Make in India, for India, for the world: PM Modi
Our endeavour is to increase the number of MSMEs in defence production to 15,000 in the next five years: PM Modi
Immense potential for defence manufacturing in India; there is demand, democracy & decisiveness: PM

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಲಕ್ನೋದಲ್ಲಿಂದು 11ನೇ ಆವೃತ್ತಿಯ ರಕ್ಷಣಾ ಉತ್ಪನ್ನಗಳ ಪ್ರದರ್ಶನ ಡಿಫೆನ್ಸ್ ಎಕ್ಸ್ ಪೊ ಉದ್ಘಾಟಿಸಿದರು. ಭಾರತದ ದ್ವೈವಾರ್ಷಿಕ ಈ ಮಿಲಿಟರಿ ಉತ್ಪನ್ನಗಳ ಪ್ರದರ್ಶನ ದೇಶದ ರಕ್ಷಣಾ ಸಾಮರ್ಥ್ಯವನ್ನು ಜಾಗತಿಕ ರಕ್ಷಣಾ ಉತ್ಪಾದನಾ ತಾಣವನ್ನಾಗಿ ಬಿಂಬಿಸುವ ಉದ್ದೇಶದ್ದು, ಡಿಫೆನ್ಸ್ ಎಕ್ಸ್ ಪೊ 2020 ಕೇವಲ ಭಾರತದ ಅತಿದೊಡ್ಡ ರಕ್ಷಣಾ ಉತ್ಪನ್ನಗಳ ಪ್ರದರ್ಶನ ವೇದಿಕೆಯಲ್ಲ, ಇದು ವಿಶ್ವದ ಅತಿದೊಡ್ಡ ಡಿಫೆನ್ಸ್ ಎಕ್ಸ್ ಪೊಗಳಲ್ಲಿ ಒಂದಾಗಿದೆ. ಈ ಬಾರಿ ಒಂದು ಸಾವಿರಕ್ಕೂ ಅಧಿಕ ರಕ್ಷಣಾ ಉತ್ಪನ್ನಗಳ ಉತ್ಪಾದಕರು ಮತ್ತು ಜಗತ್ತಿನ 150 ಕಂಪನಿಗಳು ಈ ಪ್ರದರ್ಶನದ ಭಾಗವಾಗಿವೆ.

11ನೇ ಆವೃತ್ತಿಯ ಡಿಫೆನ್ಸ್ ಎಕ್ಸ್ ಪೊಗೆ ಎಲ್ಲರನ್ನೂ ಸ್ವಾಗತಿಸಲು ನನಗೆ ಎರಡು ಕಾರಣಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ ಎಂದ ಪ್ರಧಾನಮಂತ್ರಿ ಅವರು, ಒಂದು ತಾವು ಭಾರತದ ಪ್ರಧಾನಮಂತ್ರಿಯಾಗಿ ಮತ್ತೊಂದು ಉತ್ತರ ಪ್ರದೇಶದ ಸಂಸದನಾಗಿ ಎಲ್ಲರನ್ನೂ ಸ್ವಾಗತಿಸುತ್ತೇನೆ ಎಂದರು. “ಭಾರತದ ಜನರಿಗೆ ಹಾಗೂ ಯುವ ಜನತೆಗೆ ಇದು ಅತಿದೊಡ್ಡ ಅವಕಾಶವಾಗಿದೆ, ಮೇಕ್ ಇನ್ ಇಂಡಿಯಾ ಯೋಜನೆ ಭಾರತದ ಭದ್ರತೆಯನ್ನಷ್ಟೇ ಹೆಚ್ಚಿಸಿಲ್ಲ, ರಕ್ಷಣಾ ವಲಯದಲ್ಲಿ  ಸಾಕಷ್ಟು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಿದೆ, ಇದು ಭವಿಷ್ಯದಲ್ಲಿ ರಕ್ಷಣಾ ಉತ್ಪನ್ನಗಳ ರಫ್ತಿಗೆ ಹೆಚ್ಚಿನ ಉತ್ತೇಜನ ನೀಡುತ್ತದೆ” ಎಂದು ಪ್ರಧಾನಮಂತ್ರಿ ಹೇಳಿದರು.

