿದರು.

ಅಟಲ್ ಬಿಹಾರಿ ವಾಜಪೇಯಿ ಅವರಂತಹ ದೂರದರ್ಶಿ ನಾಯಕನನ್ನು ಭಾರತಾಂಬೆಗೆ ಸಮರ್ಪಿಸಿದ್ದಕ್ಕಾಗಿ ಪ್ರಧಾನಮಂತ್ರಿಯವರು ಲಕ್ನೋವನ್ನು ಅಭಿನಂದಿಸಿದರು. "ಇಂದು, ಅವರ ನೆನಪಿಗಾಗಿ, ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅಧ್ಯಯನ ಪೀಠವನ್ನು ಸ್ಥಾಪಿಸಲಾಗುತ್ತಿದೆ" ಎಂದು ಅವರು ಘೋಷಿಸಿದರು.

ಹಿಂದಿನ ಸರ್ಕಾರಗಳ ಸಂಖ್ಯೆಗಳಿಗೆ ಹೋಲಿಸಿದರೆ ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಮನೆಗಳಲ್ಲಿ ಭಾರೀ ಹೆಚ್ಚಳವಾಗಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ನಗರಗಳಲ್ಲಿ 1.13 ಕೋಟಿಗೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗುತ್ತಿದೆ ಮತ್ತು ಈ ಪೈಕಿ 50 ಲಕ್ಷಕ್ಕೂ ಹೆಚ್ಚು ಮನೆಗಳನ್ನು ಈಗಾಗಲೇ ನಿರ್ಮಿಸಿ, ಬಡವರಿಗೆ ಹಸ್ತಾಂತರಿಸಲಾಗಿದೆ ಎಂದು ಅವರು ಹೇಳಿದರು. ಕೊಳೆಗೇರಿಗಳಲ್ಲಿ ವಾಸಿಸುತ್ತಿದ್ದ ಮತ್ತು ಸೂರು ಇಲ್ಲದ ನಗರ ಬಡಜನರ ಮೂರು ಕೋಟಿ ಕುಟುಂಬಗಳು ಈಗ ಲಕ್ಷಾಧಿಪತಿಗಳಾಗುವ ಅವಕಾಶವನ್ನು ಪಡೆದುಕೊಂಡಿವೆ ಎಂದು ಪ್ರಧಾನಿ ಹೇಳಿದರು. "ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ, ದೇಶದಲ್ಲಿ ಸುಮಾರು 3 ಕೋಟಿ ಮನೆಗಳನ್ನು ನಿರ್ಮಿಸಲಾಗಿದೆ, ಅವುಗಳ ವೆಚ್ಚ ಎಷ್ಟಾಗಿದೆ ಎಂದರೆ, ಆ ಜನರು ಈಗ ಲಕ್ಷಾಧಿಪತಿಗಳಾಗಿದ್ದಾರೆ "ಎಂದು ಶ್ರೀ ಮೋದಿ ಹೇಳಿದರು. ಉತ್ತರ ಪ್ರದೇಶದಲ್ಲಿ ಇಂದು ವಿತರಿಸಲಾಗಿರುವ ಮನೆಗಳಿಗೂ ಮೊದಲು, ಹಿಂದಿನ ಸರ್ಕಾರಗಳು 18000 ಕ್ಕೂ ಹೆಚ್ಚು ಮನೆಗಳಿಗೆ ಅನುಮೋದನೆ ನೀಡಿದ್ದವು. ಆದರೆ ಆ ಸಮಯದಲ್ಲಿ 18 ಮನೆಗಳನ್ನು ಸಹ ನಿರ್ಮಿಸಲಿಲ್ಲ ಎಂದು ಪ್ರಧಾನಿ ಹೇಳಿದರು. ಯೋಗಿ ಆದಿತ್ಯನಾಥ್ ಅವರ ನೇತೃತ್ವದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, 9 ಲಕ್ಷಕ್ಕೂ ಹೆಚ್ಚು ಮನೆಗಳನ್ನು ನಗರ ಬಡವರಿಗೆ ಹಸ್ತಾಂತರಿಸಲಾಯಿತು ಮತ್ತು 14 ಲಕ್ಷ ಮನೆಗಳು ನಿರ್ಮಾಣದ ವಿವಿಧ ಹಂತಗಳಲ್ಲಿವೆ. ಈ ಮನೆಗಳು ಆಧುನಿಕ ಸೌಕರ್ಯಗಳನ್ನು ಹೊಂದಿವೆ ಎಂದು ಅವರು ಮಾಹಿತಿ ನೀಡಿದರು.

