ಕರ್ಖಿಯಾನ್‌ನಲ್ಲಿರುವ ʻಯುಪಿಎಸ್‌ಐಡಿಎ ಆಗ್ರೋ ಪಾರ್ಕ್ʼನಲ್ಲಿ ʻಬನಾಸ್ ಕಾಶಿ ಸಂಕುಲ್ʼ ಹಾಲು ಸಂಸ್ಕರಣಾ ಘಟಕವನ್ನು ಉದ್ಘಾಟಿಸಿದರು
ʻಎಚ್‌ಪಿಸಿಎಲ್ʼನ ಎಲ್‌ಪಿಜಿ ಬಾಟ್ಲಿಂಗ್ ಘಟಕ, ʻಯುಪಿಎಸ್‌ಐಡಿಎ ಆಗ್ರೋ ಪಾರ್ಕ್ʼನಲ್ಲಿ ವಿವಿಧ ಮೂಲಸೌಕರ್ಯ ಕಾಮಗಾರಿಗಳು ಹಾಗೂ ರೇಷ್ಮೆ ಬಟ್ಟೆ ಮುದ್ರಣ ಘಟಕವನ್ನು ಉದ್ಘಾಟಿಸಿದರು
ನಾನಾ ರಸ್ತೆ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ
ವಾರಣಾಸಿಯಲ್ಲಿ ಹಲವು ನಗರಾಭಿವೃದ್ಧಿ, ಪ್ರವಾಸೋದ್ಯಮ ಮತ್ತು ಆಧ್ಯಾತ್ಮಿಕ ಪ್ರವಾಸೋದ್ಯಮ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
ವಾರಣಾಸಿಯ ʻರಾಷ್ಟ್ರೀಯ ಫ್ಯಾಷನ್‌ ಟೆಕ್ನಾಲಜಿ ಸಂಸ್ಥೆʼಗೆ (ಎನ್ಐಎಫ್‌ಟಿ) ಶಂಕುಸ್ಥಾಪನೆ ನೆರವೇರಿಸಿದರು
ಬನಾರಸ್‌ ಹಿಂದೂ ವಿಶ್ವವಿದ್ಯಾಲಯದಲ್ಲಿ (ಬಿಎಚ್‌ಯು) ಹೊಸ ವೈದ್ಯಕೀಯ ಕಾಲೇಜು ಮತ್ತು ʻರಾಷ್ಟ್ರೀಯ ವೃದ್ಧಾಪ್ಯ ಕೇಂದ್ರʼಕ್ಕೆ ಶಂಕುಸ್ಥಾಪನೆ ನೆರವೇರಿಸಿದರು
ʻಸಿಗ್ರಾ ಕ್ರೀಡಾಂಗಣʼ ಹಂತ-1 ಮತ್ತು ಜಿಲ್ಲಾ ರೈಫಲ್ ಶೂಟಿಂಗ್ ರೇಂಜ್ ಉದ್ಘಾಟನೆ ಮಾಡಿದರು
"ಹತ್ತು ವರ್ಷಗಳಲ್ಲಿ ಬನಾರಸ್ ನನ್ನನ್ನು ಬನಾರಸಿಯನ್ನಾಗಿ ಮಾಡಿದೆ"
"ರೈತರು ಮತ್ತು ಪಶುಪಾಲಕರು ಸರ್ಕಾರದ ದೊಡ್ಡ ಆದ್ಯತೆಯಾಗಿದ್ದಾರೆ"
"3 ಲಕ್ಷಕ್ಕೂ ಹೆಚ್ಚು ರೈತರ ಆದಾಯವನ್ನು ʻ ಬನಾಸ್ ಕಾಶಿ ಸಂಕುಲ್ʼ ಹೆಚ್ಚಿಸುತ್ತದೆ"
ಇಂದಿನ ಅಭಿವೃದ್ಧಿ ಯೋಜನೆಗಳು ರಸ್ತೆ, ರೈಲು, ವಾಯುಯಾನ, ಪ್ರವಾಸೋದ್ಯಮ, ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನಗರಾಭಿವೃದ್ಧಿ ಮತ್ತು ನೈರ್ಮಲ್ಯದಂತಹ ಪ್ರಮುಖ ಕ್ಷೇತ್ರಗಳ ಅಗತ್ಯಗಳನ್ನು ಪೂರೈಸುತ್ತವೆ
"ಇದು ದೇಶದ ಸ್ವಸಹಾಯ ಗುಂಪುಗಳೊಂದಿಗೆ ಗುರುತಿಸಿಕೊಂಡಿರುವ 10 ಕೋಟಿ ಮಹಿಳೆಯರಿಗೆ ದೊಡ್ಡ ಸ್ಫೂರ್ತಿಯಾಗಿದೆ," ಎಂದು ಅವರು ಹೇಳಿದರು.
ಈ ಯೋಜನೆಯಡಿ ವಾರಣಾಸಿ, ಜೌನ್ಪುರ, ಚಂದೌಲಿ, ಗಾಜಿಪುರ ಮತ್ತು ಅಜಂಗಢ ಜಿಲ್ಲೆಗಳ 1000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಹೊಸ ಹಾಲಿನ ಮಂಡಿಗಳು ಬರಲಿವೆ ಎಂದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಾಣಸಿಯಲ್ಲಿ 13,000 ಕೋಟಿ ರೂಗಳಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ವಾರಣಾಸಿಯ ಕಾರ್ಖಿಯಾನ್‌ನಲ್ಲಿರುವ ʻಯುಪಿಎಸ್‌ಐಡಿಎ ಆಗ್ರೋ ಪಾರ್ಕ್ʼನಲ್ಲಿ ನಿರ್ಮಿಸಲಾಗಿರುವ ʻಬನಸ್ಕಾಂತ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತʼ ಒಡೆತನದ ಹಾಲು ಸಂಸ್ಕರಣಾ ಘಟಕವಾದ ʻಬನಾಸ್ ಕಾಶಿ ಸಂಕುಲ್‌ʼಗೆ ಭೇಟಿ ನೀಡಿ ಪಶುಸಂಗೋಪನಾ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ʻಪಿಎಂ ಮೋದಿ ಉದ್ಯೋಗ ಪತ್ರʼಗಳು ಮತ್ತು ʻಜಿಐ ಅಧಿಕೃತ ಬಳಕೆದಾರ ಪ್ರಮಾಣಪತ್ರʼಗಳನ್ನು ವಿತರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರಸ್ತೆ, ರೈಲು, ವಾಯುಯಾನ, ಪ್ರವಾಸೋದ್ಯಮ, ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನಗರಾಭಿವೃದ್ಧಿ ಮತ್ತು ನೈರ್ಮಲ್ಯದಂತಹ ಪ್ರಮುಖ ಕ್ಷೇತ್ರಗಳ ಅಗತ್ಯಗಳನ್ನು ಪೂರೈಸುತ್ತವೆ.

 

ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮತ್ತೊಮ್ಮೆ ಕಾಶಿಯಲ್ಲಿ ಉಪಸ್ಥಿತರಿರಲು ಅವಕಾಶ ದೊರೆತದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು ಮತ್ತು 10 ವರ್ಷಗಳ ಹಿಂದೆ ನಗರದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದನ್ನು ಸ್ಮರಿಸಿದರು. ಈ 10 ವರ್ಷಗಳಲ್ಲಿ ಬನಾರಸ್ ತಮ್ಮನ್ನು ʻಬನಾರಸಿʼಯನ್ನಾಗಿ ಪರಿವರ್ತಿಸಿದೆ ಎಂದರು. ಕಾಶಿ ಜನರ ಬೆಂಬಲ ಮತ್ತು ಕೊಡುಗೆಗಳನ್ನು ಶ್ಲಾಘಿಸಿದ ಶ್ರೀ ಮೋದಿ ಅವರು ಇಂದಿನ 13,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅಭಿವೃದ್ಧಿ ಯೋಜನೆಗಳೊಂದಿಗೆ ನವ ಕಾಶಿಯನ್ನು ಸೃಷ್ಟಿಸುವ ಅಭಿಯಾನ ನಡೆಯುತ್ತಿದೆ ಎಂದು ಹೇಳಿದರು. ರೈಲು, ರಸ್ತೆ, ವಿಮಾನ ನಿಲ್ದಾಣ ಸಂಬಂಧಿತ ಯೋಜನೆಗಳಿಂದ ಹಿಡಿದು ಪಶುಸಂಗೋಪನೆ, ಕೈಗಾರಿಕೆ, ಕ್ರೀಡೆ, ಕೌಶಲ್ಯ ಅಭಿವೃದ್ಧಿ, ಸ್ವಚ್ಛತೆ, ಆರೋಗ್ಯ, ಆಧ್ಯಾತ್ಮಿಕತೆ, ಪ್ರವಾಸೋದ್ಯಮ ಮತ್ತು ಎಲ್‌ಪಿಜಿ ಅನಿಲ ಕ್ಷೇತ್ರಗಳವರೆಗಿನ ಈ ಅಭಿವೃದ್ಧಿ ಯೋಜನೆಗಳು ಕಾಶಿ ಮಾತ್ರವಲ್ಲದೆ ಇಡೀ ಪೂರ್ವಾಂಚಲ ಪ್ರದೇಶದ ಅಭಿವೃದ್ಧಿಗೆ ಉತ್ತೇಜನ ನೀಡುತ್ತವೆ ಎಂದು ಅವರು ಹೇಳಿದರು. ಈ ಯೋಜನೆಗಳು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದರು. ಸಂತ ರವಿದಾಸ್ ಜೀ ಅವರಿಗೆ ಸಂಬಂಧಿಸಿದ ಯೋಜನೆಗಳನ್ನು ಪ್ರಸ್ತಾಪಿಸಿದ ಪ್ರಧಾನಮಂತ್ರಿಯವರು ಇದಕ್ಕಾಗಿ ನಾಗರಿಕರನ್ನು ಅಭಿನಂದಿಸಿದರು.