ಭಾರತ ಇಡೀ ವಿಶ್ವಕ್ಕೆ ಕೇವಲ ಮಾರುಕಟ್ಟೆ ಮಾತ್ರವಲ್ಲವಿಫುಲ ಅವಕಾಶಗಳ ತಾಣ

“ಇಂದಿನ ಡಿಫೆನ್ಸ್ ಎಕ್ಸ್ ಪೊ ಭಾರತದ ವೈಶಾಲ್ಯತೆ, ಹಿಡಿದ ಕೆಲಸವನ್ನು ಛಲ ಬಿಡದೆ ಸಾಧಿಸುವುದು ಮತ್ತು ವಿಭನ್ನತೆ ಬಿಂಬಿಸುವ ಜೀವಂತ ಸಾಕ್ಷಿಯಾಗಿದೆ ಹಾಗೂ ಅಗಾಧ ಭಾಗವಹಿಸುವಿಕೆ ಹೊಂದಿದೆ. ಇದು ರಕ್ಷಣಾ ಮತ್ತು ಭದ್ರತಾ ವಲಯದಲ್ಲಿ ಭಾರತ ಅತ್ಯಂತ ಬಲಿಷ್ಠ ಪಾತ್ರದೊಂದಿಗೆ ಮುನ್ನಡೆಯುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಈ ಎಕ್ಸ್ ಪೊ ಕೇವಲ ರಕ್ಷಣೆಗೆ ಸಂಬಂಧಿಸಿದ ಉದ್ಯಮಗಳಿಗೆ ಮಾತ್ರ ಸೀಮಿತವಾದುದಲ್ಲ, ಇದು ಒಟ್ಟಾರೆ ಭಾರತದ ಬಗೆಗೆ ವಿಶ್ವದ ನಂಬಿಕೆಯನ್ನು ತೋರಿಸುತ್ತದೆ ಎಂದರು. ಯಾರಿಗೆ ರಕ್ಷಣೆ ಮತ್ತು ಆರ್ಥಿಕತೆಯ ಬಗ್ಗೆ ಚೆನ್ನಾಗಿ ತಿಳಿದಿದೆಯೋ ಅವರಿಗೆ ಖಂಡಿತವಾಗಿಯೂ ಅರ್ಥವಾಗುತ್ತದೆ. ಭಾರತ ಕೇವಲ ಮಾರುಕಟ್ಟೆಯಲ್ಲ, ಭಾರತ ಇಡೀ ವಿಶ್ವಕ್ಕೆ ವಿಪುಲ ಅವಕಾಶಗಳನ್ನು ಸೃಷ್ಟಿಸುವ ತಾಣ ಎಂಬುದು”

ರಕ್ಷಣಾ ವಲಯದಲ್ಲಿ ಡಿಜಿಟಲ್ ಪರಿವರ್ತನೆಯಿಂದ ನಾಳಿನ ಸವಾಲುಗಳ ಪ್ರತಿಫಲನ

ಪ್ರಧಾನಮಂತ್ರಿ ಅವರು ಡಿಫೆನ್ಸ್ ಎಕ್ಸ್ ಪೋ ದ ಉಪ ಘೋಷ ‘ರಕ್ಷಣಾ ವಲಯದ ಡಿಜಿಟಲ್ ಪರಿವರ್ತನೆ’ ಭವಿಷ್ಯದ ಸವಾಲುಗಳು ಮತ್ತು ಆತಂಕಗಳನ್ನು ಬಿಂಬಿಸುತ್ತದೆ ಎಂದು ಹೇಳಿದರು. ಜೀವನ ತಂತ್ರಜ್ಞಾನ ಆಧಾರಿತವಾಗುತ್ತಿರುವಂತೆಯೇ ಭದ್ರತಾ ಕಳಕಳಿ ಮತ್ತು ಸವಾಲುಗಳು ಅತ್ಯಂತ ಹೆಚ್ಚು ಗಂಭೀರವಾಗತೊಡಗಿವೆ. ಇದು ಇಂದಿಗೆ ಮಾತ್ರ ಅತ್ಯಂತ ಪ್ರಮುಖವಲ್ಲ, ಆದರೆ ಇದು ನಮ್ಮ ಭವಿಷ್ಯಕ್ಕೂ ಅತ್ಯಂತ ಪ್ರಮುಖವಾದುದು. ಜಾಗತಿಕವಾಗಿ ರಕ್ಷಣಾ ಪಡೆಗಳು ಹೊಸ ಹೊಸ ತಂತ್ರಜ್ಞಾನಗಳನ್ನು ಆವಿಷ್ಕರಿಸುತ್ತಿವೆ. ಭಾರತವೂ ಕೂಡ ವಿಶ್ವದ ವೇಗಕ್ಕೆ ಸರಿ ಸಮಾನತೆಯನ್ನು ಕಾಯ್ದುಕೊಳ್ಳುತ್ತಿದೆ. ಹಲವು ಪ್ರೋಟೋಟೈಪ್ (ಮಾದರಿ) ಗಳನ್ನು ಅಭಿವೃದ್ಧಿಪಡಿಸಲಾಗಿದೆ. ನಮ್ಮ ಗುರಿ ಎಂದರೆ ಮುಂದಿನ ಐದು ವರ್ಷಗಳಲ್ಲಿ ರಕ್ಷಣಾ ವಲಯದಲ್ಲಿ ಕನಿಷ್ಠ 25 ಕೃತಕ ಬುದ್ಧಿ ಮತ್ತೆ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಬೇಕು ಎಂಬುದು.