ನಗರಗಳ ಮಧ್ಯಮ ವರ್ಗದವರ ಸಮಸ್ಯೆಗಳು ಮತ್ತು ಸವಾಲುಗಳನ್ನು ಪರಿಹರಿಸಲು ಸರ್ಕಾರವು ಅತ್ಯಂತ ಗಂಭೀರ ಪ್ರಯತ್ನವನ್ನು ಮಾಡಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ರಿಯಲ್ ಎಸ್ಟೇಟ್ ರೆಗ್ಯುಲೇಟರಿ ಅಥಾರಿಟಿ (ರೇರಾ) ಕಾಯಿದೆ ಅವುಗಳಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ಈ ಕಾನೂನು ಇಡೀ ವಸತಿ ವಲಯದಲ್ಲಿ ಅಪನಂಬಿಕೆ ಮತ್ತು ವಂಚನೆಯನ್ನು ತಡೆಯಲು ಸಹಾಯ ಮಾಡಿದೆ ಮತ್ತು ಎಲ್ಲಾ ಪಾಲುದಾರರಿಗೆ ಪ್ರಯೋಜನ ನೀಡಿದೆ ಎಂದು ಅವರು ಹೇಳಿದರು.

ಎಲ್‌ಇಡಿ ಬೀದಿ ದೀಪಗಳನ್ನು ಅಳವಡಿಸುವ ಮೂಲಕ ನಗರ ಸ್ಥಳೀಯ ಸಂಸ್ಥೆಗಳು ಪ್ರತಿ ವರ್ಷ ಸುಮಾರು 1000 ಕೋಟಿ ರೂಪಾಯಿಗಳನ್ನು ಉಳಿಸುತ್ತಿವೆ ಎಂದು ಪ್ರಧಾನಿ ಹೇಳಿದರು. ಈಗ ಈ ಮೊತ್ತವನ್ನು ಇತರ ಅಭಿವೃದ್ಧಿ ಕೆಲಸಗಳಿಗೆ ಬಳಸಲಾಗುತ್ತಿದೆ ಎಂದು ಅವರು ಹೇಳಿದರು. ಎಲ್‌ಇಡಿಯು ನಗರಗಳಲ್ಲಿ ವಾಸಿಸುವ ಜನರ ವಿದ್ಯುತ್ ಬಿಲ್ ಅನ್ನು ಬಹಳವಾಗಿ ಕಡಿಮೆ ಮಾಡಿದೆ ಎಂದು ಅವರು ಹೇಳಿದರು.

ಭಾರತದ ನಗರ ವಲಯದಲ್ಲಿ ಕಳೆದ 6-7 ವರ್ಷಗಳಲ್ಲಿ ತಂತ್ರಜ್ಞಾನದಿಂದಾಗಿ ದೊಡ್ಡ ಪರಿವರ್ತನೆಯಾಗಿದೆ ಎಂದು ಪ್ರಧಾನಿ ಹೇಳಿದರು. ಇಂದು ದೇಶದ 70 ಕ್ಕೂ ಹೆಚ್ಚು ನಗರಗಳಲ್ಲಿ ನಡೆಯುತ್ತಿರುವ ಇಂಟಿಗ್ರೇಟೆಡ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‌ಗಳಿಗೆ ತಂತ್ರಜ್ಞಾನವು ಆಧಾರವಾಗಿದೆ. "ಇಂದು ನಾವು 'ಪಹ್ಲೆ ಆ್ಯಪ್' - ಟೆಕ್ನಾಲಜಿ ಫಸ್ಟ್ 'ಎಂದು ಹೇಳಬೇಕು," ಎಂದು ಪ್ರಧಾನಿಯವರು ಸಾಂಸ್ಕೃತಿಕ ನಗರಿಯಲ್ಲಿ ಹೇಳಿದರು.

ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳು ಬ್ಯಾಂಕುಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಅವರು ಹೇಳಿದರು. ಈ ಯೋಜನೆಯ ಮೂಲಕ, 25 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ 2500 ಕೋಟಿ ರೂ.ಗೂ ಹೆಚ್ಚು ಸಹಾಯವನ್ನು ನೀಡಲಾಗಿದೆ. ಇದರಲ್ಲಿ, ಉತ್ತರ ಪ್ರದೇಶದ 7 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಸ್ವನಿಧಿ ಯೋಜನೆಯ ಲಾಭ ಪಡೆದಿದ್ದಾರೆ ಎಂದರು. ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸುತ್ತಿರುವುದಕ್ಕೆ ಅವರು ಮಾರಾಟಗಾರರನ್ನು ಅಭಿನಂದಿಸಿದರು.

ಇಂದು, ಮೆಟ್ರೋ ಸೇವೆಯು ದೇಶದ ಪ್ರಮುಖ ನಗರಗಳಿಗೆ ವೇಗವಾಗಿ ವಿಸ್ತರಿಸುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. 2014 ರಲ್ಲಿ, ಮೆಟ್ರೋ ಸೇವೆಯು 250 ಕಿಮೀಗಿಂತಲೂ ಕಡಿಮೆ ಇತ್ತು. ಇಂದು ಮೆಟ್ರೋ ರೈಲುಗಳು ಸುಮಾರು 750 ಕಿಮೀ ಮಾರ್ಗದಲ್ಲಿ ಚಲಿಸುತ್ತಿವೆ. ದೇಶದಲ್ಲಿ ಈಗ 1000 ಕಿಲೋಮೀಟರ್‌ಗಳಷ್ಟು ಮೆಟ್ರೋ ಟ್ರ್ಯಾಕ್‌ಗಳಲ್ಲಿ ಕೆಲಸ ನಡೆಯುತ್ತಿದೆ ಎಂದು ಪ್ರಧಾನಿ ಹೇಳಿದರು.

 

 

 



 

 

 

 

 

 

 

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Hope for productive monsoon session': PM Modi highlights India's gains ahead of Parliament proceedings

Media Coverage

'Hope for productive monsoon session': PM Modi highlights India's gains ahead of Parliament proceedings
NM on the go

Nm on the go

Always be the first to hear from the PM. Get the App Now!
...
Prime Minister expresses anguish over the loss of lives due to tunnel collapse in Namchi, Sikkim
July 21, 2026
PM announces ex-gratia from PMNRF

Prime Minister Shri Narendra Modi today expressed anguish over the loss of lives due to the collapse of an under-construction tunnel in Namchi, Sikkim. He extended his deepest condolences to the bereaved families and prayed that those injured recover at the earliest.

The Prime Minister announced that an ex-gratia of Rs. 2 lakh from PMNRF would be given to the next of kin of each deceased. Shri Modi stated that the injured would be given Rs. 50,000.

In a post on X, the Prime Minister shared:

"Anguished by the loss of lives due to the collapse of an under-construction tunnel in Namchi, Sikkim. I extend my deepest condolences to the bereaved families. I pray that those injured recover at the earliest.

An ex-gratia of Rs. 2 lakh from PMNRF would be given to the next of kin of each deceased. The injured would be given Rs. 50,000: PM @narendramodi"