ಕಾಶಿ ಮತ್ತು ಪೂರ್ವ ಉತ್ತರ ಪ್ರದೇಶದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿಯವರು, ಕಳೆದ ರಾತ್ರಿ ಅತಿಥಿ ಗೃಹಕ್ಕೆ ಹೋಗುವ ದಾರಿಯಲ್ಲಿ ತಾವು ಕೈಗೊಂಡ ರಸ್ತೆ ಪ್ರವಾಸವನ್ನು ಸ್ಮರಿಸಿದರು, ಫುಲ್ವಾರಿಯಾ ಮೇಲ್ಸೇತುವೆ ಯೋಜನೆಯ ಪ್ರಯೋಜನಗಳನ್ನು ಉಲ್ಲೇಖಿಸಿದರು. ʻಬಿಎಲ್‌ಡಬ್ಲ್ಯೂʼನಿಂದ ವಿಮಾನ ನಿಲ್ದಾಣಕ್ಕೆ ಸಾಗುವ ಪ್ರಯಾಣದಲ್ಲಿ ಸುಗಮತೆಯ ಸುಧಾರಣೆಯ ಬಗ್ಗೆ ಅವರು ಉಲ್ಲೇಖಿಸಿದರು. ಗುಜರಾತ್ ಪ್ರವಾಸದಿಂದ ಬಂದಿಳಿದ ಕೂಡಲೇ ಪ್ರಧಾನಮಂತ್ರಿಯವರು ಕಳೆದ ರಾತ್ರಿ ಅಭಿವೃದ್ಧಿ ಯೋಜನೆಯನ್ನು ಪರಿಶೀಲಿಸಿದರು. ಕಳೆದ 10 ವರ್ಷಗಳಲ್ಲಿ ಆಗಿರುವ ಅಭಿವೃದ್ಧಿಯ ಬಗ್ಗೆ ಮಾತನಾಡಿದ ಅವರು, ʻಸಿಗ್ರಾ ಕ್ರೀಡಾಂಗಣ ಹಂತ-1ʼ ಮತ್ತು ಜಿಲ್ಲಾ ರೈಫಲ್ ಶೂಟಿಂಗ್ ರೇಂಜ್‌ನಿಂದ ಈ ಪ್ರದೇಶದ ಯುವ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರಯೋಜನವಾಗಲಿದೆ ಎಂದರು.

 

ಇದಕ್ಕೂ ಮುನ್ನ ʻಬನಾಸ್ ಡೈರಿʼಗೆ ಭೇಟಿ ನೀಡಿ, ಹಲವಾರು ಪಶುಪಾಲಕ ಮಹಿಳೆಯರೊಂದಿಗೆ ಸಂವಾದ ನಡೆಸಿದ್ದನ್ನು ಪ್ರಧಾನಿ ಉಲ್ಲೇಖಿಸಿದರು. ಕೃಷಿ ಹಿನ್ನೆಲೆಯ ಮಹಿಳೆಯರಿಗೆ ಜಾಗೃತಿ ಮೂಡಿಸಲು 2-3 ವರ್ಷಗಳ ಹಿಂದೆ ಗಿರ್ ಹಸುಗಳ ಸ್ಥಳೀಯ ತಳಿಗಳನ್ನು ಒದಗಿಸಲಾಗಿದೆ ಎಂದು ಅವರು ಹೇಳಿದರು. ಗಿರ್ ಹಸುಗಳ ಸಂಖ್ಯೆ ಈಗ ಸುಮಾರು 350ಕ್ಕೆ ತಲುಪಿದೆ ಎಂದು ಹೇಳಿದ ಪ್ರಧಾನಮಂತ್ರಿಯವರು, ಸಾಮಾನ್ಯ ಹಸುಗಳು ಉತ್ಪಾದಿಸುವ 5 ಲೀಟರ್‌ಗೆ ಹೋಲಿಸಿದರೆ ಅವು 15 ಲೀಟರ್ ವರೆಗೆ ಹಾಲು ಉತ್ಪಾದಿಸುತ್ತವೆ ಎಂದು ಮಾಹಿತಿ ನೀಡಿದರು. ಗಿರ್ ಹಸುವೊಂದು 20 ಲೀಟರ್ ಹಾಲನ್ನು ಉತ್ಪಾದಿಸುತ್ತಿದ್ದು, ಮಹಿಳೆಯರಿಗೆ ಹೆಚ್ಚುವರಿ ಆದಾಯವನ್ನು ಸೃಷ್ಟಿಸುತ್ತಿದೆ ಮತ್ತು ಅವರನ್ನು ʻಲಕ್ಷಾಧಿಪತಿ ದೀದಿʼಯರನ್ನಾಗಿ ಮಾಡುತ್ತಿದೆ ಎಂದು ಅವರು ಹೇಳಿದರು. "ಇದು ದೇಶದ ಸ್ವಸಹಾಯ ಗುಂಪುಗಳೊಂದಿಗೆ ಗುರುತಿಸಿಕೊಂಡಿರುವ 10 ಕೋಟಿ ಮಹಿಳೆಯರಿಗೆ ದೊಡ್ಡ ಸ್ಫೂರ್ತಿಯಾಗಿದೆ," ಎಂದು ಅವರು ಹೇಳಿದರು.

ಎರಡು ವರ್ಷಗಳ ಹಿಂದೆ ʻಬನಾಸ್ ಡೈರಿʼಗೆ ಶಂಕುಸ್ಥಾಪನೆ ನೆರವೇರಿಸಿದ ಘಟನೆಯನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ಆ ದಿನ ನೀಡಿದ ಭರವಸೆಯು ಇಂದು ಜನರ ಮುಂದಿದೆ ಎಂದರು. ಸರಿಯಾದ ಹೂಡಿಕೆಯ ಮೂಲಕ ಉದ್ಯೋಗ ಸೃಷ್ಟಿಗೆ ʻಬನಾಸ್ ಡೈರಿʼ ಉತ್ತಮ ಉದಾಹರಣೆಯಾಗಿದೆ ಎಂದು ಅವರು ಹೇಳಿದರು. ʻಬನಾಸ್ ಡೈರಿʼಯು ವಾರಣಾಸಿ, ಮಿರ್ಜಾಪುರ, ಗಾಜಿಪುರ ಮತ್ತು ರಾಯ್‌ಬರೇಲಿಯಿಂದ ಸುಮಾರು 2 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸುತ್ತದೆ. ಹೊಸ ಸ್ಥಾವರದ ಪ್ರಾರಂಭದೊಂದಿಗೆ, ಬಲ್ಲಿಯಾ, ಚಂದೌಲಿ, ಪ್ರಯಾಗ್ರಾಜ್ ಮತ್ತು ಜೌನ್ಪುರದ ಪಶುಪಾಲಕರು ಸಹ ಪ್ರಯೋಜನ ಪಡೆಯಲಿದ್ದಾರೆ. ಈ ಯೋಜನೆಯಡಿ ವಾರಣಾಸಿ, ಜೌನ್ಪುರ, ಚಂದೌಲಿ, ಗಾಜಿಪುರ ಮತ್ತು ಅಜಂಗಢ ಜಿಲ್ಲೆಗಳ 1000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಹೊಸ ಹಾಲಿನ ಮಂಡಿಗಳು ಬರಲಿವೆ ಎಂದರು.