ಅಟಲ್ ಬಿಹಾರಿ ವಾಜಪೇಯಿ ಅವರ ಕನಸು ನನಸು

ಪ್ರಧಾನಮಂತ್ರಿ ಅವರು, ಲಕ್ನೋದಲ್ಲಿ ನಡೆಯುತ್ತಿರುವ ಡಿಫೆನ್ಸ್ ಎಕ್ಸ್ ಪೊ ಇನ್ನೊಂದು ಕಾರಣಕ್ಕೆ ಅತ್ಯಂತ ಪ್ರಮುಖವಾದುದು ಎಂದು ಹೇಳಿದರು. ಭಾರತದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು, ರಕ್ಷಣಾ ಉತ್ಪಾದನಾ ವಲಯವನ್ನು ಸ್ವದೇಶಿಗೊಳಿಸುವ ಕನಸು ಕಂಡಿದ್ದರು ಮತ್ತು ಅದಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದರು ಎಂದರು.

“ಅವರ ದೂರದೃಷ್ಟಿಯನ್ನು ಅನುಸರಿಸುತ್ತಾ ನಾವು ಹಲವು ರಕ್ಷಣಾ ಉತ್ಪನ್ನಗಳ ಉತ್ಪಾದನೆಗೆ ವೇಗ ನೀಡಿದ್ದೇವೆ, ನಾವು 2014ರ ಒಂದೇ ವರ್ಷದಲ್ಲಿ 217 ರಕ್ಷಣಾ ಲೈಸೆನ್ಸ್ ಗಳನ್ನು ವಿತರಿಸಿದ್ದೇವೆ. ಕಳೆದ ಐದು ವರ್ಷಗಳಲ್ಲಿ ಅವುಗಳ ಸಂಖ್ಯೆ 460ಕ್ಕೆ ಏರಿಕೆಯಾಗಿದೆ. ಭಾರತ ಇಂದು ಪಿರಂಗಿ ತೂಪುಗಳು, ಬಂದೂಕುಗಳು, ಯುದ್ಧ ವಿಮಾನದಿಂದ ಫ್ರೈಗೇಟ್ ಸಬ್ ಮೆರಿನ್ ವರೆಗೆ ಹಲವು ಉತ್ಪನ್ನಗಳನ್ನು ಉತ್ಪಾದಿಸುತ್ತಿದೆ. ಜಾಗತಿಕ ರಕ್ಷಣಾ ಉತ್ಪನ್ನಗಳ ರಫ್ತಿನಲ್ಲಿ ಭಾರತದ ಪಾಲು ಸಾಕಷ್ಟು ಹೆಚ್ಚಾಗಿದೆ. ಕಳೆದ ಎರಡು ವರ್ಷದಲ್ಲಿ ಭಾರತ ಸುಮಾರು 17 ಸಾವಿರ ಕೋಟಿ ಮೊತ್ತದ ರಕ್ಷಣಾ ಉತ್ಪನ್ನಗಳನ್ನು ರಫ್ತು ಮಾಡಿದೆ. ನಮ್ಮ ಗುರಿ ಏನೆಂದರೆ ರಕ್ಷಣಾ ಉತ್ಪನ್ನಗಳ ರಫ್ತು ಪ್ರಮಾಣವನ್ನು 5 ಬಿಲಿಯನ್ ಡಾಲರ್ ಗೆ ಏರಿಸುವುದು” ಎಂದು ಪ್ರಧಾನಮಂತ್ರಿ ಹೇಳಿದರು.