ʻಬನಾಸ್ ಕಾಶಿ ಸಂಕುಲʼವು ಸಾವಿರಾರು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಒಂದು ಅಂದಾಜಿನ ಪ್ರಕಾರ, ʻಬನಾಸ್ ಕಾಶಿ ಸಂಕುಲʼವು 3 ಲಕ್ಷಕ್ಕೂ ಅಧಿಕ ರೈತರ ಆದಾಯಕ್ಕೆ ಉತ್ತೇಜನ ನೀಡುತ್ತದೆ ಎಂದು ಪ್ರಧಾನಿ ಹೇಳಿದರು. ಈ ಘಟಕವು ಮಜ್ಜಿಗೆ, ಮೊಸರು, ಲಸ್ಸಿ, ಐಸ್ ಕ್ರೀಮ್, ಪನೀರ್ ಮತ್ತು ಪ್ರಾದೇಶಿಕ ಸಿಹಿತಿಂಡಿಗಳಂತಹ ಇತರ ಡೈರಿ ಉತ್ಪನ್ನಗಳ ತಯಾರಿಕೆಯನ್ನು ಸಹ ಕೈಗೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದರು. ಬನಾರಸ್‌ನ ಸಿಹಿತಿಂಡಿಗಳನ್ನು ಭಾರತದ ಮೂಲೆ ಮೂಲೆಗೂ ಕೊಂಡೊಯ್ಯುವಲ್ಲಿ ಈ ಸ್ಥಾವರವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು. ಹಾಲಿನ ಸಾಗಣೆಯು ಉದ್ಯೋಗದ ಮಾರ್ಗವಾಗಲಿದೆ ಜೊತೆಗೆ ಪಶು  ಪೋಷಕಾಂಶ ಉದ್ಯಮಕ್ಕೆ ಉತ್ತೇಜನ ದೊರೆಯಲಿದೆ ಎಂದೂ ಅವರು ಪ್ರಸ್ತಾಪಿಸಿದರು.

 

ಪಶುಪಾಲಕ ಸಹೋದರಿಯರ ಖಾತೆಗಳಿಗೆ ಡಿಜಿಟಲ್ ರೂಪದಲ್ಲಿ ನೇರವಾಗಿ ಹಣವನ್ನು ವರ್ಗಾಯಿಸುವ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವಂತೆ ಡೈರಿಯ ಮುಖ್ಯಸ್ಥರಿಗೆ ಪ್ರಧಾನಿ ವಿನಂತಿಸಿದರು. ಹೈನುಗಾರಿಕೆ ಕ್ಷೇತ್ರದಲ್ಲಿ ಮಹಿಳೆಯರ ಪ್ರಾಬಲ್ಯವನ್ನು ಉಲ್ಲೇಖಿಸಿದರು. ಸಣ್ಣ ರೈತರು ಮತ್ತು ಭೂರಹಿತ ಕಾರ್ಮಿಕರಿಗೆ ಸಹಾಯ ಮಾಡುವಲ್ಲಿ ಪಶುಸಂಗೋಪನೆಯ ಪಾತ್ರವನ್ನು ಪ್ರಧಾನಿ ಒತ್ತಿ ಹೇಳಿದರು.

ಅನ್ನದಾತರಾದ ರೈತರನ್ನು ʻಪೋಷಕಾಂಶ ದಾತʼ ಹಂತದಿಂದ ʻರಸಗೊಬ್ಬರ ದಾತʼ ಹಂತಕ್ಕೆ ಕೊಂಡೊಯ್ಯುವ ಸರ್ಕಾರದ ಸಂಕಲ್ಪವನ್ನು ಪ್ರಧಾನಿ ಪುನರುಚ್ಚರಿಸಿದರು. ʻಗೋಬರ್ ಧನ್ʼ ಯೋಜನೆಯಲ್ಲಿರುವ ಅವಕಾಶದ ಬಗ್ಗೆ ಮಾಹಿತಿ ನೀಡಿದ ಅವರು, ʻಜೈವಿಕ ಸಿಎನ್‌ಜಿʼ ಮತ್ತು ಸಾವಯವ ಗೊಬ್ಬರವನ್ನು ತಯಾರಿಸಲು ಡೈರಿಯಲ್ಲಿರುವ ಘಟಕದ ಬಗ್ಗೆ ಮಾತನಾಡಿದರು. ಗಂಗಾ ನದಿಯ ದಡದಲ್ಲಿ ಹೆಚ್ಚುತ್ತಿರುವ ನೈಸರ್ಗಿಕ ಕೃಷಿಯ ಪ್ರವೃತ್ತಿಯ ಬಗ್ಗೆ ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ʻಗೋಬರ್ ಧನ್ʼ ಯೋಜನೆಯಡಿ ಸಾವಯವ ಗೊಬ್ಬರದ ಉಪಯುಕ್ತತೆಯ ಬಗ್ಗೆ ಸಹಮತ ವ್ಯಕ್ತಪಡಿಸಿದರು. ʻಎನ್‌ಟಿಪಿಸಿʼಯ ಇದ್ದಿಲು ಘಟಕಕ್ಕೆ ನಗರ ತ್ಯಾಜ್ಯದ ಬಳಕೆಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, 'ಕಸವನ್ನು ಕಾಂಚಾಣʼವಾಗಿ ಪರಿವರ್ತಿಸುವ ಕಾಶಿಯ ಉತ್ಸಾಹವನ್ನು ಶ್ಲಾಘಿಸಿದರು.

ರೈತರು ಮತ್ತು ಪರಶುಪಾಲಕರು ಸರ್ಕಾರದ ಅತ್ಯಂತ ಪ್ರಧಾನ ಆದ್ಯತೆಯಾಗಿದ್ದಾರೆ ಎಂದು ಪ್ರಧಾನಿ ಹೇಳಿದರು. ಕಳೆದ ಸಚಿವ ಸಂಪುಟ ಸಭೆಯಲ್ಲಿ ಕಬ್ಬಿನ ʻಎಫ್‌ಆರ್‌ಪಿʼ ದರವನ್ನು ಕ್ವಿಂಟಾಲ್‌ಗೆ 340 ರೂ.ಗೆ ಪರಿಷ್ಕರಿಸಿರುವುದನ್ನು ಮತ್ತು ʻರಾಷ್ಟ್ರೀಯ ಜಾನುವಾರು ಯೋಜನೆʼಯಲ್ಲಿ ತಿದ್ದುಪಡಿಯೊಂದಿಗೆ ʻಪಶುಧನ್ ಬಿಮಾʼ ಕಾರ್ಯಕ್ರಮವನ್ನು ಸರಾಗಗೊಳಿಸಿರುವುದನ್ನು ಅವರು ಉಲ್ಲೇಖಿಸಿದರು. ರೈತರ ಬಾಕಿಯನ್ನು ಪಾವತಿಸುವುದು ಮಾತ್ರವಲ್ಲ, ಬೆಳೆಗಳ ಬೆಲೆಗಳನ್ನು ಸಹ ಹೆಚ್ಚಿಸಲಾಗುತ್ತಿದೆ ಎಂದು ಅವರು ಹೇಳಿದರು.

 

"ಆತ್ಮನಿರ್ಭರ ಭಾರತವು ʻವಿಕಸಿತ ಭಾರತʼಕ್ಕೆ ಅಡಿಪಾಯವಾಗಲಿದೆ," ಎಂದು ಹೇಳಿದ ಪ್ರಧಾನಮಂತ್ರಿಯವರು, ಹಿಂದಿನ ಮತ್ತು ಈಗಿನ ಸರ್ಕಾರದ ಚಿಂತನೆಯ ಪ್ರಕ್ರಿಯೆಯ ನಡುವಿನ ವ್ಯತ್ಯಾಸವನ್ನು ಒತ್ತಿ ಹೇಳಿದರು. ದೇಶದಲ್ಲಿನ ಸಣ್ಣ ಸಾಧ್ಯತೆಗಳನ್ನು ಪುನರುಜ್ಜೀವನಗೊಳಿಸಿದಾಗ; ಸಣ್ಣ ರೈತರು, ಪಶುಪಾಲಕರು, ಕುಶಲಕರ್ಮಿಗಳು ಹಾಗೂ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ನೆರವು ನೀಡಿದಾಗ ಮಾತ್ರ ʻಆತ್ಮನಿರ್ಭರ ಭಾರತʼವು ಸಾಕಾರವಾಗುತ್ತದೆ ಎಂದು ಅವರು ಒತ್ತಿ ಹೇಳಿದರು. ದೂರದರ್ಶನ ಮತ್ತು ಪತ್ರಿಕೆಗಳ ಜಾಹೀರಾತುಗಳಿಗಾಗಿ ಖರ್ಚು ಮಾಡಲು ಸಾಧ್ಯವಾಗದ ಸಣ್ಣ ವ್ಯಾಪಾರಿಗಳಿಗೆ ʻವೋಕಲ್ ಫಾರ್ ಲೋಕಲ್ʼ ಕರೆಯು ತಾನೇ ಒಂದು ಜಾಹೀರಾತಾಗಿದೆ ಎಂದು ಪ್ರಧಾನಿ ಹೇಳಿದರು. ಅದು ಖಾದಿ ಪ್ರಚಾರವಾಗಿರಲಿ, ಆಟಿಕೆ ತಯಾರಿಕೆ ಪ್ರಚಾರವಾಗಿರಲಿ, ʻಮೇಕ್ ಇನ್ ಇಂಡಿಯಾʼ ಅಥವಾ ʻದೇಖೋ ಅಪ್ನಾ ದೇಶ್ʼ ಪ್ರಚಾರವಾಗಲಿ ಪ್ರತಿ ಸಣ್ಣ ರೈತ ಮತ್ತು ಉದ್ಯಮದ ಪಾಲಿಗೆ ಮೋದಿಯೇ ರಾಯಭಾರಿಯಾಗಿದ್ದಾರೆ. ವಿಶ್ವನಾಥ ಧಾಮದ ಪುನರುಜ್ಜೀವನದ ನಂತರ 12 ಕೋಟಿಗೂ ಹೆಚ್ಚು ಪ್ರವಾಸಿಗರು ನಗರಕ್ಕೆ ಭೇಟಿ ನೀಡಿದ್ದು, ಇದು ಆದಾಯ ಮತ್ತು ಉದ್ಯೋಗಾವಕಾಶಗಳ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. ʻಭಾರತೀಯ ಒಳನಾಡು ಜಲಮಾರ್ಗ ಪ್ರಾಧಿಕಾರʼವು(ಐಡಬ್ಲ್ಯೂಎಐ) ವಾರಣಾಸಿ ಮತ್ತು ಅಯೋಧ್ಯೆಗೆ ಒದಗಿಸಿದ ಎಲೆಕ್ಟ್ರಿಕ್ ಕ್ಯಾಟಮಾರನ್ ಹಡಗಿಗೆ ಚಾಲನೆ ನೀಡಿದ್ದನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ಇದು ಭೇಟಿ ಈ ಕ್ಷೇತ್ರಗಳಿಗೆ ನೀಡುವವರಿಗೆ ವಿಶಿಷ್ಟ ಅನುಭವವನ್ನು ಸೃಷ್ಟಿಸುತ್ತದೆ ಎಂದು ಹೇಳಿದರು.

ಹಿಂದಿನ ಕಾಲದಲ್ಲಿ ವಂಶಪಾರಂಪರ್ಯ ರಾಜಕೀಯ, ಭ್ರಷ್ಟಾಚಾರ ಮತ್ತು ತುಷ್ಟೀಕರಣದ ದುಷ್ಪರಿಣಾಮಗಳ ಬಗ್ಗೆಯೂ ಪ್ರಧಾನಿ ವಿವರಿಸಿದರು. ಕೆಲವು ವರ್ಗಗಳು ಕಾಶಿಯ ಯುವಕರನ್ನು ಕೆಟ್ಟದಾಗಿ ಬಂಬಿಸುತ್ತಿವೆ ಎಂದು ಅವರು ಟೀಕಿಸಿದರು. ಯುವಕರ ಬೆಳವಣಿಗೆ ಮತ್ತು ವಂಶಪಾರಂಪರ್ಯ ರಾಜಕೀಯದ ನಡುವಿನ ವಿರೋಧಾಭಾಸವನ್ನು ಅವರು ಎತ್ತಿ ತೋರಿದರು. ಕಾಶಿ ಮತ್ತು ಅಯೋಧ್ಯೆಗೆ ದೊರೆತಿರುವ ಹೊಸ ರೂಪದ ಬಗ್ಗೆ ಈ ಶಕ್ತಿಗಳು ಹೊಂದಿರುವ ದ್ವೇಷದ ಬಗ್ಗೆ ಅವರು ಗಮನ ಸೆಳೆದರು.

 

"ಮೋದಿ ಅವರ ಮೂರನೇ ಅವಧಿಯು ಭಾರತದ ಸಾಮರ್ಥ್ಯಗಳನ್ನು ವಿಶ್ವದ ಮುಂಚೂಣಿಗೆ ತರುತ್ತದೆ ಮತ್ತು ಭಾರತದ ಆರ್ಥಿಕ, ಸಾಮಾಜಿಕ, ವ್ಯೂಕಾತ್ಮಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳು ಹೊಸ ಎತ್ತರದಲ್ಲಿರಲಿವೆ," ಎಂದು ಪ್ರಧಾನಿ ಹೇಳಿದರು. ಭಾರತದ ಪ್ರಗತಿಯನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಕಳೆದ 10 ವರ್ಷಗಳಲ್ಲಿ 11ನೇ ಸ್ಥಾನದಲ್ಲಿದ್ದ ಭಾರತದ ಆರ್ಥಿಕತೆಯು ಈಗ ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯ ಮಟ್ಟಕ್ಕೆ ಜಿಗಿದಿದೆ ಎಂದರು. ಮುಂದಿನ 5 ವರ್ಷಗಳಲ್ಲಿ ಭಾರತವು 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಮುಂದಿನ 5 ವರ್ಷಗಳಲ್ಲಿ ʻಡಿಜಿಟಲ್ ಇಂಡಿಯಾʼ, ರಸ್ತೆಗಳ ಅಗಲೀಕರಣ, ಆಧುನೀಕರಿಸಿದ ರೈಲ್ವೆ ನಿಲ್ದಾಣಗಳು ಮತ್ತು ʻವಂದೇ ಭಾರತ್ʼ, ʻಅಮೃತ್ ಭಾರತ್ʼ ಹಾಗೂ ʻನಮೋ ಭಾರತ್ʼ ರೈಲುಗಳಂತಹ ಅಭಿವೃದ್ಧಿ ಕಾರ್ಯಗಳನ್ನು ವೇಗಗೊಳಿಸಲಾಗುವುದು ಎಂಬ ವಿಶ್ವಾಸವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದರು. " ಅಭಿವೃದ್ಧಿಯಿಂದ ವಂಚಿತವಾಗಿರುವ ಪೂರ್ವ ಭಾರತವನ್ನು ʻವಿಕಸಿತ ಭಾರತʼದ ಬೆಳವಣಿಗೆಯ ಎಂಜಿನ್ ಆಗಿ ಮಾಡುವುದು ಮೋದಿಯವರ ಗ್ಯಾರಂಟಿ" ಎಂದು ಪ್ರಧಾನಿ ಶ್ರೀ ಮೋದಿ ಹೇಳಿದರು. ವಾರಣಾಸಿಯಿಂದ ಔರಂಗಾಬಾದ್ ವರೆಗಿನ ಆರು ಪಥದ ಹೆದ್ದಾರಿಯ ಮೊದಲ ಹಂತದ ಉದ್ಘಾಟನೆಯ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ಮುಂದಿನ 5 ವರ್ಷಗಳಲ್ಲಿ ವಾರಣಾಸಿ-ರಾಂಚಿ-ಕೋಲ್ಕತಾ ಎಕ್ಸ್‌ಪ್ರೆಸ್‌ ವೇ ಪೂರ್ಣಗೊಳ್ಳುವುದರಿಂದ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದ ನಡುವಿನ ಅಂತರ ಕಡಿಮೆಯಾಗಲಿದೆ ಎಂದರು. "ಭವಿಷ್ಯದಲ್ಲಿ, ಬನಾರಸ್‌ನಿಂದ ಕೋಲ್ಕತ್ತಾಗೆ ಪ್ರಯಾಣದ ಸಮಯವು ಬಹುತೇಕ ಅರ್ಧದಷ್ಟು ಕಡಿಮೆಯಾಗಲಿದೆ," ಎಂದು ಅವರು ಮಾಹಿತಿ ನೀಡಿದರು.