ರಕ್ಷಣಾ ವಲಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ – ರಾಷ್ಟ್ರದ ನೀತಿಯ ಪ್ರಮುಖ ಭಾಗ

ಕಳೆದ ಐದಾರು ವರ್ಷಗಳಲ್ಲಿ ನಮ್ಮ ಸರ್ಕಾರ ಸಂಶೋಧನೆ ಮತ್ತು ಅಭಿವೃದ್ಧಿಯನ್ನು ನಮ್ಮ ದೇಶದ ನೀತಿಯ ಪ್ರಮುಖ ಭಾಗವನ್ನಾಗಿ ಮಾಡಿಕೊಂಡಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ಉತ್ಪಾದನೆಗೆ ದೇಶದಲ್ಲಿ ಅಗತ್ಯ ಮೂಲಸೌಕರ್ಯವನ್ನು ಸೃಷ್ಟಿಸಲಾಗಿದೆ. ಇತರೆ ರಾಷ್ಟ್ರಗಳೊಂದಿಗೆ ಜಂಟಿ ಸಹಭಾಗಿತ್ವವನ್ನು ಹೊಂದಲಾಗುತ್ತಿದೆ. ಆದ್ಯತಾ ಮನೋಭಾವದೊಂದಿಗೆ ಸಂಗ್ರಹಾಗಾರಗಳನ್ನು ನಿರ್ಮೂಲನೆ ಮಾಡುವ ಪ್ರಯತ್ನಗಳೂ ನಡೆದಿವೆ. ಇದರಿಂದಾಗಿ ದೇಶ, ಬಂಡವಾಳ ಹೂಡಿಕೆ ಮತ್ತು ನಾವಿನ್ಯತೆಗೆ ಅಗತ್ಯ ವಾತಾವರಣ ಸೃಷ್ಟಿಯಾಗಿದೆ” ಎಂದು ಪ್ರಧಾನಮಂತ್ರಿ ಹೇಳಿದರು.

ಬಳಕೆದಾರರು ಮತ್ತು ಉತ್ಪಾದಕರ ನಡುವೆ ಸಹಭಾಗಿತ್ವ

ಪ್ರಧಾನಮಂತ್ರಿ ಅವರು, ಬಳಕೆದಾರರು ಮತ್ತು ಉತ್ಪಾದಕರ ನಡುವೆ ಪಾಲುದಾರಿಕೆಯ ಮೂಲಕ ನಮ್ಮ ರಾಷ್ಟ್ರೀಯ ಭದ್ರತೆಯನ್ನು ಮತ್ತಷ್ಟು ಶಕ್ತಿಶಾಲಿಗೊಳಿಸಬಹುದು ಎಂದು ಹೇಳಿದರು.

“ರಕ್ಷಣಾ ಉತ್ಪನ್ನಗಳ ಉತ್ಪಾದನೆ ಕೇವಲ ಸರ್ಕಾರಿ ಸಂಸ್ಥೆಗಳಿಗೆ ಮಾತ್ರ ಸೀಮಿತವಾಗಬಾರದು, ಖಾಸಗಿ ವಲಯದಿಂದಲೂ ಸಹ ಸಮಾನ ಭಾಗೀದಾರಿಕೆ ಮತ್ತು ಪಾಲುದಾರಿಕೆ ಅಗತ್ಯವಿದೆ” ಎಂದು ಅವರು ಹೇಳಿದರು.