ಮುಂಬರುವ 5 ವರ್ಷಗಳಲ್ಲಿ ಕಾಶಿಯ ಅಭಿವೃದ್ಧಿಯ ಹೊಸ ಆಯಾಮಗಳ ಬಗ್ಗೆ ಪ್ರಧಾನಿ ನಿರೀಕ್ಷೆ ವ್ಯಕ್ತಪಡಿಸಿದರು. ʻಕಾಶಿ ರೋಪ್ ವೇʼ ಮತ್ತು ವಿಮಾನ ನಿಲ್ದಾಣದ ಸಾಮರ್ಥ್ಯದಲ್ಲಿನ ಅಗಾಧ ಹೆಚ್ಚಳವನ್ನು ಅವರು ಉಲ್ಲೇಖಿಸಿದರು. ಕಾಶಿಯು ದೇಶದ ಪ್ರಮುಖ ಕ್ರೀಡಾ ನಗರವಾಗಿ ಹೊರಹೊಮ್ಮಲಿದೆ ಎಂದು ಅವರು ಹೇಳಿದರು. ʻಮೇಕ್ ಇನ್ ಇಂಡಿಯಾʼ ಮತ್ತು ʻಆತ್ಮನಿರ್ಭರ ಭಾರತʼ ಅಭಿಯಾನಕ್ಕೆ ಕಾಶಿ ಪ್ರಮುಖ ಕೊಡುಗೆ ನೀಡಿದೆ ಎಂದು ಅವರು ಹೇಳಿದರು. ಮುಂದಿನ 5 ವರ್ಷಗಳಲ್ಲಿ ಕಾಶಿ ಉದ್ಯೋಗ ಮತ್ತು ಕೌಶಲ್ಯದ ಕೇಂದ್ರವಾಗಲಿದೆ ಎಂದು ಅವರು ಮಾಹಿತಿ ನೀಡಿದರು. ಈ ಅವಧಿಯಲ್ಲಿ ʻನ್ಯಾಷನಲ್ ಇನ್ಸ್‌ಟಿಟ್ಯೂಷನ್ ಆಫ್ ಫ್ಯಾಶನ್ ಟೆಕ್ನಾಲಜಿʼಯ ಕ್ಯಾಂಪಸ್ ಸಹ ಪೂರ್ಣಗೊಳ್ಳಲಿದ್ದು, ಇದು ಈ ಪ್ರದೇಶದ ಯುವಕರು ಮತ್ತು ನೇಕಾರರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದರು. "ಕಳೆದ ದಶಕದಲ್ಲಿ, ನಾವು ಆರೋಗ್ಯ ಮತ್ತು ಶಿಕ್ಷಣದ ಕೇಂದ್ರವಾಗಿ ಕಾಶಿಗೆ ಹೊಸ ಗುರುತನ್ನು ತಂದುಕೊಟ್ಟಿದ್ದೇವೆ. ಈಗ ಅದಕ್ಕೆ ಹೊಸ ವೈದ್ಯಕೀಯ ಕಾಲೇಜನ್ನೂ ಸೇರಿಸಲಾಗುವುದು", ಎಂದು ಪ್ರಧಾನಿ ಹೇಳಿದರು. ಬನಾರಸ್‌ ಹಿಂದೂ ವಿಶ್ವವಿದ್ಯಾಲಯದಲ್ಲಿ ʻರಾಷ್ಟ್ರೀಯ ವೃದ್ಧಾಪ್ಯ ಕೇಂದ್ರʼದ ಜೊತೆಗೆ, 35 ಕೋಟಿ ರೂ.ಗಳ ವೆಚ್ಚದಲ್ಲಿ ಅನೇಕ ರೋಗನಿರ್ಣಯ ಯಂತ್ರಗಳು ಮತ್ತು ಉಪಕರಣಗಳನ್ನು ಇಂದು ಉದ್ಘಾಟಿಸಲಾಯಿತು. ಆಸ್ಪತ್ರೆಯಿಂದ ಉತ್ಪತ್ತಿಯಾಗುವ ಜೈವಿಕ ಹಾನಿಕಾರಕ ತ್ಯಾಜ್ಯವನ್ನು ವಿಲೇವಾರಿ ಮಾಡುವ ಘಟಕವನ್ನೂ ಸಹ ಅಭಿವೃದ್ಧಿಪಡಿಸಲಾಗುತ್ತಿದೆ.

ತಮ್ಮ ಭಾಷಣವನ್ನು ಮುಕ್ತಾಯಗೊಳಿಸುವ ಮುನ್ನ ಪ್ರಧಾನಮಂತ್ರಿಯವರು, ಕಾಶಿ ಮತ್ತು ಉತ್ತರ ಪ್ರದೇಶದ ಕ್ಷಿಪ್ರ ಅಭಿವೃದ್ಧಿ ಮುಂದುವರಿಯಬೇಕು ಮತ್ತು ಇದಕ್ಕಾಗಿ ಕಾಶಿಯ ಪ್ರತಿಯೊಬ್ಬ ನಿವಾಸಿಯೂ ಒಂದಾಗಬೇಕು ಎಂದು ಕರೆ ನೀಡಿದರು. "ದೇಶ ಮತ್ತು ಜಗತ್ತು ಮೋದಿಯವರ ʻಗ್ಯಾರಂಟಿʼಯ ಮೇಲೆ ಅಷ್ಟೊಂದು ನಂಬಿಕೆಯನ್ನು ಹೊಂದಿದೆಯೆಂದರೆ, ಅದಕ್ಕೆ ನಿಮ್ಮ ಪ್ರೀತಿ ಮತ್ತು ಬಾಬಾ ಅವರ ಆಶೀರ್ವಾದವೇ ಕಾರಣ," ಎಂದು ಅವರು ಹೇಳಿದರು.

 

ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಬ್ರಿಜೇಶ್ ಪಾಠಕ್, ಕೇಂದ್ರ ಸಚಿವ ಶ್ರೀ ಮಹೇಂದ್ರ ನಾಥ್ ಪಾಂಡೆ ಮತ್ತು ಬನಾಸ್ ಡೈರಿಯ ಅಧ್ಯಕ್ಷ ಶ್ರೀ ಶಂಕರ್ ಭಾಯ್ ಚೌಧರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

ಹಿನ್ನೆಲೆ

ವಾರಣಾಸಿಯಲ್ಲಿ ರಸ್ತೆ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ, ರಾಷ್ಟ್ರೀಯ ಹೆದ್ದಾರಿ 233ರ ʻಘರ್‌ಗ್ರಾ-ಸೇತುವೆ-ವಾರಣಾಸಿʼ ವಿಭಾಗವನ್ನು ಚತುಷ್ಪಥಗೊಳಿಸುವುದು ಸೇರಿದಂತೆ ಅನೇಕ ರಸ್ತೆ ಯೋಜನೆಗಳನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ರಾಷ್ಟ್ರೀಯ ಹೆದ್ದಾರಿ 56ರ ಸುಲ್ತಾನಪುರ-ವಾರಣಾಸಿ ವಿಭಾಗವನ್ನು ಚತುಷ್ಪಥಗೊಳಿಸುವುದು, ಪ್ಯಾಕೇಜ್-1; ರಾಷ್ಟ್ರೀಯ ಹೆದ್ದಾರಿ-19ರ ವಾರಣಾಸಿ-ಔರಂಗಾಬಾದ್ ವಿಭಾಗದ ಮೊದಲ ಹಂತದ ಆರು ಪಥದ ರಸ್ತೆ; ರಾಷ್ಟ್ರೀಯ ಹೆದ್ದಾರಿ 35ರಲ್ಲಿ ಪ್ಯಾಕೇಜ್-1 ʻವಾರಣಾಸಿ-ಹನುಮಾನ್ʼ ವಿಭಾಗವನ್ನು ಚತುಷ್ಪಥಗೊಳಿಸುವುದು, ಬಾಬತ್‌ಪುರ ಬಳಿಯ ʻವಾರಣಾಸಿ-ಜೌನ್ಪುರʼ ರೈಲು ವಿಭಾಗದಲ್ಲಿ ರೈಲ್ವೇ ಮೇಲ್ಸೇತುವೆ ಇವುಗಳಲ್ಲಿ ಸೇರಿವೆ. ಜೊತೆಗೆ, ʻವಾರಣಾಸಿ-ರಾಂಚಿ-ಕೋಲ್ಕತಾ
ಎಕ್ಸ್‌ಪ್ರೆಸ್ ವೇʼ ಪ್ಯಾಕೇಜ್-1ರ ನಿರ್ಮಾಣಕ್ಕೂ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಈ ಪ್ರದೇಶದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸೇವಾಪುರಿಯಲ್ಲಿ ʻಎಚ್‌ಪಿಸಿಎಲ್ʼನ ಎಲ್‌ಪಿಜಿ ಬಾಟ್ಲಿಂಗ್ ಘಟಕವನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು. ಕಾರ್ಖಿಯಾನ್‌ನಲ್ಲಿರುವ ʻಯುಪಿಎಸ್ಐಡಿಎ ಆಗ್ರೋ ಪಾರ್ಕ್ʼನಲ್ಲಿ ʻಬನಾಸ್ ಕಾಶಿ ಸಂಕುಲ್ʼ ಹಾಲು ಸಂಸ್ಕರಣಾ ಘಟಕ; ಕರ್ಖಿಯಾನ್‌ನ ʻಯುಪಿಎಸ್ಐಡಿಎ ಆಗ್ರೋ ಪಾರ್ಕ್ʼನಲ್ಲಿ ವಿವಿಧ ಮೂಲಸೌಕರ್ಯ ಕಾಮಗಾರಿಗಳು; ಮತ್ತು ನೇಕಾರರಿಗೆ ರೇಷ್ಮೆ ಬಟ್ಟೆ ಮುದ್ರಣ ಸೌಲಭ್ಯ ಕೇಂದ್ರವನ್ನು ಅವರು ಉದ್ಘಾಟಿಸಿದರು.

ರಮಣದಲ್ಲಿ ʻಎನ್‌ಟಿಪಿಸಿʼ ನಿರ್ಮಿಸಿರುವ ನಗರ ತ್ಯಾಜ್ಯದಿಂದ ಇದ್ದಿಲು ತಯಾರಿಕೆ ಸ್ಥಾವರ ಸೇರಿದಂತೆ ವಾರಣಾಸಿಯಲ್ಲಿ ಹಲವು ನಗರಾಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಿದರು. ʻಸಿಸ್-ವರುಣಾʼ ಪ್ರದೇಶದಲ್ಲಿ ನೀರು ಸರಬರಾಜು ಜಾಲ ಉನ್ನತೀಕರಣ; ʻಎಸ್‌ಟಿಪಿಗʼಳು ಮತ್ತು ಒಳಚರಂಡಿ ಪಂಪಿಂಗ್ ಕೇಂದ್ರಗಳ ಆನ್‌ಲೈನ್ ತ್ಯಾಜ್ಯ ಮೇಲ್ವಿಚಾರಣೆ ಹಾಗೂ ʻಎಸ್‌ಸಿಎಡಿಎʼ ಯಾಂತ್ರೀಕರಣವೂ ಇದರಲ್ಲಿ ಸೇರಿವೆ. ಕೆರೆಗಳ ಪುನರುಜ್ಜೀವನ ಮತ್ತು ಉದ್ಯಾನವನಗಳ ಪುನರಾಭಿವೃದ್ಧಿ ಯೋಜನೆಗಳು; 3D ಅರ್ಬನ್ ಡಿಜಿಟಲ್ ನಕ್ಷೆ ಮತ್ತು ಡೇಟಾಬೇಸ್‌ನ ವಿನ್ಯಾಸ ಮತ್ತು ಅಭಿವೃದ್ಧಿ ಸೇರಿದಂತೆ ವಾರಣಾಸಿಯ ಸೌಂದರ್ಯೀಕರಣಕ್ಕಾಗಿ ಅನೇಕ ಯೋಜನೆಗಳಿಗೆ ಪ್ರಧಾನಿಯವರು ಶಂಕುಸ್ಥಾಪನೆ ನೆರವೇರಿಸಿದರು.

ಪ್ರಧಾನಮಂತ್ರಿಯವರು ವಾರಣಾಸಿಯಲ್ಲಿ ಪ್ರವಾಸೋದ್ಯಮ ಮತ್ತು ಆಧ್ಯಾತ್ಮಿಕ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಹಲವು ಯೋಜನೆಗಳನ್ನು ಉದ್ಘಾಟಿಸಿದರು. ʻಪಂಚಕೋಶಿ ಪರಿಕ್ರಮ ಮಾರ್ಗದ ಐದು ʻಪದವ್ʼಗಳಲ್ಲಿ ಸಾರ್ವಜನಿಕ ಸೌಲಭ್ಯಗಳನ್ನು ಪುನರಾಭಿವೃದ್ಧಿ ಹಾಗೂ ʻಪವನ್ ಪಥʼದೊಂದಿಗೆ ಹತ್ತು ಆಧ್ಯಾತ್ಮಿಕ ಯಾತ್ರೆಗಳು ಈ ಯೋಜನೆಗಳಲ್ಲಿ ಸೇರಿವೆ; ವಾರಣಾಸಿ ಮತ್ತು ಅಯೋಧ್ಯೆಗೆ ಭಾರತೀಯ ಒಳನಾಡು ಜಲಮಾರ್ಗ ಪ್ರಾಧಿಕಾರ (ಐಡಬ್ಲ್ಯೂಎಐ) ಒದಗಿಸಿದ ಎಲೆಕ್ಟ್ರಿಕ್ ಕ್ಯಾಟಮಾರನ್ ಹಡಗಿಗೆ ಚಾಲನೆ; ಮತ್ತು ತೇಲುವ ಜೆಟ್ಟಿಗಳಲ್ಲಿ ಏಳು ವಸ್ತ್ರ ಬದಲಾವಣೆ ಕೋಣೆಗಳು ಮತ್ತು ನಾಲ್ಕು ಸಮುದಾಯ ಜೆಟ್ಟಿಗಳು ಇದರಲ್ಲಿ ಸೇರಿವೆ. ಎಲೆಕ್ಟ್ರಿಕ್ ಕ್ಯಾಟಮಾರನ್ ಹಡಗು ಹಸಿರು ಶಕ್ತಿಯ ಬಳಕೆಯೊಂದಿಗೆ ಗಂಗಾದಲ್ಲಿ ಪ್ರವಾಸೋದ್ಯಮದ ಅನುಭವವನ್ನು ಹೆಚ್ಚಿಸುತ್ತದೆ.

 ಪ್ರಧಾನಮಂತ್ರಿಯವರು ವಿವಿಧ ನಗರಗಳಲ್ಲಿ ʻಐಡಬ್ಲ್ಯೂಎಐʼನ ಹದಿಮೂರು ಸಮುದಾಯ ಜೆಟ್ಟಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಬಲ್ಲಿಯಾದಲ್ಲಿ ತ್ವರಿತ ಪಾಂಟೂನ್ ತೆರೆಯುವ ಕಾರ್ಯವಿಧಾನಕ್ಕೂ ಶಂಕುಸ್ಥಾಪನೆ ನೆರವೇರಿಸಿದರು.

ವಾರಣಾಸಿಯ ಪ್ರಸಿದ್ಧ ಜವಳಿ ಕ್ಷೇತ್ರಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿಯವರು ವಾರಣಾಸಿಯಲ್ಲಿ ʻರಾಷ್ಟ್ರೀಯ ಫ್ಯಾಷನ್ ತಂತ್ರಜ್ಞಾನ ಸಂಸ್ಥೆʼಗೆ (ಎನ್‌ಐಎಫ್‌ಟಿ)  ಶಂಕುಸ್ಥಾಪನೆ ನೆರವೇರಿಸಿದರು. ಹೊಸ ಸಂಸ್ಥೆಯು ಜವಳಿ ಕ್ಷೇತ್ರದ ಶಿಕ್ಷಣ ಮತ್ತು ತರಬೇತಿ ಮೂಲಸೌಕರ್ಯವನ್ನು ಬಲಪಡಿಸುತ್ತದೆ.

ವಾರಣಾಸಿಯಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಿದ ಪ್ರಧಾನಮಂತ್ರಿಯವರು, ವಾರಣಾಸಿಯಲ್ಲಿ ಹೊಸ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ ನೆರವೇರಿಸಿದರು. ʻಬಿಎಚ್‌ಯುʼನಲ್ಲಿ ʻರಾಷ್ಟ್ರೀಯ ವೃದ್ಧಾಪ್ಯ ಕೇಂದ್ರʼಕ್ಕೆ ಅವರು ಶಂಕುಸ್ಥಾಪನೆ ನೆರವೇರಿಸಿದರು. ನಗರದಲ್ಲಿ ಕ್ರೀಡಾ ಮೂಲಸೌಕರ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿ ʻಸಿಗ್ರಾ ಕ್ರೀಡಾಂಗಣ ಹಂತ -1ʼ ಮತ್ತು ʻಜಿಲ್ಲಾ ರೈಫಲ್ ಶೂಟಿಂಗ್ ರೇಂಜ್ʼ ಅನ್ನು ಪ್ರಧಾನಿ ಉದ್ಘಾಟಿಸಿದರು.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Govt directs faster processing of city gas projects, hikes commercial LPG allocation to ease supply stress

Media Coverage

Govt directs faster processing of city gas projects, hikes commercial LPG allocation to ease supply stress
NM on the go

Nm on the go

Always be the first to hear from the PM. Get the App Now!
...
This is the New India that leaves no stone unturned for development: PM Modi
March 23, 2026
Today, India is moving forward with a new confidence; Now India faces challenges head-on: PM
From the Gulf to the Global West and from the Global South to neighbouring countries, India is a trusted partner for all: PM
What gets measured gets improved and ultimately gets transformed: PM
This is the new India, It is leaving no stone unturned for development: PM

नमस्कार!