ನವ ಭಾರತಕ್ಕೆ ನವ ಗುರಿಗಳು

ಪ್ರಧಾನಮಂತ್ರಿ ಅವರು, ಭಾರತದಲ್ಲಿ ಎರಡು ಬೃಹತ್ ರಕ್ಷಣಾ ಉತ್ಪನ್ನಗಳ ಉತ್ಪಾದನಾ ಕಾರಿಡಾರ್ ಗಳನ್ನು ಸ್ಥಾಪಿಸಲಾಗುತ್ತಿದೆ. ಒಂದು ತಮಿಳುನಾಡಿನಲ್ಲಿ ಮತ್ತೊಂದು ಉತ್ತರ ಪ್ರದೇಶದಲ್ಲಿ. ಉತ್ತರ ಪ್ರದೇಶದ ರಕ್ಷಣಾ ಕಾರಿಡಾರ್ ಗೆ ಲಕ್ನೋ ಮಾತ್ರವಲ್ಲದೆ, ಆಲಿಗಢ್, ಆಗ್ರಾ, ಝಾನ್ಸಿ, ಚಿತ್ರಕೂಟ್ ಮತ್ತು ಕಾನ್ಪುರಗಳಲ್ಲಿ ಕೇಂದ್ರಗಳು ಸ್ಥಾಪನೆಯಾಗಲಿವೆ. ಭಾರತದಲ್ಲಿ ರಕ್ಷಣಾ ಉತ್ಪನ್ನಗಳ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲು ಹೊಸ ಗುರಿಗಳನ್ನು ನಿಗದಿಪಡಿಸಲಾಗಿದೆ.

“ಮುಂದಿನ 5 ವರ್ಷಗಳಲ್ಲಿ ರಕ್ಷಣಾ ಉತ್ಪನ್ನಗಳ ಉತ್ಪಾದನಾ ವಲಯದಲ್ಲಿರುವ ಎಂಎಸ್ಎಂಇಗಳ ಸಂಖ್ಯೆಯನ್ನು 15 ಸಾವಿರಕ್ಕಿಂತಲೂ ಹೆಚ್ಚು ಮಾಡುವ ಗುರಿಯನ್ನು ನಾವು ಹೊಂದಿದ್ದೇವೆ. ಐ-ಡೆಕ್ಸ್, ಚಿಂತನೆಯನ್ನು ವಿಸ್ತರಣೆ ಮಾಡಲು ಬಯಸಿದ್ದು, ಅದಕ್ಕೆ ಮತ್ತಷ್ಟು ಒತ್ತು ನೀಡಲು 200 ಹೊಸ ರಕ್ಷಣಾ ನವೋದ್ಯಮಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ. ಜೊತೆಗೆ ಕನಿಷ್ಠ 50 ಹೊಸ ತಂತ್ರಜ್ಞಾನಗಳು ಮತ್ತು ಉತ್ಪನ್ನಗಳನ್ನು ಅಭಿವೃದ್ಧಿಗೊಳಿಸುವ ಪ್ರಯತ್ನಗಳು ನಡೆದಿವೆ. ದೇಶದ ಪ್ರಮುಖ ಉದ್ಯಮ ಸಂಸ್ಥೆಗಳಿಗೆ ನಾನು ನೀಡುವ ಸಲಹೆ ಎಂದರೆ ರಕ್ಷಣಾ ಉತ್ಪನ್ನಗಳ ಉತ್ಪಾದನೆಗೆ ದೇಶದಲ್ಲಿ ಒಂದು ಸಮಾನ ವೇದಿಕೆಯನ್ನು ಸೃಷ್ಟಿಸಬೇಕು ಎಂದು. ಆ ಮೂಲಕ ರಕ್ಷಣಾ ವಲಯದಲ್ಲಿ ತಂತ್ರಜ್ಞಾನ ಉತ್ಪಾದನೆ ಮತ್ತು ಅಭಿವೃದ್ಧಿಯ ಎರಡು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು” ಎಂದು ಪ್ರಧಾನಮಂತ್ರಿ ಹೇಳಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Rural buyers outpace cities as India’s passenger vehicle sales surge 26.6% in December: FADA

Media Coverage

Rural buyers outpace cities as India’s passenger vehicle sales surge 26.6% in December: FADA
NM on the go

Nm on the go

Always be the first to hear from the PM. Get the App Now!
...
Prime Minister Highlights Timeless Values of Virtue, Character, Knowledge and Wealth through a Subhashitam
January 07, 2026

The Prime Minister, Shri Narendra Modi, today reflected upon the enduring wisdom of Indian tradition, underscoring the values that continue to guide national life and individual conduct.

Prime Minister emphasized that true beauty is adorned by virtue, lineage is ennobled by character, knowledge finds its worth through success, and wealth attains meaning through responsible enjoyment. He stated that these values are not only timeless but also deeply relevant in contemporary society, guiding India’s collective journey towards progress, responsibility, and harmony.

Sharing a Sanskrit verse on X, Shri Modi wrote:

“गुणो भूषयते रूपं शीलं भूषयते कुलम्।

सिद्धिर्भूषयते विद्यां भोगो भूषयते धनम्॥”