पिछले कुछ समय में मुझे एक-दो बार टीवी9 भारतवर्ष देखने का मौका मिला है। नॉर्मली भी युद्धों और मिसाइलों पर आपका बहुत फोकस होता है और आजकल तो आपको कंटेंट की ओवरफीडिंग हो रही है। बड़े-बड़े देश टीवी9 को इतना सारा कंटेंट देने पर तुले हुए हैं, लेकिन On a Serious Note, आज विश्व जिन गंभीर परिस्थितियों से गुजर रहा है, वो अभूतपूर्व है और बेहद गंभीर है। और इन स्थितियों के बीच, आज टीवी-9 नेटवर्क ने विचारों का एक बेहद महत्वपूर्ण मंच बनाया है। आज इस समिट में आप सभी India and the world, इस विषय पर चर्चा कर रहे हैं। मैं आप सबको बधाई देता हूं। इस समिट के लिए अपनी शुभकामनाएं देता हूं। सभी अतिथियों का अभिनंदन करता हूं।

साथियों,

आज जब दुनिया, conflicts के कारण उलझी हुई है, जब इन conflicts के दुष्प्रभाव पूरी दुनिया पर दिख रहे हैं, तब India and the world की बात करना बहुत ही प्रासंगिक है। भारत आज वो देश है, जिसकी अर्थव्यवस्था तेजी से आगे बढ़ रही है। 2014 के पहले की स्थितियों को पीछे छोड़कर के आज भारत एक नए आत्मविश्वास के साथ आगे बढ़ रहा है। अब भारत चुनौतियों को टालता नहीं है बल्कि चुनौतियों से टकराता है। आप बीते 5-6 साल में देखिए, कोरोना की महामारी के बाद चुनौतियां एक के बाद एक बढ़ती ही गई हैं। ऐसा कोई साल नहीं है, जिसने भारत की, भारतीयों की परीक्षा न ली हो। लेकिन 140 करोड़ देशवासियों के एकजुट प्रयास से भारत हर आपदा का सामना करते हुए आगे बढ़ रहा है। इस समय युद्ध की परिस्थितियों में भी भारत की नीति और रणनीति देखकर, भारत का सामर्थ्य देखकर दुनिया के अनेकों देश हैरान हैं। हमारे यहां कहावत है, सांच को आंच नहीं। 28 फरवरी से दुनिया में जो उथल-पुथल मची है, इन कठोर विपरीत परिस्थितियों में भी भारत प्रगति के, विकास के, विश्वास के संकल्प के साथ आगे बढ़ रहा है। इन 23 दिनों में भारत ने अपनी Relationship Building Capacity दिखाई है, Decision Making Capacity दिखाई है और Crisis Management Capacity दिखाई है।

साथियों,

आज जब दुनिया इतने सारे खेमों में बंटी हुई है, भारत ने अभूतपूर्व और अकल्पनीय bridges बनाए हैं। Gulf से लेकर Global West तक, Global South से लेकर पड़ोसी देशों तक भारत सभी का trusted partner है। कुछ लोग पूछते हैं, हम किसके साथ हैं? तो उनको मेरा जवाब यही है कि हम भारत के साथ हैं, हम भारत के हितों के साथ हैं, शांति के साथ हैं, संवाद के साथ हैं।

साथियों,

संकट के इसी समय में जब global supply chains डगमगा रही हैं, भारत ने diversification और resilience का मॉडल पेश किया है। Energy हो, fertilizers हों या essential goods अपने नागरिकों को कम से कम परेशानी हो, इसके लिए भारत ने निरंतर प्रयास किया है और आज भी कर रहे है।

साथियों,

जब राष्ट्रनीति ही राजनीति का मुख्य आधार हो, तब देश का भविष्य सर्वोपरि होता है। लेकिन जब राजनीति में व्यक्तिगत स्वार्थ हावी हो जाता है, तब लोग देश के फ्यूचर के बजाय अपने फ्यूचर के बारे में सोचते हैं। आप ज़रा याद कीजिए 2004 से 2010 के बीच क्या हुआ था? तब कांग्रेस सरकार के समय पेट्रोल-डीजल और गैस की कीमतों का संकट आया था और तब कांग्रेस ने देश की नहीं बल्कि अपनी सत्ता की चिंता की। उस वक्त कांग्रेस ने एक लाख अड़तालीस हज़ार करोड़ रुपए के ऑयल बॉन्ड जारी किए थे और प्रधानमंत्री मनमोहन सिंह जी ने खुद कहा था कि वो आने वाली पीढ़ी पर कर्ज का बोझ डाल रहे हैं। यह जानते हुए भी कि ऑयल बॉन्ड का फैसला गलत है, जो रिमोट कंट्रोल से सरकार चला रहे थे, उन लोगों ने अपनी सत्ता बचाने के लिए यह गलत निर्णय किया क्योंकि जवाबदेही उस समय नहीं होनी थी, उस बॉन्ड पर री-पेमेंट 2020 के बाद होनी थी।

साथियों,

बीते 5-6 वर्षों में हमारी सरकार ने कांग्रेस सरकार के उस पाप को धोने का काम किया है, और इस धुलाई का खर्चा कम नहीं आया है, ऐसी लाँड्री आपने देखी नहीं होगी। 1 लाख 48 हज़ार करोड़ रुपए की जगह, देश को 3 लाख करोड़ रुपए से अधिक की पेमेंट करनी पड़ी क्योंकि इसमें ब्याज भी जुड़ गया था। यानी हमने करीब-करीब दोगुनी राशि चुकाने के लिए मजबूर हुए। आजकल कांग्रेस के जो नेता बयानों की मिसाइलें दाग रहे हैं, मिसाइल आई तो टीवी9 को मजा आएगा, उनकी इस विषय का जिक्र आते ही बोलती बंद हो जाती है।

साथियों,

पश्चिम एशिया में बनी परिस्थितियों पर मैंने आज लोकसभा में अपना वक्तव्य दिया है। दुनिया में जहां भी युद्ध हो रहे हैं, वो भारत की सीमा से दूर हैं। लेकिन आज की व्यवस्थाओं में कोई भी देश युद्धों से दुष्प्रभाव से दूर रहे, ऐसा संभव नहीं होता। अनेक देशों में तो स्थिति बहुत गंभीर हो चुकी है। और इन हालातों में हम देख रहे हैं कि राजनीतिक स्वार्थ से भरे कुछ लोग, कुछ दल, संकट के इस समय में भी अपने लिए राजनीतिक अवसर खोज रहे हैं। इसलिए मैं टीवी9 के मंच से फिर कहूंगा, यह समय संयम का है, संवेदनशीलता का है। हमने कोरोना महासंकट के दौरान भी देखा है, जब देशवासी एकजुट होकर संकट का सामना करते हैं, तो कितने सार्थक परिणाम आते हैं। इसी भाव के साथ हमें इस युद्ध से बनी परिस्थितियों का सामना करना है।

साथियों,

दुनिया की हर उथल-पुथल के बीच, भारत ने अपनी प्रगति की गति को भी बनाए रखा है। अगर मैं 28 फरवरी को युद्ध शुरू होने के बाद, बीते 23 दिनों का ही ब्यौरा दूं, तो पूरब से पश्चिम तक, उत्तर से दक्षिण तक देश में हजारों करोड़ के डेवलपमेंट प्रोजेक्ट्स का काम हुआ है। दिल्ली मेट्रो रेल के महत्वपूर्ण कॉरिडोर्स का लोकार्पण, सिलचर का हाई स्पीड कॉरिडोर का शिलान्यास, कोटा में नए एयरपोर्ट का शिलान्यास, मदुरै एयरपोर्ट को इंटरनेशनल एयरपोर्ट का दर्जा देना, ऐसे अनेक काम बीते 23 दिनों में ही हुए हैं। बीते एक महीने के दौरान ही औद्योगिक विकास को गति देने के लिए भव्य स्कीम को मंजूरी दी गई है। इसके तहत देशभर में 100 plug-and-play industrial parks विकसित किए जाएंगे। देश में Small Hydro Power Development Scheme को भी हरी झंडी दी गई है। इससे आने वाले वर्षों में 1,500 मेगावाट नई hydro power capacity जोड़ी जाएगी। इसी दौरान जल जीवन मिशन को साल 2028 तक बढ़ाने का निर्णय लिया गया है। किसानों के हित में भी अनेक बड़े निर्णय लिए गए हैं। बीते एक महीने में ही पीएम किसान सम्मान निधि के तहत 18 हजार करोड़ रुपए से अधिक सीधे किसानों के खातों में ट्रांसफर किए गए हैं। और जो हमारे MSMEs हैं, जो हमारे निर्यातक हैं, उनके लिए भी करीब 500 करोड़ रुपए के राहत पैकेज की भी घोषणा की गई है। यह सारे कदम इस बात का प्रमाण हैं कि विकसित भारत बनाने के लिए देश कितनी तेज गति से काम कर रहा है।

साथियों,

Management की दुनिया में एक सिद्धांत कहा जाता है - What gets measured, gets managed. लेकिन मैं इसमें एक बात और जोड़ना चाहता हूं, What gets measured, gets improved और ultimately, gets transformed. क्योंकि आकलन जागरूकता पैदा करता है। आकलन जवाबदेही तय करता है और सबसे महत्वपूर्ण आकलन संभावनाओं को जन्म देता है।

साथियों,

अगर आप 2014 से पहले के 10-11 साल और 2014 के बाद के 10-11 साल का आप आकलन करेंगे, तो यही पाएंगे कि कैसे इसी सिद्धांत पर चलते हुए, भारत ने हर सेक्टर को Transform किया है। जैसे पहले हाईवे बनते थे, करीब 11-12 किलोमीटर प्रति दिन की रफ्तार से, आज भारत करीब 30 किलोमीटर प्रतिदिन की स्पीड से हाईवे बना रहा है। पहले पोर्ट्स पर शिप का Turnaround Time, 5-6 दिन का होता था। आज वही काम, करीब-करीब 2 दिन से भी कम समय में पूरा हो रहा है। पहले Startup Culture के बारे में चर्चा ही नहीं होती थी। 2014 से पहले, हमारे देश में 400-500 स्टार्ट अप्स ही थे। आज भारत में 2 लाख से ज्यादा रजिस्ट्रर्ड स्टार्ट अप्स हैं। पहले मेडिकल education में सीटें भी सीमित थीं, करीब 50-55 हजार MBBS seats थीं, आज यह बढ़कर सवा लाख से ज्यादा हो चुकी हैं। पहले देश के Banking system से भी करोड़ों लोग बाहर थे। देश में सिर्फ 25 करोड़ के आसपास ही बैंक account थे। वहीं जनधन योजना के माध्यम से 55 करोड़ से ज्यादा बैंक अकाउंट खुले हैं। पहले हमारे देश में airports की संख्या भी 70 से कम थी। आज एयरपोर्ट्स की संख्या भी बढ़कर 160 से ज्यादा हो चुकी है।

साथियों,

पहले भी योजनाएं तो बनती थीं, लेकिन आज फर्क है, आज परिणाम दिखते हैं। पहले गति धीमी थी, आज भारत fastrack पर है। पहले संभावनाएं भी अंधकार में थीं, आज संकल्प सिद्धियों में बदल रहे हैं। इसलिए दुनिया को भी यह संदेश मिल रहा है कि यह नया भारत है। यह अपने विकास के लिए कोई कोर-कसर बाकी नहीं छोड़ रहा है।

साथियों,

आज हमारा प्रयास है कि अतीत में विकास का जो असंतुलन पैदा हो गया था, उसको अवसरों में बदला जाए। अब जैसे हमारा पूर्वी भारत है। हमारा पूर्वी भारत संसाधनों से समृद्ध है, दशकों तक वहां जिन्होंने सरकारें चलाई हैं, उनकी उपेक्षा ने पूर्वी भारत के विकास पर ब्रेक लगा दी थी। अब हालात बदल रहे हैं। जिस असम में कभी गोलियों की आवाज सुनाई देती थी, आज वहां सेमीकंडक्टर यूनिट बन रही है। ओडिशा में सेमीकंडक्टर से लेकर पेट्रोकेमिकल्स तक अनेक नए-नए सेक्टर का विकास हो रहा है। जिस बिहार में 6-7 दशक में गंगा जी पर एक बड़ा पुल बन पाया था एक, उस बिहार में पिछले एक दशक में 5 से ज्यादा नए पुल बनाए गए हैं। यूपी में कभी कट्टा मैन्युफैक्चरिंग की कहानियां कही जाती थीं, आज यूपी, मोबाइल फोन मैन्युफैक्चरिंग में दुनिया में अपनी पहचान बना रहा है।

साथियों,

पूर्वी भारत का एक और बड़ा राज्य पश्चिम बंगाल है। पश्चिम बंगाल, एक समय में भारत के कल्चर, एजुकेशन, इंडस्ट्री और ट्रेड का हब होता था। बीते 11 वर्षों में केंद्र सरकार ने पश्चिम बंगाल के विकास के लिए बड़ी मात्रा में निवेश किया है। लेकिन दुर्भाग्य से, आज वहां एक ऐसी निर्मम सरकार है, जो विकास पर ब्रेक लगाकर बैठी है। TV9 बांग्ला के जो दर्शक हैं, वो जानते हैं कि बंगाल में आयुष्मान योजना पर निर्मम सरकार ने ब्रेक लगाया हुआ है। पीएम सूर्यघर मुफ्त बिजली योजना पर ब्रेक लगाया हुआ है। पीएम आवास योजना पर ब्रेक लगाया हुआ है। चाय बागान श्रमिकों के लिए शुरू हुई योजना के लिए ब्रेक लगाया हुआ है। यानी विकास और जनकल्याण से ज्यादा प्राथमिकता निर्मम सरकार अपने राजनीतिक स्वार्थ को दे रही है।

साथियों,

देश में इस तरह की राजनीति की शुरुआत जिस दल ने की है, वो अपने गुनाहों से बच नहीं सकती और वो पार्टी है - कांग्रेस। कांग्रेस पार्टी की राजनीति का एक ही लक्ष्य रहा है, किसी भी तरह विकास का विरोध और कांग्रेस यह तब से कर रही है, जब मैं गुजरात में था। गुजरात में वर्षों तक जनता ने हमें आशीर्वाद दिया, तो कांग्रेस ने उस जनादेश को स्वीकार नहीं किया। उन्होंने गुजरात की छवि पर सवाल उठाए, उसकी प्रगति को कटघरे में खड़ा किया और जब यही विश्वास पूरे देश में दिखाई दिया, तो कांग्रेस का विरोध भी रीजनल से नेशनल हो गया।

साथियों,

जब राजनीति में विरोध, विकास के विरोध में बदल जाए, जब आलोचना देश की उपलब्धियों पर सवाल उठाने लगे, तब यह सिर्फ सरकार का विरोध नहीं रह जाता, यह देश की प्रगति से असहज होने की मानसिकता बन जाती है। आज कांग्रेस इसी मानसिकता की गुलाम बन चुकी है। आज स्थिति यह है कि देश की हर सफलता पर प्रश्न उठाया जाता है, हर उपलब्धि में कमी खोजी जाती है और हर प्रयास के असफल होने की कामना की जाती है। कोविड के समय, देश ने अपनी वैक्सीन बनाई, तो कांग्रेस ने उस पर भी संदेह जताया। Make in India की बात हुई, तो कहा गया कि यह सफल नहीं होगा, बब्बर शेर कहकर इसका मजाक उड़ाया गया। जब देश में डिजिटल इंडिया अभियान शुरू हुआ, तो उसका मजाक उड़ाया गया। लेकिन हर बार यह कांग्रेस का दुर्भाग्य और देश का सौभाग्य रहा कि भारत ने हर चुनौती को सफलता में बदला। आज भारत दुनिया की सबसे बड़ी वैक्सीनेशन ड्राइव का उदाहरण है। भारत डिजिटल पेमेंट्स में दुनिया का अग्रणी देश है। भारत मैन्युफैक्चरिंग और स्टार्टअप्स में नई ऊंचाइयों को छू रहा है।

साथियों,

लोकतंत्र में विरोध जरूरी होता है। लेकिन विरोध और विद्वेष के बीच एक रेखा होती है। सरकार का विरोध करना लोकतांत्रिक अधिकार है। लेकिन देश को बदनाम करना, यह कांग्रेस की नीयत पर सवाल खड़ा करता है। जब विरोध इस स्तर तक पहुंच जाए कि देश की उपलब्धियां भी असहज करने लगें, तो यह राजनीति नहीं, यह दृष्टिकोण की समस्या है। अभी हमने ग्लोबल AI समिट में भी देखा है। जब पूरी दुनिया भारत में जुटी हुई थी, तो कांग्रेस के लोग कपड़े फाड़ने वहां पहुंच गए थे। इन लोगों को देश की इज्जत की कितनी परवाह है, यह इसी से पता चलता है। इसलिए आज आवश्यकता है कि देशहित को, दलहित से ऊपर रखा जाए क्योंकि अंत में राजनीति से ऊपर, राष्ट्र होता है, राष्ट्र का विकास होता है।

साथियों,

आज का यह दिन भी हमें यही प्रेरणा देता है। आज के ही दिन शहीद भगत सिंह, शहीद राजगुरु और शहीद सुखदेव ने देश के लिए सर्वोच्च बलिदान दिया था। आज ही, समाजवादी आंदोलन के प्रखर आदर्श डॉ. राम मनोहर लोहिया जी की जयंती भी है। यह वो प्रेरणाएं हैं, जिन्होंने देश को हमेशा स्व से ऊपर रखा है। देशहित को सबसे ऊपर रखने की यही प्रेरणा, भारत को विकसित भारत बनाएगी। यही प्रेरणा भारत को आत्मनिर्भर बनाएगी। मुझे पूरा विश्वास है कि टीवी9 की यह समिट भी भारत के आत्मविश्वास और दुनिया के भरोसे पर, भारतीयों पर जो भरोसा है, उस भरोसे को और सशक्त करेगी। आप सभी को मेरी तरफ से बहुत-बहुत शुभकामनाएं हैं और आपके बीच आने का अवसर दिया, आप सबसे मिलने का मौका लिया, इसलिए बहुत-बहुत धन्यवाद!

नमस्‍कार!